Homeಮುಖಪುಟಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

ಮಮತಾ ಮೇಲೆ ಹಲ್ಲೆ ನಡೆದಿಲ್ಲ: ಚುನಾವಣಾ ಆಯೋಗದ ಹೇಳಿಕೆ!

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಗಾಯಗಳನ್ನುಂಟು ಮಾಡಿದ ನಂದಿಗ್ರಾಮ್‌ನಲ್ಲಿ ನಡೆದ ಘಟನೆ ಅಪಘಾತ ಮತ್ತು ಯೋಜಿತ ದಾಳಿಯಲ್ಲ ಎಂದು ಚುನಾವಣಾ ಆಯೋಗ ಭಾನುವಾರ ತೀರ್ಮಾನಿಸಿದೆ. ಶನಿವಾರ ಇಬ್ಬರು ಮತದಾನ ವೀಕ್ಷಕರು ವರದಿಯನ್ನು ಸಲ್ಲಿಸಿದ ನಂತರ ಅದನ್ನು ಪರಿಶೀಲಿಸಿದ ಆಯೋಗ ಈ ತೀರ್ಮಾನಕ್ಕೆ ಬಂದಿದೆ.

ಅವರ ಭದ್ರತಾ ಉಸ್ತುವಾರಿಯ ಕೊರತೆಯಿಂದಾಗಿ ಬ್ಯಾನರ್ಜಿ ಗಾಯಗೊಂಡಿದ್ದಾರೆ ಎಂದು ಆಯೋಗ ತೀರ್ಮಾನಿಸಿದೆ. ಈ ನಿಟ್ಟಿನಲ್ಲಿ ಆಯೋಗ ನಿರ್ದೇಶನಗಳನ್ನು ನೀಡಲಿದೆ ಎಂದು ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ.

ಸ್ಟಾರ್ ಪ್ರಚಾರಕರಾಗಿದ್ದರೂ ಬ್ಯಾನರ್ಜಿ ಬುಲೆಟ್ ಪ್ರೂಫ್ ಅಥವಾ ಶಸ್ತ್ರಸಜ್ಜಿತ ವಾಹನವನ್ನು ಬಳಸುತ್ತಿಲ್ಲ ಮತ್ತು ಇದು ಅವರ ಭದ್ರತೆ ನೋಡಿಕೊಳ್ಳುವವರ ಲೋಪ ಎಂದು ಆಯೋಗದ ಮೂಲಗಳು ಹೇಳಿವೆ.

ವಿಶೇಷ ಸಮೀಕ್ಷೆ ವೀಕ್ಷಕರಾದ ಅಜಯ್ ನಾಯಕ್ ಮತ್ತು ವಿವೇಕ್ ಡ್ಯೂಬ್ ಅವರ ವರದಿಯನ್ನು ಉಲ್ಲೇಖಿಸಿರುವ ಆಯೋಗ, ಮಮತಾ ಅವರು ಘಟನೆ ನಡೆದಾಗ ಸಾಮಾನ್ಯ ವಾಹನವನ್ನು ಬಳಸುತ್ತಿದ್ದರು, ಆದರೆ, ಅವರ ಭದ್ರತಾ ನಿರ್ದೇಶಕ ವಿವೇಕ್ ಸಹಾಯ್ ಅವರು ಗುಂಡು ನಿರೋಧಕ ಕಾರಿನಲ್ಲಿದ್ದರು ಎಂದು ಮೂಲಗಳು ಗಮನಿಸಿವೆ.

ಅಲ್ಲದೆ, ಘಟನೆ ನಡೆದ ಪ್ರದೇಶದ ರಿಟರ್ನಿಂಗ್ ಅಧಿಕಾರಿಯಿಂದ ಯಾವುದೇ ಅನುಮೋದನೆ ಪಡೆಯಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಕಾರಣದಿಂದಾಗಿ, ಮತದಾನದ ಅಧಿಕಾರಿಗಳಿಗೆ ವಿಡಿಯೋಗ್ರಾಫರ್‌ಗಳನ್ನು ಅಥವಾ ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ನಿಯೋಜಿಸಲು ಸಾಧ್ಯವಾಗಲಿಲ್ಲ ಎಂದು ಆಯೋಗದ ಮೂಲಗಳು ತಿಳಿಸಿವೆ.

