Homeಮುಖಪುಟನೋಟಾಗೆ ಅಧಿಕ ಮತಗಳು ಬಂದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಿ- ಸುಪ್ರೀಂಗೆ ಅರ್ಜಿ ಸಲ್ಲಿಕೆ

ನೋಟಾಗೆ ಅಧಿಕ ಮತಗಳು ಬಂದ ಕ್ಷೇತ್ರಗಳಲ್ಲಿ ಮರು ಚುನಾವಣೆ ನಡೆಸಿ- ಸುಪ್ರೀಂಗೆ ಅರ್ಜಿ ಸಲ್ಲಿಕೆ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 36 ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ 15 ಅಭ್ಯರ್ಥಿಗಳು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರು.

- Advertisement -
- Advertisement -

ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ತಿರಸ್ಕರಿಸುವ ನೋಟಾಗೆ (NOTA) ಹೆಚ್ಚಿನ ಮತಗಳು ಬಂದರೆ ಆ ಕ್ಷೇತ್ರದಲ್ಲಿ ಚುನಾವಣೆ ರದ್ದುಗೊಳಿಸಿ, ಮತ್ತೆ ಚುನಾವಣೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು  ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ಕಾನೂನು ಆಯೋಗವು ನೋಟಾ ಆಯ್ಕೆಯನ್ನು 1999 ರಲ್ಲಿ ಪ್ರಸ್ತಾಪಿಸಿತ್ತು ಇದನ್ನು ಸುಪ್ರೀಂ ಕೋರ್ಟ್ 2013 ರಲ್ಲಿ ಎತ್ತಿಹಿಡಿದಿದೆ. ಒಂದು ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಎಲ್ಲಾ ಅಭ್ಯರ್ಥಿಗಳನ್ನು ತಿರಸ್ಕರಿಸುವ ಮತದಾರರ ಹಕ್ಕಾಗಿದ್ದು, ಇದು ರಾಜಕೀಯ ವ್ಯವಸ್ಥೆಯನ್ನು ಶುದ್ಧೀಕರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿತ್ತು.

ಬಿಜೆಪಿ ನಾಯಕ, ಹಿರಿಯ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ ಪಿಐಎಲ್ ವಿಚಾರಣೆ ವೇಳೆ, ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ ರಾಮಸುಬ್ರಮಣಿಯನ್ ಅವರ ನ್ಯಾಯಪೀಠವೂ ಕೇಂದ್ರ ಕಾನೂನು ಸಚಿವಾಲಯ ಮತ್ತು ಚುನಾವಣಾ ಆಯೋಗಕ್ಕೆ ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.

ಇದನ್ನೂ ಓದಿ: ತಮಿಳುನಾಡು: ಪ್ರಣಾಳಿಕೆಯಲ್ಲಿ ಸಿಎಎ ವಿರೋಧಿಸಿದ BJP ಮಿತ್ರಪಕ್ಷ AIADMK!

ನೋಟಾ ಹಕ್ಕು ಭ್ರಷ್ಟಾಚಾರವನ್ನು ಪರಿಶೀಲಿಸುತ್ತದೆ ಮತ್ತು ರಾಜಕೀಯ ಪಕ್ಷಗಳು ನಿರಂಕುಶಾಧಿಕಾರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದನ್ನು ತಡೆಯುತ್ತದೆ ಎಂದು ಪಿಐಎಲ್ ಅರ್ಜಿಯಲ್ಲಿ ಹೇಳಲಾಗಿದೆ.

“ಅಭ್ಯರ್ಥಿಯನ್ನು ತಿರಸ್ಕರಿಸುವ ಮತ್ತು ಆಯ್ಕೆ ಮಾಡುವ ಹಕ್ಕು ಜನರಿಗೆ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸುವ ಅಧಿಕಾರವನ್ನು ನೀಡುತ್ತದೆ. ಸ್ಪರ್ಧಿಸುವ ಅಭ್ಯರ್ಥಿಯ ಹಿನ್ನೆಲೆ ಅಥವಾ ಕಾರ್ಯಕ್ಷಮತೆಯ ಬಗ್ಗೆ ಮತದಾರರು ಅತೃಪ್ತರಾಗಿದ್ದರೆ, ಅವರು ಅಂತಹ ಅಭ್ಯರ್ಥಿಯನ್ನು ತಿರಸ್ಕರಿಸಲು ಮತ್ತು ಹೊಸ ಅಭ್ಯರ್ಥಿಯನ್ನು ಆಯ್ಕೆ ಮಾಡಲು ನೋಟಾಗೆ ಮತ ನೀಡುತ್ತಾರೆ” ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಒಮ್ಮೆ ನೋಟಾ ಪಡೆದ ಆ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳನ್ನು ಮತ್ತೊಮ್ಮೆ ನಡೆಸುವ ಚುನಾವಣೆಯಲ್ಲಿ ಭಾಗವಹಿಸದಂತೆ ನಿರ್ಬಂಧಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅರ್ಜಿಯಲ್ಲಿ ಕೋರಲಾಗಿದೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ನೋಟಾ 6.5 ಲಕ್ಷ ಮತಗಳನ್ನು ಗಳಿಸಿದೆ. ಇದು ಒಟ್ಟಾರೆ ಮತಗಳ ಶೇಕಡಾ 1.06 ರಷ್ಟಿತ್ತು. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 36 ರಾಜಕೀಯ ಪಕ್ಷಗಳ ಅಭ್ಯರ್ಥಿಗಳಲ್ಲಿ  15 ಜನರು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದ್ದರು.


‌ಇದನ್ನೂ ಓದಿ: ಪನ್ಸಾರೆ, ದಾಭೋಲ್ಕರ್‌ ಹತ್ಯೆ ಪ್ರಕರಣದ ತನಿಖೆಗೆ ಇನ್ನೆಷ್ಟು ದಿನ ಬೇಕು?- ಬಾಂಬೆ ಹೈಕೋರ್ಟ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...