Homeಕರ್ನಾಟಕಕಾನೂನು ಎಲ್ಲರಿಗೂ ಒಂದೇ..! "ಸಾಹುಕಾರ್" ಹೊರತುಪಡಿಸಿ..! - ಅನನ್ಯ ಬೆಂಗಳೂರು

ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

- Advertisement -
- Advertisement -

ಕರ್ನಾಟಕ ಸ್ವಯಂಘೋಷಿತ ಸಾಹುಕಾರ್ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ ಇಡೀ ರಾಜ್ಯದ ಕಾನೂನನ್ನೇ ಅಣಕಿಸುತ್ತಿದೆ. ಕಾನ್‌ಸ್ಟೇಬಲ್ ಎದುರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ರಮೇಶ್ ಜಾರಕಿಹೋಳಿ ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮನೆ ಆಳಿನಂತೆ ಬಳಕೆ ಮಾಡಿಕೊಳ್ಳುತ್ತಿರೋದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತಿದೆ.

ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಸಿಡಿಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡುತ್ತಾರೆ. ಮಾಹಿತಿಯನ್ನು ಪಡೆದುಕೊಳ್ಳಲು ನಿರಾಕರಿಸುವ ಪೊಲೀಸ್ ಆಯುಕ್ತರು ದಿನೇಶ್ ಕಲ್ಲಹಳ್ಳಿಯವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಅರ್ಜಿ ನೀಡುವಂತೆ ಸೂಚಿಸುತ್ತಾರೆ. “ಸಚಿವರೊಬ್ಬರು ಈ ಸಿಡಿಯ ದೃಶ್ಯಾವಳಿಗಳಲ್ಲಿ ಇದ್ದು, ಯುವತಿಯನ್ನು ಬಳಸಿಕೊಳ್ಳಲಾಗಿದೆ. ಈ ಸಿಡಿಯನ್ನು ಮಾಹಿತಿ ಮೂಲಗಳು ನನಗೆ ತಲುಪಿಸಿದ್ದು, ಅದನ್ನು ಬಹಿರಂಗಗೊಳಿಸದೆ ಒರ್ವ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಹಸ್ತಾಂತರಿಸುತ್ತೇನೆ. ಈ ಸಿಡಿಯ ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂದು ತನಿಖೆ ಮಾಡಿ” ಎಂದು ಮಾಹಿತಿ ಅರ್ಜಿಯಲ್ಲಿ ದಿನೇಶ್ ಕಲ್ಲಹಳ್ಳಿ ಕೇಳಿಕೊಂಡಿದ್ದರು.

ಅರ್ಜಿ ಪಡೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಆ ದೃಶ್ಯಾವಳಿಯಲ್ಲಿ ಇದ್ದರೆನ್ನಲಾದ ಸಚಿವರನ್ನು ಕರೆಸಿ ವಿಚಾರಣೆ ನಡೆಸುವುದಿಲ್ಲ. ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂಬ ವಿಚಾರಣೆಯನ್ನೂ ನಡೆಸುವುದಿಲ್ಲ. ಬದಲಾಗಿ ಮಾಹಿತಿದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ಮಾಹಿತಿಯ ಬೆನ್ನು ಹತ್ತಬೇಕಾದ ಪೊಲೀಸರು ಮಾಹಿತಿದಾರನ ಬೆನ್ನು ಬೀಳುತ್ತಾರೆ. ಮಾಹಿತಿಯ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಎಫ್ಐಆರ್ ಮಾಡದೇ ಮಾಹಿತಿದಾರನಿಗೇ ಕಿರುಕುಳ ಕೊಡಲಾಗುತ್ತದೆ. ಕೊನೆಗೆ ಮಾಹಿತಿದಾರ ಮಾಹಿತಿ ಅರ್ಜಿಯನ್ನೇ ವಾಪಸ್ ಪಡೆಯುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ದಿನೇಶ್ ಕಲ್ಲಹಳ್ಳಿ ಮಾಹಿತಿ ಅರ್ಜಿಯನ್ನು ವಾಪಸ್ ಪಡೆಯುತ್ತಿದ್ದಂತೆ ರಮೇಶ್ ಜಾರಕಿಹೋಳಿ ಗೃಹ ಸಚಿವರಿಗೆ ಎರಡ್ಮೂರು ವಾಕ್ಯದ ಪತ್ರ ಬರೆಯುತ್ತಾರೆ. ನನ್ನ ತೇಜೋವಧೆಯಾಗಿದ್ದು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾರೆ. ಈ ಪತ್ರದ ಆಧಾರದ ಮೇಲೆ ವಿಶೇಷ ತನಿಖಾ ತಂಡ(SIT) ರಚನೆ ಮಾಡಲಾಗುತ್ತದೆ. ಯಾವ ಎಫ್ಐಆರ್ ಇಲ್ಲದೆ ಸರ್ಕಾರ ಎಸ್ಐಟಿ ರಚನೆ ಮಾಡಿರುವುದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲಿರಬೇಕು.

