Homeಮುಖಪುಟಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ

- Advertisement -
- Advertisement -

ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ತನ್ನ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು 35 ವರ್ಷದ ಮಹಿಳೆಯೊಬ್ಬರು ಆರೋಪಿಸಿ, ಏಪ್ರಿಲ್ 19ರ ಶುಕ್ರವಾರ ಸುಪ್ರೀಂ ಕೋರ್ಟ್‍ನ 22 ನ್ಯಾಯಾಧೀಶರಿಗೆ ಅಫಿಡವಿಟ್ ಸಲ್ಲಿಸಿದ್ದಾರೆ.

2018ರ ಅಕ್ಟೋಬರ್ 10 ಮತ್ತು 11ರಂದು ನಾನು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾಗ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿರವರು ಅವರ ಗೃಹಕಚೇರಿಯಲ್ಲಿ ನನ್ನೊಡನೆ ಬಹಳ ಅನುಚಿತವಾಗಿ ವರ್ತಿಸುವ ಮೂಲಕ ಲೈಂಗಿಕವಾಗಿ ಶೋಷಿಸಿದ್ದರು ಎಂದು ಆಕೆ ದೂರಿದ್ದಾರೆ.

ಅಲ್ಲದೇ ಈ ಘಟನೆಯ ಎರಡು ತಿಂಗಳ ನಂತರ ಆಕೆಯನ್ನು ಡಿಸೆಂಬರ್‍ನಲ್ಲಿ ಕೆಲಸದಿಂದ ವಜಾಗೊಳಿಸಲಾಗಿತ್ತು. ಕಾರಣ ಕೇಳಿದ್ದಲ್ಲಿ, ಆಕೆಯ ಮೇಲೆ ತನಿಖಾ ಸಮಿತಿಯೊಂದನ್ನು ರಚಿಸಿದ್ದು, ಆಕೆ ಒಂದು ದಿನ ಅನುಮತಿಯಿಲ್ಲದೇ ರಜೆ ತೆಗೆದುಕೊಂಡ ಕಾರಣಕ್ಕಾಗಿ ಕೆಲಸದಿಂದ ತೆಗೆಯಲಾಗಿದೆ ಎಂದು ತಿಳಿಸಿದೆ.

ಕೆಲಸದಿಂದ ವಜಾಗೊಳಿಸಿದ ಮಾತ್ರಕ್ಕೆ ಆಕೆಯ ಮೇಲಿನ ದೌರ್ಜನ್ಯ ನಿಂತಿಲ್ಲ. ಆಕೆಯ ಇಡೀ ಕುಟುಂಬವನ್ನೇ ಗುರಿ ಮಾಡಿ ತೊಂದರೆ ಕೊಡಲಾಗಿದೆ ಎಂದು ಅಫಿಡವಿಟ್‍ನಲ್ಲಿ ತಿಳಿಸಿದ್ದಾರೆ. ಆಕೆಯ ಗಂಡ ಮತ್ತು ಆತನ ತಮ್ಮ ಇಬ್ಬರೂ ಇಬ್ಬರು ದೆಹಲಿ ಪೋಲಿಸ್ ಇಲಾಖೆಯಲ್ಲಿ ಪೇದೆಗಳಾಗಿ ಕೆಲಸ ನಿರ್ವಹಿಸುತ್ತಿರುವಾಗಲೇ 2012ರ ಕಾಲೋನಿ ಭೂವಿವಾದದ ಹಳೆಯ ಕೇಸನ್ನು ಉಲ್ಲೇಖಿಸಿ ಅವರಿಬ್ಬರನ್ನು ಡಿಸೆಂಬರ್‍ನಿಂದಲೇ ಅಮಾನತು ಮಾಡಲಾಗಿದೆ.

