Homeಮುಖಪುಟ‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

‘ನನ್ನನ್ನು ಕಿತ್ತು ಹಾಕಿದರೂ ನಾನು ಮಾತನಾಡುತ್ತೇನೆ’-ರೈತರನ್ನು ಮತ್ತೆ ಬೆಂಬಲಿಸಿದ ಮೇಘಾಲಯ ರಾಜ್ಯಪಾಲ

ನಾಯಿ ಸತ್ತಾಗಲೂ ಸಂತಾಪ ಸೂಚಿಸಲಾಗುತ್ತದೆ ಆದರೆ 250 ರೈತರು ಸಾವನ್ನಪ್ಪಿದ್ದಾರೆ, ಯಾರೂ ಸಂತಾಪ ವ್ಯಕ್ತಪಡಿಸಲಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮತ್ತೇ ಬೆಂಬಲಿಸಿರುವ ಮೇಘಾಲಯ ರಾಜ್ಯಪಾಲ ಸತ್ಯ ಪಾಲ್ ಮಲಿಕ್, ಆಡಳಿತಾರೂಢ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. ದೆಹಲಿಯ ಗಡಿಯ ಸುತ್ತ ನಾಲ್ಕು ತಿಂಗಳ ಕಾಲ ನಡೆಯುತ್ತಿರುವ ಆಂದೋಲನದಿಂದಾಗಿ ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹರಿಯಾಣದಲ್ಲಿ ಬಿಜೆಪಿಗೆ ಜನಬೆಂಬಲ ನಷ್ಟವಾಗಲಿದೆ ಎಂದು ಸತ್ಯ ಪಾಲ್ ಭವಿಷ್ಯ ನುಡಿದಿದ್ದಾರೆ.

“ನಾಯಿ ಸತ್ತಾಗಲೂ ಸಂತಾಪ ಸೂಚಿಸಲಾಗುತ್ತದೆ ಆದರೆ 250 ರೈತರು ಸಾವನ್ನಪ್ಪಿದ್ದಾರೆ. ಯಾರೂ ಸಂತಾಪ ವ್ಯಕ್ತಪಡಿಸಲಿಲ್ಲ. ಈ ಆಂದೋಲನವು ಈ ರೀತಿ ಮುಂದುವರಿದರೆ ದೀರ್ಘಾವಧಿಯಲ್ಲಿ, ಪಶ್ಚಿಮ ಯುಪಿ, ರಾಜಸ್ಥಾನ ಮತ್ತು ಹರಿಯಾಣಗಳಲ್ಲಿ ಬಿಜೆಪಿ ಸೋಲುತ್ತದೆ” ಎಂದು ರಾಜ್ಯಪಾಲರು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ‘ರೈತರ ವಿರುದ್ದ ಬಲ ಪ್ರಯೋಗಿಸಬೇಡಿ’- ರೈತರ ಬೆಂಬಲಕ್ಕೆ ನಿಂತ ಮೇಘಾಲಯ ರಾಜ್ಯಪಾಲ!

ರಾಜ್ಯಪಾಲ ಆಗಿ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನನ್ನ ಹೇಳಿಕೆಯಿಂದ ಅವರಿಗೆ ಹಾನಿ ಉಂಟಾಗುತ್ತದೆ ಎಂದು ಸರ್ಕಾರ ಭಾವಿಸಿದರೆ, ನಾನು ನನ್ನ ಸ್ಥಾನದಿಂದ ಇಳಿಯುತ್ತೇನೆ. ನಾನು ರಾಜ್ಯಪಾಲ ಅಲ್ಲದಿದ್ದರೂ ಈ ಬಗ್ಗೆ ಮಾತನಾಡುತ್ತೇನೆ” ಎಂದು ಅವರು ಹೇಳಿದ್ದಾರೆ.

ಕಳೆದ ಭಾನುವಾರ ತಮ್ಮ ತವರು ಜಿಲ್ಲೆ ಬಾಘ್ಪತ್‌‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸತ್ಯ ಪಾಲ್, “ಕೇಂದ್ರ ಸರ್ಕಾರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಯ ಕಾನೂನು ಖಾತರಿ ನೀಡಿದರೆ, ರೈತರು ತಮ್ಮ ಪಟ್ಟು ಸಡಿಲಿಸಲಿದ್ದಾರೆ. ರೈತರ ವಿರುದ್ಧ ಬಲವನ್ನು ಪ್ರಯೋಗಿಸಬೇಡಿ. ಅವರನ್ನು ದೆಹಲಿಯಿಂದ ಖಾಲಿ ಕೈಯಿಂದ ಮನೆಗೆ ಕಳುಹಿಸಬಾರದು ಎಂದು ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಿದ್ದೇನೆ” ಎಂದು ಸತ್ಯ ಪಾಲ್‌ ಹೇಳಿದ್ದರು.

ಅಂದು ಹೊಸ ಕೃಷಿ ಕಾನೂನುಗಳ ಪರವಾಗಿ ಮಂಡಿಸಿದ ವಾದಗಳನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ್ದ ಸತ್ಯ ಪಾಲ್, “ರೈತರು ಈಗ ಯಾವುದೇ ಸ್ಥಳದಲ್ಲಿ ಬೆಳೆಗಳನ್ನು ಮಾರಾಟ ಮಾಡಬಹುದೆಂದು ಸಾಕಷ್ಟು ಪ್ರಚಾರ ಮಾಡಲಾಯಿತು. ಆದರೆ ಇದು 15 ವರ್ಷಗಳ ಹಳೆಯ ಕಾನೂನು. ಇದರ ಹೊರತಾಗಿಯೂ, ಮಥುರಾದ ರೈತನು ಗೋಧಿಯೊಂದಿಗೆ ಪಾಲ್ವಾಲ್‌ಗೆ ಹೋದಾಗ, ಅವನ ಮೇಲೆ ಲಾಠಿಚಾರ್ಜ್ ಆಗುತ್ತದೆ. ಸೋನಿಪತ್‌ನಿಂದ ಒಬ್ಬ ರೈತ ನರೇಲಾಕ್ಕೆ ಬಂದಾಗ ಅವನ ಮೇಲೆಯು ಲಾಠಿಚಾರ್ಜ್ ಆಗುತ್ತದೆ” ಎಂದು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...