Homeಮುಖಪುಟನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆ: ಪ್ರತಾಪ್ ಹುಣಸೂರು

- Advertisement -
- Advertisement -

ಯಾವುದೋ ಕಾಲದಲ್ಲಿ ಸೃಷ್ಟಿಸಿ ವ್ಯಾಪಕವಾಗಿದ್ದ ದುರ್ನೀತಿಯ ವರ್ಣವ್ಯವಸ್ಥೆ, ಜಾತಿಯ ಉಗಮಕ್ಕೆ ಕಾರಣವಾಗಿ ಮನುಷ್ಯ-ಮನುಷ್ಯ ನಡುವೆ ನಿರ್ಬಂಧಗಳನ್ನು ಸೃಷ್ಟಿಸಿತ್ತು. ಜಾತಿ ಅಂದಿನಿಂದಲೂ ತನ್ನ ಕಬಂಧ ಬಾಹುಗಳನ್ನು ವಿಸ್ತರಿಸಿಕೊಳ್ಳುತ್ತಾ ಬೆಳೆಯುತ್ತಿದೆ. ಜಾತಿ, ಅಸ್ಪೃಶ್ಯತೆ ನಮಲ್ಲಿ ಎಷ್ಟು ಆಳಕ್ಕೆ ಬೇರೂರಿದೆಯೆಂದರೆ, ಅದನ್ನು ಎಷ್ಟು ಬಾರಿ ಕಡಿದರೂ ಮತ್ತೆ ಮತ್ತೆ ಮರವಾಗಿ ಬೇರೆ-ಬೇರೆ ಸ್ವರೂಪಗಳಲ್ಲಿ ಬೆಳೆಯುತ್ತಲೇ ಇದೆ. ಈ ಜಾತಿಯ ಭೂತ ನೀರಿಗೂ ಅಂಟಿಕೊಂಡಿತ್ತು.

ಉತ್ತರ ಪ್ರದೇಶದ ಗಾಜಿಯಾಬಾದ್‌ನ ದಾಸನ ದೇವಿ ಮಂದಿರ್ ದೇವಾಲಯದಲ್ಲಿ ನೀರು ಕುಡಿದಿದ್ದಕ್ಕಾಗಿ ಮುಸ್ಲಿಂ ಬಾಲಕನೊಬ್ಬನ ಮೇಲೆ ಶೃಂಗಿ ನಂದನ್ ಯಾದವ್ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಜೊತೆಗೆ ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿಯಬಿಟ್ಟಿದ್ದ. ಅಲ್ಲದೇ ಹಿಂದು ಏಕ್ತಾ ಸಂಘ್ ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ, ಮುಸ್ಲಿಂ ಬಾಲಕನಿಗೆ ಥಳಿಸುವ ವಿಡಿಯೋವನ್ನು ಅಪ್‌ಲೋಡ್ ಮಾಡಿ, ಈ ರೀತಿಯ ಧರ್ಮರಕ್ಷಣೆಯ ಕೆಲಸಗಳಿಗಾಗಿ, ಕೇಸುಗಳ ವಿರುದ್ಧ ಹೋರಾಡುವುದಕ್ಕಾಗಿ ದೇಣಿಗೆ ನೀಡುವಂತೆ ಮನವಿ ಮಾಡಿದ್ದಾನೆ. ಜೊತೆಗೆ ನೀರು ಕುಡಿದಿದ್ದಕ್ಕಾಗಿ ಬಾಲಕನ ಪುರುಷತ್ವ ಹರಣ ಮಾಡಬೇಕು ಎಂದೂ ಬರೆದುಕೊಂಡಿದೆ.

