Homeಕರ್ನಾಟಕಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ- ಡಿಕೆಶಿ

- Advertisement -
- Advertisement -

ರಾಜ್ಯದ ಬಿಜೆಪಿ ಸರ್ಕಾರ ಅಧಿಕಾರಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರ ಮೇಲೆ ಸುಳ್ಳು ಕೇಸು ಹಾಕಿಸಿ, ದೌರ್ಜನ್ಯ ನಡೆಸುತ್ತಿದೆ. ಇದನ್ನು ಖಂಡಿಸಿ ಕರ್ನಾಟಕ ಕಾಂಗ್ರೆಸ್ ವತಿಯಿಂದ ಇಂದು ‘ಶಿವಮೊಗ್ಗ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

“ಕೊರೋನಾ ಹಾಗೂ ನಂತರದ ಸಮಯದಲ್ಲಿ ಬಿಜೆಪಿ ನಾಯಕರು ಶಾಂತಿಭಂಗದ ಹೇಳಿಕೆ ಕೊಟ್ಟಿದ್ದರೂ ಈ ಸರ್ಕಾರ ಯಾರ ಮೇಲೂ ಕೇಸು ದಾಖಲಿಸಲಿಲ್ಲ. ಆಗಲೂ ಅಧಿಕಾರ ದುರುಪಯೋಗ ಮಾಡಿಕೊಂಡು ಸರ್ಕಾರದ ಪದಾರ್ಥವನ್ನು ತಮ್ಮ ಪದಾರ್ಥ ಎಂಬಂತೆ ಹಂಚಿದ್ದನ್ನು ನಾವು ಬಯಲು ಮಾಡಿದರೂ ಕ್ರಮ ಕೈಗೊಳ್ಳಲಿಲ್ಲ. ಆದರೆ ನಮ್ಮ ಶಾಸಕರು, ಮುಖಂಡರು, ಕಾರ್ಯಕರ್ತರ ಮೇಲೆ ನೂರಾರು ಕೇಸ್ ಹಾಕುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಈ ಮಧ್ಯೆ ನಮ್ಮ ಪಕ್ಷದ ಶಾಸಕ ಸಂಗಮೇಶ್, ಅವರ ಕುಟುಂಬ ಸದಸ್ಯರು ಹಾಗೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸು ಹಾಕಲಾಗಿದೆ. ಹಾಗಾಗಿಯೇ ಈ ಪ್ರತಿಭಟನೆ” ಎಂದು ಡಿ.ಕೆ ಶಿವಕುಮಾರ್ ಈ ಹಿಂದೆ ಹೇಳಿದ್ದರು.

“ಸಂಗಮೇಶ್ ಅವರನ್ನು ಬಿಜೆಪಿಗೆ ಸೆಳೆಯಲು ಬಹಳ ಒತ್ತಡ ಹೇರಿದ್ದರು. ಆದರೂ ಇವರು ಆಪರೇಷನ್ ಕಮಲಕ್ಕೆ ಬಲಿಯಾಗಲಿಲ್ಲ ಎಂಬ ಕಾರಣಕ್ಕೆ ಈ ರೀತಿ ಕಿರುಕುಳ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಒಬ್ಬ ಕಾಂಗ್ರೆಸ್ ಶಾಸಕ ಇದ್ದಾನೆ ಎಂದು ಪೊಲೀಸರ ಕೈಯಲ್ಲಿ ಎಫ್ಐಆರ್ ಹಾಕಿಸಿ, ತೊಂದರೆ ನೀಡುತ್ತಿದ್ದಾರೆ. ತಮಗಾಗುತ್ತಿರುವ ಅನ್ಯಾಯದ ವಿರುದ್ಧ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದರೆ ಅವರಿಗೆ ಅವಕಾಶ ನೀಡಲಿಲ್ಲ. ಆಗ ನೋವಿನಿಂದ ನಮ್ಮ ಶಾಸಕ ತಮ್ಮ ಶರ್ಟ್ ಬಿಚ್ಚಿ ಮೈಮೇಲಾಗಿರುವ ಗಾಯ ತೋರಿಸಲು ಮುಂದಾದಾಗ, ಅದನ್ನು ಅಸಭ್ಯ ವರ್ತನೆ ಎಂದು ಹೇಳಿ ಅವರನ್ನು ಒಂದು ವಾರಕ್ಕೂ ಹೆಚ್ಚು ಕಾಲ ವಿಧಾನಸಭೆ ಕಲಾಪದಿಂದ ಅಮಾನತು ಮಾಡಲಾಗಿದೆ. ಆ ಮೂಲಕ ಅವರ ಹಕ್ಕಿಗೆ ಧಕ್ಕೆ ತರಲಾಗಿದೆ. ಈ ಬಗ್ಗೆ ನಾವು ಪ್ರತಿಭಟನೆಯನ್ನೂ ಮಾಡಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನೀಟ್ ರದ್ದು, ಪೆಟ್ರೋಲ್ ದರ ಕಡಿತ- ಪ್ರಣಾಳಿಕೆಯಲ್ಲಿ ಡಿಎಂಕೆ ಭರವಸೆ

ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ವಿರೋಧ ಪಕ್ಷ ನಾಯಕರ ಸಮ್ಮುಖದಲ್ಲಿ ಎಲ್ಲ ನಾಯಕರು, ಶಾಸಕರು, ಸಂಸದರು, ಕಾರ್ಯಕರ್ತರು ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

ಶಿವಮೊಗ್ಗದಲ್ಲಿ ಶನಿವಾರ ಕಾಂಗ್ರೆಸ್ ನಡೆಸಿದ ಬೃಹತ್ ಜಾಥಾದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಈಶ್ವರ ಖಂಡ್ರೆ, ಧೃವನಾರಾಯಣ್ ಸೇರಿದಂತೆ ಅನೇಕ ಮಾಜಿ ಸಚಿವರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...