Homeಮುಖಪುಟಅಸ್ಸಾಂ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬದ್ರುದ್ದೀನ್ ಅಜ್ಮಲ್! - ಅವರ ಪ್ರತಿಕ್ರಿಯೆ ಏನು?

ಅಸ್ಸಾಂ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬದ್ರುದ್ದೀನ್ ಅಜ್ಮಲ್! – ಅವರ ಪ್ರತಿಕ್ರಿಯೆ ಏನು?

- Advertisement -
- Advertisement -

ಇನ್ನೇನು ಹತ್ತು ದಿನಗಳಲ್ಲಿ ಪಂಚರಾಜ್ಯ ಚುನಾವಣೆಯ ಮೊಲದ ಹಂತದ ಮತದಾನ ಪ್ರಾರಂಭವಾಗಲಿದೆ. ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಕಾಂಗ್ರೆಸ್ ಮತ್ತು ಅಖಿಲ ಭಾರತ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ಮೈತ್ರಿ ಮಾಡಿಕೊಂಡಿದೆ. ಈ ಹಿನ್ನಲೆಯಲ್ಲಿ ಎಐಯುಡಿಎಫ್‌ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಅವರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂಬ ಸುದ್ದಿಗೆ ಸ್ವತಃ ಅಜ್ಮಲ್ ಅವರೆ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅಜ್ಮಲ್, “ನಾನು ಮುಖ್ಯಮಂತ್ರಿ ಹುದ್ದೆಯ ಸ್ಪರ್ಧೆಯಲ್ಲಿ ಇಲ್ಲ. ನಮ್ಮ ಪಕ್ಷ ಯಾವಾಗಲೂ ರಾಜ್ಯದ ಏಕತೆ ಮತ್ತು ಅಭಿವೃದ್ಧಿಯ ಪರವಾಗಿ ನಿಲ್ಲುತ್ತದೆ ಮತ್ತು ರಾಜ್ಯದ ಜನರ ಸೇವೆಯನ್ನು ಪಕ್ಷವು ಮುಂದುವರಿಸಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನ್ನನ್ನು ಕೊಲ್ಲಲು ಬಿಜೆಪಿ ಪಿತೂರಿ ನಡೆಸುತ್ತಿದೆಯೇ? – ಮಮತಾ ಬ್ಯಾನರ್ಜಿ ವಾಗ್ದಾಳಿ

ಮುಖ್ಯಮಂತ್ರಿ ಹುದ್ದೆಗೆ ಅಜ್ಮಲ್ ಸಿದ್ಧರಿಲ್ಲ ಎಂಬ ಅವರ ಪಕ್ಷದ ಸ್ಪಷ್ಟೀಕರಣಗಳ ಹೊರತಾಗಿಯೂ, ಸುದ್ದಿ ವಾಹಿನಿಯೊಂದು ಅವರನ್ನು ಸಿಎಂ ಅಭ್ಯರ್ಥಿಯಾಗಿ ತೋರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

“ಅಸ್ಸಾಂನ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಸುದ್ದಿ ಚಾನೆಲ್ ಒಂದು ಆನ್‌ಲೈನ್ ಅಭಿಪ್ರಾಯ ಸಂಗ್ರಹವನ್ನು ನಡೆಸುತ್ತಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಚಾನೆಲ್ ನನ್ನ ಹೆಸರನ್ನು ಸಹ ಪಟ್ಟಿಯಲ್ಲಿ ಸೇರಿಸಿದೆ. ಆದರೆ ಮುಖ್ಯಮಂತ್ರಿ ಹುದ್ದೆಗೆ ತಾನು ಸ್ಪರ್ಧಿಸುತ್ತಿಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಅಜ್ಮಲ್‌ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುತ್ತಿದ್ದು, ಅವರು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಒಳನುಸುಳುವಿಕೆ ಹೆಚ್ಚಾಗುತ್ತದೆ” ಎಂದು ಬಿಜೆಪಿ ಅವರ ವಿರುದ್ಧ ಆರೋಪ ಮಾಡುತ್ತಿದೆ.

ಇದನ್ನೂ ಓದಿ: ಲಾಭವನ್ನು ಖಾಸಗೀಕರಿಸಿ, ನಷ್ಟವನ್ನು ರಾಷ್ಟ್ರೀಕರಣ ಮಾಡಲಾಗುತ್ತಿದೆ: ರಾಹುಲ್ ಗಾಂಧಿ

“ನಮ್ಮ ಪಕ್ಷವು ಸರ್ಕಾರದಲ್ಲಿ ಪಾಲುದಾರರಾಗಲಿದೆ. ಮುಂಬರುವ ಚುನಾವಣಾ ಫಲಿತಾಂಶವನ್ನು ಅನುಸರಿಸಿ ನಿಮ್ಮ ಬೆಂಬಲದಿಂದ ನಾನು ಸಂಸತ್ತಿನಿಂದ ಧುಬ್ರಿ, ಅಸ್ಸಾಂ ಮತ್ತು ಈಶಾನ್ಯ ಭಾರತದ ಜನರಿಗೆ ಸೇವೆ ಸಲ್ಲಿಸುತ್ತೇನೆ” ಎಂದು ಅಜ್ಮಲ್ ಕೇಳಿಕೊಂಡಿದ್ದಾರೆ.

“ನಾನು ಎಐಯುಡಿಎಫ್ ಬೆಂಬಲಿರಿಗೆ ನನ್ನ ಪ್ರೀತಿ ಮತ್ತು ಕೃತಜ್ಞತೆಯನ್ನು ಅರ್ಪಿಸುತ್ತೇನೆ, ಆದಾಗ್ಯೂ, ಎಐಯುಡಿಎಫ್ ಅಸ್ಸಾಂನಲ್ಲಿ ಏಕತೆ ಮತ್ತು ಅಭಿವೃದ್ಧಿಯ ಪರವಾಗಿ ನಿಂತಿದೆ ಮತ್ತು ಅದಕ್ಕಾಗಿ ನಾವು ಮಹಾ ಮೈತ್ರಿಗೆ ಬದ್ಧರಾಗಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅನರ್ಹಗೊಳಿಸಲು ಟಿಎಂಸಿ ಒತ್ತಾಯ: ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ವಪನ್ ದಾಸ್​ಗುಪ್ತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...