Homeಕರ್ನಾಟಕ`ಮೋದಿ ಹೆಸರಿಂದ ಅಪಾಯವಿದೆ’ ಎಂಬ ಕಲ್ಲಡ್ಕ ಭಟ್ಟರ ಮಾತಿಗೆ ಅರ್ಥಗಳೇನು?

`ಮೋದಿ ಹೆಸರಿಂದ ಅಪಾಯವಿದೆ’ ಎಂಬ ಕಲ್ಲಡ್ಕ ಭಟ್ಟರ ಮಾತಿಗೆ ಅರ್ಥಗಳೇನು?

- Advertisement -
- Advertisement -

ಜೀವಬೆದರಿಕೆಯ ಕಾರಣದಿಂದ ಪೊಲೀಸರು ಅಜ್ಞಾತ ಸ್ಥಳದಲ್ಲಿಟ್ಟು ರಕ್ಷಣೆ ಕೊಟ್ಟ ಸುದೀರ್ಘ ಸಮಯದ ತರುವಾಯ ಕಲ್ಲಡ್ಕಭಟ್ಟರು ಆಡಿದ ಮಾತು ಹೊಸಹೊಸ ಅರ್ಥಗಳೊಂದಿಗೆ ಹರಿದಾಡುತ್ತಿದೆ. ಮಡಿಕೇರಿಯಲ್ಲಿ ಮಾಧ್ಯಮದವರ ಮುಂದೆ ‘ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ಭವಿಷ್ಯದಲ್ಲಿ ಅಪಾಯಕಾರಿಯಾಗಲಿದೆ. ಓರ್ವ ವ್ಯಕ್ತಿಯ ಸಾಧನೆ ಬಿಂಬಿಸಿಕೊಂಡು ಮತ ಕೇಳುವುದು ಒಳ್ಳೆಯ ಪ್ರಕ್ರಿಯೆ ಅಲ್ಲ, ವ್ಯಕ್ತಿ ಪೂಜೆ ನಮ್ಮ ಸಂಸ್ಕೃತಿಯಲ್ಲ’ ಎಂದು ಅವರಾಡಿದ ಮಾತುಗಳು ಬಹಳಷ್ಟು ಜನರನ್ನು ಅಚ್ಚರಿಗೊಳಿಸಿದ್ದರೆ, ಬಿಜೆಪಿಗರನ್ನು ಆಘಾತಕ್ಕೀಡು ಮಾಡಿವೆ. ಇದಕ್ಕೆ ಕಾರಣಗಳುಂಟು.

ಭಟ್ಟರ ಈ ಮಾತುಗಳನ್ನು ಎರಡು ನೆಲೆಗಟ್ಟಿನಲ್ಲಿ ವಿಶ್ಲೇಷಿಸಲಾಗುತ್ತಿದೆ. ಮೇಲ್ನೋಟಕ್ಕೆ ಕಾಣುವಂತೆ, ಬಿಜೆಪಿಯಲ್ಲಿ ಮೋದಿ-ಶಾಜೋಡಿಯ ಸರ್ವಾಧಿಕಾರವನ್ನು, ಮೋದಿಯವರ ವ್ಯಕ್ತಿಪೂಜೆಯನ್ನು ಟೀಕಿಸುತ್ತಿರುವುದು ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಬಿಜೆಪಿ ರಾಜಕೀಯ ಪಕ್ಷವಾದರು ಅದನ್ನು ನಿಯಂತ್ರಿಸುತ್ತಿರುವುದು ಆರೆಸೆಸ್ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಬಿಜೆಪಿಯಲ್ಲಿ ಯಾವುದೇ ವ್ಯಕ್ತಿ, ಎಷ್ಟೇ ಉನ್ನತ ರಾಜಕೀಯ ಹುದ್ದೆಗೇರಿದರು ಆತ ತನ್ನ ಅಂಕೆಯಲ್ಲಿರಬೇಕೆಂದು ಆರೆಸೆಸ್ ಬಯಸುತ್ತದೆ, ಮತ್ತು ಹಾಗೇ ಹದ್ದುಬಸ್ತಿನಲ್ಲಿಡುತ್ತಾ ಬಂದಿದೆ. ಆದರೆ ಮೋದಿ ಅಧಿಕಾರಕ್ಕೇರಿದ ನಂತರ ಆರೆಸೆಸ್ ಅಂಕೆಯನ್ನೂ ಮೀರಿ ಏಕವ್ಯಕ್ತಿಕೇಂದ್ರಿತ ಶಕ್ತಿಯಾಗಿ ಬೆಳೆಯುತ್ತಿರುವುದು ಸಂಘ ಪರಿವಾರಕ್ಕೆ ನುಂಗಲಾರದ ತುತ್ತಾಗುತ್ತಿದೆ ಎಂಬ ವಾದ ಆಗಾಗ್ಗೆ ನಾಗ್ಪುರದ ಮೂಲಗಳಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಪೂರಕವಾಗಿ 2014ರ ಎಂಪಿ ಚುನಾವಣೆಯ ನಂತರ ನಡೆದ ಬಹುತೇಕ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಮೋದಿ-ಶಾ ನೇತೃತ್ವದಲ್ಲಿ ಗೆಲ್ಲುತ್ತಾ ಬಂದದ್ದು ಆರೆಸೆಸ್ ಅನ್ನು ಕಟ್ಟಿಹಾಕಿತ್ತು.

