Homeಚಳವಳಿಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

ಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಕಾಂಕ್ರೀಟ್ ರಚನೆಗಳನ್ನು ನಿರ್ಮಿಸಿದ್ದಾರೆ ಮತ್ತು ಸಿಂಗು ಬಳಿಯ ಕುಂಡ್ಲಿಯಲ್ಲಿ ಬೋರ್‌ವೆಲ್ ಕೊರೆದಿದ್ದಾರೆ ಎಂದು ಆರೋಪಿಸಿ ಹರಿಯಾಣ ಪೊಲೀಸರು ರೈತರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ದೆಹಲಿ ಬಳಿಯ ಸಿಂಘು ಗಡಿಯು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಗಳ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತರು ಇರುವ ಸ್ಥಳವಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಆನಂದ್ ಶರ್ಮಾ ಅವರ ದೂರಿನ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 283 ಮತ್ತು 431 ರ ಅಡಿಯಲ್ಲಿ ಮೊದಲನೆಯ ದೂರನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಎರಡು ಅಂತಸ್ತಿನ ಮನೆ ನಿರ್ಮಿಸುತ್ತಿರುವ ರೈತರು!

“ಕೆಲವು ಅಪರಿಚಿತ ಜನರು” ಮಾಲ್ವಾ ಮೋಟಾರ್ಸ್ ಮುಂದಿನ ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಅಕ್ರಮ ರಚನೆಗಳನ್ನು ನಿರ್ಮಿಸಿ, ರಾಷ್ಟ್ರೀಯ ಹೆದ್ದಾರಿ – 44 ಕ್ಕೆ ತಡೆ ಒಡ್ಡುತ್ತಿದ್ದಾರೆ ಎಂದು ಶರ್ಮಾ ದೂರಿನಲ್ಲಿ ಹೇಳಿದ್ದಾರೆ. ಅವರು ಅಕ್ರಮ ನಿರ್ಮಾಣದ ಚಿತ್ರಗಳನ್ನು ಪೊಲೀಸರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಕುಂಡ್ಲಿಯ ಮುನ್ಸಿಪಲ್ ಕಮಿಟಿ ಕಾರ್ಯದರ್ಶಿ ಪವನ್ ಕುಮಾರ್ ಅವರ ದೂರಿನ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 188 ರ ಅಡಿಯಲ್ಲಿ ಎರಡನೇ ಪ್ರಕರಣ ದಾಖಲಿಸಲಾಗಿದೆ.

ನಿಷೇಧದ ಆದೇಶದ ಹೊರತಾಗಿಯೂ, ಬಟಿಂಡಾದ ರೈತ ಕರಮ್ ಸಿಂಗ್ ರಾಷ್ಟ್ರೀಯ ಹೆದ್ದಾರಿ – 44 ಬಳಿಯ ಕೆಎಫ್‌ಸಿ ಮಾಲ್ ಬಳಿಯ ಹೊಲವೊಂದರಲ್ಲಿ ಬೋರ್‌ವೆಲ್ ಕೊರೆದಿದ್ದಾರೆ. ಪುರಸಭೆಯ ಎಂಜಿನಿಯರ್ ಬೋರ್‌ವೆಲ್‌ ಕೊರೆಯುವುದನ್ನು ನಿಲ್ಲಿಸಬೇಕೆಂದು ಹೇಳಿದರೂ ಅವರು ಅದನ್ನು ನಿಲ್ಲಿಸಲಿಲ್ಲ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ಬಿಕೆಯು (ಲಾಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಾಖೋವಾಲ್, “ನಾವು ಯಾವುದೇ ಶಾಶ್ವತ ರಚನೆಯನ್ನು ನಿರ್ಮಿಸುತ್ತಿಲ್ಲ. ಬಿಸಿಲಿನಿಂದ ರೈತರನ್ನು ರಕ್ಷಿಸಲು ಸೌರ ಫಲಕಗಳನ್ನು ಅಳವಡಿಸಲು ನಾವು ಯೋಜಿಸಿದ್ದೇವೆ” ಎಂದು ಹೇಳಿದ್ದಾರೆ.

“ಸಿಂಘು ಗಡಿಯ ವಿವಿಧ ಸ್ಥಳಗಳ ರಸ್ತೆಬದಿಯಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಕಾರ್ಮಿಕರನ್ನು ಕಾಣಬಹುದು. ಗಡಿಯಲ್ಲಿ ನಾಲ್ಕು ಎರಡು ಅಂತಸ್ತಿನ ಮನೆಗಳು ಈಗಾಗಲೇ ರಚೆನೆಯಾಗಿದ್ದು, ಇದಕ್ಕೆ ಇಟ್ಟಿಗೆಗಳು ಪಂಜಾಬ್‌ನಿಂದ ತರಿಸಲಾಗಿದೆ. ಸಿಂಘು, ಟಿಕ್ರಿ ಮತ್ತು ಗಾಜಿಪುರದ ಪ್ರತಿಭಟನಾ ಸ್ಥಳಗಳಲ್ಲಿ ಪ್ರತಿಭಟನಾಕಾರರು ಕಡಿಮೆ ಸಂಖ್ಯೆಯಲ್ಲಿದ್ದಾರೆ, ಯಾಕೆಂದರೆ ರೈತರು ಕೊಯ್ಲಿಗಾಗಿ ತಮ್ಮ ಗ್ರಾಮಗಳಿಗೆ ತೆರಳಿದ್ದಾರೆ” ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನ: ಕೃಷಿ ಕಾಯ್ದೆಗಳ ವಿರುದ್ಧ ಬೀದಿಗಿಳಿದ ಲಕ್ಷಾಂತರ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...