ಎಸ್ಐಟಿಯೇನೋ ರಚನೆಯಾಯಿತು. ಗೃಹ ಸಚಿವರಿಗೆ ಪತ್ರ ಬರೆದ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಎಸ್ಐಟಿ ತಂಡ ಮೊದಲು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿತ್ತು. ಗೃಹಸಚಿವರಿಗೆ ಪತ್ರ ಬರೆಯಲು ಕಾರಣವಾದ ಘಟನೆಯನ್ನು ಸಂಪೂರ್ಣ ದಾಖಲು ಮಾಡಿಕೊಳ್ಳಬೇಕಿತ್ತು. ಆ ಬಳಿಕ ದೃಶ್ಯಾವಳಿಯಲ್ಲಿ ಇದ್ದಳೆನ್ನಲಾದ ಯುವತಿಯ ಬಳಿಗೆ ಪೊಲೀಸರನ್ನು ಕಳುಹಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿತ್ತು. ಯುವತಿ ಸಂತ್ರಸ್ತಳೇ? ಆಕೆಗೆ ಮಹಿಳಾ ಸಾಂತ್ವನ ಕೇಂದ್ರದ ರಕ್ಷಣೆ ಬೇಕೇ? ಆಕೆ ಇನ್ನೂ ಮಂತ್ರಿಯ ಕಪಿಮುಷ್ಟಿಯಲ್ಲಿ ಇದ್ದಾಳೆಯೇ? ರಕ್ಷಣೆಗೆ ಒಳಗಾಗಬೇಕಾದವಳೇ? ಅಥವಾ ಆಕೆಯೇ ಆರೋಪಿಯೇ? ಎಂಬುದನ್ನು ಮೊದಲು ಖಾತ್ರಿಪಡಿಸಿ ಬಳಿಕ ತನಿಖೆಯ ಕೋನವನ್ನು ನಿರ್ಧರಿಸಬೇಕಿತ್ತು. ಆದರೆ ಇವ್ಯಾವುದನ್ನೂ ಮಾಡದ ಎಸ್ಐಟಿ ನೇರವಾಗಿ ಈ ದೃಶ್ಯಾವಳಿಗಳನ್ನು ಒಟ್ಟು ಸೇರಿಸಿದ್ದು ಯಾರು? ಅದು ಬಹಿರಂಗಗೊಳ್ಳುವಂತೆ ಮಾಡಿದ್ದು ಯಾರು ಎಂಬ ಬಗ್ಗೆ ಆಸಕ್ತಿ ವಹಿಸಿ ಹಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಿತು.

ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈಗ ರಮೇಶ್ ಜಾರಕಿಹೋಳಿಯಿಂದ ದೂರು ಪಡೆದುಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಅಂದು ದಿನೇಶ್ ಕಲ್ಲಹಳ್ಳಿ ಮಾಹಿತಿ ನೀಡಿದಾಗ ದೂರು ದಾಖಲಿಸದ ಪೊಲೀಸರು ಈಗ ರಮೇಶ್ ಜಾರಕಿಹೋಳಿ ದೂರು ನೀಡಿದ ತಕ್ಷಣ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇಡೀ ತನಿಖೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಕಾನೂನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಯಾರು ಸಂತ್ರಸ್ತರೋ ಅವರನ್ನು ಆರೋಪಿಗಳನ್ನಾಗಿಯೂ, ಯಾರು ಆರೋಪಿಗಳೋ ಅವರನ್ನು ಸಂತ್ರಸ್ತರಾಗಿಯೂ ಬಿಂಬಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ, ಆದರೆ ಸಾಹುಕಾರ್ ಹೊರತುಪಡಿಸಿ” ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...