Homeಚಳವಳಿಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಸಾಮಾಜಿಕ ಹೋರಾಟಗಾರರಾದ ಗೋವಿಂದ್ ಪನ್ಸಾರೆ ಮತ್ತು ನರೇಂದ್ರ ದಾಭೋಲ್ಕರ್ ಅವರ ಹತ್ಯೆ ಪ್ರಕರಣದ ತನಿಖೆ ಇನ್ನು ಎಷ್ಟು ದಿನ ಮುಂದುವರಿಯುತ್ತದೆ ಎಂದು ಬಾಂಬೆ ಹೈಕೋರ್ಟ್ ಶುಕ್ರವಾರ ಮಹಾರಾಷ್ಟ್ರ ಸಿಐಡಿ ಮತ್ತು ಸಿಬಿಐಗೆ ಕೇಳಿದೆ.

ಕಮ್ಯುನಿಸ್ಟ್ ನಾಯಕ ಪನ್ಸಾರೆ ಹತ್ಯೆಯ ಬಗ್ಗೆ ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ನಡೆಸುತ್ತಿದ್ದು, ಖ್ಯಾತ ಮೂಡನಂಬಿಕೆ ವಿರೋಧಿ ಹೋರಾಟಗಾರ ದಾಭೋಲ್ಕರ್ ಅವರ ಹತ್ಯೆಯನ್ನು ಸಿಬಿಐ ತನಿಖೆ ನಡೆಸುತ್ತಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ನ್ಯಾಯಪೀಠವು, “ಸೂಕ್ಷ್ಮ ಪ್ರಕರಣಗಳಲ್ಲಿ” ದೇಶದ ನಾಗರಿಕರು ತನಿಖಾ ಸಂಸ್ಥೆಗಳು ಯಾವಾಗ ತನಿಖೆಯನ್ನು ಪೂರ್ಣಗೊಳಿಸುತ್ತವೆ ಮತ್ತು ಯಾವಾಗ ವಿಚಾರಣೆ ಪ್ರಾರಂಭವಾಗುವ ಸಾಧ್ಯತೆ ಇದೆ ಎಂದು ತಿಳಿಯಲು ಬಯಸಿದ್ದಾರೆ ಎಂದು ಹೇಳಿದೆ.

ಇದನ್ನೂ ಓದಿ: ಬೆಳಗಾವಿ ಕನ್ನಡಿಗರದ್ದು, ವಿವಾದದಲ್ಲಿ ಮೋದಿ ಸೇರಿದಂತೆ ಯಾರ ಮಧ್ಯಸ್ಥಿತಿಕೆಯೂ ಬೇಡ: ಕುಮಾರಸ್ವಾಮಿ

“ಕರ್ನಾಟಕದಲ್ಲಿ ಇದೇ ರೀತಿಯ ಘಟನೆಯ ವಿಚಾರಣೆ (ಗೌರಿ ಲಂಕೇಶ್ ಹತ್ಯೆ) ಈಗಾಗಲೇ ಪ್ರಾರಂಭವಾಗಿದ್ದರೂ, ಮಹಾರಾಷ್ಟ್ರದಲ್ಲಿನ ಪ್ರಕರಣಗಳು ಒಂದೇ ರೀತಿಯ ಸ್ವರೂಪದ್ದಾಗಿದ್ದರೂ ತನಿಖೆ ಯಾವಾಗ ಪೂರ್ಣಗೊಳ್ಳುತ್ತದೆ ಎಂಬುದು ಸ್ಪಷ್ಟವಾಗಿಲ್ಲ” ಎಂದು ನ್ಯಾಯಪೀಠ ಅಸಮಾಧಾನ ವ್ಯಕ್ತಪಡಿಸಿದೆ.

2013 ರ ಆಗಸ್ಟ್ 20 ರಂದು ಪುಣೆಯಲ್ಲಿ ದಾಭೋಲ್ಕರ್ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಪನ್ಸಾರೆ ಅವರನ್ನು ಫೆಬ್ರವರಿ 16, 2015 ರಂದು ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಗುಂಡಿಕ್ಕಲಾಯಿತು, ಇದಾಗಿ ನಾಲ್ಕು ದಿನಗಳ ನಂತರ ಅವರು ನಿಧನರಾದರು. ಸಂಶೋಧಕ ಎಂ.ಎಂ. ಕಲ್ಬುರ್ಗಿ ಅವರನ್ನು ಆಗಸ್ಟ್ 30, 2015 ರಂದು ಗುಂಡಿಕ್ಕಿ ಕೊಲ್ಲಲಾಯಿತು.

