Homeಕರ್ನಾಟಕಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ- ಡಿಕೆಶಿ

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಇಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

“ಕೊರೋನಾ ಹಾಗೂ ನಂತರದ ಸಮಯದಲ್ಲಿ ಬಿಜೆಪಿ ನಾಯಕರು ಶಾಂತಿಭಂಗದ ಹೇಳಿಕೆ ಕೊಟ್ಟಿದ್ದರೂ ಈ ಸರ್ಕಾರ ಯಾರ ಮೇಲೂ ಕೇಸು ದಾಖಲಿಸಲಿಲ್ಲ. ಆಗಲೂ ಅಧಿಕಾರ ದುರುಪಯೋಗ ಮಾಡಿಕೊಂಡು ಸರ್ಕಾರದ ಪದಾರ್ಥವನ್ನು ತಮ್ಮ ಪದಾರ್ಥ ಎಂಬಂತೆ ಹಂಚಿದ್ದನ್ನು ನಾವು ಬಯಲು ಮಾಡಿದರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ನಮ್ಮ ಶಾಸಕರು, ಮುಖಂಡರು, ಕಾರ್ಯಕರ್ತರ ಮೇಲೆ ನೂರಾರು ಕೇಸ್ ಹಾಕುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಮಧ್ಯೆ ನಮ್ಮ ಪಕ್ಷದ ಶಾಸಕ ಸಂಗಮೇಶ್, ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕಲಾಗಿದೆ. ಹಾಗಾಗಿಯೇ ಈ ಪ್ರತಿಭಟನೆ” ಎಂದು ಡಿ.ಕೆ ಶಿವಕುಮಾರ್ ಈ ಹಿಂದೆ ಹೇಳಿದ್ದರು.

“ಸಂಗಮೇಶ್ ಅವರನ್ನು ಬಿಜೆಪಿಗೆ ಸೆಳೆಯಲು ಬಹಳ ಒತ್ತಡ ಹೇರಿದ್ದರು. ಆದರೂ ಇವರು ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಕಾರಣಕ್ಕೆ ಈ ರೀತಿ ಕಿರುಕುಳ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್ಐಆರ್ ಹಾಕಿಸಿ, ತೊಂದರೆ ನೀಡುತ್ತಿದ್ದಾರೆ. ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರೆ ಅವರಿಗೆ ಅವಕಾಶ ನೀಡಲಿಲ್ಲ. ಆಗ ನೋವಿನಿಂದ ನಮ್ಮ ಶಾಸಕ ತಮ್ಮ ಶರ್ಟ್ ಬಿಚ್ಚಿ ಮೈಮೇಲಾಗಿರುವ ಗಾಯ ತೋರಿಸಲು ಮುಂದಾದಾಗ, ಅದನ್ನು ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ಒಂದು ವಾರಕ್ಕೂ ಹೆಚ್ಚು ಕಾಲ ವಿಧಾನಸಭೆ ಕಲಾಪದಿಂದ ಅಮಾನತು ಮಾಡಲಾಗಿದೆ. ಆ ಮೂಲಕ ಅವರ ಹಕ್ಕಿಗೆ ಧಕ್ಕೆ ತರಲಾಗಿದೆ. ಈ ಬಗ್ಗೆ ನಾವು ಪ್ರತಿಭಟನೆಯನ್ನೂ ಮಾಡಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನೀಟ್ ರದ್ದು, ಪೆಟ್ರೋಲ್ ದರ ಕಡಿತ- ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಶನಿವಾರ ಕಾಂಗ್ರೆಸ್ ನಡೆಸಿದ ಬೃಹತ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಧೃವನಾರಾಯಣ್ ಸೇರಿದಂತೆ ಅನೇಕ ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...