Homeಮುಖಪುಟರಾಂಚಿ: ಕಳ್ಳತನದ ಆರೋಪ ಹೊರಿಸಿ ಯುವಕನ ಗುಂಪು ಹತ್ಯೆ

ರಾಂಚಿ: ಕಳ್ಳತನದ ಆರೋಪ ಹೊರಿಸಿ ಯುವಕನ ಗುಂಪು ಹತ್ಯೆ

ಪ್ರಕರಣವು ಕಳ್ಳತನದಂತೆ ಕಾಣುತ್ತಿಲ್ಲ, ಯಾವುದೋ ಆಂತರಿಕ ವಿವಾದ ಇದೆ ಎಂದು ನಮಗೆ ಅನುಮಾನವಿದೆ ಎಂದು ಎಸ್ಪಿ ತಿಳಿಸಿದ್ದಾರೆ.

- Advertisement -
- Advertisement -

ಜಾರ್ಖಂಡ್‌ನ ರಾಂಚಿ ಜಿಲ್ಲೆಯ ಸಿರ್ಕಾ ಗ್ರಾಮದಲ್ಲಿ ಬೈಕ್‌ನ ಬ್ಯಾಟರಿ ಮತ್ತು ಚಕ್ರವನ್ನು ಕದ್ದಿದ್ದಾನೆ ಎಂದು ಆರೋಪಿಸಿ 26 ವರ್ಷದ ಯುವಕನನ್ನು ಗ್ರಾಮಸ್ಥರು ವಿದ್ಯುತ್ ಕಂಬಕ್ಕೆ ಕಟ್ಟಿ ಗುಂಪು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿ ಮಹೇಶಪುರ ಗ್ರಾಮದ ನಿವಾಸಿ ಮುಬಾರಕ್ ಖಾನ್ ಎಂಬವರು ನೆರೆಯ ಸಿರ್ಕಾ ಗ್ರಾಮಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ವ್ಯಕ್ತಿಯು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕದಿಯುತ್ತಿದ್ದು, ಸ್ಥಳದಿಂದ ಕಾರಿನ ಚಕ್ರ ಮತ್ತು ಜ್ಯಾಕ್ ಪತ್ತೆಯಾಗಿದೆ ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಗ್ರಾಮಸ್ಥರು ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಕ್ರೂರವಾಗಿ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯ ಮಾಹಿತಿ ಪಡೆದ ನಂತರ ಪೊಲೀಸರು ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಸ್ಥಳಕ್ಕೆ ಧಾವಿಸಿದ್ದು, ಅಷ್ಟೊತ್ತಿಗೆ ಮುಬಾರಕ್‌ ಮೃತಪಟ್ಟಿದ್ದರು. ಇದರ ನಂತರ ಯುವಕನ ಶವವನ್ನು ಪೊಲೀಸ್ ಠಾಣೆಗೆ ತರಲಾಯಿತು ಎನ್ನಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಮುಬಾರಕ್ ಅವರ ಹಿರಿಯ ಸಹೋದರ ತಬರಕ್ ಖಾನ್ ಅಂಗಾರ ಪೊಲೀಸ್ ಠಾಣೆಯಲ್ಲಿ 19 ಹೆಸರಿಸಿದ ವ್ಯಕ್ತಿಗಳು ಮತ್ತು 15-25 ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ದೂರು ದಾಖಲಿಸಿದ್ದಾರೆ.

“ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಬಗ್ಗೆ ತನಿಖೆ ಆರಂಭಿಸಿದ್ದೇವೆ. ಪ್ರಕರಣದ ಬಗ್ಗೆ ಈಗಾಗಲೇ ಕೆಲವು ಜನರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಲಾಗುತ್ತಿದೆ” ಎಂದು ರಾಂಚಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ನೌಶಾದ್ ಆಲಂ ಹೇಳಿದ್ದಾರೆ.

