Homeಮುಖಪುಟಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

ಬಾಟ್ಲಾ ಹೌಸ್ ಎನ್‌ಕೌಂಟರ್‌: ಅಪರಾಧಿ ಅರಿಜ್ ಖಾನ್‌ಗೆ ಮರಣದಂಡನೆ

- Advertisement -
- Advertisement -

ದೆಹಲಿಯಲ್ಲಿ 2008 ರಲ್ಲಿ ನಡೆದಿದ್ದ ಬಾಟ್ಲಾ ಹೌಸ್ ಎನ್‌ಕೌಂಟರ್ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯನ್ನು ಹತ್ಯೆಗೈದ ಆರೋಪಲ್ಲಿ ಶಿಕ್ಷೆಗೊಳಗಾಗಿದ್ದ ಭಾರತೀಯ ಮುಜಾಹಿದ್ದೀನ್ ಭಯೋತ್ಪಾದಕ ಅರಿಜ್ ಖಾನ್‌ಗೆ ಸೋಮವಾರ ಮರಣದಂಡನೆ ವಿಧಿಸಲಾಗಿದೆ.

ದಕ್ಷಿಣ ದೆಹಲಿಯ ಬಾಟ್ಲಾ ಹೌಸ್‌ನಲ್ಲಿ 2008 ರಲ್ಲಿ ಭಯೋತ್ಪಾದಕರ ಒಂದು ಗುಂಪು ಮತ್ತು ದೆಹಲಿ ಪೊಲೀಸರು ನಡುವಿನ ಘರ್ಷಣೆಯಲ್ಲಿ ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಬಲಿಯಾಗಿದ್ದರು. ಇನ್ನಿಬ್ಬರು ಅಧಿಕಾರಿಗಳು ಗಾಯಗೊಂಡಿದ್ದರು.

ಘಟನೆ ನಂತರ 2008 ರಲ್ಲಿ ಸ್ಥಳದಿಂದ ಪರಾರಿಯಾಗಿದ್ದ, ಉತ್ತರ ಪ್ರದೇಶದ ಅಜಮ್‌ಗಢ ಮೂಲದ ಅರಿಜ್ ಖಾನ್‌ನನ್ನು 2018 ರ ಫೆಬ್ರವರಿಯಲ್ಲಿ ದೆಹಲಿ ಪೊಲೀಸರ ವಿಶೇಷ ದಳ ಬಂಧಿಸಿತ್ತು. ಕಳೆದ ವಾರ ಈ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಲಾಗಿತ್ತು. ದೆಹಲಿ, ರಾಜಸ್ಥಾನ, ಗುಜರಾತ್ ಮತ್ತು ಉತ್ತರ ಪ್ರದೇಶದಾದ್ಯಂತ ನಡೆದ 2008 ರ ಸರಣಿ ಸ್ಫೋಟಗಳ ಮಾಸ್ಟರ್ ಮೈಂಡ್ ಅರಿಜ್ ಖಾನ್ ಎನ್ನಲಾಗಿದೆ.

ಇದನ್ನೂ ಓದಿ: ಪಕ್ಷಾಂತರಿಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ: ಬಿಜೆಪಿ ನಾಯಕರನ್ನು ಕೊಠಡಿಯಲ್ಲಿ ಕೂಡಿ ಹಾಕಿದ ಕಾರ್ಯಕರ್ತರು!

ಇದು ಕೇವಲ ಸಾಮಾನ್ಯ ಹತ್ಯೆಯಲ್ಲ, ಆದರೆ ನ್ಯಾಯದ ರಕ್ಷಕನಾಗಿದ್ದ ಕಾನೂನು ಜಾರಿಗೊಳಿಸುವ ಅಧಿಕಾರಿಯ ಕೊಲೆ ಎಂದು ಪೊಲೀಸರು ಖಾನ್‌ಗೆ ಮರಣದಂಡನೆ ವಿಧಿಸಬೇಕು ಎಂದು ಕೋರಿದ್ದರು. ಅರಿಜ್ ಖಾನ್ ಪರ ಹಾಜರಾಗಿದ್ದ ವಕೀಲ ಎಂ.ಎಸ್. ಖಾನ್, ಘಟನೆಯನ್ನು ಪೂರ್ವನಿಯೋಜಿತವಲ್ಲ ಎಂದು ಮರಣದಂಡನೆಯನ್ನು ವಿರೋಧಿಸಿದರು.

ಮರಣದಂಡನೆ ವಿಧಿಸಲು ಅರ್ಹವಾದ “ಅಪರೂಪದ ಪ್ರಕರಣಗಳಲ್ಲಿ ಒಂದಾಗಿದೆ” ಎಂದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಯಾದವ್ ಸೋಮವಾರ ಅರಿಜ್ ಖಾನ್‌ಗೆ ಮರಣದಂಡನೆ ವಿಧಿಸಿ, ಒಟ್ಟು 11 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ಇನ್ಸ್‌ಪೆಕ್ಟರ್ ಮೋಹನ್ ಚಂದ್ ಶರ್ಮಾ ಅವರ ಕುಟುಂಬ ಸದಸ್ಯರಿಗೆ 10  ಲಕ್ಷವನ್ನು ತಕ್ಷಣ ನೀಡಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

2013 ರಲ್ಲಿ ಆರೋಪಿ ಖಾನ್ ಜೊತೆಗೆ ಬಾಟ್ಲಾ ಹೌಸ್ ಶೂಟೌಟ್‌ನಿಂದ ತಪ್ಪಿಸಿಕೊಂಡಿದ್ದ ಶಹಜಾದ್ ಅಹ್ಮದ್ ಎಂಬಾತನನ್ನು ಶಿಕ್ಷೆಗೊಳಪಡಿಸಲಾಗಿದೆ. ಘಟನೆಯಲ್ಲಿ ಆರೋಪಿಗಳಾಗಿದ್ದ ಇಬ್ಬರು ಸಹಚರರಾದ ಅತೀಫ್ ಅಮೀನ್ ಮತ್ತು ಮೊಹಮ್ಮದ್ ಸಾಜಿದ್ ಸಾವನ್ನಪ್ಪಿದ್ದಾರೆ. ಮೂರನೆಯವನನ್ನು ಮೊಹಮ್ಮದ್ ಸೈಫ್ ಎಂಬಾತನನ್ನು ಬಂಧಿಸಲಾಗಿದೆ.

2008 ರಲ್ಲಿ ರಾಷ್ಟ್ರ ರಾಜಧಾನಿಯ ಹೊರತಾಗಿಯೂ, ಜೈಪುರ ಮತ್ತು ಅಹಮದಾಬಾದ್‌ನಂತಹ ನಗರಗಳಲ್ಲಿ ನಡೆದ ಅನೇಕ ಬಾಂಬ್ ಸ್ಫೋಟಗಳಿಗೂ ಅರಿಜ್ ಖಾನ್‌ಗೂ ಸಂಬಂಧ ಹೊಂದಿದ್ದವು. ಈ ಘಟನೆಗಳಲ್ಲಿ ಸುಮಾರು 165 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ಜೊತೆಗೆ ಅರಿಜ್ ಖಾನ್ ಮೇಲೆ 15 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.


ಇದನ್ನೂ ಓದಿ: ತಮಿಳುನಾಡು ಚುನಾವಣೆ: ನಟ ಕಮಲ್ ಹಾಸನ್ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...