Homeಕರ್ನಾಟಕಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ....?

ಲಿಂಗಾಯತ ಮತಗಳಿಗಾಗಿ ಗುದಮುರಗಿ: ಪಂಚಮಸಾಲಿಗಳು ಪಾರ್ಟಿ ಬದಲಿಸಿದರೆ….?

- Advertisement -
- Advertisement -

| ಪಿ.ಕೆ ಮಲ್ಲನಗೌಡರ್ |

ಒಂದು ಸಮುದಾಯ ಅದರಲ್ಲೂ ಉಪ ಸಮುದಾಯ ಸುಲಭಕ್ಕೆ ಇಡೀಯಾಗಿ ಪಕ್ಷನಿಷ್ಠೆ ಬದಲಿಸಿವುದು ಅಪರೂಪ. ಅದರ ಎದುರು ಒಪ್ಪಿತವಾಗುವ ವಾದಗಳು ಅಥವಾ ‘ತಮ್ಮದು ಎಂಬ ಭಾವ ಮೂಡಬೇಕಷ್ಟೇ. 2ನೇ ಹಂತದ ಚುನಾವಣೆ ನಡೆಯುತ್ತಿರುವ ಉತ್ತರ ಕರ್ನಾಟಕದಲ್ಲಿ ಈ ಸಲ ಪಂಚಮಸಾಲಿಗಳು ಒಂದು ಸಮುದಾವಾಗಿ ಯಾರ ಕಡೆ ಒಲವು ಹೊಂದಿದ್ದಾರೆ ಎಂಬುದನ್ನು ಗೆರೆ ಕೊರೆದು ಹೇಳಲಾಗದು. ಆದರೆ, ಸುಮಾರು 15 ವರ್ಷಗಳ ಕಾಲ ಬಿಜೆಪಿ ಬೆಂಬಲಿಗರು ಎಂದೇ ಗುರುತಿಸಲ್ಪಟ್ಟಿದ್ದ ಪಂಸಮಸಾಲಿ ಲಿಂಗಾಯತರು ಈ ಸಲ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆಯೇ ಎಂಬ ವಾತವಾರಣ ಉತ್ತರ ಕರ್ನಾಟಕ ಭಾಗದಲ್ಲಿ ಕಂಡುಬರುತ್ತಿದೆ.

ಮುಂಬೈ ಕರ್ನಾಟಕದಲ್ಲಿ ಸದ್ಯ ನಡೆಯುತ್ತಿರುವ ಹಲವು ಬೆಳವಣಿಗೆಗಳು ಇದಕ್ಕೆ ಸಾಕ್ಷಿ. ನಿನ್ನೆ ಶನಿವಾರ ಹುಬ್ಬಳ್ಳಿಯಲ್ಲಿ ಧಾರವಾಡ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬಿಜೆಪಿಯ ಶಾಸಕರು ಮತ್ತು ಮಾಜಿ ಶಾಸಕರು ಪತ್ರಿಕಾಗೋಷ್ಠಿ ನಡೆಸಿ, ಲಿಂಗಾಯತರು ಎಂದಿನಂತೆ ಪ್ರಹ್ಲಾದ ಜೋಶಿಯವರಿಗೇ ಬೆಂಬಲಿಸಬೇಕು…. ಈ ಹಿಂದೆ ಸಮಾಜ ಒಡೆಯಲು ಯತ್ನಿಸಿದ್ದ ವಿನಯ ಕುಲಕರ್ಣಿ ಈಗ ಸಮಾಜದ ಹೆಸರಲ್ಲಿ ಮತ ಬೇಡುತ್ತಿರುವುದು ಖಂಡನೀಯ’ ಎಂದು ಮಾತಾಡಿದ್ದಾರೆ.

