Homeಕರ್ನಾಟಕಕಾನೂನು ಎಲ್ಲರಿಗೂ ಒಂದೇ..! "ಸಾಹುಕಾರ್" ಹೊರತುಪಡಿಸಿ..! - ಅನನ್ಯ ಬೆಂಗಳೂರು

ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

- Advertisement -
- Advertisement -

ಕರ್ನಾಟಕ ಸ್ವಯಂಘೋಷಿತ ಸಾಹುಕಾರ್ ರಮೇಶ್ ಜಾರಕಿಹೋಳಿ ಸಿಡಿ ಪ್ರಕರಣ ಇಡೀ ರಾಜ್ಯದ ಕಾನೂನನ್ನೇ ಅಣಕಿಸುತ್ತಿದೆ. ಕಾನ್‌ಸ್ಟೇಬಲ್ ಎದುರು ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದ ರಮೇಶ್ ಜಾರಕಿಹೋಳಿ ರಾಜ್ಯದ ಪೊಲೀಸ್ ವ್ಯವಸ್ಥೆಯನ್ನು ಮನೆ ಆಳಿನಂತೆ ಬಳಕೆ ಮಾಡಿಕೊಳ್ಳುತ್ತಿರೋದು ಸ್ಪಷ್ಟವಾಗಿ ಕಣ್ಣಿಗೆ ರಾಚುತ್ತಿದೆ.

ರಮೇಶ್ ಜಾರಕಿಹೋಳಿ ಲೈಂಗಿಕ ಹಗರಣದ ಸಿಡಿಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿಯವರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡುತ್ತಾರೆ. ಮಾಹಿತಿಯನ್ನು ಪಡೆದುಕೊಳ್ಳಲು ನಿರಾಕರಿಸುವ ಪೊಲೀಸ್ ಆಯುಕ್ತರು ದಿನೇಶ್ ಕಲ್ಲಹಳ್ಳಿಯವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಅರ್ಜಿ ನೀಡುವಂತೆ ಸೂಚಿಸುತ್ತಾರೆ. “ಸಚಿವರೊಬ್ಬರು ಈ ಸಿಡಿಯ ದೃಶ್ಯಾವಳಿಗಳಲ್ಲಿ ಇದ್ದು, ಯುವತಿಯನ್ನು ಬಳಸಿಕೊಳ್ಳಲಾಗಿದೆ. ಈ ಸಿಡಿಯನ್ನು ಮಾಹಿತಿ ಮೂಲಗಳು ನನಗೆ ತಲುಪಿಸಿದ್ದು, ಅದನ್ನು ಬಹಿರಂಗಗೊಳಿಸದೆ ಒರ್ವ ಜವಾಬ್ದಾರಿಯುತ ನಾಗರಿಕನಾಗಿ ಪೊಲೀಸರಿಗೆ ಹಸ್ತಾಂತರಿಸುತ್ತೇನೆ. ಈ ಸಿಡಿಯ ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂದು ತನಿಖೆ ಮಾಡಿ” ಎಂದು ಮಾಹಿತಿ ಅರ್ಜಿಯಲ್ಲಿ ದಿನೇಶ್ ಕಲ್ಲಹಳ್ಳಿ ಕೇಳಿಕೊಂಡಿದ್ದರು.

ಅರ್ಜಿ ಪಡೆದುಕೊಂಡ ಕಬ್ಬನ್ ಪಾರ್ಕ್ ಪೊಲೀಸರು ಆ ದೃಶ್ಯಾವಳಿಯಲ್ಲಿ ಇದ್ದರೆನ್ನಲಾದ ಸಚಿವರನ್ನು ಕರೆಸಿ ವಿಚಾರಣೆ ನಡೆಸುವುದಿಲ್ಲ. ದೃಶ್ಯಾವಳಿಯಲ್ಲಿರುವ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆಗಿದೆಯೇ ಎಂಬ ವಿಚಾರಣೆಯನ್ನೂ ನಡೆಸುವುದಿಲ್ಲ. ಬದಲಾಗಿ ಮಾಹಿತಿದಾರ ದಿನೇಶ್ ಕಲ್ಲಹಳ್ಳಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗುತ್ತದೆ. ಮಾಹಿತಿಯ ಬೆನ್ನು ಹತ್ತಬೇಕಾದ ಪೊಲೀಸರು ಮಾಹಿತಿದಾರನ ಬೆನ್ನು ಬೀಳುತ್ತಾರೆ. ಮಾಹಿತಿಯ ಮೇರೆಗೆ ಎಫ್ಐಆರ್ ದಾಖಲಿಸಿಕೊಳ್ಳುವ ಎಲ್ಲಾ ಅವಕಾಶಗಳಿದ್ದರೂ ಎಫ್ಐಆರ್ ಮಾಡದೇ ಮಾಹಿತಿದಾರನಿಗೇ ಕಿರುಕುಳ ಕೊಡಲಾಗುತ್ತದೆ. ಕೊನೆಗೆ ಮಾಹಿತಿದಾರ ಮಾಹಿತಿ ಅರ್ಜಿಯನ್ನೇ ವಾಪಸ್ ಪಡೆಯುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ದಿನೇಶ್ ಕಲ್ಲಹಳ್ಳಿ ಮಾಹಿತಿ ಅರ್ಜಿಯನ್ನು ವಾಪಸ್ ಪಡೆಯುತ್ತಿದ್ದಂತೆ ರಮೇಶ್ ಜಾರಕಿಹೋಳಿ ಗೃಹ ಸಚಿವರಿಗೆ ಎರಡ್ಮೂರು ವಾಕ್ಯದ ಪತ್ರ ಬರೆಯುತ್ತಾರೆ. ನನ್ನ ತೇಜೋವಧೆಯಾಗಿದ್ದು ತನಿಖೆ ನಡೆಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸುತ್ತಾರೆ. ಈ ಪತ್ರದ ಆಧಾರದ ಮೇಲೆ ವಿಶೇಷ ತನಿಖಾ ತಂಡ(SIT) ರಚನೆ ಮಾಡಲಾಗುತ್ತದೆ. ಯಾವ ಎಫ್ಐಆರ್ ಇಲ್ಲದೆ ಸರ್ಕಾರ ಎಸ್ಐಟಿ ರಚನೆ ಮಾಡಿರುವುದು ಬಹುಶಃ ದೇಶದ ಇತಿಹಾಸದಲ್ಲಿ ಇದೇ ಮೊದಲಿರಬೇಕು.

