Homeಮುಖಪುಟಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

ಮೋದಿ ವಿರುದ್ಧ ಸ್ಪರ್ಧಿಸುವ ಎರಡನೇ ಸುಳಿವು ಕೊಟ್ಟ ಪ್ರಿಯಾಂಕಾ ಗಾಂಧಿ!

- Advertisement -
ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜೂನಿಯರ್ ಇಂದಿರಾ ಗಾಂಧಿ ಎಂತಲೇ ಪ್ರಸಿದ್ಧರಾಗಿರುವ ಪ್ರಿಯಾಂಕಾ ಗಾಂಧಿ ಈ ಚುನಾವಣೆಯಲ್ಲಿ ವಾರಣಾಸಿಯಿಂದ ಪ್ರಧಾನಿ ಮೋದಿಯವರ ವಿರುದ್ಧ ಕಣಕ್ಕಿಳಿಯುವ ಸೂಚನೆ ರವಾನಿಸಿದ್ದಾರೆ. ರಾಹುಲ್ ಗಾಂಧಿ ಸ್ಪರ್ಧಿಸಿರುವ ಕೇರಳದ ವಯನಾಡ್‍ನಲ್ಲಿ ಪ್ರಚಾರ ಮಾಡುವ ಸಂದರ್ಭದಲ್ಲಿ ಮಾಧ್ಯಮದವರು ಕೇಳಿದ “ನೀವು ವಾರಣಾಸಿಯಿಂದ ಸ್ಪರ್ಧಿಸುತ್ತೀರಿ ಎಂಬ ಸುದ್ದಿ ಇದೆ. ಇದು ನಿಜವಾ?” ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿರುವ ಪ್ರಿಯಾಂಕ “ಒಂದುವೇಳೆ ಕಾಂಗ್ರೆಸ್ ಅಧ್ಯಕ್ಷರು ಸ್ಪರ್ಧಿಸಲು ಹೇಳಿದರೆ, ನಾನು ಖುಷಿಯಿಂದ ಸ್ಪರ್ಧಿಸುತ್ತೇನೆ” ಎಂದಿದ್ದಾರೆ. ಆ ಮೂಲಕ ಮೋದಿ ವಿರುದ್ಧದ ತನ್ನ ಸೆಣೆಸಾಟದ ನಿರ್ಧಾರವನ್ನು ಅಣ್ಣ ರಾಹುಲ್ ಗಾಂಧಿಯ ಅಂಗಳಕ್ಕೆ ತಳ್ಳಿದ್ದಾರೆ.
ತಮ್ಮ ಕುಟುಂಬದ ಭದ್ರ ಕೋಟೆಗಳಾದ ಅಮೇಥಿ, ರಾಯ್‍ಬರೇಲಿ ಕ್ಷೇತ್ರಗಳ ಚುನಾವಣಾ ಉಸ್ತುವಾರಿಗಷ್ಟೇ ಸೀಮಿತವಾಗಿದ್ದ ಪ್ರಿಯಾಂಕಾ ಗಾಂಧಿಯವರು ಈ ವರ್ಷದ ಫೆಬ್ರವರಿಯಲ್ಲಷ್ಟೆ ಪೂರ್ವ ಉತ್ತರ ಪ್ರದೇಶದ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಕಾಲಿರಿಸಿದ್ದಾರೆ. ಆದರೆ ಈ ಸಲದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ, ಇಲ್ಲವಾ ಎಂಬ ಬಗ್ಗೆ ಯಾವ ಸ್ಪಷ್ಟ ಮಾಹಿತಿಯೂ ಇಲ್ಲ. ಆ ಕಾರಣಕ್ಕೆ ಅವರ ಸ್ಪರ್ಧೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಲೇ ಇವೆ.
ಕಳೆದ ತಿಂಗಳಷ್ಟೇ ತಮ್ಮ ತಾಯಿ ಸೋನಿಯಾ ಗಾಂಧಿಯವರು ಸ್ಪರ್ಧಿಸಲಿರುವ ರಾಯ್‍ಬರೇಲಿಯಿಂದ ನೀವು ಸ್ಪರ್ಧಿಸುತ್ತೀರಾ? ಎಂದು ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ “ರಾಯ್‍ಬರೇಲಿಯೇ ಯಾಕೆ, ವಾರಣಾಸಿಯಿಂದ ಯಾಕಾಗಬಾರದು?” ಎಂಬ ಮರುಪ್ರಶ್ನೆ ಎಸೆದು ಅಚ್ಚರಿ ಮೂಡಿಸಿದ್ದರು. ಈ ಕುರಿತು ಚರ್ಚೆಗಳು ಶುರುವಾದ ನಂತರ ಪಕ್ಷ ಬಯಸುವ ಯಾವುದೇ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ಧ ಎಂಬರ್ಥದಲ್ಲಿ ಹೇಳಿದ್ದೆ ಎಂದು ಸ್ಪಷ್ಟೀಕರಣ ಕೊಟ್ಟಿದ್ದರು.