ಹೌದು ವಿನಯ್ ಲಿಂಗಾಯತ/ವೀರಶೈವ ಮುಖಂಡರ ಸಭೆಗಳನ್ನು ನಡೆಸಿ, ಲಿಂಗಾಯತರು ಒಂದಾಗಿ ತಮಗೆ ಬೆಂಬಲಿಸಬೇಕು ಎಂದು ಒಲವು ಗಳಿಸುತ್ತಿದ್ದಾರೆ. ಬಹಿರಂಗ ಸಭೆಗಳಲ್ಲೂ ಅವರು, ‘8 ಲಿಂಗಾಯಿತ ಸಂಸದರಿದ್ದರೂ ಒಬ್ಬರಿಗೂ ಬಿಜೆಪಿ ಕೇಂದ್ರ ಸಚಿವ ಸ್ಥಾನ ನೀಡಲಿಲ್ಲ. ಮೂವರು ಬ್ರಾಹ್ಮಣ ಸಂಸದರ ಪೈಕಿ ಇಬ್ಬರಿಗೆ ಸಚಿವ ಸ್ಥಾನ ಮಾಡಿ, ಲಿಂಗಾಯತ ಸಮುದಾಯವನ್ನು ಅವಮಾನಿಸಿದ್ದಾರೆ… ಬಿಜೆಪಿಗೆ ನಿಜಕ್ಕೂ ಲಿಂಗಾಯತ ಸಮಾಜದ ಮೇಲೆ ಗೌರವವಿದ್ದರೆ, ನಾಗಪುರದ ಆರೆಸ್ಸೆಸ್ ಕಚೇರಿಯಲ್ಲಿ ಬಸವಣ್ಣನ ಭಾವಚಿತ್ರ ಹಾಕಲಿ’ ಎಂದು ಸವಾಲು ಎಸೆಯುತ್ತಿದ್ದಾರೆ. ಇನ್ನೊಂದು ಕಡೆ, ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸುಮಾರು 15 ಅದ್ವೈತ ಮಠಾಧೀಶರು ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಬಹಿರಂಗ ಹೇಳಿಕೆ ನೀಡಿದ್ದಾರೆ.

ಮುಂಬೈ ಕರ್ನಾಟಕ ವ್ಯಾಪ್ತಿಯಲ್ಲಿ ಒಟ್ಟು 6 ಕ್ಷೇತ್ರಗಳಿದ್ದು ಐದು ಸಾಮಾನ್ಯ ಕ್ಷೇತ್ರಗಳಲ್ಲಿ ನಾಲ್ಕರಲ್ಲಿ ಕಾಂಗ್ರೆಸ್ ಪಂಚಮಸಾಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ-ಸಾಧುನವರ್, ಚಿಕ್ಕೋಡಿ-ಪ್ರಕಾಶ ಹುಕ್ಕೇರಿ, ಧಾರವಾಡ-ವಿನಯ್ ಕುಲಕರ್ಣಿ ಮತ್ತು ಬಾಗಲಕೋಟೆ-ವೀಣಾ ಕಾಶಪ್ಪನವರ್. ಬಿಜೆಪಿ ಇಲ್ಲಿ ಪಂಚಮಸಾಲಿಗೂ ಟಿಕೆಟ್ ನೀಡಿಲ್ಲ. ಅದು ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ಕೊಪ್ಪಳದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಸೇರಿದ ಸಂಗಣ್ಣ ಕರಡಿಯವರಿಗೆ ಟಿಕೆಟ್ ನೀಡಿದೆ. ಇದು ಕೂಡ ಪಂಚಮಸಾಲಿಗಳಿಗೆ ಕಾಂಗ್ರೆಸ್ ಪರ ಹೊರಳಲು ಒಂದು ಕಾರಣವಾಗುತ್ತಿದೆಯೇ? ಬಾಗಲಕೋಟೆಯಲ್ಲಂತೂ ಪಂಚಮಸಾಲಿಗಳು ಕಾಂಗ್ರೆಸ್ ಅಭ್ಯರ್ಥಿ ಪರ ನಿಲ್ಲುತ್ತಿರುವುದು ಸ್ಪಷ್ಟವಾಗುತ್ತಿದೆ.

