Homeಚಳವಳಿʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ʼಬಿಜೆಪಿ ಸೋಲಿಸಿ ಅಭಿಯಾನʼ: ಅಖಿಲ್‌ ಗೊಗೋಯ್ ಭೇಟಿಯಾದ ಯೋಗೇಂದ್ರ ಯಾದವ್

ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಯೋಗೇಂದ್ರ ಯಾದವ್ ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ

- Advertisement -
- Advertisement -

ಸ್ವರಾಜ್‌ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್‌ ಭಾನುವಾರ ಸಿಎಎ ವಿರೋಧಿ ಹೋರಾಟಗಾರ ಮತ್ತು ರೈಜೋರ್ ದಳ್ ಅಧ್ಯಕ್ಷ ಅಖಿಲ್‌ ಗೊಗೋಯ್ ಅವರನ್ನು ಭೇಟಿಯಾಗಿ ಅಸ್ಸಾಂನಲ್ಲಿರುವ ಆಡಳಿತಾರೂಢ ಬಿಜೆಪಿಯನ್ನು ಸೋಲಿಸುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಯೋಗೇಂದ್ರ ಯಾದವ್ ಮತ್ತು ಕಿಸಾನ್ ಸಂಘರ್ಷ ಸಮಿತಿ ನಾಯಕ ಸುನೀಲಂ ಅವರು ಆರ್‌ಟಿಐ ಕಾರ್ಯಕರ್ತ, ಸಿಎಎ ವಿರೋಧಿ ಹೋರಾಟಗಾರ, ಅಖಿಲ್‌ ಗೊಗೊಯ್ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಭೇಟಿಯಾದರು.

ಅಖಿಲ್‌ ಗೋಗೋಯ್‌ ಸಿಎಎ ವಿರೋಧಿ ಹೋರಾಟದಲ್ಲಿ ಭಾಗಿಯಾಗಿ, ದೇಶದ್ರೋಹ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಅಲ್ಲದೇ ಅವರು ಅಸ್ಸಾಂನಲ್ಲಿ ಅಕ್ಟೋಬರ್‌ 2, 2020ರಲ್ಲಿ ತಮ್ಮದೆ ರೈಜೋರ್‌ ದಳ್‌ ಪಕ್ಷವನ್ನು ಸ್ಥಾಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂನ ಸಿಬ್ಸಾಗರ್‌ನಿಂದ ಸ್ಪರ್ಧಿಸಲಿರುವ ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್

ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳದ ಒಕ್ಕೂಟ ಸರ್ಕಾರದ ವಿರುದ್ಧ ಹೋರಾಟವನ್ನು ತೀವ್ರಗೊಳಿಸಿರುವ ರೈತ ನಾಯಕರು, ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಪ್ರಚಾರ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಭಾನುವಾರ ರೈತ ಮುಖಂಡ ಯೋಗೇಂದ್ರ ಯಾದವ್‌, ಅಖಿಲ್‌ ಗೊಗೋಯ್‌ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

“ಅಖಿಲ್ ಗೊಗೋಯ್ ಮೊದಲ ಎರಡು ಹಂತಗಳಲ್ಲಿ 86 ಸ್ಥಾನಗಳಲ್ಲಿ 19 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ಬಿಜೆಪಿಯನ್ನು ಈ ಚುನಾವಣೆಯಲ್ಲಿ ಸೋಲುವಂತೆ ನೋಡಿಕೊಳ್ಳುವುದು ಅವರ ಗುರಿಯಾಗಿದೆ” ಎಂದು ಸ್ವರಾಜ್‌ ಇಂಡಿಯಾದ ಅಧ್ಯಕ್ಷ ಯೋಗೇಂದ್ರ ಯಾದವ್ ಹೇಳಿದ್ದಾರೆ.

“ಕೇಂದ್ರದ ಆಡಳಿತರೂಢ ಬಿಜೆಪಿ ರೈತರೊಂದಿಗೆ ನಡೆದುಕೊಂಡಿರುವ ರೀತಿಗೆ ಮತ್ತು ರೈತರ ಹಿತಾಸಕ್ತಿ, ಕಲ್ಯಾಣವನ್ನು ಕಡೆಗಣಿಸಿ ಅವರ ವಿರುದ್ಧದ ನಿರ್ಧಾರಗಳನ್ನು ತೆಗೆದುಕೊಂಡಿರುವುದಕ್ಕೆ ನಾವು ಬಿಜೆಪಿಯನ್ನು ಉಚ್ಛಾಟಿಸಬೇಕು ಎಂಬ ಒಂದು ಸಂದೇಶದೊಂದಿಗೆ ನಾವು ಬಂದಿದ್ದೇವೆ” ಎಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಕೇಳಿದ್ದೇನೆ: ಪ್ರಮೋದ್ ಮುತಾಲಿಕ್

ʼಕಳೆದ ವರ್ಷ ಫೆಬ್ರವರಿಯಲ್ಲಿ ಗೊಗೋಯ್ ಅವರನ್ನು ಜೈಲಿನಲ್ಲಿ ಭೇಟಿಯಾಗಿದ್ದೆ. ಅಂದಿನಿಂದ ಅವರ ಆರೋಗ್ಯ ಸ್ಥಿತಿ ಗಣನೀಯವಾಗಿ ಹದಗೆಟ್ಟಿದೆ ಎಂದು ಯೋಗೇಂದ್ರ ಯಾದವ್ ಆತಂಕ ವ್ಯಕ್ತಪಡಿಸಿದ್ದಾರೆ.

