Homeಚಳವಳಿಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

ಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಕಾಂಕ್ರೀಟ್ ರಚನೆಗಳನ್ನು ನಿರ್ಮಿಸಿದ್ದಾರೆ ಮತ್ತು ಸಿಂಗು ಬಳಿಯ ಕುಂಡ್ಲಿಯಲ್ಲಿ ಬೋರ್‌ವೆಲ್ ಕೊರೆದಿದ್ದಾರೆ ಎಂದು ಆರೋಪಿಸಿ ಹರಿಯಾಣ ಪೊಲೀಸರು ರೈತರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ. ದೆಹಲಿ ಬಳಿಯ ಸಿಂಘು ಗಡಿಯು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನಗಳ ವಿರುದ್ದ ಪ್ರತಿಭಟನೆ ನಡೆಸುತ್ತಿರುವ ರೈತರು ಇರುವ ಸ್ಥಳವಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಆನಂದ್ ಶರ್ಮಾ ಅವರ ದೂರಿನ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 283 ಮತ್ತು 431 ರ ಅಡಿಯಲ್ಲಿ ಮೊದಲನೆಯ ದೂರನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಎರಡು ಅಂತಸ್ತಿನ ಮನೆ ನಿರ್ಮಿಸುತ್ತಿರುವ ರೈತರು!

“ಕೆಲವು ಅಪರಿಚಿತ ಜನರು” ಮಾಲ್ವಾ ಮೋಟಾರ್ಸ್ ಮುಂದಿನ ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಅಕ್ರಮ ರಚನೆಗಳನ್ನು ನಿರ್ಮಿಸಿ, ರಾಷ್ಟ್ರೀಯ ಹೆದ್ದಾರಿ – 44 ಕ್ಕೆ ತಡೆ ಒಡ್ಡುತ್ತಿದ್ದಾರೆ ಎಂದು ಶರ್ಮಾ ದೂರಿನಲ್ಲಿ ಹೇಳಿದ್ದಾರೆ. ಅವರು ಅಕ್ರಮ ನಿರ್ಮಾಣದ ಚಿತ್ರಗಳನ್ನು ಪೊಲೀಸರಿಗೆ ಕಳುಹಿಸಿದ್ದಾರೆ ಎನ್ನಲಾಗಿದೆ.

ಕುಂಡ್ಲಿಯ ಮುನ್ಸಿಪಲ್ ಕಮಿಟಿ ಕಾರ್ಯದರ್ಶಿ ಪವನ್ ಕುಮಾರ್ ಅವರ ದೂರಿನ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಕಾಯ್ದೆ ಮತ್ತು ಐಪಿಸಿಯ ಸೆಕ್ಷನ್ 188 ರ ಅಡಿಯಲ್ಲಿ ಎರಡನೇ ಪ್ರಕರಣ ದಾಖಲಿಸಲಾಗಿದೆ.

ನಿಷೇಧದ ಆದೇಶದ ಹೊರತಾಗಿಯೂ, ಬಟಿಂಡಾದ ರೈತ ಕರಮ್ ಸಿಂಗ್ ರಾಷ್ಟ್ರೀಯ ಹೆದ್ದಾರಿ – 44 ಬಳಿಯ ಕೆಎಫ್‌ಸಿ ಮಾಲ್ ಬಳಿಯ ಹೊಲವೊಂದರಲ್ಲಿ ಬೋರ್‌ವೆಲ್ ಕೊರೆದಿದ್ದಾರೆ. ಪುರಸಭೆಯ ಎಂಜಿನಿಯರ್ ಬೋರ್‌ವೆಲ್‌ ಕೊರೆಯುವುದನ್ನು ನಿಲ್ಲಿಸಬೇಕೆಂದು ಹೇಳಿದರೂ ಅವರು ಅದನ್ನು ನಿಲ್ಲಿಸಲಿಲ್ಲ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ಬಿಕೆಯು (ಲಾಖೋವಾಲ್) ಪ್ರಧಾನ ಕಾರ್ಯದರ್ಶಿ ಹರಿಂದರ್ ಸಿಂಗ್ ಲಾಖೋವಾಲ್, “ನಾವು ಯಾವುದೇ ಶಾಶ್ವತ ರಚನೆಯನ್ನು ನಿರ್ಮಿಸುತ್ತಿಲ್ಲ. ಬಿಸಿಲಿನಿಂದ ರೈತರನ್ನು ರಕ್ಷಿಸಲು ಸೌರ ಫಲಕಗಳನ್ನು ಅಳವಡಿಸಲು ನಾವು ಯೋಜಿಸಿದ್ದೇವೆ” ಎಂದು ಹೇಳಿದ್ದಾರೆ.

“ಸಿಂಘು ಗಡಿಯ ವಿವಿಧ ಸ್ಥಳಗಳ ರಸ್ತೆಬದಿಯಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವ ಕಾರ್ಮಿಕರನ್ನು ಕಾಣಬಹುದು. ಗಡಿಯಲ್ಲಿ ನಾಲ್ಕು ಎರಡು ಅಂತಸ್ತಿನ ಮನೆಗಳು ಈಗಾಗಲೇ ರಚೆನೆಯಾಗಿದ್ದು, ಇದಕ್ಕೆ ಇಟ್ಟಿಗೆಗಳು ಪಂಜಾಬ್‌ನಿಂದ ತರಿಸಲಾಗಿದೆ. ಸಿಂಘು, ಟಿಕ್ರಿ ಮತ್ತು ಗಾಜಿಪುರದ ಪ್ರತಿಭಟನಾ ಸ್ಥಳಗಳಲ್ಲಿ ಪ್ರತಿಭಟನಾಕಾರರು ಕಡಿಮೆ ಸಂಖ್ಯೆಯಲ್ಲಿದ್ದಾರೆ, ಯಾಕೆಂದರೆ ರೈತರು ಕೊಯ್ಲಿಗಾಗಿ ತಮ್ಮ ಗ್ರಾಮಗಳಿಗೆ ತೆರಳಿದ್ದಾರೆ” ಎಂದು TNIE ವರದಿ ಮಾಡಿದೆ.

ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನ: ಕೃಷಿ ಕಾಯ್ದೆಗಳ ವಿರುದ್ಧ ಬೀದಿಗಿಳಿದ ಲಕ್ಷಾಂತರ ಮಹಿಳೆಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....