Homeಮುಖಪುಟನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು (ಮಾ.14) ವೀಲ್ ಚೇರ್ ಮೂಲಕವೇ ಚುನಾವಣಾ ಪ್ರಚಾರ ಆರಂಭಿಸಿದ್ದು, “ನಾನು ಎಂದಿಗೂ ತಲೆ ಬಾಗುವುದಿಲ್ಲ. ನೆನಪಿರಲಿ ಗಾಯಗೊಂಡ ಹುಲಿ ಹೆಚ್ಚು ಅಪಾಯಕಾರಿ” ಎಂದು ಹೇಳಿದ್ದಾರೆ.

ನಂದಿಗ್ರಾಮದಲ್ಲಿ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿದ ನಂತರ ಮಮತಾ ಬ್ಯಾನರ್ಜಿ ಮೊದಲಬಾರಿಗೆ ಸಮಾವೇಶವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವಾಗಲೇ ಹೇಳಿಕೆ ನೀಡಿದ್ದ ಮಮತಾ ಬ್ಯಾನರ್ಜಿ, ಬೆಂಬಲಿಗರಲ್ಲಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಅಲ್ಲದೆ ಒಂದೆರಡು ದಿನಗಳಲ್ಲಿ ಪ್ರಚಾರಕ್ಕೆ ಹಿಂತಿರುಗಲಿದ್ದು, ಅಗತ್ಯವಿದ್ದರೆ ವೀಲ್ ಚೇರ್ ಬಳಕೆ ಮಾಡುವುದಾಗಿ ಘೋಷಿಸಿದ್ದರು.

ಇಂದು (ಮಾ.14) ಗಾಂಧಿ ಮೂರ್ತಿಯಿಂದ ಹಜ್ರಾಕ್ಕೆ ವೀಲ್‌ ಚೇರ್‌ನಲ್ಲಿಯೇ ರೋಡ್ ಶೋ ನಡೆಸಿದ ಅವರು ನಂತರ ಮಧ್ಯಾಹ್ನ ಹಜ್ರಾದಲ್ಲಿ ಸಾರ್ವಜನಿಕ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

“ನಾವು ಧೈರ್ಯದಿಂದ ಹೋರಾಡುತ್ತೇವೆ! ನಾನು ಇನ್ನೂ ಸಾಕಷ್ಟು ನೋವಿನಲ್ಲಿದ್ದೇನೆ. ಆದರೆ ನನ್ನ ಜನರ ನೋವು ನನಗಿಂತಲೂ ದೊಡ್ಡದು ಎಂದು ಭಾವಿಸುತ್ತೇನೆ. ನಮ್ಮ ಪುಣ್ಯ ಭೂಮಿಯನ್ನು ರಕ್ಷಿಸುವ ಈ ಹೋರಾಟದಲ್ಲಿ, ನಾವು ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ದೇವೆ. ಹೆಚ್ಚು ತೊಂದರೆಗಳನ್ನು ಅನುಭವಿಸಿದ್ದೇವೆ. ಆದರೆ ನಾವು ಎಂದಿಗೂ ಹೇಡಿಯಂತೆ ತಲೆಬಾಗುವುದಿಲ್ಲ!” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಈ ವಾರದ ಆರಂಭದಲ್ಲಿ ಗಾಯಗೊಂಡಿದ್ದ ಮಮತಾ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆಯ ಬಳಿಕ ಮಾರ್ಚ್ 12 ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.

ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳ ಪ್ರಕಾರ, ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿತ್ತು.

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ಮಾರ್ಚ್ 10ರಂದು ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಅವರ ಮೇಲೆ ದಾಳಿ ಸಂಭವಿಸಿದೆ ಎನ್ನಲಾಗಿದೆ. ಕೆಲವು ಅಪರಿಚಿತ ಜನರು ಮಮತಾ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಆದರೆ ಚುನಾವಣಾ ವೀಕ್ಷಕರು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ವರದಿಯಲ್ಲಿ, “ಮಮತಾ ಬ್ಯಾನರ್ಜಿ ಅವರ ಗಾಯಕ್ಕೆ ನಂದಿಗ್ರಾಮದಲ್ಲಿ ನಡೆದಿರುವ ಘಟನೆ ಕಾರಣವಲ್ಲ. ಅದು ಆಕಸ್ಮಿಕವಾಗಿದ್ದು, ಇದೊಂದು ಯೋಜಿತ ದಾಳಿಯಾಗಿರಲಿಲ್ಲ” ಎಂದು  ತಿಳಿಸಿದ್ದಾರೆ.

