Homeಕರ್ನಾಟಕಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್?

ಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್?

- Advertisement -
- Advertisement -

ಯಾಕೋ ನಮಗ ಇನ್ನು ಸೆಟ್ ಆಗ್ತಿಲ್ಲ, ಇಡೀ ಪಾರ್ಟಿನೆ ಸೆಟ್ ಆಗ್ತಿಲ್ಲ. ಗೋವಿಂದ ಕಾರಜೋಳರವರೇ ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಕೇಳಿಕೊಳ್ಳುತ್ತೇನೆ, ನೀವೆ ನನ್ನ ಗೆಲ್ಲಿಸಬೇಕು. ತುಂಬಿದ ವೇದಿಕೆಯಲ್ಲಿ ಈ ರೀತಿಯ ಮಾತುಗಳನ್ನು ಹೇಳುವ ಮೂಲಕ ಎಲೆಕ್ಷನ್ ಮುಗಿಯೋ ಮುಂಚೆನೇ ಸೋಲೊಪ್ಪಿಕೊಂಡ್ರ ಉಮೇಶ್ ಜಾಧವ್? ಎನ್ನುವ ಪ್ರಶ್ನೆ ಕಲಬುರಗಿ ಮಾತ್ರವಲ್ಲದೇ ಇಡೀ ರಾಜ್ಯದ್ಯಂತ ಹರಿದಾಡುತ್ತಿದೆ.

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತೊಡೆ ತಟ್ಟಿದ್ದ ಮಾಜಿ ಶಾಸಕ ಉಮೇಶ್ ಜಾಧವ್ ಈಗ ವಿಲ ವಿಲ ಅಂತ ಒದ್ದಾಡುತ್ತಿದ್ದಾರೆ. ಕಾಂಗ್ರೆಸ್‍ನಿಂದಲೇ ಶಾಸಕರಾಗಿ ಕೊನೆಗೆ, ಸಂಸದನಾಗವು ಉದ್ದೇಶದಿಂದಲೇ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಉಮೇಶ್ ಜಾಧವ್ ಈಗ ಕಂಡ ಕಂಡವರ ಕಾಲಿಡುತ್ತೇನೆ ದಯವಿಟ್ಟು ಗೆಲ್ಲಿಸಿ ಎಂದು ಬೇಡಿಕೊಳ್ಳಬೇಕಾದ ಪರಿಸ್ಥಿತಿ ತಲುಪಿದ್ದಾರೆ.

“ಇದು ಡು ಆರ್ ಡೈ ಆದ, ನಂದು ಲಾಸ್ಟ್ ಚಾನ್ಸ್ ಅದ, ನಮಗೆ ನೀವು ಕೈಬಿಡಬಾರದು ಈ ಯುದ್ದದಲ್ಲಿ ಗೆಲ್ಲಿಸಬೇಕೆಂದು ನಾನು ಕೈ ಜೋಡಿಸಿ ವಿನಂತಿ ಮಾಡ್ತೀನಿ” ಯಾಕೋ ನಮಗ ಇನ್ನು ಸೆಟ್ ಆಗ್ತಿಲ್ಲ, ಇಡೀ ಪಾರ್ಟಿನೆ ಸೆಟ್ ಆಗ್ತಿಲ್ಲ. ಗೋವಿಂದ ಕಾರಜೋಳರವರೇ ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಕೇಳಿಕೊಳ್ಳುತ್ತೇನೆ. ನೀವೆ ನನ್ನ ಗೆಲ್ಲಿಸಬೇಕು ಎಂದು ಕಲಬುರಗಿಯಲ್ಲಿ ಏರ್ಪಡಿಸಿದ್ದ ಎಸ್ಸಿ ಸಮಾವೇಶದ ಬಹಿರಂಗ ಭಾಷಣದಲ್ಲಿ ಉಮೇಶ್ ಜಾಧವ್ ಹೇಳುವ ವಿಡಿಯೋ ವೈರಲ್ ಆಗಿದ್ದು ಇಲ್ಲಿ ಬಿಜೆಪಿ ಕಥೆ ಮುಗಿದ ಹಾಗೆನೇ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ಉಮೇಶ್ ಜಾಧವ್ ಮಾತಾಡಿರುವ ವಿಡಿಯೋ ನೋಡಿ

ಕಲಬುರಗಿಯಲ್ಲಿ ಉಮೇಶ್ ಜಾಧವ್ ಪರದಾಟ. ಚುನಾವಣೆಗೂ ಮುನ್ನವೇ ಸೋಲಿನ ಭಯ…

Save Constitution Karnataka ಸಂವಿಧಾನ ಉಳಿವಿಗಾಗಿ ಕರ್ನಾಟಕ यांनी वर पोस्ट केले शनिवार, २० एप्रिल, २०१९

ಇವರ ಈ ಹೇಳಿಕೆಯಿಂದಾಗಿ ಖರ್ಗೆಯವರ ಭದ್ರಕೋಟೆಯಲ್ಲಿ ಕೇಸರಿ ಬಾವುಟ ಹಾರಿಸುವ ಬಿಜೆಪಿಯ ಕನಸು ಭಗ್ನಗೊಂಡಿದೆ. ಚುನಾವಣೆ ಇನ್ನು ಮೂರು ದಿನ ಇರುವಾಗ ಈ ರೀತಿ ಅಸಹಾಯಕರಂತೆ ಕೈ ಚೆಲ್ಲಿ ಮಾತಾಡುವುದು ಪಕ್ಷಕ್ಕೆ ಡ್ಯಾಮೇಜ್ ಎನ್ನುವ ಮಾತುಗಳು ಎಲ್ಲೆಡೆ ಹರಿದಾಡುತ್ತಿವೆ. ಹಾಗೇ ನೋಡಿದರೆ ಇದರಿಂದ ಖರ್ಗೆಯವರ ಗೆಲುವು ಮತ್ತಷ್ಟು ಸುಲಭ ಎಂದು ವಿಶ್ಲೇಷಿಸಲಾಗುತ್ತಿದೆ.


ಇದ್ದ ಶಾಸಕ ಸ್ಥಾನವನ್ನು ಬಿಟ್ಟು, ರಾಜೀನಾಮೆ ಅಂಗೀಕಾರ ಮಾಡಲೇಬೇಕೆಂದು ಪಟ್ಟು ಹಿಡಿದಿದ್ದ ಉಮೇಶ್ ಜಾಧವ್‍ರವರ ಕಥೆ ಶೋಚನೀಯವಾಗಿದೆ. ಗೆದ್ದೆ ಬಿಡುವ ಹುಮ್ಮಸ್ಸಿನಿಂದ ಸ್ಪರ್ಧಿಸಿದ್ದ ಅವರೀಗ ಸೋಲಿನ ಸುಳಿಯಲ್ಲಿ ಸಿಲುಕಿ ಒದ್ದಾಡುತ್ತಿದ್ದಾರೆ. ಒಂದು ವೇಳೆ ಸೋತೆಬಿಟ್ಟರಂತೂ ಶಾಸಕ ಸ್ಥಾನವೂ ಇಲ್ಲ, ಅತ್ತ ಕಾಂಗ್ರೆಸ್ ಕೂಡ ಇಲ್ಲ, ಬಿಜೆಪಿ ಸೆಟ್ ಆಗ್ತಿಲ್ಲ ಅಂತ ಕೊರಗುವ ಸ್ಥಿತಿಗೆ ತಲುಪಲಿದ್ದಾರೆ. ಏನಾಗುತ್ತೆ ಅಂತ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...