Homeಕರ್ನಾಟಕಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

- Advertisement -
- Advertisement -

eಶಿವಮೊಗ್ಗ ಬಿಜೆಪಿ ಪಕ್ಷದ ಭದ್ರಕೋಟೆ. ರಾಜ್ಯದ ಅಧಿಕಾರದ ಕೇಂದ್ರ. ಆದರೆ, ಭದ್ರಾವತಿ ತಾಲೂಕು ಮಾತ್ರ ಇದಕ್ಕೆ ಅಪವಾದ. ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಾದರೂ, ಯಡಿಯೂರಪ್ಪನವರೇ ಬಂದು ಭರ್ಜರಿ ಪ್ರಚಾರ ಮಾಡಿದರೂ ಸಹ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಬಿಜೆಪಿ ಅಭ್ಯರ್ಥಿಯ ಮತ ಈವರೆಗೆ 15 ಸಾವಿರವನ್ನೂ ಮೀರಿದ ಇತಿಹಾಸವಿಲ್ಲ. ಆ ಮಟ್ಟಿಗೆ ಭದ್ರಾವತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಇಲ್ಲಿ ಏನಿದ್ದರೂ ಸಂಗಮೇಶ್ ವರ್ಸಸ್ ಅಪ್ಪಾಜಿ ಗೌಡ ನಡುವೆಯೇ ನೇರಾ ನೇರ ಸ್ಫರ್ಧೆಯಿತ್ತು.

ಆದರೆ, ಇದೀಗ ಜೆಡಿಎಸ್ ಪಕ್ಷದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನರಾಗಿದ್ದಾರೆ. ಹೀಗಾಗಿ ಈಗ ಭದ್ರಾವತಿ ಮಟ್ಟಿಗೆ ಜೆಡಿಎಸ್ ನಾವಿಕನಿಲ್ಲದ ಹಡಗಿನಂತಾಗಿದ್ದು, ಜೆಡಿಎಸ್ ಕಾರ್ಯಕರ್ತರು ಕಂಗಾಲಾಗಿದ್ದಾರೆ. ಹಾಲಿ ಕಾಂಗ್ರೆಸ್ ಶಾಸಕ ಸಂಗಮೇಶ್ ಪಾಲಿಗೆ ರಾಜಕೀಯ ಎದುರಾಳಿಯೇ ಇಲ್ಲದಂತಾಗಿದೆ. ಈ ಪರಿಸ್ಥಿಯ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಭದ್ರಾವತಿಯಲ್ಲಿ ತನ್ನ ಮಾಮೂಲಿ ತಂತ್ರಗಾರಿಕೆ ಹೂಡುವ ಮೂಲಕ ಸಂಗಮೇಶ್‌ಗೆ ಪರ್ಯಾಯವಾಗಿ ಬಿಂಬಿಸಿಕೊಳ್ಳುವ ಯತ್ನದಲ್ಲಿದೆ.

ಇಂತಹ ಯತ್ನಗಳಲ್ಲೊಂದೆ ಭದ್ರಾವತಿಯಲ್ಲಿ ಇತ್ತೀಚೆಗೆ ಕಬಡ್ಡಿ ಅಂಗಳದಲ್ಲಿ ನಡೆದ ಗಲಾಟೆ. ಬಿ.ವೈ ವಿಜಯೇಂದ್ರ ಭದ್ರಾವತಿ ಪಕ್ಷ ಸಂಘಟನೆಯ ಕಾರಣಕ್ಕಾಗಿ ಭದ್ರಾವತಿ ನಗರದಲ್ಲಿ ಕಾಲಿಡುತ್ತಿದ್ದಂತೆ, ಇಂತಹದ್ದೊಂದು ಗಲಾಟೆ ನಡೆದಿರುವುದು ಸಹ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ನಡುವೆ ಭದ್ರಾವತಿ ಶಾಸಕ ಇದೇ ವಿಚಾರವಾಗಿ ಸದನದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು, ಸದನದಿಂದ ಅಮಾನತುಗೊಂಡಿದ್ದು ಇಡೀ ರಾಜ್ಯದ ಗಮನ ಸೆಳೆದಿತ್ತು. ಹಾಗಾದರೆ ಏನಿದು ಗಲಾಟೆ?

ಭದ್ರಾವತಿ ಕಬಡ್ಡಿ ಅಂಗಳದಲ್ಲಿ ನಡೆದದ್ದೇನು?

