Homeಚಳವಳಿ'ಆಟ ಶುರು - ಬಂಗಾಳದಲ್ಲಿ ಬಿಜೆಪಿ ತೊಲಗಿಸಿ': ರಾಕೇಶ್ ಟಿಕಾಯತ್ ಕರೆ

‘ಆಟ ಶುರು – ಬಂಗಾಳದಲ್ಲಿ ಬಿಜೆಪಿ ತೊಲಗಿಸಿ’: ರಾಕೇಶ್ ಟಿಕಾಯತ್ ಕರೆ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನು ದುರದೃಷ್ಟಕರ ಎಂದು ಕರೆದಿರುವ ರಾಕೇಶ್‌ ಟಿಕಾಯತ್, ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬಂಗಾಳದಾದ್ಯಂತ ಪ್ರಯಾಣಿಸುವುದಾಗಿ ಹೇಳಿದ್ದಾರೆ.

- Advertisement -
- Advertisement -

ಸುಮಾರು 110 ದಿನಗಳಿಂದ, ಐದು ಲಕ್ಷಕ್ಕೂ ಹೆಚ್ಚು ರೈತರು ದೆಹಲಿಯ ಗಡಿಗಳಲ್ಲಿ ತಮ್ಮ ಹಕ್ಕುಗಳಿಗಾಗಿ ಕುಳಿತು ಹೋರಾಡುತ್ತಿದ್ದಾರೆ. ಅಲ್ಲೆ ರಸ್ತೆ ಪಕ್ಕ ಶಾಶ್ವತ ಮನೆಗಳನ್ನು ನಿರ್ಮಿಸಿರುವ 5 ಲಕ್ಷಕ್ಕೂ ಹೆಚ್ಚು ಜನರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಬಿಜೆಪಿಗೆ ಚುನಾವಣಾ ಭಾಷೆ ಮಾತ್ರ ಅರ್ಥವಾಗುತ್ತದೆ. ಹಾಗಾಗಿ ಖೇಲಾ ಹೊಬೆ (ಆಟ ಶುರು) ಆರಂಭವಾಗಿದೆ, ಬಂಗಾಳದಲ್ಲಿ ಬಿಜೆಪಿ ತೊಲಗಿಸಿ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಕರೆ ನೀಡಿದ್ದಾರೆ.

ಬಂಗಾಳ ಚುನಾವಣೆಯಲ್ಲಿಯೇ ತೀವ್ರ ಪೈಪೋಟಿ ಮತ್ತು ಕುತೂಹಲ ಹುಟ್ಟಿಸಿದರು ನಂದಿಗ್ರಾಮದಲ್ಲಿ ನಡೆದ ರೈತ ಮಹಾ ಪಂಚಾಯತ್‌ ಉದ್ದೇಶಿಸಿ ಮಾತನಾಡಿದ ಅವರು “ಇನ್ನು ಮುಂದೆ ಆಟ ಶುರುವಾಗಲಿದೆ ಎಂದು ಹೇಳುತ್ತಾ, ಬಂಗಾಳಿ ಭಾಷೆಯಲ್ಲಿ ಖೇಲಾ ಹೋಬ್ (ಗೇಮ್ ಆನ್) ಎಂದು ಘೋಷಣೆ ಕೂಗಿದ್ದಾರೆ. ಇದಕ್ಕೆ ಮಹಾಪಂಚಾಯತ್‌ನಲ್ಲಿ ನೆರೆದಿದ್ದ ಜನಸಮೂಹ ಖೇಲಾ ಹೋಬ್ ಎಂದು ಘೋಷಣೆಗಳನ್ನು ಕೂಗಿ ಟಿಕಾಯತ್‌ ಮಾತಿಗೆ ಸಮ್ಮತಿ ಸೂಚಿಸಿದ್ದಾರೆ.

ಇದನ್ನೂ ಓದಿ: ಸಿಂಘು ಗಡಿಯಲ್ಲಿ ಮನೆ ನಿರ್ಮಾಣ: ರೈತರ ವಿರುದ್ದ ಎರಡು ಪ್ರಕರಣ ದಾಖಲು

“ಇದು ಬಂಗಾಳದ ಜನರಿಗೆ ನನ್ನ ಸಂದೇಶವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಲೂಟಿ ಮಾಡಿದೆ. ಅವರಿಗೆ ಮತ ನೀಡಬೇಡಿ. ಬಿಜೆಪಿ ನಾಯಕರು ನಿಮ್ಮ ಬಳಿ ಮತ ಕೇಳಲು ಬಂದಾಗ, ಅವರಿಗೆ ನಮ್ಮ ಬೆಳೆಗಳಿಗೆ ಎಂಎಸ್‌ಪಿ ಯಾವಾಗ ನೀಡುತ್ತಿರಿ ಎಂದು ಪ್ರಶ್ನಿಸಿ” ಎಂದು ಕರೆ ನೀಡಿದ್ದಾರೆ.
ದೆಹಲಿ-ಉತ್ತರ ಪ್ರದೇಶ ಗಡಿಯಾದ ಗಾಝಿಪುರ್‌‌ ಗಡಿಯಲ್ಲಿ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ಬೃಹತ್ ರೈತರ ಪ್ರತಿಭಟನೆಯನ್ನು ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮುನ್ನಡೆಸುತ್ತಿದ್ದಾರೆ.

ಒಕ್ಕೂಟ ಸರ್ಕಾರದ ವಿರುದ್ಧ ಪ್ರಚಾರ ನಡೆಸಲು ಆರಂಭಿಸಿರುವ ರೈತರು ಇಂದು ಪಶ್ಚಿಮ ಬಂಗಾಳದಲ್ಲಿ ಮಹಾಪಂಚಾಯತ್‌ ನಡೆಸುತ್ತಿದ್ದಾರೆ. ರೈತ ಮುಖಂಡ ಟಿಕಾಯತ್‌ ಅವರನ್ನು ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್‌ ಸಂಸದ ಡೋಲಾ ಸೇನ್ ಅವರು ಸ್ವಾಗತಿಸಿದರು.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯನ್ನು ದುರದೃಷ್ಟಕರ ಎಂದು ಕರೆದಿರುವ ರಾಕೇಶ್‌ ಟಿಕಾಯತ್, ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬಂಗಾಳದಾದ್ಯಂತ ಪ್ರಯಾಣಿಸುವುದಾಗಿ ಹೇಳಿದ್ದಾರೆ. ಆದರೆ, ಇಂತಹ ಪಕ್ಷಕ್ಕೆ ಮತ ನೀಡಿ ಎಂದು ಯಾರಿಗೂ ತಿಳಿಸುವುದಿಲ್ಲ ಎಂದು ಈ ಮೊದಲೇ ರೈತ ನಾಯಕರು ತಿಳಿಸಿದ್ದರು.

ಬಿಜೆಪಿ ವಿರುದ್ಧ ಪಂಚರಾಜ್ಯಗಳಲ್ಲೂ ಪ್ರಚಾರ ನಡೆಸುವುದಾಗಿ ಈಗಾಗಲೇ ರೈತರು ಪ್ರಕಟಿಸಿದ್ದಾರೆ. ಆದರೆ ಯಾವುದೇ ಪಕ್ಷದ ಪರವಾಗಿ ಮತ ಯಾಚನೆ ಮಾಡುವುದಿಲ್ಲ, ಪ್ರಚಾರ ನಡೆಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ರೈತ ವಿರೋಧಿ ಸರ್ಕಾರದ ವಿರುದ್ಧ, ಬಿಜೆಪಿಗೆ ಮತ ನೀಡದಂತೆ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ.


ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...