Homeಅಂತರಾಷ್ಟ್ರೀಯವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ವಿಶ್ವದ 30 ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ಸ್ವಿಸ್ ಸಂಸ್ಥೆ ವರದಿ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯ, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ

- Advertisement -
- Advertisement -

ವಿಶ್ವದ 30 ಅತಿ ಹೆಚ್ಚು ಕಲುಷಿತ ನಗರಗಳಲ್ಲಿ ಇಪ್ಪತ್ತೆರಡು ನಗರಗಳು ಭಾರತದಲ್ಲಿದ್ದು, ರಾಷ್ಟ್ರ ರಾಜಧಾನಿ ದೆಹಲಿಯು ಜಾಗತಿಕವಾಗಿ ಹೆಚ್ಚು ಕಲುಷಿತ ರಾಜಧಾನಿಯಾಗಿ ಮೊದಲ ಸ್ಥಾನ ಪಡೆದಿದೆ ಎಂದು ಸ್ವಿಸ್ ಸಂಸ್ಥೆ ಐಕ್ಯೂಏರ್ ಹೊಸ ವರದಿ ತಿಳಿಸಿದೆ.

ಮಂಗಳವಾರ ಜಾಗತಿಕವಾಗಿ ಬಿಡುಗಡೆಯಾದ ‘ವಿಶ್ವ ವಾಯು ಗುಣಮಟ್ಟ ವರದಿ- 2020’ ಅನ್ನು ಸ್ವಿಸ್ ಸಂಸ್ಥೆ ಐಕ್ಯೂಏರ್ ಈ ವರದಿಯನ್ನು ಸಿದ್ಧಪಡಿಸಿದೆ.

2019 ರಿಂದ 2020 ರವರೆಗೆ ದೆಹಲಿಯ ವಾಯು ಗುಣಮಟ್ಟವು ಶೇಕಡಾ 15 ರಷ್ಟು ಸುಧಾರಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ, ಸುಧಾರಣೆಯ ಹೊರತಾಗಿಯೂ, ದೆಹಲಿ ಕಲುಷಿತಗೊಂಡಿರುವ ನಗರಗಳಲ್ಲಿ 10 ನೇ ಸ್ಥಾನ ಮತ್ತು ವಿಶ್ವದ ಕಲುಷಿತ ರಾಜಧಾನಿಗಳಲ್ಲಿ ಮೊದಲ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

“ಭಾರತವು ಹೆಚ್ಚು ಕಲುಷಿತ ನಗರಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜಾಗತಿಕವಾಗಿ ಪಟ್ಟಿ ಮಾಡಲಾಗಿರುವ 30 ಕಲುಷಿತ ನಗರಗಳಲ್ಲಿ 22 ನಗರಗಳು ಭಾರತದಲ್ಲಿವೆ” ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಕೊಪ್ಪಳ: ಹಾರುಬೂದಿಗೆ ಕಂಗೆಟ್ಟ ಜನ – ತಲೆ ಕೆಡಿಸಿಕೊಳ್ಳದ ಅಧಿಕಾರಿಗಳು

ದೆಹಲಿಯಲ್ಲದೆ, ವಿಶ್ವದ ಅತಿ ಹೆಚ್ಚು ಕಲುಷಿತವಾದ 30 ನಗರಗಳಲ್ಲಿ 21 ಇತರ ನಗರಗಳು ಹೀಗಿವೆ.

1. ಗಾಜಿಯಾಬಾದ್  (ಉತ್ತರಪ್ರದೇಶ)                         2.ಬುಲಂದ್‌ಶಹರ್(ಉತ್ತರಪ್ರದೇಶ)

3. ಬಿಸ್ರಖ್ ಜಲಾಲ್‌ಪುರ್(ಉತ್ತರಪ್ರದೇಶ)                  4. ನೋಯ್ಡಾ(ಉತ್ತರಪ್ರದೇಶ)

5. ಗ್ರೇಟರ್ ನೋಯ್ಡಾ (ಉತ್ತರಪ್ರದೇಶ)                      6. ಕಾನ್ಪುರ್(ಉತ್ತರಪ್ರದೇಶ)

7. ಲಕ್ನೋ (ಉತ್ತರಪ್ರದೇಶ)                                   8. ಮೀರತ್ (ಉತ್ತರಪ್ರದೇಶ)

9. ಆಗ್ರಾ (ಉತ್ತರಪ್ರದೇಶ)                                      10. ಮುಜಫರ್‌ನಗರ (ಉತ್ತರಪ್ರದೇಶ)

11. ಭೀವಾರಿ (ರಾಜಸ್ಥಾನ)                                      12. ಜಿಂದ್ (ರಾಜಸ್ಥಾನ)

13. ಹಿಸಾರ್  (ಹರಿಯಾಣ)                                   14.ಫತೇಹಾಬಾದ್ (ಹರಿಯಾಣ)

