Homeಕರ್ನಾಟಕಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

ಸದನದಲ್ಲಿ ಶರ್ಟ್ ಬಿಚ್ಚಿದ ಸಂಗಮೇಶ್; ಅಸಲಿಗೆ ಕಬಡ್ಡಿ ಗಲಾಟೆಯಲ್ಲಿ ನಡೆದದ್ದೇನು?

- Advertisement -
- Advertisement -

eಶಿವಮೊಗ್ಗ ಬಿಜೆಪಿ ಪಕ್ಷದ ಭದ್ರಕೋಟೆ. ರಾಜ್ಯದ ಅಧಿಕಾರದ ಕೇಂದ್ರ. ಆದರೆ, ಭದ್ರಾವತಿ ತಾಲೂಕು ಮಾತ್ರ ಇದಕ್ಕೆ ಅಪವಾದ. ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಾದರೂ, ಯಡಿಯೂರಪ್ಪನವರೇ ಬಂದು ಭರ್ಜರಿ ಪ್ರಚಾರ ಮಾಡಿದರೂ ಸಹ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿನ ಬಿಜೆಪಿ ಅಭ್ಯರ್ಥಿಯ ಮತ ಈವರೆಗೆ 15 ಸಾವಿರವನ್ನೂ ಮೀರಿದ ಇತಿಹಾಸವಿಲ್ಲ. ಆ ಮಟ್ಟಿಗೆ ಭದ್ರಾವತಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಇಲ್ಲಿ ಏನಿದ್ದರೂ ಸಂಗಮೇಶ್ ವರ್ಸಸ್ ಅಪ್ಪಾಜಿ ಗೌಡ ನಡುವೆಯೇ ನೇರಾ ನೇರ ಸ್ಫರ್ಧೆಯಿತ್ತು.

ಆದರೆ, ಇದೀಗ ಜೆಡಿಎಸ್ ಪಕ್ಷದ ಮಾಜಿ ಶಾಸಕ ಅಪ್ಪಾಜಿ ಗೌಡ ನಿಧನರಾಗಿದ್ದಾರೆ. ಹೀಗಾಗಿ ಈಗ ಭದ್ರಾವತಿ ಮಟ್ಟಿಗೆ ಜೆಡಿಎಸ್ ನಾವಿಕನಿಲ್ಲದ ಹಡಗಿನಂತಾಗಿದ್ದು, ಜೆಡಿಎಸ್ ಕಾರ್ಯಕರ್ತರು ಕಂಗಾಲಾಗಿದ್ದಾರೆ. ಹಾಲಿ ಕಾಂಗ್ರೆಸ್ ಶಾಸಕ ಸಂಗಮೇಶ್ ಪಾಲಿಗೆ ರಾಜಕೀಯ ಎದುರಾಳಿಯೇ ಇಲ್ಲದಂತಾಗಿದೆ. ಈ ಪರಿಸ್ಥಿಯ ಲಾಭ ಪಡೆಯಲು ಮುಂದಾಗಿರುವ ಬಿಜೆಪಿ ಭದ್ರಾವತಿಯಲ್ಲಿ ತನ್ನ ಮಾಮೂಲಿ ತಂತ್ರಗಾರಿಕೆ ಹೂಡುವ ಮೂಲಕ ಸಂಗಮೇಶ್‌ಗೆ ಪರ್ಯಾಯವಾಗಿ ಬಿಂಬಿಸಿಕೊಳ್ಳುವ ಯತ್ನದಲ್ಲಿದೆ.