ಅಲ್ಲಿಂದ ಮುಂದುವರೆದು ನವೀನ್ ಎಂಬ ವ್ಯಕ್ತಿಯು ಈಕೆಯ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ದೂರು ದಾಖಲಿಸಿದ್ದಾನೆ. 2017ರಲ್ಲಿ ಈಕೆ ಸುಪ್ರೀಂ ಕೋರ್ಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ನನ್ನಿಂದ 50000 ಸಾವಿರ ಹಣ ಪಡೆದು ವಂಚಿಸಿದ್ದಾಳೆ ಎಂಬುದು ಆ ದೂರಿನ ಸಾರಂಶ. ಇದಕ್ಕಾಗಿ ಆಕೆಯ ಮೇಲೆ ಎಫ್‍ಐಆರ್ ದಾಖಲಾದುದು ಮಾತ್ರವಲ್ಲ ಒಂದು ದಿನ ಜೈಲಿಗೂ ಕೂಡ ಹೋಗಿದ್ದು ಸದ್ಯ ಬೇಲ್ ಪಡೆದಿದ್ದಾಳೆ. ‘ಆ ಕೇಸ್‍ನಲ್ಲಿ ಭ್ರಷ್ಟಾಚಾರದ ದೂರು ದಾಖಲಿಸಿರುವ ನವೀನ್ ಎಂಬಾತನ ಮೇಲೂ ಕೂಡ ಲಂಚ ಕೊಟ್ಟ ಆರೋಪದ ಮೇಲೆ ದೂರು ದಾಖಲಿಸಬಹುದು, ಆದರೆ ಅದನ್ನು ಮಾಡದ ಪೋಲೀಸರು ಈಗ ಈಕೆಯ ಬೇಲ್ ರದ್ದುಗೊಳಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆಕೆಯ ಪರ ವಕೀಲ ಗ್ರೋವರ್ ಆರೋಪಿಸಿದ್ದಾರೆ.

ಆಕೆ ತನ್ನ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಡದ ಕಾರಣಕ್ಕಾಗಿ ತನ್ನ ಉದ್ಯೋಗವನ್ನು ಕಳೆದುಕೊಳ್ಳಬೇಕಾಯಿತು, ಆಕೆಯ ಕುಟುಂಬದ ಇಬ್ಬರೂ ಅಮಾನತಾಗಿದ್ದಾರೆ. ಆಕೆ ಜೈಲಿಗೆ ಹೋದ ನಂತರ ಇದು ಇಲ್ಲಿಗೆ ನಿಲ್ಲುವುದಿಲ್ಲ ಎಂಬುದು ಅರ್ಥವಾಗಿದೆ. ಹಾಗಾಗಿ ಆಕೆ ತನಗಾದ ಅನ್ಯಾಯವನ್ನು ಸಾರ್ವಜನಿಕವಾಗಿ ತೆರೆದಿಡುವುದು ಮತ್ತು ಸುಪ್ರೀಂ ಕೋರ್ಟ್‍ನ ನ್ಯಾಯಾಧೀಶರಿಗೆ ಪತ್ರ ಬರೆಯದೇ ಬೇರೆ ಆಯ್ಕೆಗಳೇ ಇಲ್ಲ ಎಂದು ಗ್ರೋವರ್ ಅಭಿಪ್ರಾಯಪಡುತ್ತಾರೆ.

ನ್ಯಾಯಾಂಗ ಅಪಾಯದಲ್ಲಿದೆ – ರಂಜನ್ ಗಗೋಯಿ
ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿರುವ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ, ನ್ಯಾಯಾಂಗ ಅಪಾಯದಲ್ಲಿದೆ ಎಂದಿದ್ದಲ್ಲದೇ, ಈ ಪ್ರಕರಣ ಸ್ವತಂತ್ರ ನ್ಯಾಯಾಂಗ ಮತ್ತು ಮುಖ್ಯ ನ್ಯಾಯಮೂರ್ತಿಗಳ ಕಚೇರಿಯನ್ನು ದುರ್ಬಲಗೊಳಿಸಲು ಹೆಣೆದಿರುವ ದೊಡ್ಡ ಪಿತೂರಿಯಾಗಿದೆ ಎಂದ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶನಿಗೆ ತನ್ನ ಹುದ್ದೆಗಿಂತಲೂ ಮಿಗಿಲಾದುದು ಯಾವುದು ಇಲ್ಲ ಹಾಗಾಗಿ ಅದರ ಮೇಲೆಯೇ ದಾಳಿ ನಡೆದರೆ ಸಹಿಸಲಾಗುವುದಿಲ್ಲ ಎಂದಿದ್ದಾರೆ.ಇಂದು ನ್ಯಾಯಾಂಗದ ಸ್ವಾತಂತ್ರ್ಯ ಅಪಾಯದಲ್ಲಿದ್ದು ಇಂತಹ ಪರಿಸ್ಥಿತಿಯಲ್ಲಿ ನ್ಯಾಯಾಧೀಶರು ಕೆಲಸ ಮಾಡಬೇಕೆಂದರೆ ಯಾರು ಸಹ ಮುಂದೆ ಬರುವುದಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...