ವೈರಲ್ ವಿಡಿಯೋದಲ್ಲಿ ಆರೋಪಿ ಶೃಂಗಿ ನಂದನ್ ಯಾದವ್, ಆ ಹುಡುಗನಿಗೆ ತನ್ನ ಹೆಸರನ್ನು ಕೇಳಿದ್ದಾನೆ. ಅದಕ್ಕೆ ಆ ಹುಡುಗ ತನ್ನ ಹೆಸರು ಆಸಿಫ್ ಎಂದು ಹೇಳಿದ್ದು, ನೀರು ಕುಡಿಯಲು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಉತ್ತರಿಸಿದ್ದಾನೆ. ಅದಕ್ಕೆ ಕೋಪಗೊಂಡ ಆರೋಪಿ ಅಮಾನುಷವಾಗಿ ಥಳಿಸಿದ್ದಲ್ಲದೆ, ಕಾಲಿನಲ್ಲಿ ಒದ್ದಿದ್ದಾನೆ ಮತ್ತು ಕೈಮುರಿಯಲು ಯತ್ನಿಸಿದ್ದಾನೆ. ಇದು ವಿಡಿಯೋದಲ್ಲಿ ದಾಖಲಾಗಿದೆ.

ಶತಮಾನಗಳಷ್ಟು ಹಿಂದೆಯೇ ಊರಿನಲ್ಲಿರುವ ಸಾರ್ವಜನಿಕ ಬಾವಿಯಲ್ಲಿನ ನೀರನ್ನು ಜಾತಿವ್ಯವಸ್ಥೆಯ ಪಿರಮಿಡ್‌ನಲ್ಲಿ ಕೆಳಗಿದ್ದ ಶೂದ್ರರು ಮತ್ತು ಅವರಿಗೂ ಹಿಂದುಳಿದವರು ಮುಟ್ಟುವಂತಿರಲಿಲ್ಲ. ಕುಡಿಯುವ ನೀರು ಒಂದುಕಡೆಯಾದರೆ, ಕೆಳಜಾತಿಯವರ ಮನೆಯಿಂದ ಬರುವ ಚರಂಡಿ ನೀರೂ ಕೂಡ ಮೇಲ್ಜಾತಿಯವರ ಚರಂಡಿ ನೀರಿನೊಂದಿಗೆ ಬೆರೆಯಬಾರದು ಎಂಬ ಕಾರಣಕ್ಕೆ ಎತ್ತರದ ಪ್ರದೇಶದಲ್ಲಿ ಮೇಲ್ಜಾತಿಯವರು ಮನೆ ನಿರ್ಮಿಸಿಕೊಳ್ಳುತ್ತಿದ್ದರು. ಕೆಳಜಾತಿಯವರಿಗೆ ತಗ್ಗು ಪ್ರದೇಶಗಳಲ್ಲಿಯೇ ಉಳಿಯುವಂತೆ ನೋಡಿಕೊಳ್ಳುತ್ತಿದ್ದರು. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೆಳಜಾತಿಯವರ ನೆರಳೂ ಕೂಡ ಮೇಲ್ಜಾತಿಯವರ ಮೇಲೆ ಬೀಳಬಾರದು ಎಂಬ ಕಾರಣಕ್ಕೆ ಬೆಳಿಗ್ಗೆ ಸೂರ್ಯ ನೆತ್ತಿಗೇರುವ ಮುನ್ನ ಕೆಳಜಾತಿಯವರು ಬೀದಿಯಲ್ಲಿ ಓಡಾಡುವಂತಿರಲಿಲ್ಲ. ಇಳಿಸಂಜೆಯ ಹೊತ್ತಿಗೆ ಕೆಳಜಾತಿಯವರು ಹಟ್ಟಿ ಸೇರಿಕೊಳ್ಳಬೇಕಾಗಿತ್ತು. (ಯಾಕೆಂದರೆ ಈ ಸಮಯದಲ್ಲಿ ಯಾವುದೇ ವ್ಯಕ್ತಿಯ ನೆರಳು ಉದ್ದವಾಗಿರುತ್ತದೆ)

