Homeಕರ್ನಾಟಕಕಾನೂನು ಎಲ್ಲರಿಗೂ ಒಂದೇ..! "ಸಾಹುಕಾರ್" ಹೊರತುಪಡಿಸಿ..! - ಅನನ್ಯ ಬೆಂಗಳೂರು

ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

- Advertisement -
- Advertisement -

ಕರ್ನಾಟಕ ಸ್ವಯಂಘೋಷಿತ ಸಾಹುಕಾರ್ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ ಇಡೀ ರಾಜ್ಯದ ಕಾನೂನನ್ನೇ ಅಣಕಿಸುತ್ತಿದೆ. ಕಾನ್‌ಸ್ಟೇಬಲ್ ಎದುರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ರಮೇಶ್ ಜಾರಕಿಹೋಳಿ ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮನೆ ಆಳಿನಂತೆ ಬಳಕೆ ಮಾಡಿಕೊಳ್ಳುತ್ತಿರೋದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತಿದೆ.

ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಸಿಡಿಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡುತ್ತಾರೆ. ಮಾಹಿತಿಯನ್ನು ಪಡೆದುಕೊಳ್ಳಲು ನಿರಾಕರಿಸುವ ಪೊಲೀಸ್ ಆಯುಕ್ತರು ದಿನೇಶ್ ಕಲ್ಲಹಳ್ಳಿಯವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಅರ್ಜಿ ನೀಡುವಂತೆ ಸೂಚಿಸುತ್ತಾರೆ. “ಸಚಿವರೊಬ್ಬರು ಈ ಸಿಡಿಯ ದೃಶ್ಯಾವಳಿಗಳಲ್ಲಿ ಇದ್ದು, ಯುವತಿಯನ್ನು ಬಳಸಿಕೊಳ್ಳಲಾಗಿದೆ. ಈ ಸಿಡಿಯನ್ನು ಮಾಹಿತಿ ಮೂಲಗಳು ನನಗೆ ತಲುಪಿಸಿದ್ದು, ಅದನ್ನು ಬಹಿರಂಗಗೊಳಿಸದೆ ಒರ್ವ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಹಸ್ತಾಂತರಿಸುತ್ತೇನೆ. ಈ ಸಿಡಿಯ ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂದು ತನಿಖೆ ಮಾಡಿ” ಎಂದು ಮಾಹಿತಿ ಅರ್ಜಿಯಲ್ಲಿ ದಿನೇಶ್ ಕಲ್ಲಹಳ್ಳಿ ಕೇಳಿಕೊಂಡಿದ್ದರು.

ಅರ್ಜಿ ಪಡೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಆ ದೃಶ್ಯಾವಳಿಯಲ್ಲಿ ಇದ್ದರೆನ್ನಲಾದ ಸಚಿವರನ್ನು ಕರೆಸಿ ವಿಚಾರಣೆ ನಡೆಸುವುದಿಲ್ಲ. ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂಬ ವಿಚಾರಣೆಯನ್ನೂ ನಡೆಸುವುದಿಲ್ಲ. ಬದಲಾಗಿ ಮಾಹಿತಿದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ಮಾಹಿತಿಯ ಬೆನ್ನು ಹತ್ತಬೇಕಾದ ಪೊಲೀಸರು ಮಾಹಿತಿದಾರನ ಬೆನ್ನು ಬೀಳುತ್ತಾರೆ. ಮಾಹಿತಿಯ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಎಫ್ಐಆರ್ ಮಾಡದೇ ಮಾಹಿತಿದಾರನಿಗೇ ಕಿರುಕುಳ ಕೊಡಲಾಗುತ್ತದೆ. ಕೊನೆಗೆ ಮಾಹಿತಿದಾರ ಮಾಹಿತಿ ಅರ್ಜಿಯನ್ನೇ ವಾಪಸ್ ಪಡೆಯುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ದಿನೇಶ್ ಕಲ್ಲಹಳ್ಳಿ ಮಾಹಿತಿ ಅರ್ಜಿಯನ್ನು ವಾಪಸ್ ಪಡೆಯುತ್ತಿದ್ದಂತೆ ರಮೇಶ್ ಜಾರಕಿಹೋಳಿ ಗೃಹ ಸಚಿವರಿಗೆ ಎರಡ್ಮೂರು ವಾಕ್ಯದ ಪತ್ರ ಬರೆಯುತ್ತಾರೆ. ನನ್ನ ತೇಜೋವಧೆಯಾಗಿದ್ದು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾರೆ. ಈ ಪತ್ರದ ಆಧಾರದ ಮೇಲೆ ವಿಶೇಷ ತನಿಖಾ ತಂಡ(SIT) ರಚನೆ ಮಾಡಲಾಗುತ್ತದೆ. ಯಾವ ಎಫ್ಐಆರ್ ಇಲ್ಲದೆ ಸರ್ಕಾರ ಎಸ್ಐಟಿ ರಚನೆ ಮಾಡಿರುವುದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲಿರಬೇಕು.