ಎಸ್ಐಟಿಯೇನೋ ರಚನೆಯಾಯಿತು. ಗೃಹ ಸಚಿವರಿಗೆ ಪತ್ರ ಬರೆದ ಮಾಜಿ ಸಚಿವ ರಮೇಶ್ ಜಾರಕಿಹೋಳಿಯನ್ನು ಎಸ್ಐಟಿ ತಂಡ ಮೊದಲು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿತ್ತು. ಗೃಹಸಚಿವರಿಗೆ ಪತ್ರ ಬರೆಯಲು ಕಾರಣವಾದ ಘಟನೆಯನ್ನು ಸಂಪೂರ್ಣ ದಾಖಲು ಮಾಡಿಕೊಳ್ಳಬೇಕಿತ್ತು. ಆ ಬಳಿಕ ದೃಶ್ಯಾವಳಿಯಲ್ಲಿ ಇದ್ದಳೆನ್ನಲಾದ ಯುವತಿಯ ಬಳಿಗೆ ಪೊಲೀಸರನ್ನು ಕಳುಹಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕಿತ್ತು. ಯುವತಿ ಸಂತ್ರಸ್ತಳೇ? ಆಕೆಗೆ ಮಹಿಳಾ ಸಾಂತ್ವನ ಕೇಂದ್ರದ ರಕ್ಷಣೆ ಬೇಕೇ? ಆಕೆ ಇನ್ನೂ ಮಂತ್ರಿಯ ಕಪಿಮುಷ್ಟಿಯಲ್ಲಿ ಇದ್ದಾಳೆಯೇ? ರಕ್ಷಣೆಗೆ ಒಳಗಾಗಬೇಕಾದವಳೇ? ಅಥವಾ ಆಕೆಯೇ ಆರೋಪಿಯೇ? ಎಂಬುದನ್ನು ಮೊದಲು ಖಾತ್ರಿಪಡಿಸಿ ಬಳಿಕ ತನಿಖೆಯ ಕೋನವನ್ನು ನಿರ್ಧರಿಸಬೇಕಿತ್ತು. ಆದರೆ ಇವ್ಯಾವುದನ್ನೂ ಮಾಡದ ಎಸ್ಐಟಿ ನೇರವಾಗಿ ಈ ದೃಶ್ಯಾವಳಿಗಳನ್ನು ಒಟ್ಟು ಸೇರಿಸಿದ್ದು ಯಾರು? ಅದು ಬಹಿರಂಗಗೊಳ್ಳುವಂತೆ ಮಾಡಿದ್ದು ಯಾರು ಎಂಬ ಬಗ್ಗೆ ಆಸಕ್ತಿ ವಹಿಸಿ ಹಲವು ಪತ್ರಕರ್ತರನ್ನು ವಿಚಾರಣೆಗೆ ಒಳಪಡಿಸಿತು.

ಹಲವರನ್ನು ವಿಚಾರಣೆಗೆ ಒಳಪಡಿಸಿದ ಬಳಿಕ ಈಗ ರಮೇಶ್ ಜಾರಕಿಹೋಳಿಯಿಂದ ದೂರು ಪಡೆದುಕೊಂಡು ಎಫ್ಐಆರ್ ದಾಖಲಿಸಲಾಗಿದೆ. ಅಂದು ದಿನೇಶ್ ಕಲ್ಲಹಳ್ಳಿ ಮಾಹಿತಿ ನೀಡಿದಾಗ ದೂರು ದಾಖಲಿಸದ ಪೊಲೀಸರು ಈಗ ರಮೇಶ್ ಜಾರಕಿಹೋಳಿ ದೂರು ನೀಡಿದ ತಕ್ಷಣ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಇಡೀ ತನಿಖೆಯಲ್ಲಿ ಮಹಿಳಾ ದೌರ್ಜನ್ಯ ತಡೆ ಕಾನೂನನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ. ಯಾರು ಸಂತ್ರಸ್ತರೋ ಅವರನ್ನು ಆರೋಪಿಗಳನ್ನಾಗಿಯೂ, ಯಾರು ಆರೋಪಿಗಳೋ ಅವರನ್ನು ಸಂತ್ರಸ್ತರಾಗಿಯೂ ಬಿಂಬಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. “ಕಾನೂನು ಎಲ್ಲರಿಗೂ ಒಂದೇ, ಆದರೆ ಸಾಹುಕಾರ್ ಹೊರತುಪಡಿಸಿ” ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ.


ಇದನ್ನೂ ಓದಿ: ಎಐಎಡಿಎಂಕೆ ಈಗ ಜಯಲಲಿತ ಅವರ ಪಕ್ಷವಲ್ಲ; ಮೋದಿಯ ಗುಲಾಮಿ ಪಕ್ಷ – ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...