ಈ ಮೂರು ಪ್ರಕರಣಗಳಿಗೂ, 2017 ರಲ್ಲಿ ಹತ್ಯೆಗೀಡಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೂ ಸಂಬಂಧವಿದೆ. ಈ ಹತ್ಯೆಗಳ ಹಿಂದೆ ಬಲಪಂಥೀಯ ಉಗ್ರಗಾಮಿಗಳ ಕೈವಾಡ ಇದೆ ಎಂದು ತನಿಖಾ ಸಂಸ್ಥೆಗಳು ತಿಳಿಸಿವೆ.

ಇದನ್ನೂ ಓದಿ: ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ: ಜಗನ್ ಪಕ್ಷಕ್ಕೆ ಭಾರೀ ಮುನ್ನಡೆ

ಎರಡು ತನಿಖೆಗಳ ನ್ಯಾಯಾಲಯದ ಮೇಲ್ವಿಚಾರಣೆ ಕೋರಿ ದಾಭೋಲ್ಕರ್ ಮತ್ತು ಪನ್ಸಾರೆ ಅವರ ಸಂಬಂಧಿಕರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.

ಸಿಬಿಐ ವಕೀಲ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು “ಸಾಧ್ಯವಾದಷ್ಟು ಪ್ರಯತ್ನವನ್ನು ತನಿಖಾ ಸಂಸ್ಥೆಗಳು ಮಾಡುತ್ತಿದೆ” ಎಂದು ಹೇಳಿದ್ದಾರೆ. ಆದರೆ ದಾಬೋಲ್ಕರ್ ಪ್ರಕರಣದಲ್ಲಿ ದುಷ್ಕರ್ಮಿಗಳು ಬಳಸಿದ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲು ಸಾಧ್ಯವಾಗಲಿಲ್ಲ, ಅದನ್ನು ಆರೋಪಿಗಳು ಥಾಣೆ ಸಮೀಪದ ಕೊಲ್ಲಿಯಲ್ಲಿ ಎಸೆದಿದ್ದಾರೆಂದು ಹೇಳಲಾಗಿದೆ.

ಮುಂದಿನ ವಿಚಾರಣೆಯ ಮೊದಲು ಸಿಬಿಐ ತನಿಖೆಯ ಹೊಸ ವರದಿಯನ್ನು ಸಲ್ಲಿಸುತ್ತದೆ ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದಾರೆ.

ದಾಭೋಲ್ಕರ್ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಐವರು ಆರೋಪಿಗಳಲ್ಲಿ ಒಬ್ಬರು ಜಾಮೀನಿನ ಮೇಲೆ ಹೊರಗಿದ್ದಾರೆ ಮತ್ತು ಇಬ್ಬರು ಆಪಾದಿತ ಶೂಟರ್‌ಗಳು ಸೇರಿದಂತೆ ಇತರರು ಬಂಧನದಲ್ಲಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ದಾಭೋಲ್ಕರ್‌ ಪ್ರಕರಣದಲ್ಲಿ ಸಿಬಿಐ ಮೂರು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ, ಆದರೆ ಪನ್ಸಾರೆ ಪ್ರಕರಣದ ಸಿಐಡಿ ತನಿಖೆಯಲ್ಲಿ ಯಾವುದೇ ಪ್ರಗತಿಯಿಲ್ಲ ಎಂದು ಅರ್ಜಿದಾರರ ಪರವಾಗಿ ವಕೀಲ ಅಭಯ್‌‌ ನ್ಯಾಯಾಲಯದಲ್ಲಿ ಹೇಳಿದ್ದಾರೆ.

“ಘಟನೆಗಳು 2013 ಮತ್ತು 2015 ರಲ್ಲಿ ನಡೆದವು. ನಾವು ಈಗ 2021 ರಲ್ಲಿದ್ದೇವೆ. ಇದು ಎಷ್ಟು ದಿನ ಮುಂದುವರಿಯುತ್ತದೆ?” ಎಂದು ಹೈಕೋರ್ಟ್ ಕೇಳಿದೆ.

“ನೀವು ಸ್ಪಷ್ಟವಾದ, ದೃಢವಾದ ಸೂಚನೆಗಳನ್ನು ತೆಗೆದುಕೊಂಡು, ಮುಂದಿನ ವಿಚಾರಣೆಯಂದು ತನಿಖೆಗಾಗಿ ನೀವು ಎಷ್ಟು ಸಮಯ ತೆಗೆದುಕೊಳ್ಳುತ್ತೀರಿ ಎಂಬುದರ ಕುರಿತು ಸಕಾರಾತ್ಮಕ ಹೇಳಿಕೆ ನೀಡಿ” ಎಂದು ಹೈಕೋರ್ಟ್ ಹೇಳಿದ್ದು, ವಿಚಾರಣೆಯನ್ನು ಮಾರ್ಚ್ 30 ಕ್ಕೆ ಮುಂದೂಡಿದೆ.

ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ..! “ಸಾಹುಕಾರ್” ಹೊರತುಪಡಿಸಿ..! – ಅನನ್ಯ ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...