ಇಂತಹ ಯತ್ನಗಳಲ್ಲೊಂದೆ ಭದ್ರಾವತಿಯಲ್ಲಿ ಇತ್ತೀಚೆಗೆ ಕಬಡ್ಡಿ ಅಂಗಳದಲ್ಲಿ ನಡೆದ ಗಲಾಟೆ. ಬಿ.ವೈ ವಿಜಯೇಂದ್ರ ಭದ್ರಾವತಿ ಪಕ್ಷ ಸಂಘಟನೆಯ ಕಾರಣಕ್ಕಾಗಿ ಭದ್ರಾವತಿ ನಗರದಲ್ಲಿ ಕಾಲಿಡುತ್ತಿದ್ದಂತೆ, ಇಂತಹದ್ದೊಂದು ಗಲಾಟೆ ನಡೆದಿರುವುದು ಸಹ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಈ ನಡುವೆ ಭದ್ರಾವತಿ ಶಾಸಕ ಇದೇ ವಿಚಾರವಾಗಿ ಸದನದಲ್ಲಿ ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದು, ಸದನದಿಂದ ಅಮಾನತುಗೊಂಡಿದ್ದು ಇಡೀ ರಾಜ್ಯದ ಗಮನ ಸೆಳೆದಿತ್ತು. ಹಾಗಾದರೆ ಏನಿದು ಗಲಾಟೆ?

ಭದ್ರಾವತಿ ಕಬಡ್ಡಿ ಅಂಗಳದಲ್ಲಿ ನಡೆದದ್ದೇನು?

ಭದ್ರಾವತಿಯಲ್ಲಿ ಪ್ರತಿ ವರ್ಷ ಮಾಜಿ ಶಾಸಕ ಅಪ್ಪಾಜಿ ಗೌಡ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದರೆ, ಹಾಲಿ ಶಾಸಕ ಸಂಗಮೇಶ್ ಕಬಡ್ಡಿ ಟೂರ್ನಮೆಂಟ್ ಆಯೋಜನೆ ಮಾಡುವುದು ವಾಡಿಕೆ. ರಾಜ್ಯ ಮಟ್ಟದ ಈ ಟೂರ್ನಿಗಳಲ್ಲಿ ಭಾಗವಹಿಸಲು ರಾಜ್ಯದ ನಾನಾ ಮೂಲೆಗಳಿಂದ ಕ್ರೀಡಾಪಟುಗಳು ಭದ್ರಾವತಿಗೆ ಆಗಮಿಸುತ್ತಾರೆ. ಗೆದ್ದವರಿಗೆ ಆಕರ್ಷಕ ಬಹುಮಾನಗಳೂ ಉಂಟು.

ಅದಂರತೆ ನಗರದ ಕನಕ ಮಂಟಪ ಆಟದ ಮೈದಾನದಲ್ಲಿ ಈ ಭಾರಿ ಫೆಬ್ರವರಿ 28ರಂದು ಶಾಸಕ ಸಂಗಮೇಶ್ ನೇತೃತ್ವದಲ್ಲಿ ಕಬಡ್ಡಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಧರ್ಮಪ್ರಸಾದ್ ಅವರ ತಂಡವೂ ಭಾಗವಹಿಸಿತ್ತು. ಗಲಭೆಗೆ ಇಷ್ಟು ಮಾತ್ರದ ಕಾರಣ ಸಾಕಾಗಿತ್ತು.

ಶಾಸಕ ಸಂಗಮೇಶ್ ಅವರ ತಂಡ ಲೀಗ್ ಹಂತದಲ್ಲೇ ಸೋಲನುಭವಿಸಿ ಕೂಟದಿಂದ ಹೊರನಡೆದಿತ್ತು. ಫೈನಲ್ ಪಂದ್ಯದಲ್ಲಿ ಸ್ಥಳೀಯ ವ್ಯಕ್ತಿ ಉಮೇಶ್ ನೇತೃತ್ವದ ತಂಡ ಹಾಗೂ ಧರ್ಮಪ್ರಸಾದ್ ನೇತೃತ್ವದ ತಂಡ ಸೆಣಸಿದ್ದರೂ ಗೆದ್ದದ್ದು ಮಾತ್ರ ಉಮೇಶ್ ತಂಡ. ಆದರೆ, ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದ ಧರ್ಮಪ್ರಸಾದ್ ತಂಡ ಆಟದ ಮೈದಾನದಲ್ಲೆ ಪಟಾಕಿ ಹಚ್ಚಿ ಸಂಭ್ರಮಿಸಲು ಮುಂದಾಗಿತ್ತು.