15. ಬಾಂಧ್ವಾರಿ (ಹರಿಯಾಣ)                                 16. ಗುರುಗ್ರಾಮ್ (ಹರಿಯಾಣ)

17. ಯಮುನಾ ನಗರ (ಹರಿಯಾಣ)                          18. ರೋಹ್ಟಕ್ (ಹರಿಯಾಣ)

19 ಧರೂಹೆರಾ (ಹರಿಯಾಣ)                                 20. ಫಿರಿದಾಬಾದ್ (ಹರಿಯಾಣ)

21. ಮುಜಾಫುರ್‌ಪುರ್‌ (ಬಿಹಾರ)

ಈ ವರದಿಯ ಪ್ರಕಾರ, ಚೀನಾದ ಕ್ಸಿನ್‌ಜಿಯಾಂಗ್ ಹೆಚ್ಚು ಕಲುಷಿತವಾದ ನಗರವಾಗಿದೆ. ನಂತರದ ಒಂಬತ್ತು ಸ್ಥಾನಗಳಲ್ಲಿ ಭಾರತದ ನಗರಗಳಿವೆ. ಗಾಜಿಯಾಬಾದ್ ವಿಶ್ವದ ಎರಡನೇ ಅತಿ ಹೆಚ್ಚು ಕಲುಷಿತ ನಗರವಾಗಿದ್ದು, ಬುಲಂದ್‌ಶಹರ್, ಬಿಸ್ರಖ್ ಜಲಾಲ್‌ಪುರ, ನೋಯ್ಡಾ, ಗ್ರೇಟರ್ ನೋಯ್ಡಾ, ಕಾನ್ಪುರ್, ಲಕ್ನೋ ಮತ್ತು ಭೀವಾರಿ ನಂತರದ ಸ್ಥಾನದಲ್ಲಿವೆ.

ಜಾಗತಿಕ ನಗರಗಳ ಶ್ರೇಯಾಂಕ ವರದಿಯು 106 ದೇಶಗಳ PM2.5 ದತ್ತಾಂಶವನ್ನು ಆಧರಿಸಿದೆ. ಇದನ್ನು ಸರ್ಕಾರಿ ಸಂಸ್ಥೆಗಳಿಂದ ನಿರ್ವಹಿಸಲ್ಪಡುವ ಭೂ-ಆಧಾರಿತ ಮೇಲ್ವಿಚಾರಣಾ ಕೇಂದ್ರಗಳು ಮಾಪನ ಮಾಡುತ್ತವೆ.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರಗಳಿಗೆ ಸ್ಪಷ್ಟತೆಯಾಗಲೀ, ಇಚ್ಛಾಶಕ್ತಿಯಾಗಲೀ ಇಲ್ಲ; ಸಿದ್ದರಾಮಯ್ಯ

ಸಾರಿಗೆ ವ್ಯವಸ್ಥೆ, ಅಡುಗೆಗಾಗಿ ಕಟ್ಟಿಗೆ, ಬೆರಣಿಗಳ ಬಳಕೆ, ವಿದ್ಯುತ್ ಉತ್ಪಾದನೆ, ಕೈಗಾರಿಕೆ, ನಿರ್ಮಾಣ ಕಾರ್ಯಗಳು, ತ್ಯಾಜ್ಯ ಸುಡುವಿಕೆ ಮತ್ತು ಕೃಷಿ ತ್ಯಾಜ್ಯ ಸುಡುವಿಕೆಗಳು ಭಾರತದ ವಾಯುಮಾಲಿನ್ಯದ ಪ್ರಮುಖ ಮೂಲಗಳಾಗಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಭಾರತದ ನಗರಗಳಾದ್ಯಂತ ಸಾರಿಗೆ ಕ್ಷೇತ್ರವು ಪಿಎಂ 2.5 ಹೊರಸೂಸುವಿಕೆ ಮೂಲಗಳಿಗೆ ಪ್ರಮುಖ ಕಾರಣವಾಗಿದೆ” ಎಂದು ವರದಿ ತಿಳಿಸಿದೆ.

ಸರ್ಕಾರಗಳು ಸುಸ್ಥಿರ ಮತ್ತು ಶುದ್ಧ ಇಂಧನ ಮೂಲಗಳಿಗೆ ಆದ್ಯತೆ ನೀಡುವುದು ಈಗೀನ ಪರಿಸ್ಥಿತಿಗೆ ಸೂಕ್ತವಾಗಿದೆ, ಜೊತೆಗೆ ನಗರಗಳಲ್ಲಿ ಜನರು ಹೆಚ್ಚಾಗಿ ವಾಕಿಂಗ್, ಸೈಕ್ಲಿಂಗ್ ಮತ್ತು ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.


ಇದನ್ನೂ ಓದಿ: ಪಕ್ಷಾಂತರಿಗಳಿಗೆ ಟಿಕೆಟ್: ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ರಾಜ್ಯದಾದ್ಯಂತ ಭಾರಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...