Homeಕರ್ನಾಟಕಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

ಬೆಳಗಾವಿಯ ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ ಎಂದು ಅವರು ಪ್ರತಿಪಾದಿಸಿದ್ದಾರೆ

- Advertisement -
- Advertisement -

ಬೆಳಗಾವಿಯಲ್ಲಿ ಕಳೆದೆಂಟು ದಿನಗಳಿಂದ ಮರಾಠಿಗರ ಮೇಲೆ ಹಲ್ಲೆ ನಡೆಯುತ್ತಿರುವುದಾಗಿಯೂ, ಅಲ್ಲಿಗೆ ಸರ್ವಪಕ್ಷಗಳ ನಿಯೋಗ ತೆರಳಬೇಕಾಗಿಯೂ ಶಿವಸೇನೆಯ ನಾಯಕರೊಬ್ಬ ಹೇಳಿದ್ದಾರೆ. ಪದೇ ಪದೆ ಗಡಿ, ಭಾಷೆ ವಿವಾದ ಕೆಣಕುತ್ತಿರುವ ಶಿವಸೇನೆ ನಡೆ ಖಂಡನೀಯ. ಸರ್ಕಾರದ ವಿರುದ್ಧ ಜನರಿಗೆ ಇರುವ ಅಸಮಾಧಾನ ಮರೆಮಾಚಲು ಶಿವಸೇನೆ ಈ ಕೆಣಕುವ ಕೆಲಸ ಮಾಡುತ್ತಿದೆ ಎಂದು ಜೆಡಿಎಸ್‌ ಮುಖಂಡ ಹೆಚ್‌‌.ಡಿ. ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, “ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರು ಕನ್ನಡ ಧ್ವಜ ಸ್ಥಾಪಿಸಿರುವುದನ್ನು ಶಿವಸೇನೆ ಅಪರಾಧವೆಂಬಂತೆ ನೋಡುತ್ತಿದೆ. ಅಲ್ಲಿಂದಾಚೆಗೆ ಮಹಾರಾಷ್ಟ್ರ ಪ್ರೇರಿತ ಭಾಷೆ, ಗಡಿ ವಿವಾದ ಮುನ್ನೆಲೆಗೆ ಬಂದಿದೆ. ಅಸಲಿಗೆ ಬೆಳಗಾವಿ ನಮ್ಮದು. ಇಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಇದನ್ನು ಪ್ರಶ್ನಿಸಲು ಮಹಾರಾಷ್ಟ್ರಕ್ಕೆ ಯಾವ ಹಕ್ಕೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ – ಕಾಂಗ್ರೆಸ್ ವ್ಯಂಗ್ಯ

“ಕಳೆದೆಂಟು ದಿನಗಳಿಂದ ಬೆಳಗಾವಿಯಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆದಿದೆ ಎಂದು ಮಹಾರಾಷ್ಟ್ರ ಹೇಳಿದೆ. ಕೊಲ್ಲಾಪುರದಲ್ಲಿ ಮೊದಲಿಗೆ ನಮ್ಮ ಬಸ್‌ಗಳ ಮೇಲೆ ದಾಳಿ ನಡೆಸಿದವರು ಯಾರು? ಬೆಳಗಾವಿಯಲ್ಲಿ ಮರಾಠಿ ಭಾಷೆ ಫಲಕ ತೆರವು ವೇಳೆ ದಾಳಿ ನಡೆದಿದ್ದು ಕನ್ನಡಿಗರ ಮೇಲೆ. ಇಷ್ಟಾಗಿಯೂ ಮಹಾರಾಷ್ಟ್ರ ಅತ್ತೂ ಕರೆದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

“ಬೆಳಗಾವಿಯಲ್ಲಿ ಅಕ್ರಮವಾಗಿ ವಿಧಾನಸೌಧ ನಿರ್ಮಿಸಿ 2 ನೇ ರಾಜಧಾನಿ ಮಾಡಲಾಗಿದೆ ಎಂದು ಮಹಾರಾಷ್ಟ್ರ ವಾದಿಸಿದೆ. ಬೆಳಗಾವಿ ವಿಚಾರದಲ್ಲಿನ ಮಹಾರಾಷ್ಟ್ರ ಖ್ಯಾತೆ ಗಮನಿಸಿಯೇ ನನ್ನ ಅವಧಿಯಲ್ಲಿ ಅದನ್ನು ನಿರ್ಮಿಸಲಾಯಿತು, ಕಲಾಪವನ್ನೂ ನಡೆಸಲಾಯಿತು. ಸುವರ್ಣ ವಿಧಾನಸೌಧವು ಮಹಾರಾಷ್ಟ್ರ ವಿಸ್ತರಣಾವಾದದ ವಿರುದ್ಧದ ಕನ್ನಡಿಗರ ಸಾರ್ವಭೌಮತ್ವದ ಸಂಕೇತ” ಎಂದು ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ನನಗೆ ರಕ್ಷಣೆ ಕೊಡಿ ಎಂದ ಯುವತಿ –

“ಗಡಿ ವಿಚಾರದಲ್ಲಿ ಮಹಾಜನ ಆಯೋಗದ ವರದಿಯೇ ಅಂತಿಮ. ಮಹಾರಾಷ್ಟ್ರದ ಹಠದಿಂದಲೇ ರಚಿಸಲಾದ ಮಹಾಜನ ಆಯೋಗವು ಬೆಳಗಾವಿ ಕರ್ನಾಟಕದ್ದು ಎಂದು ಸ್ಪಷ್ಟವಾಗಿ ಹೇಳಿದೆ. ಈ ವಿಚಾರವಾಗಿ‌ ಮಹಾರಾಷ್ಟ್ರ ಮತ್ತೊಮ್ಮೆ ನಡೆಸುತ್ತಿರುವ ಕಾನೂನು ಹೋರಾಟ ವ್ಯರ್ಥವಾಗಲಿದೆ. ಅಲ್ಲಿ ವರೆಗೆ ವಿಸ್ತರಾಣಾವಾದದ ಮಾತುಗಳನ್ನು ನೆರೆಯ ರಾಜ್ಯ ನಿಲ್ಲಿಸುವುದು ಒಳಿತು” ಎಂದು ಅವರು ಹೇಳಿದ್ದಾರೆ.

“ಗಡಿ ವಿವಾದದಲ್ಲಿ ಪ್ರಧಾನಿ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಲಕ್ಷ್ಮಣ ಸವದಿ ಬಯಸಿದ್ದಾರೆ. ಈ ವಿವಾದದಲ್ಲಿ ಯಾರ ಮಧ್ಯಸ್ಥಿತಿಕೆಯೂ ಬೇಡ. ಪ್ರಧಾನಿ ಮಧ್ಯಸ್ಥಿಕೆ ಮಾಡಿದರೆ ಮಹಾರಾಷ್ಟ್ರ ಬಿಜೆಪಿಯು ಅವರ ಮೇಲೆ ಪ್ರಭಾವ ಬೀರದೇ ಇರದೇ? ಮಧ್ಯಸ್ಥಿಕೆಯಲ್ಲಿ ಮೋದಿಯವರು ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ವಹಿಸಿದರೆ ಬಿಜೆಪಿಗರು ಒಪ್ಪುವರೇ?” ಎಂದು ಬಿಜೆಪಿಗೆ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ: ವೀಲ್‌ ಚೇರ್‌ನಲ್ಲಿಯೇ ರೋಡ್‌ ಶೋ ನಡೆಸಲಿರುವ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...