Homeಚಳವಳಿಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಹುಬ್ಬಳ್ಳಿಯ ಬ್ರಾಹ್ಮಣೇತರ ಚಳುವಳಿಗೆ 100 ವರ್ಷ: ಶಾಹು ಮಹಾರಾಜ್, ಸರ್ ಸಿದ್ಧಪ್ಪ ಕಂಬಳಿ ಭಾಗಿ

ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನ ಆರಂಭಿಸಿದ್ದ ಸರ್ ಕಂಬಳಿ ಸಿದ್ದಪ್ಪನವರ ಕುರಿತು..

- Advertisement -
- Advertisement -

ಸರ್ ಸಿದ್ಧಪ್ಪ ಕಂಬಳಿಯವರು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವಕೀಲಿ ವೃತ್ತಿ ಆರಂಭಿಸಿದಾಗ ಆ ವ್ರತ್ತಿ ಸಂಪೂರ್ಣ ಬ್ರಾಹ್ಮಣರ ಹಿಡಿತದಲ್ಲಿತ್ತು. ಬ್ರಾಹ್ಮಣರಿಗೆ ಸವಾಲು ಹಾಕಿ ಸರ್ ಸಿದ್ದಪ್ಪ ಕಂಬಳಿಯವರು ಆ ವೃತ್ತಿಯಲ್ಲಿ ತಮ್ಮ ಛಾಪನ್ನು ಸ್ಥಾಪಿಸಿದ್ದರು. ಮುಂದೆ ಅವರು ಮುಂಬೈ ಸರಕಾರದಲ್ಲಿ ಏಳು ಖಾತೆಗಳ ಸಚಿವರಾಗಿದ್ದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನೌಕರಿ ಕೊಟ್ಟದ್ದು ಮತ್ತು ಪ್ರಥಮ ಬಾರಿಗೆ ಬ್ರಾಹ್ಮಣೇತರ ಐಎಎಸ್ ಅಧಿಕಾರಿಗಳನ್ನು ನೇಮಿಸುವ ಕೆಲಸ ಆರಂಭಿಸಿದ್ದು ಜನಜನಿತ.

ಬ್ರಾಹ್ಮಣೇತರರ ಅಭಿವೃದ್ದಿ ವಿಚಾರದಲ್ಲಿ ಸರ್ ಸಿದ್ದಪ್ಪ ಕಂಬಳಿಯವರು ಅಂದು ಶಾಹು ಮಹಾರಾಜರೊಂದಿಗೆ ಕೂಡಿಕೊಂಡು ಯೋಜನೆ ರೂಪಿಸಿದ್ದರು. ಮಹಾರಾಷ್ಟ್ರದ ಚಿತ್ಪಾವನ ಬ್ರಾಹ್ಮಣರ ವಿರುದ್ಧ ಬಹುದೊಡ್ಡ ಬ್ರಾಹ್ಮಣೇತರರ ಆಂದೋಲನವನ್ನೇ ಆರಂಭಿಸಿದ್ದರು. ಶಾಹು ಮಹಾರಾಜರು ಕಂಬಳಿಯವರನ್ನು ನೋಡಲು ಪುಣೆಯ ಅವರ ನಿವಾಸಕ್ಕೆ ಸ್ವತಃ ಹೋದಾಗ ಕಂಬಳಿಯವರಿಗೆ ಆಶ್ಚರ್ಯವಾಗಿತ್ತು.

ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ಚಿತ್ಪಾವನ ಬ್ರಾಹ್ಮಣರ ಪುಂಡಾಟಿಕೆಗೆ ತಡೆ ಹಾಕಿದವರು ಸಿದ್ದಪ್ಪನವರು. ಒಮ್ಮೆ ಡೆಕ್ಕನ್ ಕಾಲೇಜಿನಲ್ಲಿ ರಾಜ್ಯಪಾಲರ ಕಾರ್ಯಕ್ರಮಕ್ಕೆ ಮೊದಲು ಬಾಂಬ್ ಸ್ಪೋಟಗೊಂಡಿತ್ತು. ಆಗ ಶಿಕ್ಷಣ ಮಂತ್ರಿಗಳಾಗಿದ್ದ ಕಂಬಳಿಯವರು ಆ ಕಾಲೇಜಿನ ವಿದ್ಯಾರ್ಥಿಗಳ ಸೇರ್ಪಡೆಯ ಕ್ಷಮತೆಯನ್ನು ಕಡಿತಗೊಳಿಸಿದ್ದರು. ಇನ್ನೊಂದು ಪ್ರಕರಣದಲ್ಲಿ ಡೆಕ್ಕನ್ ಕಾಲೇಜಿನ ಪ್ರಯೋಗಾಲಯ ಮತ್ತು ಗ್ರಂಥಾಲಯಗಳನ್ನು ರಾತ್ರೋರಾತ್ರಿ ಟ್ರಕ್ಕಿನಲ್ಲಿ ಸಮರೋಪಾದಿಯಲ್ಲಿ ಧಾರವಾಡಕ್ಕೆ ಕಳಿಸಿದ್ದರು. ಕರ್ನಾಟಕದಲ್ಲಿ ಬ್ರಾಹ್ಮಣೇತರರು ತಲೆ ಎತ್ತಿ ನಿಲ್ಲುವಂತೆ ಮಾಡಲು ಮಹಾರಾಷ್ಟ್ರದ ಮಹಾತ್ಮ ಜ್ಯೋತಿಬಾ ಫುಲೆಯವರ ಬ್ರಾಹ್ಮಣೇತರ ಚಳುವಳಿಯನ್ನು ಕಂಬಳಿಯವರು ಆರಂಭಿಸಿದರು.

ಹುಬ್ಬಳ್ಳಿ-ಧಾರವಾಢ ಮಹಾನಗರಪಾಲಿಕೆಯ ಬಳಿ, ಸರ್ ಸಿದ್ದಪ್ಪ ಕಂಬಳಿಯವರ ಕಂಚಿನ ಪ್ರತಿಮೆ. : ಚಿತ್ರಕೃಪೆ – ವಿಕಿಪೀಡಿಯಾ

1920ರಲ್ಲಿ ಹುಬ್ಬಳ್ಳಿಯಲ್ಲಿ ಪ್ರಥಮ ಬ್ರಾಹ್ಮಣೇತರ ಪರಿಷತ್ತು ಸಂಘಟಿಸಿ ಧಾರವಾಡದ ಬ್ರಾಹ್ಮಣೇತರ ಸಂಘದ ಪ್ರಥಮ ಅಧ್ಯಕ್ಷರಾಗಿದ್ದರು. ಕಂಬಳಿಯವರೊಂದಿಗೆ ಸಿದ್ದಪ್ಪ ಹೊಸಮನಿ, ಸಿ ಸಿ ಹುಲಕೋಟಿ, ಪಂಡಿತಪ್ಪ ಚಿಕ್ಕೋಡಿ ಮುಂತಾದವರು ಕೈಜೋಡಿಸಿದ್ದರು.

ಈ ಚಳುವಳಿಯ ಪರಿಣಾಮದಿಂದ 1921 ರ ನಂತರ ಐಸಿಎಸ್ ಹುದ್ದೆಗೆ ಭಾರತಿಯರನ್ನು ನೇಮಿಸುವ ಕಾರ್ಯ ಆರಂಭಗೊಂಡಿತು. ಎಲ್ಲ ಸಾರ್ವಜನಿಕ ಸೇವೆಗಳಲ್ಲಿ ಹಿಂದುಳಿದ ವರ್ಗದವರಿಗೆ ಸರಿಯಾದ ಪ್ರಾತಿನಿಧ್ಯ ಕೊಡಿಸುವುದೇ ಬ್ರಾಹ್ಮಣೇತರ ಚಳುವಳಿಯ ಉದ್ದೇಶವಾಗಿತ್ತು. ಮುಂಬೈ ವಿಧಾನ ಪರಿಷತ್ತಿನಲ್ಲಿ ಕಂಬಳಿಯವರು ಬ್ರಾಹ್ಮಣೇತರ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು.