ಅಸಲಿಗೆ ಕಬಡ್ಡಿ ಕೂಟಕ್ಕಾಗಿ 10 ಲಕ್ಷ ಖರ್ಚು ಮಾಡಿ ಸಿಂಥೆಟಿಕ್ ಮ್ಯಾಟ್ ಹಾಕಲಾಗಿತ್ತು. ಹೀಗಾಗಿ ಇಲ್ಲಿ ಪಟಾಕಿ ಸಿಡಿಸಬೇಡಿ ಎಂದು ಶಾಸಕ ಸಂಗಮೇಶ್ ಮಗ ಬಸವೇಶ್ ತಾಕೀತು ಮಾಡಿದ್ದಾರೆ. ಆದರೆ, ಗೆದ್ದ ಹುಮ್ಮಸ್ಸಿನಲ್ಲಿದ್ದ ಧರ್ಮಪ್ರಸಾದ್ ತಂಡ ಈ ಮಾತನ್ನು ಕೇಳುವ ಗೋಜಿಗೆ ಹೋಗಿಲ್ಲ. ಪರಿಣಾಮ ಸ್ಥಳದಲ್ಲಿ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ತಾಳ್ಮೆ ಕಳೆದುಕೊಂಡ ಶಾಸಕರ ಮಗ ಬಸವೇಶ್ ಬಿಜೆಪಿ ಬೆಂಬಲಿತರ ಮೇಲೆ ಕೈ ಮಾಡಿದ್ದು ನಿಜ. ಸಂಗಮೇಶ್ ಹಾಗೂ ಧರ್ಮಪ್ರಸಾದ್ ಬಣಗಳ ನಡುವೆ ತಳ್ಳಾಟ ನೂಕಾಟವಾಗಿ, ಅದು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿತು.

ಈ ವೇಳೆ ಬಿಜೆಪಿ ಬೆಂಬಲಿತರೂ ಸಹ ಪ್ರತಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಗಲಾಟೆಯಾಗುತ್ತಿದ್ದಂತೆ ಸ್ಥಳದಲ್ಲಿ ಜೈ ಶ್ರೀರಾಮ್, ಭಾರತ್ ಮಾತಾಕಿ ಜೈ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ಜಗಳ ಕೊನೆಗೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬಲ್ಲಿಗೆ ಬಂದು ನಿಂತಿದೆ. ಅಥವಾ ವಿಷಯವನ್ನು ತಿರುಚುವಲ್ಲಿ ಬಿಜೆಪಿ ಯಶಸ್ವಿಯಾಗಿದೆ ಎಂದರೆ ತಪ್ಪಾಗಲಾರದು.

ಗಲಾಟೆ ನಡೆಯುತ್ತಿದ್ದಂತೆ ಹಳೆ ನಗರ ಪೊಲೀಸ್ ಠಾಣೆಗೆ ತೆರಳಿದ್ದ ಧರ್ಮಪ್ರಸಾದ್ ಬಣ, ಶಾಸಕರ ಮಗ ಬಸವ ಹಾಗೂ ಆತನ ಬೆಂಬಲಿಗರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡದ್ದಾರೆ. ಸಂಗಮೇಶ್ ಬಣದವರೂ ಸಹ ಪ್ರತಿದೂರು ನೀಡಿದ್ದಾರೆ. ಕಾಂಗ್ರೆಸ್ ಮೇಲೆ 3 ಹಾಗೂ ಬಿಜೆಪಿ ವಿರುದ್ಧ 2 ಪ್ರಕರಣಗಳು ದಾಖಲಾಗಿವೆ. ಈ ನಡುವೆ ಶಾಸಕರ ಮಗ ಬಸವ ಆಟಗಾರರ ಮೇಲೆ ಕೈ ಮಾಡುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಜಿಲ್ಲೆಯಾದ್ಯಂತ ವೈರಲ್ ಆಗಿದೆ. ಇದನ್ನು ಆಧಾರವಾಗಿಟ್ಟುಕೊಂಡು ಆತನ ವಿರುದ್ಧ ಸೆಕ್ಷನ್ 307 ಕೊಲೆ ಯತ್ನ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ. ಇದಲ್ಲದೆ, 15 ಜನ ಸಂಗಮೇಶ್ ಬೆಂಬಲಿಗರನ್ನು ಬಂಧಿಸಲಾಗಿದೆ.