ಹೀಗೆ ನೀರು ನೆರಳಿಗೂ ಜಾತಿ ಅಂಟಿಸಿದ ನಮ್ಮ ಭವ್ಯ ಪರಂಪರೆಯ ಸಂತತಿ ಹೆಚ್ಚುತ್ತಿದೆ. ಒಬ್ಬ ಮುಸ್ಲಿಂ ಹುಡುಗನಿಗೆ ಬಾಯಾರಿಕೆಯಾಗಿ ದೇವಸ್ಥಾನದೊಳಗೆ ಹೋಗಿ ನೀರು ಕುಡಿದ ಎನ್ನುವ ಕಾರಣಕ್ಕೆ ಇದನ್ನು ಸಹಿಸದೆ ಆ ಹುಡುಗನ ಮೇಲೆ ಹಲ್ಲೆ ಮಾಡಿರುವ ಮೇಲ್ಜಾತಿಯವನೇ ಈ ಸಂತತಿಯ ವಾರಸುದಾರ. ಇನ್ನೂ ಉಳಿದುಕೊಂಡಿರುವ ಈ ದೊಡ್ಡ ಸಂತತಿಯ ಪ್ರತಿನಿಧಿ.

ಇಂತಹ ದೌರ್ಜನ್ಯಗಳ ವಿರುದ್ಧ ಬಹುಶಃ ಇಡೀ ಭಾರತದಲ್ಲಿ ಮೊದಲು ನೇರಾ-ನೇರ ದನಿಯೆತ್ತಿದವರು ನಮ್ಮ ವಚನಕಾರರು. ಇದಕ್ಕೆ ಒಂದು ಸ್ಪಷ್ಟ ಮತ್ತು ಸಣ್ಣ ಉದಾಹರಣೆಗೆ ಅಲ್ಲಮನ ಈ ವಚನವನ್ನು ನೆನಪಿಸಿಕೊಳ್ಳಬಹುದು.

ನಾ ದೇವನಲ್ಲದೆ ನೀ ದೇವನೆ
ನೀ ದೇವನಾದರೆ ಎನ್ನನೇಕೆ ಸಲಹೆ
ಆರೈದು ಒಂದು ಕುಡಿತೆ ಉದಕವನೆರೆವೆ
ಹಸಿದಾಗ ಒಂದು ತುತ್ತು ಓಗರವನಿಕ್ಕುವೆ
ನಾ ದೇವ ಕಾಣಾ ಗುಹೇಶ್ವರ

“ನಾನು ದೇವರು. ನೀನು ದೇವರಾಗಲು ಹೇಗೆ ಸಾಧ್ಯ? ನೀನು ದೇವರಾದರೆ ನನ್ನನ್ನು ಯಾಕೆ ಸಲಹುವುದಿಲ್ಲ? ಯಾರಾದರೂ ಬಂದು ಕುಳಿತರೆ ನೀರು ಕೊಡುವೆ. ಹಸಿದಾಗ ಒಂದು ತುತ್ತು ಅನ್ನ ಕೊಡುವೆ. ನಾನೇ ದೇವರು” ಎಂದು ಅಲ್ಲಮಪ್ರಭು ಹೇಳುತ್ತಾರೆ.

ಈ ವಚನ ದೇವರನ್ನು ಉದ್ದೇಶಿಸಿರುವುದಲ್ಲ, ಬದಲಿಗೆ ಆ ದೇವರನ್ನೂ ರಾಜಕೀಯಗೊಳಿಸಿ, ಅದಕ್ಕೂ ಅಸ್ಪೃಶ್ಯತೆ ಅಂಟಿಸಿದ ಕರ್ಮಟ ವೈದಿಕರಿಗೆ ಹೇಳುತ್ತಿರುವ ಮಾತಿದು.