ಸರ್ ಕಂಬಳಿ ಸಿದ್ಧಪ್ಪನವರು ಬ್ರಾಹ್ಮಣೇತರ ಚಳವಳಿಯ ನಿಮಿತ್ಯ ಹುಬ್ಬಳ್ಳಿಯಲ್ಲಿ ಸಭೆ ಆಯೋಜಿಸುವ ಮೊದಲು ಚಿತ್ಪಾವನ ಬ್ರಾಹ್ಮಣರಾಗಿದ್ದ ಬಾಲಗಂಗಾಧರ್ ತಿಲಕ್ ಅಂದು ಸಿದ್ಧಾರೂಢ ಸ್ವಾಮಿಯವರನ್ನು ಭೇಟಿಯಾಗಿ ಒಂದು ಸಭೆಗೆ ಅಹ್ವಾನಿಸಿದ್ದರು. ಸ್ವಾಮಿಗಳು ಅದರಲ್ಲಿ ಆಸಕ್ತಿ ವಹಿಸಿರಲಿಲ್ಲ. ಅದಾದ ಕೆಲವೇ ದಿನಗಳಲ್ಲಿ ಕಂಬಳಿ ಸಿದ್ದಪ್ಪನವರು ಆಯೋಜಿಸಿದ ಬ್ರಾಹ್ಮಣೇತರ ಪರಿಷತ್ತಿನ ಸಮಾವೇಶಕ್ಕೆ ಸಿದ್ಧಾರೂಢ ಸ್ವಾಮಿಗಳು ಆಗಮಿಸಲು ಒಪ್ಪಿಗೆ ಸೂಚಿಸಿದ್ದರು. ಅಂದು ಆ ಸಮಾವೇಶದಲ್ಲಿ ಕೊಲ್ಹಾಪುರದ ಸಾಮಾಜಿಕ ನ್ಯಾಯದ ಹರಿಕಾರ ಶಾಹು ಮಾಹಾರಾಜ್ ಅವರು ಕೂಡ ಆಗಮಿಸಿದ್ದರು. ಇಂದಿಗೆ ಹುಬ್ಬಳ್ಳಿಯಲ್ಲಿ ಜರುಗಿದ ಆ ಐತಿಹಾಸಿಕ ಬ್ರಾಹ್ಮಣೇತರರ ಸಮ್ಮೇಳನಕ್ಕೆ 100 ವರ್ಷ ತುಂಬಿದೆ.

ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಕಂಬಳಿಯವರಿಗಿದ್ದ ಅನನ್ಯ ಕಾಳಜಿಯನ್ನು ಬಹುಶಃ ಇಂದಿನ ಯಾವ ರಾಜಕಾರಣಿಗಳಲ್ಲೂ ನಿರೀಕ್ಷಿಸುವಂತಿಲ್ಲ. ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ಸರ್ ಕಂಬಳಿ ಸಿದ್ದಪ್ಪನವರು ಸಾಮಾಜಿಕ ನ್ಯಾಯದ ಹರಿಕಾರರಾಗಿ ಕೆಲಸ ಮಾಡಿದ್ದಾರೆ.

  • ಡಾ. ಜೆ ಎಸ್ ಪಾಟೀಲ

(ಲೇಖಕರು ಔಷಧ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು. ಔಷಧ ವಿಜ್ಞಾನದಲ್ಲಿ ನೂರಕ್ಕೂ ಹೆಚ್ಚು ವೈಜ್ಞಾನಿಕ ಪ್ರಬಂಧಗಳನ್ನು ಪ್ರಕಟಿಸಿದ್ದಾರೆ ಮತ್ತು ನಾಲ್ಕು ಅಂತರಾಷ್ಟ್ರೀಯ ಔಷಧ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಧ್ಯಾಯಗಳನ್ನು ಬರೆದಿದ್ದಾರೆ.)


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...