ಮಾರ್ಚ್ 10 ರಂದು ಪೂರ್ವ ಮಿಡ್ನಾಪೋರ್ ಜಿಲ್ಲೆಯ ನಂದಿಗ್ರಾಮದ ಬಿರುಲಿಯಾ ಬಜಾರ್‌ನಲ್ಲಿ ನಡೆದ ಘಟನೆ, ಬ್ಯಾನರ್ಜಿ ನಾಮಪತ್ರ ಸಲ್ಲಿಸಿದ ನಂತರ “ಹಠಾತ್ತನೆ” ನಡೆದಿದ್ದರೂ “ಪಿತೂರಿ ಸಿದ್ಧಾಂತ” ಇದರ ಹಿಂದಿದೆ ಎನ್ನಲಾಗಿದೆ. ಆದರೆ, ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಠಾತ್ ಸಂಭಸಿದ ಘಟನೆಯಲ್ಲಿ ಮಮತಾ ಗಾಯಗೊಂಡರು ಎನ್ನಲಾಗಿದೆ.

“ಈ ಘಟನೆ ಯೋಜಿತ ದಾಳಿಯಲ, ಅಪಘಾತ. ಇದು ಇದ್ದಕ್ಕಿದ್ದಂತೆ ನಡೆದಿತ್ತು” ಎಂದು ವರದಿಯನ್ನು ಉಲ್ಲೇಖಿಸಿ ಮೂಲ ಹೇಳಿದೆ. ಈ ಘಟನೆಯಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರೂ ಆಗಿರುವ ಬ್ಯಾನರ್ಜಿಗೆ ಆದ ಗಾಯದ ಬಗ್ಗೆ, ವರದಿಯು “ಘಟನೆಯ ಹಠಾತ್ ಕಾರಣ ಇದಕ್ಕೆ ಕಾರಣವಾಯಿತು. ಘಟನೆಯ ಹಿಂದೆ ಯಾವುದೇ ಪಿತೂರಿ ನಡೆದಿಲ್ಲ’ ಎಂದಿದೆ.

ಘಟನೆಯ ಸಮಯದಲ್ಲಿ ಹಾಜರಿದ್ದ ಪ್ರತ್ಯಕ್ಷದರ್ಶಿಗಳು ಒದಗಿಸಿದ ವಿವರಗಳು ಮತ್ತು ಅವರಿಂದ ಸಂಗ್ರಹಿಸಲಾದ ವಿಡಿಯೋವನ್ನು ವರದಿಯು ಗಣನೆಗೆ ತೆಗೆದುಕೊಂಡಿದೆ.
ಮಮತಾರಿಗೆ “ತುಂಬಾ ಹತ್ತಿರ” ಬಂದ ಜನಸಮೂಹವನ್ನು ನಿಯಂತ್ರಿಸುವಲ್ಲಿ ಮುಖ್ಯಮಂತ್ರಿಯ ಭದ್ರತೆಯ ಉಸ್ತುವಾರಿ ಪೊಲೀಸ್ ಸಿಬ್ಬಂದಿಗಳ ವೈಫಲ್ಯವನ್ನೂ ಈ ವರದಿ ಉಲ್ಲೇಖಿಸಿದೆ.

“ಸ್ಥಳೀಯ ಪೊಲೀಸರು ಮತ್ತು ಸಿಎಂ ಅವರ ಭದ್ರತೆಯ ಉಸ್ತುವಾರಿಯವರು ಜನಸಂದಣಿಯನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅದು ಅನಪೇಕ್ಷಿತ ಪರಿಸ್ಥಿತಿಗೆ ಕಾರಣವಾಯಿತು” ಎಂದು ವರದಿ ಹೇಳಿದೆ.