ಯಾರೂ ಯಾರನ್ನೂ ಭೇದದಿಂದ ನಡೆಸಿಕೊಳ್ಳಬಾರದು ಮತ್ತು ಸಮಾನತೆ, ಭ್ರಾತೃತ್ವದಿಂದ ಕಾಣಬೇಕು ಎಂದು ಇದೇ ರೀತಿಯ ತತ್ವ ಸಿದ್ಧಾಂತವನ್ನು ಬುದ್ಧನೂ ಕೂಡ ಕ್ರಿಸ್ತಪೂರ್ವದಲ್ಲೆ ಹೇಳಿದ್ದ. ಆದರೆ ಬಸವಣ್ಣನ ನೇತೃತ್ವದಲ್ಲಿ ನಡೆದ ಈ ಕಲ್ಯಾಣದ ಕ್ರಾಂತಿಯನ್ನು ಆದಷ್ಟು ಬೇಗನೆ ಮುಗಿಸಿದವರು, ಬುದ್ಧನನ್ನು ವಿಷ್ಣುವಿನ ಅವತಾರ ಮಾಡಿದವರೂ ಈ ಭವ್ಯ ಪರಂಪರೆಯ ವಾರಸುದಾರರೇ.

ಕೆರೆಯಲ್ಲಿ ದಲಿತರು ನೀರು ಮುಟ್ಟಬಾರದು ಎಂಬುದರ ವಿರುದ್ಧ ಚೌಡಾರ್ ಕರೆ ನೀರನ್ನು ಮುಟ್ಟಿ ಅಂಬೇಡ್ಕರ್ ಪ್ರತಿಭಟಿಸಿದ್ದರು. ಇದು ಬಹಶ: ಸ್ವತಂತ್ರಪೂರ್ವದಲ್ಲಿ ಸಮಾನತೆಗೆ ನಡದ ಮೊದಲನೇ ಬಹುದೊಡ್ಡ ಆಂದೋಲನ. ಇದನ್ನು ಸಹಿಸದ ಇದೇ ವಾರಸುದಾರರು ಅಂದು ಅವರ ಮೇಲೆ ಹಲ್ಲೆ ಮಾಡಿದ್ದರು. ಇದನ್ನು ಪ್ರಶ್ನಿಸಿದರೆ, ಕೆಲವು ಸುಪ್ತ ಮನುವಾದಿಗಳು, “ಇದು ಯಾವುದೋ ಕಾಲದಲ್ಲಿ ಆಗಿದ್ದು. ಇದನ್ನೇ ಇಟ್ಟುಕೊಂಡು ಇನ್ನೂ ಎಷ್ಟು ಕಾಲ ಕಳೆಯುತ್ತೀರಾ? ಇಂತಹವುಗಳೆಲ್ಲಾ ಈಗ ನಡೆಯುತ್ತಿಲ್ಲ. ಎಲ್ಲರೂ ಬದಲಾಗಿದ್ದಾರೆ” ಎಂದು ಹೇಳುತ್ತಾರೆ.

ಅದರೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿರುವ ಘಟನೆಗೂ ಅಂಬೇಡ್ಕರ್ ಅವರ ಕಾಲದಲ್ಲಿ ನಡೆದಿರುವ ಈ ಘಟನೆಗೂ ವ್ಯತ್ಯಾಸವೇನಾದರೂ ಇದೆಯೇ? ವಾಸ್ತವದಲ್ಲಿ ಇವೆರಡಕ್ಕೂ ಸಂಬಂಧ ಇದೆ. ಆದರೆ ಇದನ್ನೂ ಸಮರ್ಥಿಸಿಕೊಳ್ಳುವವರು ಇದ್ದಾರೆ ಎಂದರೆ ಈ ದೇಶದ ಪರಿಸ್ಥಿತಿಯನ್ನು ಪದಗಳಲ್ಲಿ ಬಣ್ಣಿಸಲು ಸಾಧ್ಯವಿಲ್ಲ. ಕುದುರೆ ಏರಿದ್ದಕ್ಕೆ, ಮೀಸೆ ಬಿಟ್ಟಿದ್ದಕ್ಕೆ, ನೀರು ಕುಡಿದಿದ್ದಕ್ಕೆ, ಪ್ರೀತಿ ಮಾಡಿದ್ದಕ್ಕೆ ಕೈಕಾಲು ಮುರಿಯುವ ಪುರುಷತ್ವ ಹರಣ ಮಾಡುವ ಮನಸ್ಥಿತಿ ಇಷ್ಟು ಅಗಾಧವಾಗಿ ಬೆಳೆಯಲು ಯಾವ ಕುಯುಕ್ತಿ ಕೆಲಸ ಮಾಡುತ್ತಿದೆ ಎಂಬುದು ಎಲ್ಲರಿಗೂ ಗೋಚರವಾಗುತ್ತದೆ. ಮುಕ್ತ ಮನಸ್ಸಿನಿಂದ ಕಾಣುವ ಹೃದಯವಂತಿಕೆ ಬೆಳೆಸಿಕೊಳ್ಳಬೇಕಷ್ಟೇ!