ಆದರೆ ಕಳೆದ ಡಿಸೆಂಬರ್‍ನಲ್ಲಿ ಮುಗಿದ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢ ಎಲೆಕ್ಷನ್‍ನಲ್ಲಿ ಬಿಜೆಪಿ ಸೋತು ಅಧಿಕಾರ ಕಳೆದುಕೊಂಡ ತರುವಾಯ ಆರೆಸೆಸ್ ವಲಯದೊಳಗಿನ ಆಂತರಿಕ ಲೆಕ್ಕಾಚಾರಗಳು ಬುಡಮೇಲಾಗಿವೆ ಎನ್ನಲಾಗುತ್ತಿದೆ. ಬಿಜೆಪಿಯಲ್ಲಿ ಮೋದಿ ಪ್ರಭುತ್ವವನ್ನು ಕುಗ್ಗಿಸಲು, ಪಕ್ಷದ ಮೇಲೆ ಮತ್ತೆ ನಾಗ್ಪುರ ಕೇಂದ್ರದ ಹಿಡಿತವನ್ನು ಬಿಗಿತಗೊಳಿಸಲು ಕಸರತ್ತುಗಳು ಶುರುವಾಗಿದ್ದವು. ಮೋದಿಯ ಪ್ರಭಾವ ತಗ್ಗಿಸುವುದರ ಜೊತೆಗೆ ಇದಕ್ಕೆ ಮತ್ತೂ ಒಂದು ಕಾರಣವಿತ್ತು. 2019ರ ಚುನಾವಣೆಯಲ್ಲಿ ಬಿಜೆಪಿಯಾಗಲಿ ಅಥವಾ ಎನ್‍ಡಿಎ ಆಗಲಿ ಸ್ವಂತ ಬಲದ ಮೇಲೆ ಸರ್ಕಾರ ರಚಿಸುವಷ್ಟು ಸೀಟುಗಳನ್ನು ಗೆಲ್ಲುವುದಿಲ್ಲ ಎಂಬ ಸುಳಿವು ಆರೆಸೆಸ್‍ಗೆ ಸಿಕ್ಕಾಗಿತ್ತು. ಅಂತಹ ಅತಂತ್ರದಲ್ಲಿ ಉಳಿದ ಸಣ್ಣಪುಟ್ಟ ಪಕ್ಷಗಳನ್ನು ಸೆಳೆದುಕೊಂಡು ಸರ್ಕಾರ ರಚಿಸುವ ಪರಿಸ್ಥಿತಿ ಎದುರಾಗಲಿದ್ದು, ಸರ್ವಾಧಿಕಾರಿ ಇಮೇಜಿನ ಮೋದಿಯನ್ನು ಮುಂದಿಟ್ಟುಕೊಂಡರೆ ಆ ಪಕ್ಷಗಳು ತಮಗೆ ಬೆಂಬಲ ಕೊಡದೇ ಹೋಗಬಹುದು, ಆಗ ಎಲ್ಲಾ ಪಕ್ಷಗಳಿಗೂ ಪ್ರಿಯವಾದ ಬೇರೊಂದು ಮುಖವನ್ನು ಪ್ರಧಾನಿ ಹುದ್ದೆಗೆ ಪ್ರಪೋಸ್ ಮಾಡಿ ಬೆಂಬಲ ಪಡೆದುಕೊಳ್ಳಬೇಕಾಗುತ್ತೆ. ಮೋದಿ ಇಷ್ಟೇ ಪ್ರಭಾವಿಯಾಗಿದ್ದರೆ ಬೇರೊಬ್ಬರನ್ನು ಪ್ರಧಾನಿ ಮಾಡಲು ಆತ ಅಡ್ಡಿಯಾಗಬಹುದು ಎಂಬ ದೂರಾಲೋಚನೆಯಿಟ್ಟುಕೊಂಡು ಆರೆಸೆಸ್ ಒಂದು ಕಾರ್ಯತಂತ್ರ ಹೆಣೆದಿತ್ತು. ಬಿಜೆಪಿಯೊಳಗೆಮೋದಿಗೆ ಪರ್ಯಾಯವಾಗಿ ಮತ್ತೊಬ್ಬ ನಾಯಕನನ್ನು ಪ್ರೊಜೆಕ್ಟ್ ಮಾಡುವುದು ಆ ತಂತ್ರವಾಗಿತ್ತು.