ಲಿಂಗಾಯತ/ವೀರಶೈವ ಸಮುದಾಯದಲ್ಲಿ ಬಹುಸಂಖ್ಯಾತರಾಗಿರುವ ಪಂಚಮಸಾಲಿ ಸಮುದಾಯ ತನಗೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ ಎಂದು ಮೊದಲಿಂದಲೂ ಅಸಮಾಧಾನ ಹೊಂದಿದೆ. ರಾಜೈ ಪಂಚಮಸಾಲಿ ಸಂಘಟನೆಯೂ ಈ ಕುರಿತಾಗಿ ಧ್ವನಿ ಎತ್ತುತ್ತಾ ಬಂದಿದೆ. ಇಷ್ಟು ವರ್ಷಗಳು ಬೆಂಬಲಿಸಿದರೂ ಬಿಜೆಪಿ ತಮ್ಮನ್ನು ಬಳಸಿಕೊಂಡು ಬಿಸಾಡುತ್ತಿದೆ ಎಂಬ ಭಾವನೆ ದಟ್ಟವಾಗುತ್ತಿದೆ. ಇದು ಸಾಮೂಹಿಕವಾಗಿ ಮತಗಳಾಗಿ ಪರಿವರ್ತಿತ ಆಗಬಹುದೇ ಎಂಬ ಪ್ರಶ್ನೆ ಉಳಿದುಕೊಂಡಿದೆ.

ಬಿಜೆಪಿಗೆ ಮೊದಲ ಬಾರಿ ಇಂತಹ ಹೆದರಿಕೆ ಉಂಟಾಗಿದೆ. ಅದಕ್ಕೇ ಅದು ವಿಜಯ ಸಂಕೇಶ್ವರರ ಪೇಪರ್ ಮೂಲಕ ಮತ್ತೆ ಲಿಂಗಾಯತ ಪ್ರತ್ಯೇಕ ಧರ್ಮದ ವಿಷಯವನ್ನು ಮುನ್ನೆಲೆಗೆ ತಂದು ಕಾಂಗ್ರೆಸ್ ಧರ್ಮ ಒಡೆಯುತ್ತಿದೆ ಎಂಬ ಸವಕಲು ವಾದವನ್ನು ತೇಲಿಬಿಡಲು ಯತ್ನಿಸಿತು. ಕರ್ನಾಟಕದಲ್ಲಿ ಪ್ರಧಾನಿಯ ಬಾಯಲ್ಲೂ ಅದನ್ನು ಹೇಳಿಸಲು ಯತ್ನಿಸಿತು.

ಲಿಂಗಾಯತ ಮತಗಳಿಗಾಗಿ ಈಗ ರಾಜಕೀಯ ಮೇಲಾಟ ಶುರುವಾಗಿದ್ದು, ಪಂಚಮಸಾಲಿಗಳು ಈ ಸಲ ಪಾರ್ಟಿ ಬದಲಿಸಿದ್ದಾರೆಯೇ ಎಂಬ ಪ್ರಶ್ನೆ ಎದ್ದಿದೆ. ಚುನಾವಣಾ ಫಲಿತಾಂಶದ ಮೇಲೂ ಇದರ ಪ್ರಭಾವವಾಗಲಿದೆ. ಈ ವಿಷಯದಲ್ಲಿ ಹಿಂದೆಲ್ಲ ಬಿಜೆಪಿಗಿದ್ದ ಅಡ್ವಾಂಟೇಜ್ ಈ ಸಲ ಕಾಂಗ್ರೆಸ್‍ಗೆ ಇದೆ. ಅದಕ್ಕೆ ಸಾಕಷ್ಟು ಕಾರಣಗಳೂ ಇವೆಯಲ್ಲವೇ?

(ಮೇಲಿನ ಬರಹದಲ್ಲಿನ ಅಭಿಪ್ರಾಯಗಳು ಲೇಖಕರದ್ದಾಗಿರುತ್ತವೆ. ಅತಿಥಿ ಲೇಖಕರ ಅನಿಸಿಕೆಗಳು ನಾನುಗೌರಿ.ಕಾಂ ವೆಬ್‌ಪತ್ರಿಕೆಯ ಸಂಪಾದಕೀಯ ತಂಡದ ಅಭಿಪ್ರಾಯಗಳೇ ಆಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...