Homeಮುಖಪುಟಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ರವೀಂದ್ರ ಭಟ್ಟಾಚಾರ್ಯ ಅವರನ್ನು ಬದಲಿಸಿ  ಬೇರೆ ಮೂಲ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದರೇ, ಸ್ವತಂತ್ರ ಅಭ್ಯರ್ಥಿಯನ್ನು ನಿಲ್ಲಿಸಿ, ಭಟ್ಟಾಚಾರ್ಯರನ್ನು ಸೋಲಿಸಲಾಗುವುದು ಎಂದು ಕಾರ್ಯಕರ್ತರು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ. 

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಸೇರಿದ ನಾಯಕರಿಗೆ ಕೆಲವೇ ದಿನದಲ್ಲಿ ಟಿಕೆಟ್ ನೀಡಿರುವುದಕ್ಕೆ ಆಕ್ರೋಶಗೊಂಡ ಕಾರ್ಯಕರ್ತರು ಇಬ್ಬರು ನಾಯಕರನ್ನು ಕೊಠಡಿಯಲ್ಲಿ ಕೂಡಿ ಬೀಗ ಹಾಕಿದ ಘಟನೆ ಪಶ್ಚಿಮ ಬಂಗಾಳದ ಸಿಂಗೂರ್‌ನಲ್ಲಿ ನಡೆದಿದೆ.

ಮಧ್ಯಪ್ರದೇಶದ ಆರೋಗ್ಯ ಮತ್ತು ಶಿಕ್ಷಣ ಸಚಿವ ಬಿಸ್ವಾಸ್ ಸರಂಜೆ ಮತ್ತು ಉತ್ತರ ಪ್ರದೇಶದ ಹಿರಿಯ ಬಿಜೆಪಿ ಮುಖಂಡರನ್ನು ಪಶ್ಚಿಮ ಬಂಗಾಳದ ಬಿಜೆಪಿ ಕಾರ್ಯಕರ್ತರು ಸಿಂಗೂರಿನ ಅಪೂರ್‍ಬಾಪುರದ ಕೊಠಡಿಯೊಂದರಲ್ಲಿ ಸುಮಾರು ನಾಲ್ಕು ಗಂಟೆಗೂ ಅಧಿಕ ಕಾಲ ಕೂಡಿ ಹಾಕಿ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ರವೀಂದ್ರನಾಥ್ ಭಟ್ಟಾಚಾರ್ಯ ಅವರಿಗೆ ಟಿಕೆಟ್ ನೀಡಿರುವುದು ಪಕ್ಷದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಭಟ್ಟಾಚಾರ್ಯ ಬದಲು ಬಿಜೆಪಿ ಪಕ್ಷದ ಮೂಲ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಪ್ರಣಾಳಿಕೆಯಲ್ಲಿ ಸಿಎಎ ವಿರೋಧಿಸಿದ BJP ಮಿತ್ರಪಕ್ಷ AIADMK!

ಇಬ್ಬರು ನಾಯಕರನ್ನು ಕೂಡಿ ಹಾಕಿದ ಕಾರ್ಯಕರ್ತರು ಬಿಜೆಪಿ ಟಿಕೆಟ್ ನೀಡಿರುವ ರವೀಂದ್ರನಾಥ್ ಭಟ್ಟಾಚಾರ್ಯ ವಿರುದ್ಧ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದ್ದರು. ಪ್ರತಿಭಟನೆ ನಡೆಸುತ್ತಿದ್ದವರಲ್ಲಿ ಅತಿ ಹೆಚ್ಚು ಮಹಿಳಾ ಕಾರ್ಯಕರ್ತರು ಇದ್ದದ್ದು ಮತ್ತೊಂದು ವಿಷೇಶವಾಗಿತ್ತು.