ಅದರ ಭಾಗವಾಗಿಯೇ ಹಾಲಿ ಕೇಂದ್ರ ಮಂತ್ರಿಯೂ, ಮಾಜಿ ಬಿಜೆಪಿ ಅಧ್ಯಕ್ಷರೂ ಆದ ನಾಗ್ಪುರ ನಂಟಿನ ನಿತಿನ್ ಗಡ್ಕರಿ ಮೋದಿ-ಶಾ ಜೋಡಿಗೆ ರೆಬೆಲ್ ಮಾತುಗಳನ್ನಾಡಲು ಶುರು ಮಾಡಿದ್ದರು. ಡಿಸೆಂಬರ್ ಚುನಾವಣೆಗಳ ಸೋಲನ್ನು ಬಿಜೆಪಿ ಅಧ್ಯಕ್ಷರೇ ಹೊತ್ತುಕೊಳ್ಳಬೇಕು ಎಂದದ್ದಾಗಲಿ, ತನ್ನ ಮನೆಯನ್ನೇ ಸರಿಯಾಗಿ ನೋಡಿಕೊಳ್ಳಲಾರದವ ದೇಶವನ್ನು ಹೇಗೆ ಸಂಭಾಳಿಸಿಯಾನು ಎಂದು ಪರೋಕ್ಷವಾಗಿ ಮೋದಿಯನ್ನು ಕುಟುಕಿದ್ದಾಗಲಿ, ಮೋದಿಯನ್ನು ನಖಾಶಿಖಾಂತ ಟೀಕಿಸುತ್ತಿದ್ದ ಶಿವಸೇನೆ ಮಹಾರಾಷ್ಟ್ರದಲ್ಲಿ ಹಠಾತ್ತನೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾಗಲಿ ಇವೆಲ್ಲವೂ ನಿತಿನ್ ಗಡ್ಕರಿಗೆ ಆರೆಸೆಸ್‍ನಿಂದ ಸಿಗುತ್ತಿದ್ದ ಪ್ರೋತ್ಸಾಹದ ಸೂಚಕಗಳಾಗಿದ್ದವು. ಆದರೆ ಇಂಥಾ ಪ್ರಯತ್ನ ಲೋಕಸಭಾ ಚುನಾವಣೆ ವೇಳೆ ಕಾರ್ಯಕರ್ತರ ಆತ್ಮವಿಶ್ವಾಸದ ಮೇಲೆಯೇ ಅಡ್ಡಪರಿಣಾಮ ಬೀರಬಹುದೆನ್ನುವ ಕಾರಣಕ್ಕೆ ಆರೆಸೆಸ್ ಕೊನೇ ಕ್ಷಣದಲ್ಲಿ ಅದನ್ನು ಮುಂದಕ್ಕೂಡಿತ್ತು.