ಸದನದಲ್ಲಿ ಶಾಸಕ ಸಂಗಮೇಶ್ ಹೈ ಡ್ರಾಮಾ

ತಮ್ಮ ಮಗ ಬಸವನ ಮೇಲೆ ನಾನ್ ಬೇಲಬಲ್ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತಿದ್ದಂತೆ ಶಾಸಕ ಸಂಗಮೇಶ್ ವ್ಯಗ್ರರಾಗಿದ್ದಾರೆ. ಮುಂದಿನ 30 ದಿನ ಆತನಿಗೆ ಬೇಲ್ ಸಿಗುವುದು ಅಸಾಧ್ಯವಾಗಿದ್ದು, ಇದೀಗ ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಈ ವಿಚಾರ ಸಾಮಾನ್ಯವಾಗಿ ಸಂಗಮೇಶ್ ಆಕ್ರೋಶಕ್ಕೆ ಕಾರಣವಾಗಿದೆ.

ಏಕೆಂದರೆ ಭದ್ರಾವತಿ ಯಾವಾಗಲೂ ಸೂಕ್ಷ್ಮ ಪ್ರದೇಶಗಳಲ್ಲೊಂದು. ಅಪ್ಪಾಜಿ-ಸಂಗಮೇಶ್ ಬೆಂಬಲಿಗರ ನಡುವೆ ಆಗಾಗ್ಗೆ ಇಂತಹ ಗಲಾಟೆಗಳಾಗುವುದು ಮಾಮೂಲಿ. ಆದರೆ, ಅದಕ್ಕೊಂದು ನಿಯಂತ್ರಣವಿತ್ತು. ಯಾವ ಗಲಾಟೆಯೂ ತೀರಾ ವೀಪರೀತಕ್ಕೆ ಹೋದ ಇತಿಹಾಸವೇ ಇಲ್ಲ. ಇನ್ನು ಧರ್ಮವನ್ನು ಮುಂದಿಟ್ಟು ಜನರನ್ನು ಎತ್ತಿಕಟ್ಟುವ ಕೆಲಸಕ್ಕೆ ಇಬ್ಬರೂ ಮುಂದಾಗಿರಲಿಲ್ಲ. ಏಕೆಂದರೆ ಭದ್ರಾವತಿ ಎಲ್ಲಾ ಧರ್ಮ ಹಾಗೂ ಹಲವು ಜಾತಿಗಳ ಜನ ಒಟ್ಟಿಗೆ ವಾಸಿಸುವ ನಗರ.

