Homeಚಳವಳಿಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

- Advertisement -
- Advertisement -

ಸೋಮವಾರ (ಮಾರ್ಚ್ 15) ಈ ದಿನವನ್ನು ಖಾಸಗೀಕರಣ ಮತ್ತು ಕಾರ್ಪೊರೇಟಿಂಗ್ ವಿರುದ್ಧದ ದಿನವೆಂದು ಗುರುತಿಸಲಾಗಿತ್ತು. ‘ಕಾರ್ಪೊರೇಟೈಸೇಶನ್ ವಿರೋಧಿ, ಖಾಸಗೀಕರಣ ವಿರೋಧಿ ದಿನಕ್ಕೆ ದೇಶಾದ್ಯಂತ ಸಾವಿರಾರು ಕಾರ್ಮಿಕರು ಮತ್ತು ರೈತ ಗುಂಪುಗಳು ಸಾಕ್ಷಿಯಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

110ನೇ ರೈತ ಹೋರಾಟದ ದಿನ ಪ್ರವೇಶಿಸಿದ ಸಂಯುಕ್ತ ಕಿಸಾನ್ ಮೋರ್ಚಾ ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರವನ್ನು ಮುಖ್ಯ ಅಂಶಗಳನ್ನಾಗಿ ಇಂದಿನ ಪ್ರತಿಭಟನೆಯಲ್ಲಿ ಪರಿಗಣಿಸಿತ್ತು. ಟ್ರೇಡ್ ಯೂನಿಯನ್ ಸದಸ್ಯರು ರೈಲ್ವೆ ನಿಲ್ದಾಣಗಳಲ್ಲಿ ಧರಣಿ ನಡೆಸುವುದರ ಜೊತೆಗೆ ತಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಎಸ್‌ಕೆಎಂ ತಿಳಿಸಿದೆ.

ಇಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 46 ನೇ ಅಧಿವೇಶನದಲ್ಲಿ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ರೈತ ಮುಖಂಡ ಡಾ.ದರ್ಶನ್ ಪಾಲ್, ರೈತರು ಪ್ರತಿಭಟಿಸುತ್ತಿರುವ ಕೇಂದ್ರದ ಮೂರು ವಿವಾದಿತ ಕಾನೂನುಗಳಿಂದ ರೈತರ ಹಕ್ಕುಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವವರ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ: ಹರಿಯಾಣದ ಎಲ್ಲಾ ಬಿಜೆಪಿ, ಜೆಜೆಪಿ ಮುಖಂಡರ ಸಾಮಾಜಿಕ ಬಹಿಷ್ಕಾರಕ್ಕೆ ರೈತರ ನಿರ್ಧಾರ

ಸೋಮವಾರ, ಸುನೆಹ್ರಾ – ಜುರೇಹ್ರಾ ಗಡಿಯಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ ಅನ್ನು ಶಹೀದ್ ಹಸನ್ ಖಾನ್ ಮೇವತಿಯವರ ಹುತಾತ್ಮ ದಿನ ಎಂದು ಗುರುತಿಸಲಾಗಿದೆ. ನಡೆಯುತ್ತಿರುವ ರೈತ ಹೋರಾಟಕ್ಕೆ ಆರಂಭದಿಂದಲೇ ಮೇವಾಟ್ ಜನರ ಬೆಂಬಲವಿತ್ತು. ಮಹಾಪಂಚಾಯತ್‌ನಲ್ಲಿ ಭಾಗವಹಿಸಿದ ಜನರು ಚಳವಳಿಯಲ್ಲಿ ನಿರಂತರವಾಗಿ ಪಾಲ್ಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ ಎಂದು ತಿಳಿಸಲಾಗಿದೆ.

ಭಾರತದ ಆಹಾರ ನಿಗಮವು ಖಾರಿಫ್ ಮಾರ್ಕೆಟಿಂಗ್ ಸೀಸನ್ 2021 ಕ್ಕೆ ನಿಗದಿಪಡಿಸಿರುವ ಗುಣಮಟ್ಟದ ಮಾನದಂಡಗಳು ಮತ್ತು ಖರೀದಿ ಮಾನದಂಡಗಳಿಗಾಗಿ ಬದಲಾದ ಮಾನದಂಡಗಳ ಬಗ್ಗೆ ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಪ್ರತಿರೋಧವನ್ನು ವ್ಯಕ್ತಪಡಿಸಿದೆ. ಈ ಮಾನದಂಡಗಳು, ಮಾರುಕಟ್ಟೆ ಖರೀದಿ ಆಡಳಿತವನ್ನು ಕೆಡವಲು ಮತ್ತು ಪಂಜಾಬ್‌ನ ರೈತರಿಗೆ ಶಿಕ್ಷೆ ವಿಧಿಸುವ ಭಾರತ ಸರ್ಕಾರದ ತಂತ್ರಗಳು ಎಂದು ಎಸ್‌ಕೆಎಂ ಆರೋಪಿಸಿದೆ.

ಹರಿಯಾಣದ ಜಖಾಲ್‌ನಲ್ಲಿ ನಡೆದ ಮಹಾಪಂಚಾಯತ್

ಇದನ್ನೂ ಓದಿ: ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ಕರ್ನಾಟಕದಲ್ಲಿ ಬಸವಕಲ್ಯಾಣದಿಂದ ಬಳ್ಳಾರಿವರೆಗೆ ನಡೆಸಲಾಗುತ್ತಿರುವ ಪಾದಯಾತ್ರೆ ಬಗ್ಗೆ ಎಸ್‌ಕೆಎಂ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಪಾದಯಾತ್ರೆಯಲ್ಲಿ ಮಾರ್ಗದಾದ್ಯಂತ ಸಿಗುವ ಗ್ರಾಮಗಳಲ್ಲಿ ಗ್ರಾಮ ಮಟ್ಟದ ಸಭೆಗಳು, ಸಮಿತಿಗಳ ರಚನೆಯೊಂದಿಗೆ, ದಿನ ದಿನಕ್ಕೆ ಹೋರಾಟವು ಹೆಚ್ಚಿನ ಸ್ಥಳಗಳಿಗೆ ಹರಡುತ್ತಿದೆ ಎಂದು ಪ್ರಶಂಸಿಸಿದೆ.

ಉತ್ತರಾಖಂಡದಲ್ಲಿ ಪ್ರಾರಂಭವಾದ ಕಿಸಾನ್ ಮಜ್ದೂರ್ ಜಾಗೃತಿ ಯಾತ್ರೆ ಪಾಲಿಯಾವನ್ನು ದಾಟಿ ಈಗ ಸಂಘಾಯಿ ಗ್ರಾಮವನ್ನು ತಲುಪಿದೆ. ಈ ಯಾತ್ರೆಗೆ  ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಸೋಮವಾರ ಹರಿಯಾಣದ ಜಖಾಲ್‌ನಲ್ಲಿ ನಡೆದ ಕಿಸಾನ್ ಮಹಾಪಂಚಾಯತ್‌ನಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪುರುಷರು ಮತ್ತು ಮಹಿಳಾ ರೈತರು ಸೇರಿ ಹೋರಾಟ ಯಶಸ್ವಿಗೊಳಿಸಿದ್ದಾರೆ ಎಂದು ತಿಳಿಸಲಾಗಿದೆ.


ಇದನ್ನೂ ಓದಿ: ಮೋದಿ ಸರ್ಕಾರದ ಅವಧಿ ಮುಗಿಯುವವರೆಗೂ ರೈತ ಹೋರಾಟ ಮುಂದುವರಿಯಲಿದೆ: ನರೇಂದ್ರ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...