Homeಕರ್ನಾಟಕಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ - ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

- Advertisement -
- Advertisement -

ಕೊಪ್ಪಳದ ಹಿರೇಬಗನಾಳ ಸುತ್ತ ಮುತ್ತಲಿನ ಗ್ರಾಮಗಳಿಗೆ ಹತ್ತಿರದ ಕಾರ್ಖಾನೆಗಳಿಂದ ಭಾರೀ ಸಂಕಷ್ಟ ಬಂದೊದಗಿದೆ. ಕಾರ್ಖಾನೆಗಳ ಹಾರುಬೂದಿ ಮತ್ತು ತ್ಯಾಜ್ಯದಿಂದ ಸುತ್ತಲಿನ ಪರಿಸರ ತೀವ್ರರೀತಿಯಲ್ಲಿ ಕಲುಷಿತಗೊಂಡಿದ್ದು ಜನ – ಜಾನುವಾರಗಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆದರೆ ಕಾರ್ಖಾನೆಗಳ ಆಡಳಿತ ಮಂಡಳಿಯಾಗಲಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಾಗಲಿ ತಲೆಕೆಡಿಸಿಕೊಂಡಿಲ್ಲದ್ದರಿಂದ ಅಲ್ಲಿನ ಜನತೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರೇಬಗನಾಳದಲ್ಲಿ ಹರೇಕೃಷ್ಣ ಮೆಟಲಿಕ್ಸ್ ಪ್ರೈ.ಲಿ ಎಂಬ ಸ್ಟೀಲ್ ಕಂಪನಿಯಿದ್ದು ಅದು ಬಳಸುವ ಕಲ್ಲಿದ್ದಲು ಮತ್ತಿತರ ಉರುವಲುಗಳಿಂದ ಪ್ರತಿನಿತ್ಯ ದೊಡ್ಡ ಪ್ರಮಾಣದ ಹಾರುಬೂದಿ ಸುತ್ತಮುತ್ತಲಿನ ಪ್ರದೇಶಗಳನ್ನು ಕಲುಷಿತಗೊಳಿಸಿದೆ. ಹಾರುಬೂದಿಯ ದಾಳಿಗೆ ಸಂಪೂರ್ಣ ಬೆಳೆ ನಾಶವಾಗುತ್ತಿದ್ದು, ಜಾನುವಾರುಗಳ ಸಹ ಮೇವು ತಿನ್ನುತ್ತಿಲ್ಲ. ಮನುಷ್ಯರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದ್ದು ವಾಂತಿ-ಬೇಧಿಯಂತಹ ಕಾಯಿಲೆಗಳು ಸಾಮಾನ್ಯವಾಗಿವೆ ಎಂದು ರೈತರು ದೂರಿದ್ದಾರೆ.

 

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಸಂತ್ರಸ್ತ ರೈತ ಹನುಮಂತ ಕಡ್ಲಿ “ನಮ್ಮದು ಮತ್ತು ನಮ್ಮ ಸಂಬಂಧಿಕರ ಸುಮಾರು 16 ಎಕರೆ ಜಮೀನಿನ ಪಕ್ಕದಲ್ಲೇ ಈ ಕಾರ್ಖಾನೆ ಇದೆ. ಕಾರ್ಖಾನೆಯ ಹಾರುಬೂದಿ ಮತ್ತು ತ್ಯಾಜ್ಯಗಳಿಂದ ಕಳೆದ 10-12 ವರ್ಷಗಳಿಂದ ನಾವು ಸಮರ್ಪಕವಾಗಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಪ್ರತಿ ವರ್ಷವೂ ನಾವು ಬೆಳೆಯುವ ಸೀಬೆಕಾಯಿ, ಮೆಕ್ಕೆಜೋಳ ಹಾಳಾಗುತ್ತಿದೆ. ಈ ಕುರಿತು 5 ವರ್ಷದ ಹಿಂದೆಯೇ ಲೋಕಾಯುಕ್ತರಲ್ಲಿ ದೂರು ಸಲ್ಲಿಸಿದ್ದೇವೆ” ಎನ್ನುತ್ತಾರೆ.