ಬಸವೇಶ್

ಆದರೆ, ಇದೇ ಮೊದಲ ಬಾರಿಗೆ ಬಿಜೆಪಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ದೂರಿದೆ. ಅಲ್ಲದೆ, ಶಾಸಕರ ಮಗನನ್ನು ಜೈಲಿಗೆ ಕಳುಹಿಸಲಾಗಿದೆ. ಪರಿಣಾಮ ಈ ವಿಚಾರ ರಾಜಕೀಯವಾಗಿ ದೊಡ್ಡ ತಿರುವು ಪಡೆದುಕೊಳ್ಳುತ್ತಿದೆ. ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯೇತರ ಶಾಸಕ ಇರುವುದು ಭದ್ರಾವತಿಯಲ್ಲೇ. ಹೀಗಾಗಿ ಭದ್ರಾವತಿಯಲ್ಲೂ ಬಿಜೆಪಿ ಜಂಡಾ ಹಾರಿಸಲು ಕುತಂತ್ರ ನಡೆಸಲಾಗುತ್ತಿದೆ, ನಮ್ಮ ಮೇಲೆ ವಿನಾಃಕಾರಣ ಕೇಸು ದಾಖಲಿಸಲಾಗುತ್ತಿದೆ ಎಂಬುದು ಶಾಸಕ ಸಂಗಮೇಶ್ ಆರೋಪ.

ಇದೇ ಕಾರಣಕ್ಕೆ ಅವರು ಇತ್ತೀಚೆಗೆ ಸದನದಲ್ಲೂ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದರು. ಅದೇ ಕಾರಣಕ್ಕೆ ಅವರನ್ನು ಇದೀಗ ಸದನದಿಂದಲೇ ಅಮಾನತು ಮಾಡಲಾಗಿದೆ. ಅಲ್ಲದೆ, ಎಲ್ಲಾ ಪ್ರಮುಖ ಕಾಂಗ್ರೆಸ್ ನಾಯಕರು ಶಿವಮೊಗ್ಗಕ್ಕೆ ತೆರಳಿ ಕಾಂಗ್ರೆಸ್ ಚಲೋ ಚಳುವಳಿಯನ್ನೂ ನಡೆಸಿದ್ದರು. ಬಿಜೆಪಿ ವಿರುದ್ಧ ಹರಿಹಾಯ್ದಿದ್ದರು. ಆದರೆ, ಈ ಬಗ್ಗೆ ಸರ್ಕಾರ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಹೀಗಾಗಿ ಈ ಪ್ರಕರಣ ಮುಂದೆ ಯಾವ ತಿರುವನ್ನು ಪಡೆಯಲಿದೆ? ಎಂಬುದನ್ನು ಕಾದು ನೋಡಬೇಕಿದೆ.

ಫೈನಲ್ ಪಂದ್ಯದ ಹಿಂದಿನ ದಿನವೇ ನಡೆದಿತ್ತು ಸಣ್ಣ ಕಿರಿಕ್

ಇದಿಷ್ಟು ಘಟನೆಗೆ ಸಂಬಂಧಿಸಿದ್ದಾದರೆ, ಇನ್ನೂ ಘಟನೆಯ ಹಿಂದಿನ ದಿನವೇ ಕಬ್ಬಡಿ ಆಟದ ಮೈದಾನದಲ್ಲಿ ಎರಡು ಗುಂಪುಗಳ ನಡುವೆ ಸಣ್ಣಪುಟ್ಟ ಗಲಾಟೆಗಳಾಗಿದ್ದವು. ಈ ಮಾಹಿತಿ ಪೊಲೀಸ್ ಇಲಾಖೆಗೂ ಗೊತ್ತು. ಹೀಗಾಗಿ ಭದ್ರಾವತಿ ನ್ಯೂ ಟೌನ್ ಸರ್ಕಲ್ ಇನ್ಸ್ಪೆಕ್ಟರ್ ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸಿ ಆಟದ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಬೇಕಾಗಿತ್ತು. ಆದರೆ, ಅವರು ಸಿಎಂ ಯಡಿಯೂರಪ್ಪನವರ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕಾರಣ ಈ ವಿಚಾರವನ್ನು ಗಮನಿಸುವಲ್ಲಿ ಎಡವಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಕಾಂಗ್ರೆಸ್ ನಾಯಕರ-ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸು ಆರೋಪ: ಬಿಜೆಪಿ ವಿರುದ್ಧ ಶಿವಮೊಗ್ಗ ಚಲೋ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...