ಈಗ ದೇಶದಲ್ಲಿ ಎರಡು ಹಂತದ ಚುನಾವಣೆಗಳು ಮುಗಿದ ಸಂದರ್ಭದಲ್ಲಿ ಕಲ್ಲಡ್ಕ ಭಟ್ಟರು ಇಂಥಾ ಮಾತುಗಳನ್ನು ಆಡುತ್ತಿರುವುದು ನೋಡಿದರೆ, ಆರೆಸೆಸ್‍ನ ಹಳೇ ಕಾರ್ಯತಂತ್ರ ಮತ್ತೆ ಚಾಲನೆ ಪಡೆದುಕೊಂಡಿದೆ ಎಂಬ ಅನುಮಾನ ಮೂಡುತ್ತಿದೆ. ಯಾಕೆಂದರೆ ಕಲ್ಲಡ್ಕ ಭಟ್ಟರು ಸಾಮಾನ್ಯ ಕಾರ್ಯಕರ್ತರಲ್ಲ. ಆರೆಸೆಸ್‍ನ ದಕ್ಷಿಣ ಕ್ಷೇತ್ರೀಯ ಕಾರ್ಯಕಾರಿಣಿ ಸದಸ್ಯ.ಹೀಗೆ ದೇಶದ ಅಲ್ಲೊಂದು, ಇಲ್ಲೊಂದು ಮೂಲೆಯಲ್ಲಿ ಇಂಥಾ ಪ್ರಭಾವಿಗಳಿಂದ `ಮೋದಿ-ವಿರೋಧಿ’ ಹೇಳಿಕೆಗಳನ್ನು ನೀಡಿಸುವ ಮೂಲಕ ಹಂತಹಂತವಾಗಿ ಮೋದಿಯನ್ನು ಪ್ರಧಾನಿ ಹುದ್ದೆಯಿಂದ ದೂರವಾಗಿಸಲು, ಬಿಜೆಪಿ ಕಾರ್ಯಕರ್ತರ ನಡುವೆ ಮೋದಿ-ಶಾವ್ಯಕ್ತಿ ಪೂಜೆಯನ್ನು ತಗ್ಗಿಸಲು ಆರೆಸೆಸ್ ಮುಂದಾಗಿರಬಹುದು ಎನ್ನಲಾಗುತ್ತಿದೆ.

ಇನ್ನೊಂದು ವಿಶ್ಲೇಷಣೆಯ ಪ್ರಕಾರ, ಬಿಜೆಪಿ ಪಕ್ಷದ ಆವರಣದಲ್ಲಿ ಕುಸಿಯುತ್ತಿರುವ ತನ್ನ ವೈಯಕ್ತಿಕ ವರ್ಚಸ್ಸಿನ ಹತಾಶೆಯಿಂದ ಭಟ್ಟರು ಹೀಗೆ ಮಾತಾಡಿದ್ದಾರೆ ಎನ್ನಲಾಗುತ್ತಿದೆ. ಉ.ಕನ್ನಡ, ದ.ಕನ್ನಡ, ಉಡುಪಿ-ಚಿಕ್ಕಮಗಳೂರು ಸೇರಿದಂತೆ ಕರಾವಳಿ ಭಾಗದ ಬಿಜೆಪಿಗೆ ಇದೇ ಭಟ್ಟರು ಅಧಿನಾಯಕರಂತಿದ್ದರು. ಇವರು ಹೇಳಿದ ಅಭ್ಯರ್ಥಿಗೇ ಟಿಕೇಟು ನಿಕ್ಕಿ ಎನ್ನುವಂತಿತ್ತು. ಆದರೆ ಈ ಸಲ,ತನಗೇ ತಿರುಮಂತ್ರ ಹಾಕುತ್ತಿರುವ ದಕ್ಷಿಣ ಕನ್ನಡದ ನಳೀನ್ ಕುಮಾರ್ ಕಟೀಲ್‍ಗೆ ಟಿಕೇಟ್ ಕೊಡಬಾರದು ಎಂಬುದು ಕಲ್ಲಡ್ಕಭಟ್ಟರ ಹಠವಾಗಿತ್ತು. ಆದರೆ ಅದಕ್ಕೆ ಸೊಪ್ಪು ಹಾಕದ ಬಿಜೆಪಿ ನಳೀನ್‍ರನ್ನೇ ಮತ್ತೆ ಕಣಕ್ಕಿಳಿಸಿದೆ. ತನ್ನ ನೆರವಿಲ್ಲದ ನಳೀನ್ ಈಚುನಾವಣೆಯಲ್ಲಿ ಮೋದಿ ಹೆಸರೇಳಿಕೊಂಡು ಮತ ಯಾಚಿಸುತ್ತಿರುವುದು ಭಟ್ಟರಿಗೆ ಕೋಪ ತರಿಸಿ ಹೀಗೆ ಹೇಳಿರಬಹುದು ಎನ್ನುವುದು ಎರಡನೇ ವಿಶ್ಲೇಷಣೆ. ಆದರೆ ಒಂದಂತೂ ಸತ್ಯ, ಭಟ್ಟರ ಮಾತುಗಳು ಸೂಚ್ಯವಾಗಿ ಮುಂದಿನ ರಾಜಕಾರಣದ ದಿಕ್ಕುತೋರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...