Homeಚಳವಳಿಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಸೋಮವಾರ (ಮಾರ್ಚ್ 15) ಈ ದಿನವನ್ನು ಖಾಸಗೀಕರಣ ಮತ್ತು ಕಾರ್ಪೊರೇಟಿಂಗ್ ವಿರುದ್ಧದ ದಿನವೆಂದು ಗುರುತಿಸಲಾಗಿತ್ತು. ‘ಕಾರ್ಪೊರೇಟೈಸೇಶನ್ ವಿರೋಧಿ, ಖಾಸಗೀಕರಣ ವಿರೋಧಿ ದಿನಕ್ಕೆ ದೇಶಾದ್ಯಂತ ಸಾವಿರಾರು ಕಾರ್ಮಿಕರು ಮತ್ತು ರೈತ ಗುಂಪುಗಳು ಸಾಕ್ಷಿಯಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

110ನೇ ರೈತ ಹೋರಾಟದ ದಿನ ಪ್ರವೇಶಿಸಿದ ಸಂಯುಕ್ತ ಕಿಸಾನ್ ಮೋರ್ಚಾ ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರವನ್ನು ಮುಖ್ಯ ಅಂಶಗಳನ್ನಾಗಿ ಇಂದಿನ ಪ್ರತಿಭಟನೆಯಲ್ಲಿ ಪರಿಗಣಿಸಿತ್ತು. ಟ್ರೇಡ್ ಯೂನಿಯನ್ ಸದಸ್ಯರು ರೈಲ್ವೆ ನಿಲ್ದಾಣಗಳಲ್ಲಿ ಧರಣಿ ನಡೆಸುವುದರ ಜೊತೆಗೆ ತಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಎಸ್‌ಕೆಎಂ ತಿಳಿಸಿದೆ.

ಇಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 46 ನೇ ಅಧಿವೇಶನದಲ್ಲಿ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ರೈತ ಮುಖಂಡ ಡಾ.ದರ್ಶನ್ ಪಾಲ್, ರೈತರು ಪ್ರತಿಭಟಿಸುತ್ತಿರುವ ಕೇಂದ್ರದ ಮೂರು ವಿವಾದಿತ ಕಾನೂನುಗಳಿಂದ ರೈತರ ಹಕ್ಕುಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವವರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಸೋಮವಾರ, ಸುನೆಹ್ರಾ – ಜುರೇಹ್ರಾ ಗಡಿಯಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ ಅನ್ನು ಶಹೀದ್ ಹಸನ್ ಖಾನ್ ಮೇವತಿಯವರ ಹುತಾತ್ಮ ದಿನ ಎಂದು ಗುರುತಿಸಲಾಗಿದೆ. ನಡೆಯುತ್ತಿರುವ ರೈತ ಹೋರಾಟಕ್ಕೆ ಆರಂಭದಿಂದಲೇ ಮೇವಾಟ್ ಜನರ ಬೆಂಬಲವಿತ್ತು. ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ ಜನರು ಚಳವಳಿಯಲ್ಲಿ ನಿರಂತರವಾಗಿ ಪಾಲ್ಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಭಾರತದ ಆಹಾರ ನಿಗಮವು ಖಾರಿಫ್ ಮಾರ್ಕೆಟಿಂಗ್ ಸೀಸನ್ 2021 ಕ್ಕೆ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳು ಮತ್ತು ಖರೀದಿ ಮಾನದಂಡಗಳಿಗಾಗಿ ಬದಲಾದ ಮಾನದಂಡಗಳ ಬಗ್ಗೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪ್ರತಿರೋಧವನ್ನು ವ್ಯಕ್ತಪಡಿಸಿದೆ. ಈ ಮಾನದಂಡಗಳು, ಮಾರುಕಟ್ಟೆ ಖರೀದಿ ಆಡಳಿತವನ್ನು ಕೆಡವಲು ಮತ್ತು ಪಂಜಾಬ್‌ನ ರೈತರಿಗೆ ಶಿಕ್ಷೆ ವಿಧಿಸುವ ಭಾರತ ಸರ್ಕಾರದ ತಂತ್ರಗಳು ಎಂದು ಎಸ್‌ಕೆಎಂ ಆರೋಪಿಸಿದೆ.

ಹರಿಯಾಣದ ಜಖಾಲ್‌ನಲ್ಲಿ ನಡೆದ ಮಹಾಪಂಚಾಯತ್

ಇದನ್ನೂ ಓದಿ: ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ಕರ್ನಾಟಕದಲ್ಲಿ ಬಸವಕಲ್ಯಾಣದಿಂದ ಬಳ್ಳಾರಿವರೆಗೆ ನಡೆಸಲಾಗುತ್ತಿರುವ ಪಾದಯಾತ್ರೆ ಬಗ್ಗೆ ಎಸ್‌ಕೆಎಂ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಪಾದಯಾತ್ರೆಯಲ್ಲಿ ಮಾರ್ಗದಾದ್ಯಂತ ಸಿಗುವ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಸಭೆಗಳು, ಸಮಿತಿಗಳ ರಚನೆಯೊಂದಿಗೆ, ದಿನ ದಿನಕ್ಕೆ ಹೋರಾಟವು ಹೆಚ್ಚಿನ ಸ್ಥಳಗಳಿಗೆ ಹರಡುತ್ತಿದೆ ಎಂದು ಪ್ರಶಂಸಿಸಿದೆ.

ಉತ್ತರಾಖಂಡದಲ್ಲಿ ಪ್ರಾರಂಭವಾದ ಕಿಸಾನ್ ಮಜ್ದೂರ್ ಜಾಗೃತಿ ಯಾತ್ರೆ ಪಾಲಿಯಾವನ್ನು ದಾಟಿ ಈಗ ಸಂಘಾಯಿ ಗ್ರಾಮವನ್ನು ತಲುಪಿದೆ. ಈ ಯಾತ್ರೆಗೆ  ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಸೋಮವಾರ ಹರಿಯಾಣದ ಜಖಾಲ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪುರುಷರು ಮತ್ತು ಮಹಿಳಾ ರೈತರು ಸೇರಿ ಹೋರಾಟ ಯಶಸ್ವಿಗೊಳಿಸಿದ್ದಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...