ಭದ್ರಾವತಿಯಲ್ಲಿ ಪ್ರತಿ ವರ್ಷ ಮಾಜಿ ಶಾಸಕ ಅಪ್ಪಾಜಿ ಗೌಡ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದರೆ, ಹಾಲಿ ಶಾಸಕ ಸಂಗಮೇಶ್ ಕಬಡ್ಡಿ ಟೂರ್ನಮೆಂಟ್ ಆಯೋಜನೆ ಮಾಡುವುದು ವಾಡಿಕೆ. ರಾಜ್ಯ ಮಟ್ಟದ ಈ ಟೂರ್ನಿಗಳಲ್ಲಿ ಭಾಗವಹಿಸಲು ರಾಜ್ಯದ ನಾನಾ ಮೂಲೆಗಳಿಂದ ಕ್ರೀಡಾಪಟುಗಳು ಭದ್ರಾವತಿಗೆ ಆಗಮಿಸುತ್ತಾರೆ. ಗೆದ್ದವರಿಗೆ ಆಕರ್ಷಕ ಬಹುಮಾನಗಳೂ ಉಂಟು.

ಅದಂರತೆ ನಗರದ ಕನಕ ಮಂಟಪ ಆಟದ ಮೈದಾನದಲ್ಲಿ ಈ ಭಾರಿ ಫೆಬ್ರವರಿ 28ರಂದು ಶಾಸಕ ಸಂಗಮೇಶ್ ನೇತೃತ್ವದಲ್ಲಿ ಕಬಡ್ಡಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಧರ್ಮಪ್ರಸಾದ್ ಅವರ ತಂಡವೂ ಭಾಗವಹಿಸಿತ್ತು. ಗಲಭೆಗೆ ಇಷ್ಟು ಮಾತ್ರದ ಕಾರಣ ಸಾಕಾಗಿತ್ತು.

ಶಾಸಕ ಸಂಗಮೇಶ್ ಅವರ ತಂಡ ಲೀಗ್ ಹಂತದಲ್ಲೇ ಸೋಲನುಭವಿಸಿ ಕೂಟದಿಂದ ಹೊರನಡೆದಿತ್ತು. ಫೈನಲ್ ಪಂದ್ಯದಲ್ಲಿ ಸ್ಥಳೀಯ ವ್ಯಕ್ತಿ ಉಮೇಶ್ ನೇತೃತ್ವದ ತಂಡ ಹಾಗೂ ಧರ್ಮಪ್ರಸಾದ್ ನೇತೃತ್ವದ ತಂಡ ಸೆಣಸಿದ್ದರೂ ಗೆದ್ದದ್ದು ಮಾತ್ರ ಉಮೇಶ್ ತಂಡ. ಆದರೆ, ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದ ಧರ್ಮಪ್ರಸಾದ್ ತಂಡ ಆಟದ ಮೈದಾನದಲ್ಲೆ ಪಟಾಕಿ ಹಚ್ಚಿ ಸಂಭ್ರಮಿಸಲು ಮುಂದಾಗಿತ್ತು.

ಅಸಲಿಗೆ ಕಬಡ್ಡಿ ಕೂಟಕ್ಕಾಗಿ 10 ಲಕ್ಷ ಖರ್ಚು ಮಾಡಿ ಸಿಂಥೆಟಿಕ್ ಮ್ಯಾಟ್ ಹಾಕಲಾಗಿತ್ತು. ಹೀಗಾಗಿ ಇಲ್ಲಿ ಪಟಾಕಿ ಸಿಡಿಸಬೇಡಿ ಎಂದು ಶಾಸಕ ಸಂಗಮೇಶ್ ಮಗ ಬಸವೇಶ್ ತಾಕೀತು ಮಾಡಿದ್ದಾರೆ. ಆದರೆ, ಗೆದ್ದ ಹುಮ್ಮಸ್ಸಿನಲ್ಲಿದ್ದ ಧರ್ಮಪ್ರಸಾದ್ ತಂಡ ಈ ಮಾತನ್ನು ಕೇಳುವ ಗೋಜಿಗೆ ಹೋಗಿಲ್ಲ. ಪರಿಣಾಮ ಸ್ಥಳದಲ್ಲಿ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ತಾಳ್ಮೆ ಕಳೆದುಕೊಂಡ ಶಾಸಕರ ಮಗ ಬಸವೇಶ್ ಬಿಜೆಪಿ ಬೆಂಬಲಿತರ ಮೇಲೆ ಕೈ ಮಾಡಿದ್ದು ನಿಜ. ಸಂಗಮೇಶ್ ಹಾಗೂ ಧರ್ಮಪ್ರಸಾದ್ ಬಣಗಳ ನಡುವೆ ತಳ್ಳಾಟ ನೂಕಾಟವಾಗಿ, ಅದು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತು.