ರವೀಂದ್ರ ಭಟ್ಟಾಚಾರ್ಯ ಅವರನ್ನು ಬದಲಿಸಿ ಬೇರೆ ಮೂಲ ಅಭ್ಯರ್ಥಿಗೆ ಟಿಕೆಟ್ ನೀಡದಿದ್ದರೇ, ಇಲ್ಲಿ ಸ್ವತಂತ್ರ ಅಭ್ಯರ್ಥಿಯನ್ನು ನಿಲ್ಲಿಸಿ, ಭಟ್ಟಾಚಾರ್ಯರನ್ನು ಸೋಲಿಸಲಾಗುವುದು ಎಂದು ಪ್ರತಿಭಟನಾ ನಿರತ ಕಾರ್ಯಕರ್ತರು ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

ಸುಮಾರು ನಾಲ್ಕು ಗಂಟೆಗಳ ಕಾಲ ಕೊಠಡಿಯಲ್ಲಿ ಬಂಧಿಸಲ್ಪಟ್ಟಿದ್ದ ಇಬ್ಬರು ಬಿಜೆಪಿ ನಾಯಕರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಲಾಗಿದೆ ಎಂದು ಹೂಗ್ಲಿ (ಗ್ರಾಮೀಣ) ಪೊಲೀಸ್ ಮುಖ್ಯಸ್ಥ ಅಮಂದೀಪ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಟಿಕೆಟ್‌ ನಿರಾಕರಣೆ: ತಲೆ ಬೋಳಿಸಿಕೊಂಡ ಕೇರಳ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ!

ಕಳೆದ ಚುನಾವಣೆಯಲ್ಲಿ ಸಿಂಗೂರ್‌ನಿಂದ ಗೆದ್ದಿದ್ದ 89 ವರ್ಷದ ಭಟ್ಟಾಚಾರ್ಯ ಅವರು, ಈ ಬಾರಿ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ತೃಣಮೂಲ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆಗೊಂಡಿದ್ದರು.

2006 ರಿಂದ 2008 ರವರೆಗೆ ಸಿಂಗೂರಿನಲ್ಲಿರುವ ಟಾಟಾ ಮೋಟಾರ್ಸ್ ಪ್ಲಾಂಟ್ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿದ್ದ ಭಟ್ಟಾಚಾರ್ಯ, ತೃಣಮೂಲ ಕಾಂಗ್ರೆಸ್ ತನ್ನ ಮಗನಿಗೆ ಟಿಕೆಟ್ ನೀಡಬೇಕೆಂದು  ಬಯಸಿದ್ದರು. ಆದರೆ ಟಿಕೆಟ್ ನಿರಾಕರಣೆ ಹಿನ್ನೆಲೆ ಅವರು ಅಸಮಾಧಾನಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಸಿಂಗೂರ್‌ನಿಂದ ಸಿಪಿಐ (ಎಂ) ಯುವ ವಿದ್ಯಾರ್ಥಿ ಒಕ್ಕೂಟದ ಮುಖಂಡರಾದ ಶ್ರೀಜನ್ ಭಟ್ಟಾಚಾರ್ಯ ಸ್ಫರ್ಧಿಸುತ್ತಿದ್ದಾರೆ. ಸಿಂಗೂರ್‌ನಲ್ಲಿ ಉತ್ಪಾದನಾ ಚಟುವಟಿಕೆಯನ್ನು ಮರಳಿ ತರಲು ಕೆಲಸ ಮಾಡುವುದಾಗಿ ವಿದ್ಯಾರ್ಥಿ ಮುಖಂಡ ಭಟ್ಟಾಚಾರ್ಯ ಹೇಳಿದ್ದಾರೆ.

ಸದ್ಯ ಪಶ್ಚಿಮ ಬಂಗಾಳದಾದ್ಯಂತ, ಈ ಘಟನೆಯಿಂದ ಮೂಲ ಬಿಜೆಪಿಗರು ಮತ್ತು ಹೊಸಬರ ನಡುವಿನ ಬಿರುಕು ಬಹಿರಂಗವಾಗಿ ಹೊರಬಂದಿದೆ. ಈಗಾಗಲೇ ಪಕ್ಷದ ಹಲವಾರು ಸದಸ್ಯರು ಚುನಾವಣಾ ಟಿಕೆಟ್ ನಿರಾಕರಿಸಿದ್ದಕ್ಕಾಗಿ  ನಿರಾಶೆ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...