ಆರೋಗ್ಯ ಇಲಾಖೆ, ಕೃಷಿ ಇಲಾಖೆ, ಪಶುಸಂಗೋಪನಾ ಇಲಾಖೆ, ತೋಟಗಾರಿಗೆ ಇಲಾಖೆ ಮತ್ತು ಹಲವು ವೈದ್ಯರು ಮತ್ತು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಹಾರುಬೂದಿಯಿಂದಾಗುತ್ತಿರುವ ಅಪಾಯಗಳ ಕುರಿತು ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದಾರೆ. ಕಾರ್ಖಾನೆಯು ಪರಿಸರ ಸಂರಕ್ಷಣೆಯ ನಿಯಮಗಳನ್ನು ಮೀರಿರುವುದು ಈ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. ಈ ಸಮಯದಲ್ಲಿ ಲೋಕಾಯುಕ್ತ ನೋಟಿಸ್‌ಗೆ ಪ್ರತಿಕ್ರಿಯಿಸಿದ ಕಾರ್ಖಾನೆಯು 16 ಎಕರೆಗೆ 12 ಲಕ್ಷದಂತೆ 2017ರಿಂದ ಬೆಳೆನಷ್ಟ ಪರಿಹಾರ ಕೊಡುವುದಾಗಿ ಹೇಳಿ ಕಾರ್ಖಾನೆ ಮುಚ್ಚಿಹೋಗುವುದಿರಿಂದ ತಪ್ಪಿಸಿಕೊಂಡಿತು. ಆದರೆ ಅದರ ದುಷ್ಪರಿಣಾಮಗಳು ಮಾತ್ರ ದಿನೇ ದಿನೇ ಹೆಚ್ಚಾಗುತ್ತಿವೆ ಎಂದು ಹನುಮಂತ ಕಡ್ಲಿ ದೂರಿದ್ದಾರೆ.

ಪ್ರತಿನಿತ್ಯ ನಮ್ಮ ಮೇಲೆ ಧೂಳು ಬೀಳುತ್ತಿದ್ದು, ಗಾಳಿ-ನೀರಿನೊಂದಿಗೆ ದೇಹ ಸೇರುತ್ತಿದೆ. ಸುಸ್ತು-ವಾಂತಿ-ಬೇಧಿಯಂತಹ ರೋಗಗಳು ಕಾಣಿಸಿಕೊಳ್ಳುತ್ತಿವೆ. ನಮ್ಮ ಜಾನುವಾರು ಮೇವು ತಿನ್ನುತ್ತಿಲ್ಲ. ಬೆಲೆಗಳೆಲ್ಲ ನಾಶವಾಗುತ್ತಿದೆ. ಹಾಗಾಗಿ ನಮಗೆ ಕಾರ್ಖಾನೆಯ ಯಾವುದೇ ಪರಿಹಾರ ಹಣ ಬೇಡ. ನಮಗೆ ಶಾಶ್ವತ ಪರಿಹಾರ ಬೇಕಾಗಿದೆ. ಕಾರ್ಖಾನೆಯು ಹಾರುಬೂದಿ ಹರಡುವುದನ್ನು ತಡೆಗಟ್ಟಬೇಕು. ಸಾಧ್ಯವಾಗದಿದ್ದರೆ ನಮಗೆ ಬೇರೆ ಕಡೆ ಜಮೀನು ನೀಡಬೇಕು. ಇಲ್ಲದಿದ್ದಲ್ಲಿ ಕಾರ್ಖಾನೆಯನ್ನು ಮುಚ್ಚಬೇಕು. ಇದಕ್ಕೆ ಲೋಕಾಯುಕ್ತ ನ್ಯಾಯಾಲಯವು ಸಹಮತ ವ್ಯಕ್ತಪಡಿಸಿದೆ. ಆದರೆ ಜಿಲ್ಲಾಧಿಕಾರಿಗಳು ಪಟ್ಟು ಹಿಡಿದು ಜಾರಿಗೊಳಿಸುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆಗಾಗಿ ಕೊಪ್ಪಳ ಜಿಲ್ಲಾಧಿಕಾರಿ ಸುರಲ್ಕರ್ ವಿಕಾಸ್ ಕಿಶೋರ್‌ರವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ ಅವರು ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ. ಅವರ ಪ್ರತಿಕ್ರಿಯೆ ಸಿಕ್ಕ ನಂತರ ಈ ವರದಿಯನ್ನು ಅಪ್‌ಡೇಟ್‌ ಮಾಡಲಾಗುವುದು.


ಇದನ್ನೂ ಓದಿ: ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...