Homeಕರ್ನಾಟಕಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ - ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

- Advertisement -
- Advertisement -

ಕೊಪ್ಪಳದ ಹಿರೇಬಗನಾಳ ಸುತ್ತ ಮುತ್ತಲಿನ ಗ್ರಾಮಗಳಿಗೆ ಹತ್ತಿರದ ಕಾರ್ಖಾನೆಗಳಿಂದ ಭಾರೀ ಸಂಕಷ್ಟ ಬಂದೊದಗಿದೆ. ಕಾರ್ಖಾನೆಗಳ ಹಾರುಬೂದಿ ಮತ್ತು ತ್ಯಾಜ್ಯದಿಂದ ಸುತ್ತಲಿನ ಪರಿಸರ ತೀವ್ರರೀತಿಯಲ್ಲಿ ಕಲುಷಿತಗೊಂಡಿದ್ದು ಜನ – ಜಾನುವಾರಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದರೆ ಕಾರ್ಖಾನೆಗಳ ಆಡಳಿತ ಮಂಡಳಿಯಾಗಲಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲದ್ದರಿಂದ ಅಲ್ಲಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರೇಬಗನಾಳದಲ್ಲಿ ಹರೇಕೃಷ್ಣ ಮೆಟಲಿಕ್ಸ್ ಪ್ರೈ.ಲಿ ಎಂಬ ಸ್ಟೀಲ್ ಕಂಪನಿಯಿದ್ದು ಅದು ಬಳಸುವ ಕಲ್ಲಿದ್ದಲು ಮತ್ತಿತರ ಉರುವಲುಗಳಿಂದ ಪ್ರತಿನಿತ್ಯ ದೊಡ್ಡ ಪ್ರಮಾಣದ ಹಾರುಬೂದಿ ಸುತ್ತಮುತ್ತಲಿನ ಪ್ರದೇಶಗಳನ್ನು ಕಲುಷಿತಗೊಳಿಸಿದೆ. ಹಾರುಬೂದಿಯ ದಾಳಿಗೆ ಸಂಪೂರ್ಣ ಬೆಳೆ ನಾಶವಾಗುತ್ತಿದ್ದು, ಜಾನುವಾರುಗಳ ಸಹ ಮೇವು ತಿನ್ನುತ್ತಿಲ್ಲ. ಮನುಷ್ಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು ವಾಂತಿ-ಬೇಧಿಯಂತಹ ಕಾಯಿಲೆಗಳು ಸಾಮಾನ್ಯವಾಗಿವೆ ಎಂದು ರೈತರು ದೂರಿದ್ದಾರೆ.

 

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಸಂತ್ರಸ್ತ ರೈತ ಹನುಮಂತ ಕಡ್ಲಿ “ನಮ್ಮದು ಮತ್ತು ನಮ್ಮ ಸಂಬಂಧಿಕರ ಸುಮಾರು 16 ಎಕರೆ ಜಮೀನಿನ ಪಕ್ಕದಲ್ಲೇ ಈ ಕಾರ್ಖಾನೆ ಇದೆ. ಕಾರ್ಖಾನೆಯ ಹಾರುಬೂದಿ ಮತ್ತು ತ್ಯಾಜ್ಯಗಳಿಂದ ಕಳೆದ 10-12 ವರ್ಷಗಳಿಂದ ನಾವು ಸಮರ್ಪಕವಾಗಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಪ್ರತಿ ವರ್ಷವೂ ನಾವು ಬೆಳೆಯುವ ಸೀಬೆಕಾಯಿ, ಮೆಕ್ಕೆಜೋಳ ಹಾಳಾಗುತ್ತಿದೆ. ಈ ಕುರಿತು 5 ವರ್ಷದ ಹಿಂದೆಯೇ ಲೋಕಾಯುಕ್ತರಲ್ಲಿ ದೂರು ಸಲ್ಲಿಸಿದ್ದೇವೆ” ಎನ್ನುತ್ತಾರೆ.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ, ತೋಟಗಾರಿಗೆ ಇಲಾಖೆ ಮತ್ತು ಹಲವು ವೈದ್ಯರು ಮತ್ತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಹಾರುಬೂದಿಯಿಂದಾಗುತ್ತಿರುವ ಅಪಾಯಗಳ ಕುರಿತು ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ಕಾರ್ಖಾನೆಯು ಪರಿಸರ ಸಂರಕ್ಷಣೆಯ ನಿಯಮಗಳನ್ನು ಮೀರಿರುವುದು ಈ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. ಈ ಸಮಯದಲ್ಲಿ ಲೋಕಾಯುಕ್ತ ನೋಟಿಸ್‌ಗೆ ಪ್ರತಿಕ್ರಿಯಿಸಿದ ಕಾರ್ಖಾನೆಯು 16 ಎಕರೆಗೆ 12 ಲಕ್ಷದಂತೆ 2017ರಿಂದ ಬೆಳೆನಷ್ಟ ಪರಿಹಾರ ಕೊಡುವುದಾಗಿ ಹೇಳಿ ಕಾರ್ಖಾನೆ ಮುಚ್ಚಿಹೋಗುವುದಿರಿಂದ ತಪ್ಪಿಸಿಕೊಂಡಿತು. ಆದರೆ ಅದರ ದುಷ್ಪರಿಣಾಮಗಳು ಮಾತ್ರ ದಿನೇ ದಿನೇ ಹೆಚ್ಚಾಗುತ್ತಿವೆ ಎಂದು ಹನುಮಂತ ಕಡ್ಲಿ ದೂರಿದ್ದಾರೆ.

ಪ್ರತಿನಿತ್ಯ ನಮ್ಮ ಮೇಲೆ ಧೂಳು ಬೀಳುತ್ತಿದ್ದು, ಗಾಳಿ-ನೀರಿನೊಂದಿಗೆ ದೇಹ ಸೇರುತ್ತಿದೆ. ಸುಸ್ತು-ವಾಂತಿ-ಬೇಧಿಯಂತಹ ರೋಗಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಜಾನುವಾರು ಮೇವು ತಿನ್ನುತ್ತಿಲ್ಲ. ಬೆಲೆಗಳೆಲ್ಲ ನಾಶವಾಗುತ್ತಿದೆ. ಹಾಗಾಗಿ ನಮಗೆ ಕಾರ್ಖಾನೆಯ ಯಾವುದೇ ಪರಿಹಾರ ಹಣ ಬೇಡ. ನಮಗೆ ಶಾಶ್ವತ ಪರಿಹಾರ ಬೇಕಾಗಿದೆ. ಕಾರ್ಖಾನೆಯು ಹಾರುಬೂದಿ ಹರಡುವುದನ್ನು ತಡೆಗಟ್ಟಬೇಕು. ಸಾಧ್ಯವಾಗದಿದ್ದರೆ ನಮಗೆ ಬೇರೆ ಕಡೆ ಜಮೀನು ನೀಡಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಯನ್ನು ಮುಚ್ಚಬೇಕು. ಇದಕ್ಕೆ ಲೋಕಾಯುಕ್ತ ನ್ಯಾಯಾಲಯವು ಸಹಮತ ವ್ಯಕ್ತಪಡಿಸಿದೆ. ಆದರೆ ಜಿಲ್ಲಾಧಿಕಾರಿಗಳು ಪಟ್ಟು ಹಿಡಿದು ಜಾರಿಗೊಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆಗಾಗಿ ಕೊಪ್ಪಳ ಜಿಲ್ಲಾಧಿಕಾರಿ ಸುರಲ್ಕರ್ ವಿಕಾಸ್ ಕಿಶೋರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...