Homeಮುಖಪುಟಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

ಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

- Advertisement -
ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೂನಿಯರ್ ಇಂದಿರಾ ಗಾಂಧಿ ಎಂತಲೇ ಪ್ರಸಿದ್ಧರಾಗಿರುವ ಪ್ರಿಯಾಂಕಾ ಗಾಂಧಿ ಈ ಚುನಾವಣೆಯಲ್ಲಿ ವಾರಣಾಸಿಯಿಂದ ಪ್ರಧಾನಿ ಮೋದಿಯವರ ವಿರುದ್ಧ ಕಣಕ್ಕಿಳಿಯುವ ಸೂಚನೆ ರವಾನಿಸಿದ್ದಾರೆ. ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‍ನಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ “ನೀವು ವಾರಣಾಸಿಯಿಂದ ಸ್ಪರ್ಧಿಸುತ್ತೀರಿ ಎಂಬ ಸುದ್ದಿ ಇದೆ. ಇದು ನಿಜವಾ?” ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿರುವ ಪ್ರಿಯಾಂಕ “ಒಂದುವೇಳೆ ಕಾಂಗ್ರೆಸ್ ಅಧ್ಯಕ್ಷರು ಸ್ಪರ್ಧಿಸಲು ಹೇಳಿದರೆ, ನಾನು ಖುಷಿಯಿಂದ ಸ್ಪರ್ಧಿಸುತ್ತೇನೆ” ಎಂದಿದ್ದಾರೆ. ಆ ಮೂಲಕ ಮೋದಿ ವಿರುದ್ಧದ ತನ್ನ ಸೆಣೆಸಾಟದ ನಿರ್ಧಾರವನ್ನು ಅಣ್ಣ ರಾಹುಲ್ ಗಾಂಧಿಯ ಅಂಗಳಕ್ಕೆ ತಳ್ಳಿದ್ದಾರೆ.
ತಮ್ಮ ಕುಟುಂಬದ ಭದ್ರ ಕೋಟೆಗಳಾದ ಅಮೇಥಿ, ರಾಯ್‍ಬರೇಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಷ್ಟೇ ಸೀಮಿತವಾಗಿದ್ದ ಪ್ರಿಯಾಂಕಾ ಗಾಂಧಿಯವರು ಈ ವರ್ಷದ ಫೆಬ್ರವರಿಯಲ್ಲಷ್ಟೆ ಪೂರ್ವ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಆದರೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ, ಇಲ್ಲವಾ ಎಂಬ ಬಗ್ಗೆ ಯಾವ ಸ್ಪಷ್ಟ ಮಾಹಿತಿಯೂ ಇಲ್ಲ. ಆ ಕಾರಣಕ್ಕೆ ಅವರ ಸ್ಪರ್ಧೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಲೇ ಇವೆ.
ಕಳೆದ ತಿಂಗಳಷ್ಟೇ ತಮ್ಮ ತಾಯಿ ಸೋನಿಯಾ ಗಾಂಧಿಯವರು ಸ್ಪರ್ಧಿಸಲಿರುವ ರಾಯ್‍ಬರೇಲಿಯಿಂದ ನೀವು ಸ್ಪರ್ಧಿಸುತ್ತೀರಾ? ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ “ರಾಯ್‍ಬರೇಲಿಯೇ ಯಾಕೆ, ವಾರಣಾಸಿಯಿಂದ ಯಾಕಾಗಬಾರದು?” ಎಂಬ ಮರುಪ್ರಶ್ನೆ ಎಸೆದು ಅಚ್ಚರಿ ಮೂಡಿಸಿದ್ದರು. ಈ ಕುರಿತು ಚರ್ಚೆಗಳು ಶುರುವಾದ ನಂತರ ಪಕ್ಷ ಬಯಸುವ ಯಾವುದೇ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧ ಎಂಬರ್ಥದಲ್ಲಿ ಹೇಳಿದ್ದೆ ಎಂದು ಸ್ಪಷ್ಟೀಕರಣ ಕೊಟ್ಟಿದ್ದರು.
ಆದರೆ ವಯನಾಡ್‍ನಲ್ಲಿ ಕೊಟ್ಟಿರುವ ಈ ಹೇಳಿಕೆಯನ್ನು ಹಳೆಯ ಹೇಳಿಕೆಗಿಂತ ಗಂಭೀರವಾಗಿ ಪರಿಗಣಿಸಲು ಒಂದು ಕಾರಣವಿದೆ. ಒಂದು ತಿಂಗಳ ಹಿಂದಿನ ಪ್ರಿಯಾಂಕ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕೇಳಿದಾಗ “ಅದು ಪ್ರಿಯಾಂಕ ಅವರ ಇಷ್ಟಕ್ಕೆ ಬಿಟ್ಟ ವಿಚಾರ” ಎಂದು ಹೇಳಿದ್ದರು. ಆದರೆ ಪ್ರಿಯಾಂಕರವರ ಈ ಹೊಸ ಹೇಳಿಕೆ ಹೊರಬೀಳುವುದಕ್ಕು ಒಂದು ವಾರ ಮುನ್ನ ಮತ್ತೆ ತೂರಿಬಂದ ವಾರಣಾಸಿ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ವಾರಾಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಸ್ಪರ್ಧಿಸುವ ವಿಚಾರದಲ್ಲಿ “ಕುತೂಹಲವನ್ನು ಜೀವಂತವಾಗಿಟ್ಟುಕೊಳ್ಳುವುದರಲ್ಲಿ ನಷ್ಟವೇನೂ ಇಲ್ಲ ತಾನೆ?” ಎಂದು ರಾಹುಲ್ ಪ್ರತಿಕ್ರಿಯಿಸಿದ್ದರು. ಅದಾದ ಒಂದು ವಾರಕ್ಕೆ ಪ್ರಿಯಾಂಕರಿಂದ ಈ ಹೇಳಿಕೆ ಹೊರಬಿದ್ದಿರೋದು ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟುಹಾಕಿದೆ.
ನೋಡುವುದಕ್ಕಷ್ಟೇ ಇಂದಿರಾ ಗಾಂಧಿಯವರನ್ನು ಹೋಲದೆ, ಜನರ ಜೊತೆ ಆತ್ಮೀಯವಾಗಿ ಬೆರೆಯುವ ನಡವಳಿಕೆಯಲ್ಲೂ ಇಂದಿರಾ ಗಾಂಧಿಯವರ ಗುಣವನ್ನೇ ಹೋಲುವ, ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿಯವರಿಗೆ ದೊಡ್ಡ ಅಭಿಮಾನಿ ಬಳಗವಿದೆ. 2014ರಲ್ಲೇ ಆಕೆ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ಧುಮುಕ್ಕಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಕಾಂಗ್ರೆಸ್‍ನ ಹಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ, 2014ರಲ್ಲಿ ಮೋದಿ ವಿರುದ್ಧ ವಾರಣಾಸಿಯಿಂದ ಕಣಕ್ಕಿಳಿದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸುಮಾರು ಎರಡು ಲಕ್ಷಗಳಷ್ಟು ಮತ ಪಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸೋತರೂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯದ ಲೀಡರ್ ಎಂಬ ಇಮೇಜು ಬಂದಿತ್ತು. ಅದಾದ ನಂತರವೇ ಅವರ ಆಪ್ ಪಕ್ಷ ದಿಲ್ಲಿಯಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಿದ್ದು.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 22ರಿಂದ 29ರವರೆಗೆ ಕಾಲಾವಕಾಶವಿದ್ದು, ಮೇ 19ರಂದು ಅಂದರೆ ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...