“ಅವರು ಸಾಕಷ್ಟು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ. ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಆದರೆ, ಸೈದ್ಧಾಂತಿಕ ಸ್ಪಷ್ಟತೆ, ಮಾನಸಿಕ ಸಂಕಲ್ಪ ಮತ್ತು ಅವರು ತೋರಿಸಿದ ಧೈರ್ಯವು ಎಲ್ಲರಿಗೂ ಒಂದು ಮಾದರಿಯಾಗಿದೆ” ಎಂದು ಯಾದವ್ ಹೇಳಿದ್ದಾರೆ.

ಇದು ಕ್ರಿಮಿನಲ್‌ ವಿಚಾರಣೆಯಲ್ಲ ಬದಲಿಗೆ ರಾಜಕೀಯ ವಿಚಾರಣೆ ಎಂದು ಆರೋಪಿಸಿರುವ ಯೋಗೇಂದ್ರ ಯಾದವ್‌, ಅಸ್ಸಾಂ ಚುನಾವಣೆಯ ಸಮಯದಲ್ಲಿ ಜನರೊಂದಿಗೆ ಬೆರೆಯಬಾರದು ಎಂದು ಗೊಗೋಯ್ ಅವರನ್ನು ಜೈಲಿಗೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಹೋರಾಟಗಾರ ಅಖಿಲ್ ಗೊಗೋಯ್ ಚಿತ್ರ ಬಿಡಿಸಿದ ಕಲಾವಿದರ ಬಂಧನ!

“ಅವರು ಪ್ರತಿನಿಧಿಸುವ ಜನರ ಧ್ವನಿಯನ್ನು ಮೌನಗೊಳಿಸಲು ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ಹಾಕಲಾಗಿದೆ ಎಂಬುದು ಸ್ಪಷ್ಟವಾಗಿದೆ, ಆದರೆ ಈಗ ಚುನಾವಣೆಗಳು ನಡೆಯುತ್ತಿರುವುದರಿಂದ ರಾಜ್ಯದ ಜನರು ನಿರ್ಧಾರ ತೆಗೆದುಕೊಳ್ಳಬೇಕು” ಎಂದಿದ್ದಾರೆ.

ಗೊಗೋಯ್ ಅವರು ರಾಜಕೀಯದ ಬಗ್ಗೆ ಚರ್ಚಿಸಲು ಹೋಗಲಿಲ್ಲ. ಆದರೆ, ರೈತ ಹೋರಾಟದ ಬಗ್ಗೆ, ಅದರ ಪ್ರಗತಿ ಬಗ್ಗೆ ತಿಳಿಯಲು ಹೆಚ್ಚು ಆಸಕ್ತಿ ಹೊಂದಿದ್ದರು. ಜೊತೆಗೆ ಬಿಜೆಪಿಯನ್ನು ಸೋಲಿಸುವ ಅಗತ್ಯದ ಬಗ್ಗೆ ಬಹಳ ಸ್ಪಷ್ಟವಾಗಿದ್ದರು ಎಂದು ಯೋಗೇಂದ್ರ ಯಾದವ್‌ ತಿಳಿಸಿದ್ದಾರೆ.

ಇದೇ ವೇಳೆ ಅಖಿಲ್‌ ಗೊಗೋಯ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಅವರು ಕಾಂಗ್ರೆಸ್ ಪಕ್ಷಕ್ಕೆ ಮನವಿ ಮಾಡಿದ್ದಾರೆ. ಸಿಬ್ಸಾಗರ್ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ ಗೊಗೋಯ್ ಪರ ಪ್ರಚಾರಕ್ಕಾಗಿ ಸಿಬ್ಸಾಗರ್‌ಗೆ ಹೋಗುವುದಾಗಿ ಸುನೀಲಂ ಹೇಳಿದ್ದಾರೆ.

2019 ರ ಡಿಸೆಂಬರ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಅಖಿಲ್‌ ಗೊಗೊಯ್ ವಿರುದ್ಧ ಕಠಿಣ ಯುಎಪಿಎ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಂದಿನಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಹೋರಾಟಗಾರ ಅಖಿಲ್‌ ಗೊಗೋಯ್ ಕೆಲವು ತಿಂಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ.

126 ಸದಸ್ಯರ ಅಸ್ಸಾಂ ವಿಧಾನಸಭೆಯ ಚುನಾವಣೆಗಳು ಮೂರು ಹಂತಗಳಲ್ಲಿ ನಡೆಯಲಿದೆ.


ಇದನ್ನೂ ಓದಿ: ‘ಭಾರತೀಯ ಸಂಪ್ರದಾಯಕ್ಕೆ ಸೆಕ್ಯುಲರಿಸಂ ಒಂದು ಬೆದರಿಕೆ’: ಯೋಗಿ ಆದಿತ್ಯನಾಥ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...