ಈ ವೇಳೆ ಬಿಜೆಪಿ ಬೆಂಬಲಿತರೂ ಸಹ ಪ್ರತಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಗಲಾಟೆಯಾಗುತ್ತಿದ್ದಂತೆ ಸ್ಥಳದಲ್ಲಿ ಜೈ ಶ್ರೀರಾಮ್, ಭಾರತ್ ಮಾತಾಕಿ ಜೈ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ಜಗಳ ಕೊನೆಗೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬಲ್ಲಿಗೆ ಬಂದು ನಿಂತಿದೆ. ಅಥವಾ ವಿಷಯವನ್ನು ತಿರುಚುವಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎಂದರೆ ತಪ್ಪಾಗಲಾರದು.

ಗಲಾಟೆ ನಡೆಯುತ್ತಿದ್ದಂತೆ ಹಳೆ ನಗರ ಪೊಲೀಸ್ ಠಾಣೆಗೆ ತೆರಳಿದ್ದ ಧರ್ಮಪ್ರಸಾದ್ ಬಣ, ಶಾಸಕರ ಮಗ ಬಸವ ಹಾಗೂ ಆತನ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡದ್ದಾರೆ. ಸಂಗಮೇಶ್ ಬಣದವರೂ ಸಹ ಪ್ರತಿದೂರು ನೀಡಿದ್ದಾರೆ. ಕಾಂಗ್ರೆಸ್ ಮೇಲೆ 3 ಹಾಗೂ ಬಿಜೆಪಿ ವಿರುದ್ಧ 2 ಪ್ರಕರಣಗಳು ದಾಖಲಾಗಿವೆ. ಈ ನಡುವೆ ಶಾಸಕರ ಮಗ ಬಸವ ಆಟಗಾರರ ಮೇಲೆ ಕೈ ಮಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಜಿಲ್ಲೆಯಾದ್ಯಂತ ವೈರಲ್ ಆಗಿದೆ. ಇದನ್ನು ಆಧಾರವಾಗಿಟ್ಟುಕೊಂಡು ಆತನ ವಿರುದ್ಧ ಸೆಕ್ಷನ್ 307 ಕೊಲೆ ಯತ್ನ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ. ಇದಲ್ಲದೆ, 15 ಜನ ಸಂಗಮೇಶ್ ಬೆಂಬಲಿಗರನ್ನು ಬಂಧಿಸಲಾಗಿದೆ.

ಸದನದಲ್ಲಿ ಶಾಸಕ ಸಂಗಮೇಶ್ ಹೈ ಡ್ರಾಮಾ

ತಮ್ಮ ಮಗ ಬಸವನ ಮೇಲೆ ನಾನ್ ಬೇಲಬಲ್ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತಿದ್ದಂತೆ ಶಾಸಕ ಸಂಗಮೇಶ್ ವ್ಯಗ್ರರಾಗಿದ್ದಾರೆ. ಮುಂದಿನ 30 ದಿನ ಆತನಿಗೆ ಬೇಲ್ ಸಿಗುವುದು ಅಸಾಧ್ಯವಾಗಿದ್ದು, ಇದೀಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಈ ವಿಚಾರ ಸಾಮಾನ್ಯವಾಗಿ ಸಂಗಮೇಶ್ ಆಕ್ರೋಶಕ್ಕೆ ಕಾರಣವಾಗಿದೆ.

ಏಕೆಂದರೆ ಭದ್ರಾವತಿ ಯಾವಾಗಲೂ ಸೂಕ್ಷ್ಮ ಪ್ರದೇಶಗಳಲ್ಲೊಂದು. ಅಪ್ಪಾಜಿ-ಸಂಗಮೇಶ್ ಬೆಂಬಲಿಗರ ನಡುವೆ ಆಗಾಗ್ಗೆ ಇಂತಹ ಗಲಾಟೆಗಳಾಗುವುದು ಮಾಮೂಲಿ. ಆದರೆ, ಅದಕ್ಕೊಂದು ನಿಯಂತ್ರಣವಿತ್ತು. ಯಾವ ಗಲಾಟೆಯೂ ತೀರಾ ವೀಪರೀತಕ್ಕೆ ಹೋದ ಇತಿಹಾಸವೇ ಇಲ್ಲ. ಇನ್ನು ಧರ್ಮವನ್ನು ಮುಂದಿಟ್ಟು ಜನರನ್ನು ಎತ್ತಿಕಟ್ಟುವ ಕೆಲಸಕ್ಕೆ ಇಬ್ಬರೂ ಮುಂದಾಗಿರಲಿಲ್ಲ. ಏಕೆಂದರೆ ಭದ್ರಾವತಿ ಎಲ್ಲಾ ಧರ್ಮ ಹಾಗೂ ಹಲವು ಜಾತಿಗಳ ಜನ ಒಟ್ಟಿಗೆ ವಾಸಿಸುವ ನಗರ.