ಎಸ್ಐಟಿಯೇನೋ ರಚನೆಯಾಯಿತು. ಗೃಹ ಸಚಿವರಿಗೆ ಪತ್ರ ಬರೆದ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಎಸ್ಐಟಿ ತಂಡ ಮೊದಲು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿತ್ತು. ಗೃಹಸಚಿವರಿಗೆ ಪತ್ರ ಬರೆಯಲು ಕಾರಣವಾದ ಘಟನೆಯನ್ನು ಸಂಪೂರ್ಣ ದಾಖಲು ಮಾಡಿಕೊಳ್ಳಬೇಕಿತ್ತು. ಆ ಬಳಿಕ ದೃಶ್ಯಾವಳಿಯಲ್ಲಿ ಇದ್ದಳೆನ್ನಲಾದ ಯುವತಿಯ ಬಳಿಗೆ ಪೊಲೀಸರನ್ನು ಕಳುಹಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿತ್ತು. ಯುವತಿ ಸಂತ್ರಸ್ತಳೇ? ಆಕೆಗೆ ಮಹಿಳಾ ಸಾಂತ್ವನ ಕೇಂದ್ರದ ರಕ್ಷಣೆ ಬೇಕೇ? ಆಕೆ ಇನ್ನೂ ಮಂತ್ರಿಯ ಕಪಿಮುಷ್ಟಿಯಲ್ಲಿ ಇದ್ದಾಳೆಯೇ? ರಕ್ಷಣೆಗೆ ಒಳಗಾಗಬೇಕಾದವಳೇ? ಅಥವಾ ಆಕೆಯೇ ಆರೋಪಿಯೇ? ಎಂಬುದನ್ನು ಮೊದಲು ಖಾತ್ರಿಪಡಿಸಿ ಬಳಿಕ ತನಿಖೆಯ ಕೋನವನ್ನು ನಿರ್ಧರಿಸಬೇಕಿತ್ತು. ಆದರೆ ಇವ್ಯಾವುದನ್ನೂ ಮಾಡದ ಎಸ್ಐಟಿ ನೇರವಾಗಿ ಈ ದೃಶ್ಯಾವಳಿಗಳನ್ನು ಒಟ್ಟು ಸೇರಿಸಿದ್ದು ಯಾರು? ಅದು ಬಹಿರಂಗಗೊಳ್ಳುವಂತೆ ಮಾಡಿದ್ದು ಯಾರು ಎಂಬ ಬಗ್ಗೆ ಆಸಕ್ತಿ ವಹಿಸಿ ಹಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಿತು.

ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈಗ ರಮೇಶ್ ಜಾರಕಿಹೋಳಿಯಿಂದ ದೂರು ಪಡೆದುಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಅಂದು ದಿನೇಶ್ ಕಲ್ಲಹಳ್ಳಿ ಮಾಹಿತಿ ನೀಡಿದಾಗ ದೂರು ದಾಖಲಿಸದ ಪೊಲೀಸರು ಈಗ ರಮೇಶ್ ಜಾರಕಿಹೋಳಿ ದೂರು ನೀಡಿದ ತಕ್ಷಣ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇಡೀ ತನಿಖೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಕಾನೂನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಯಾರು ಸಂತ್ರಸ್ತರೋ ಅವರನ್ನು ಆರೋಪಿಗಳನ್ನಾಗಿಯೂ, ಯಾರು ಆರೋಪಿಗಳೋ ಅವರನ್ನು ಸಂತ್ರಸ್ತರಾಗಿಯೂ ಬಿಂಬಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ, ಆದರೆ ಸಾಹುಕಾರ್ ಹೊರತುಪಡಿಸಿ” ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...