ಇದನ್ನೂ ಓದಿ: ಕುಂಭಮೇಳಕ್ಕೆ ಬರುವ ಭಕ್ತಾದಿಗಳಿಗೆ ಕೊರೊನಾ ನೆಗೆಟಿವ್ ವರದಿ ಅಗತ್ಯವಿಲ್ಲ: ಉತ್ತರಾಖಂಡ್ ಸಿಎಂ

ವಿಶೇಷ ವೀಕ್ಷಕ ಅಜಯ್ ನಾಯಕ್, ರಾಜ್ಯ ಚುನಾವಣೆಗಾಗಿ ಪಶ್ಚಿಮಬಂಗಾಳದ ವಿಶೇಷ ಪೊಲೀಸ್ ವೀಕ್ಷಕರಾಗಿರುವ ವಿವೇಕ್ ದುಬೆ ವರದಿ ಸಿದ್ಧಪಡಿಸಿದ್ದರು ಎಂದು ಸಿಇಒ ಕಚೇರಿಯ ಮೂಲಗಳು ತಿಳಿಸಿವೆ.

ಆಕಸ್ಮಿಕ ಘಟನೆಯಿಂದಾಗಿ ಮಮತಾ ಅವರು ಗಾಯಗೊಂಡಿದ್ದಾರೆ. ಘಟನೆಯು ಯೋಜಿತ ದಾಳಿಯಾಗಿರಲಿಲ್ಲ. ಇದು ಆಕಸ್ಮಿಕವಾಗಿ ನಡೆದಿದೆ ಎಂದು ವರದಿಯನ್ನು ಉಲ್ಲೇಖಿಸಿ ಮೂಲಗಳು ತಿಳಿಸಿವೆ. ಘಟನೆಯ ಸಮಯದಲ್ಲಿ ಹಾಜರಿದ್ದ ಪ್ರತ್ಯಕ್ಷ ಸಾಕ್ಷಿಗಳು ಒದಗಿಸಿದ ವಿವರಗಳು ಹಾಗೂ ಅವರಿಂದ ಸಂಗ್ರಹಿಸಿದ ವೀಡಿಯೊವನ್ನು ವರದಿಯು ಗಣನೆಗೆ ತೆಗೆದುಕೊಂಡಿದೆ.

ಸ್ಥಳೀಯ ಪೊಲೀಸರು ಹಾಗೂ ಸಿಎಂ ಭದ್ರತಾ ಸಿಬ್ಬಂದಿ ಜನಸಂದಣಿಯನ್ನು ನಿಯಂತ್ರಿಸಲು ವಿಫಲವಾಗಿದ್ದರು. ಇದು ಅನಪೇಕ್ಷಿತ ಪರಿಸ್ಥಿತಿಗೆ ಕಾರಣವಾಯಿತು ಎಂದು ಮೂಲಗಳು ವರದಿಯನ್ನು ಉಲ್ಲೇಖಿಸಿ ತಿಳಿಸಿವೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲಿನ ದಾಳಿಯು ಟಿಎಂಸಿ ಹಾಗೂ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಜಟಾಪಟಿಗೆ ಕಾರಣವಾಗಿತ್ತು.


ಇದನ್ನೂ ಓದಿ: ಬಿಜೆಪಿ ಆಡಳಿತದಲ್ಲಿ ಸದ್ದು ಮಾಡುವುದು ಎರಡೇ; ಒಂದು ಲಂಚ, ಮತ್ತೊಂದು ಮಂಚ – ಕಾಂಗ್ರೆಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...