ಬಸವೇಶ್

ಆದರೆ, ಇದೇ ಮೊದಲ ಬಾರಿಗೆ ಬಿಜೆಪಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ದೂರಿದೆ. ಅಲ್ಲದೆ, ಶಾಸಕರ ಮಗನನ್ನು ಜೈಲಿಗೆ ಕಳುಹಿಸಲಾಗಿದೆ. ಪರಿಣಾಮ ಈ ವಿಚಾರ ರಾಜಕೀಯವಾಗಿ ದೊಡ್ಡ ತಿರುವು ಪಡೆದುಕೊಳ್ಳುತ್ತಿದೆ. ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯೇತರ ಶಾಸಕ ಇರುವುದು ಭದ್ರಾವತಿಯಲ್ಲೇ. ಹೀಗಾಗಿ ಭದ್ರಾವತಿಯಲ್ಲೂ ಬಿಜೆಪಿ ಜಂಡಾ ಹಾರಿಸಲು ಕುತಂತ್ರ ನಡೆಸಲಾಗುತ್ತಿದೆ, ನಮ್ಮ ಮೇಲೆ ವಿನಾಃಕಾರಣ ಕೇಸು ದಾಖಲಿಸಲಾಗುತ್ತಿದೆ ಎಂಬುದು ಶಾಸಕ ಸಂಗಮೇಶ್ ಆರೋಪ.

ಇದೇ ಕಾರಣಕ್ಕೆ ಅವರು ಇತ್ತೀಚೆಗೆ ಸದನದಲ್ಲೂ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದರು. ಅದೇ ಕಾರಣಕ್ಕೆ ಅವರನ್ನು ಇದೀಗ ಸದನದಿಂದಲೇ ಅಮಾನತು ಮಾಡಲಾಗಿದೆ. ಅಲ್ಲದೆ, ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಶಿವಮೊಗ್ಗಕ್ಕೆ ತೆರಳಿ ಕಾಂಗ್ರೆಸ್ ಚಲೋ ಚಳುವಳಿಯನ್ನೂ ನಡೆಸಿದ್ದರು. ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಆದರೆ, ಈ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಹೀಗಾಗಿ ಈ ಪ್ರಕರಣ ಮುಂದೆ ಯಾವ ತಿರುವನ್ನು ಪಡೆಯಲಿದೆ? ಎಂಬುದನ್ನು ಕಾದು ನೋಡಬೇಕಿದೆ.

ಫೈನಲ್ ಪಂದ್ಯದ ಹಿಂದಿನ ದಿನವೇ ನಡೆದಿತ್ತು ಸಣ್ಣ ಕಿರಿಕ್

ಇದಿಷ್ಟು ಘಟನೆಗೆ ಸಂಬಂಧಿಸಿದ್ದಾದರೆ, ಇನ್ನೂ ಘಟನೆಯ ಹಿಂದಿನ ದಿನವೇ ಕಬ್ಬಡಿ ಆಟದ ಮೈದಾನದಲ್ಲಿ ಎರಡು ಗುಂಪುಗಳ ನಡುವೆ ಸಣ್ಣಪುಟ್ಟ ಗಲಾಟೆಗಳಾಗಿದ್ದವು. ಈ ಮಾಹಿತಿ ಪೊಲೀಸ್ ಇಲಾಖೆಗೂ ಗೊತ್ತು. ಹೀಗಾಗಿ ಭದ್ರಾವತಿ ನ್ಯೂ ಟೌನ್ ಸರ್ಕಲ್ ಇನ್ಸ್ಪೆಕ್ಟರ್ ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸಿ ಆಟದ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕಾಗಿತ್ತು. ಆದರೆ, ಅವರು ಸಿಎಂ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರಣ ಈ ವಿಚಾರವನ್ನು ಗಮನಿಸುವಲ್ಲಿ ಎಡವಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...