ಭಾರತವನ್ನು ವಿಶ್ವಗುರು ಮಾಡಲು ನೀರೆರೆದು ಪೋಷಿಸುತ್ತಿರುವ ಹೊತ್ತಲ್ಲೇ ಇಲ್ಲೊಬ್ಬ ನೀರು ಕುಡಿದಿದ್ದಕ್ಕೆ ಹಲ್ಲೆಗೊಳಗಾಗಿದ್ದಾನೆ. ಹೀಗಿರುವಾಗ ನನ್ನ ದೇಶವನ್ನು ವಿಶ್ವಗುರು ಎಂದು ಹೇಗೆ ಒಪ್ಪಿಕೊಳ್ಳುವುದು? ನಮ್ಮ ಪರಂಪರೆ ವಿಶ್ವಕ್ಕೆ ಮಾದರಿ ಎಂದು ಹೇಳುತ್ತಿರುವವರು ಇಂತಹ ಅನಿಷ್ಟ ಪರಂಪರೆಯನ್ನು ಮರೆತರೇಕೆ?
ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ #SorryAsif ಹ್ಯಾಷ್‌ಟ್ಯಾಗ್ ಮೂಲಕ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಆದರೆ ಎಷ್ಟು ದಿನ, ಹೀಗೆ ಖಂಡನೆಗಳಲ್ಲೆ ತಾತ್ಕಾಲಿಕವಾಗಿ ಮರೆಯಾಗಿ ಮತ್ತೊಂದು ದಿನ ಇನ್ನೆಲ್ಲೋ ಚಿಗುರಿ ಎದ್ದು, ನೀರು ಕುಡಿದಿದ್ದಕ್ಕೆ ಮತ್ತೊಬ್ಬ ಥಳಿತಗೊಂಡು ಅವಮಾನಕ್ಕೆ ಗುರಿಯಾಗಬೇಕು? ಸಂವಿಧಾನದಲ್ಲಿ ಹೇಳಿಕೊಟ್ಟಿರುವ ಸಮಾನತೆ, ಭ್ರಾತೃತ್ವವನ್ನು ಮೈಗೂಡಿಸಿಕೊಳ್ಳಲು ನನ್ನ ದೇಶವಾಸಿಗಳಿಗೆ ಏಕಿಷ್ಟು ಕಷ್ಟ?

ಪ್ರತಾಪ್ ಹುಣಸೂರು

ಪ್ರತಾಪ್ ಹುಣಸೂರು
ಸಂಶೋಧನಾ ವಿದ್ಯಾರ್ಥಿ. ಸದ್ಯ ನಾನುಗೌರಿ.ಕಾಂನಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ದೇವಾಲಯದಲ್ಲಿ ನೀರು ಕುಡಿದ ಮುಸ್ಲಿಂ ಬಾಲಕನ ಮೇಲೆ ಕ್ರೂರ ಹಲ್ಲೆ: #SorryAsif ಎಂದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...