Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...