“ಮೇಲ್ನೋಟಕ್ಕೆ ಇದು ಕಳ್ಳತನದ ಪ್ರಕರಣವೆಂದು ತೋರುತ್ತಿಲ್ಲ, ಯಾವುದೊ ವಿವಾದವಿದೆ. ಸ್ಥಳೀಯರು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕಳವು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ ಈ ಹೇಳಿಕೆ ಅನುಮಾನದಿಂದ ಕೂಡಿದೆ. ಪಕ್ಕದ ಹಳ್ಳಿಯಿಂದ ಮತ್ತೊಂದು ಬೈಕ್‌ನ ಚಕ್ರ ಮತ್ತು ಬ್ಯಾಟರಿಯನ್ನು ಕದಿಯಲು ಯಾರಾದರೂ ಬೈಕ್‌ನಲ್ಲಿ ಬರುತ್ತಾರೆಯೇ? ಮತ್ತೊಬ್ಬರ ಮನೆಯಲ್ಲಿ ಚಕ್ರ ಮತ್ತು ಬ್ಯಾಟರಿಯನ್ನು ಕದ್ದು, ಅಪಾಯವನ್ನು ಯಾಕೆ ಮೈಗೆಳೆಯುತ್ತಿದ್ದನು? ಅವನು ಕಳ್ಳನಾಗಿದ್ದರೆ, ಅನ್‌ಲಾಕ್ ಆಗಿದ್ದ ಬೈಕನ್ನೇ ಕದ್ದುಕೊಂಡು ಹೋಗುತ್ತಿದ್ದನು” ಎಂದು ಆಲಂ ಹೇಳಿದ್ದಾರೆ.

“ಪ್ರಕರಣದಲ್ಲಿ ಯಾವುದೋ ಆಂತರಿಕ ವಿವಾದ ಇದೆ ಎಂದು ನಾವು ಅನುಮಾನಿಸುತ್ತೇವೆ. ಆದರೂ ತನಿಖೆ ಪೂರ್ಣಗೊಂಡ ನಂತರವೇ ಈ ಬಗ್ಗೆ ಸ್ಪಷ್ಟವಾಗಿ ಹೇಳಬಹುದು” ಎಂದು ಎಸ್ಪಿ ಆಲಂ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹಿಂದಿ ಹೇರಿಕೆ ವಿರೋಧಿ ಚಿತ್ರಗಳನ್ನು ರೈತರ ಅರಾಜಕತೆ ಎಂದು ಪೋಸ್ಟ್ ಮಾಡಿದ ಬಿಜೆಪಿಗರು!

ಈ ಮಧ್ಯೆ, ಹತ್ಯೆಯ ಹಿಂದಿನ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಅಂಗಾರ ಪೊಲೀಸ್ ಠಾಣೆಗೆ ಘೇರಾವ್‌ ಹಾಕಿದ್ದು, ಮುಬಾರಕ್ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿಲ್ಲಿ ಪ್ರದೇಶದ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಕ್ರಿಸ್ಟೋಫರ್ ಕೆರ್ಕೆಟ್ಟಾ, “ಮುಬಾರಕ್‌ ಅವರಿಗೆ ಇಬ್ಬರು ಮಕ್ಕಳು ಇದ್ದು, ಅವರ ಪತ್ನಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರ ವಿರುದ್ದ ಯಾವುದೆ ಕ್ರಿಮಿನಲ್ ಪ್ರಕರಣದ ದಾಖಲೆ ಕಂಡು ಬಂದಿಲ್ಲ” ಎಂದು ಹೇಳಿದ್ದಾರೆ.

ಒಂದೇ ವಾರದಲ್ಲಿ ರಾಂಚಿ ಜಿಲ್ಲೆಯಲ್ಲಿ ನಡೆಯುತ್ತಿರುವ ಎರಡನೇ ಹಲ್ಲೆ ಘಟನೆಯಾಗಿದೆ ಇದು. ರಾಂಚಿಯ ಸಗಟು ಮಾರುಕಟ್ಟೆಯೊಂದರಲ್ಲಿ ಮಿನಿ ಟ್ರಕ್ ಅನ್ನು ಕದಿಯುತ್ತಿದ್ದನೆಂದು ಆರೋಪಿಸಿ 22 ವರ್ಷದ ಸಚಿನ್ ವರ್ಮಾ ಎಂಬ ಯುವಕನ ಮೇಲೆ ಮಾರ್ಚ್ 8 ರಂದು ಅಲ್ಲಿನ ಕಾರ್ಮಿಕರು ಹಲ್ಲೆ ನಡೆಸಿದ್ದರು.

ಜಾರ್ಖಂಡ್‌ನಲ್ಲಿ ಗುಂಪು ಹತ್ಯೆ ಘಟನೆಗಳು ಹಲವಾರು ಬಾರಿ ನಡೆದಿದ್ದು, ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. 2016 ರ ಮಾರ್ಚ್‌ನಿಂದ 2020 ರ ಸೆಪ್ಟೆಂಬರ್‌ವರೆಗೆ ಜಾರ್ಖಂಡ್‌‌ನಲ್ಲಿ ಒಟ್ಟು 29 ಜನರನ್ನು ಗುಂಪು ಹತ್ಯೆ ಮಾಡಲಾಗಿದೆ ಎಂದು ಜಾರ್ಖಂಡ್ ಜನಾಧಿಕರ್ ಮಹಾಸಭಾ (ಜೆಜೆಎಂ) ಹೇಳಿದೆ.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...