ನಂದಿಗ್ರಾಮ್ ಘಟನೆಯ ನಂತರ, ರಾಜ್ಯ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಮತ್ತು ನೋಡಲ್ ಅಧಿಕಾರಿ ಜಗಮೋಹನ್, ಮುಖ್ಯಮಂತ್ರಿಗಳ ಪ್ರವಾಸದ ಸಮಯದಲ್ಲಿ ಕಟ್ಟುನಿಟ್ಟಾದ ಭದ್ರತಾ ಕ್ರಮಗಳನ್ನು ವ್ಯವಸ್ಥೆ ಮಾಡುವಂತೆ ಎಲ್ಲಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದ್ದಾರೆ.

“ಸಿಎಂ ಸುತ್ತಲಿನ ಭದ್ರತಾ ಕ್ರಮಗಳು ಕಟ್ಟುನಿಟ್ಟಾಗಿರಬೇಕು. ಇತರ ಸ್ಟಾರ್ ಪ್ರಚಾರಕರ ಭದ್ರತೆಯನ್ನು ಬಿಗಿಗೊಳಿಸಬೇಕು. ನಂದಿಗ್ರಾಮ್ ಘಟನೆಯ ನಂತರ ನಾವು ಯಾವುದೇ ಚಾನ್ಸ್ ತೆಗೆದುಕೊಳ್ಳಲು ಸಾಧ್ಯವಿಲ್ಲ”ಎಂದು ಸಿಇಒ ಮೂಲವು ಜಗಮೋಹನ್ ವರದಿ ಉಲ್ಲೇಖಿಸಿ ಹೇಳಿದೆ.

ಈ ನಡುವೆ, ರಾಜ್ಯ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಆಯೋಗಕ್ಕೆ ನೀಡಿದ ವಿವರವಾದ ವರದಿಯಲ್ಲಿ ನಂದಿಗ್ರಾಮದಲ್ಲಿ ನಡೆದ ಘಟನೆಗೆ ಏನು ಕಾರಣ ಎಂಬುದು ಲಭ್ಯ ವಿಡಿಯೋದಲ್ಲಿ ಸ್ಪಷ್ಟವಾಗಿಲ್ಲ ಎಂದಿದ್ದಾರೆ.

“ಸಿಎಂ ವಾಹನವು ಕಿಕ್ಕಿರಿದ ಪ್ರದೇಶದ ಮೂಲಕ ಹಾದುಹೋಗುತ್ತಿತ್ತು. ಆಗ ಅವರನ್ನು ಕಾರಿನ ಬಾಗಿಲಿನತ್ತ ತಳ್ಳಲಾಯಿತು. ಆದರೆ ತಳ್ಳುವಿಕೆಯು ಉದ್ದೇಶಪೂರ್ವಕವಾಗಿದೆಯೇ ಅಥವಾ ಇಲ್ಲವೇ ಎಂಬುದು ಸ್ಪಷ್ಟವಾಗಿಲ್ಲ. ಸಂಗ್ರಹಿಸಿದ ವೀಡಿಯೊ ಹೆಚ್ಚು ಸ್ಪಷ್ಟವಾಗಿಲ್ಲ” ಎಂದು ಸಿಇಒ ಮೂಲವೊಂದು ಬಂಡೊಪಾಧ್ಯಾಯರ ಎರಡನೇ ವರದಿಯನ್ನು ಉಲ್ಲೇಖಿಸಿ ಹೇಳಿದೆ.

ಘಟನೆ ಕುರಿತು ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ಇಬ್ಬರು ವೀಕ್ಷಕರಿಂದ ವರದಿಗಳನ್ನು ಕೋರಿತ್ತು. ರಾಜ್ಯ ಆಡಳಿತ ಶುಕ್ರವಾರ ತನ್ನ ವರದಿಯನ್ನು ಸಲ್ಲಿಸಿತ್ತು.
ಪಶ್ಚಿಮ ಬಂಗಾಳದ 294 ವಿಧಾನಸಭಾ ಸ್ಥಾನಗಳಿಗೆ ಮಾರ್ಚ್ 27 ಮತ್ತು ಏಪ್ರಿಲ್ 29 ರ ನಡುವೆ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ನನ್ನ ಜನರ ನೋವಿಗಿಂತ ನನ್ನದು ದೊಡ್ಡದಲ್ಲ, ಎಂದಿಗೂ ತಲೆಬಾಗುವುದಿಲ್ಲ: ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...