ಆದರೆ ವಯನಾಡ್‍ನಲ್ಲಿ ಕೊಟ್ಟಿರುವ ಈ ಹೇಳಿಕೆಯನ್ನು ಹಳೆಯ ಹೇಳಿಕೆಗಿಂತ ಗಂಭೀರವಾಗಿ ಪರಿಗಣಿಸಲು ಒಂದು ಕಾರಣವಿದೆ. ಒಂದು ತಿಂಗಳ ಹಿಂದಿನ ಪ್ರಿಯಾಂಕ ಹೇಳಿಕೆ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಕೇಳಿದಾಗ “ಅದು ಪ್ರಿಯಾಂಕ ಅವರ ಇಷ್ಟಕ್ಕೆ ಬಿಟ್ಟ ವಿಚಾರ” ಎಂದು ಹೇಳಿದ್ದರು. ಆದರೆ ಪ್ರಿಯಾಂಕರವರ ಈ ಹೊಸ ಹೇಳಿಕೆ ಹೊರಬೀಳುವುದಕ್ಕು ಒಂದು ವಾರ ಮುನ್ನ ಮತ್ತೆ ತೂರಿಬಂದ ವಾರಣಾಸಿ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸುತ್ತಾ ವಾರಾಣಾಸಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ ಸ್ಪರ್ಧಿಸುವ ವಿಚಾರದಲ್ಲಿ “ಕುತೂಹಲವನ್ನು ಜೀವಂತವಾಗಿಟ್ಟುಕೊಳ್ಳುವುದರಲ್ಲಿ ನಷ್ಟವೇನೂ ಇಲ್ಲ ತಾನೆ?” ಎಂದು ರಾಹುಲ್ ಪ್ರತಿಕ್ರಿಯಿಸಿದ್ದರು. ಅದಾದ ಒಂದು ವಾರಕ್ಕೆ ಪ್ರಿಯಾಂಕರಿಂದ ಈ ಹೇಳಿಕೆ ಹೊರಬಿದ್ದಿರೋದು ಕಾಂಗ್ರೆಸ್ ಪಾಳೆಯದಲ್ಲಿ ಹೊಸ ಹುಮ್ಮಸ್ಸು ಹುಟ್ಟುಹಾಕಿದೆ.
ನೋಡುವುದಕ್ಕಷ್ಟೇ ಇಂದಿರಾ ಗಾಂಧಿಯವರನ್ನು ಹೋಲದೆ, ಜನರ ಜೊತೆ ಆತ್ಮೀಯವಾಗಿ ಬೆರೆಯುವ ನಡವಳಿಕೆಯಲ್ಲೂ ಇಂದಿರಾ ಗಾಂಧಿಯವರ ಗುಣವನ್ನೇ ಹೋಲುವ, ಅವರ ಮೊಮ್ಮಗಳು ಪ್ರಿಯಾಂಕ ಗಾಂಧಿಯವರಿಗೆ ದೊಡ್ಡ ಅಭಿಮಾನಿ ಬಳಗವಿದೆ. 2014ರಲ್ಲೇ ಆಕೆ ಸಕ್ರಿಯ ಚುನಾವಣಾ ರಾಜಕಾರಣಕ್ಕೆ ಧುಮುಕ್ಕಿದ್ದರೆ ಫಲಿತಾಂಶವೇ ಬೇರೆಯಾಗಿರುತ್ತಿತ್ತು ಎಂದು ಕಾಂಗ್ರೆಸ್‍ನ ಹಲವು ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ. ಅಂದಹಾಗೆ, 2014ರಲ್ಲಿ ಮೋದಿ ವಿರುದ್ಧ ವಾರಣಾಸಿಯಿಂದ ಕಣಕ್ಕಿಳಿದಿದ್ದ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ಸುಮಾರು ಎರಡು ಲಕ್ಷಗಳಷ್ಟು ಮತ ಪಡೆದಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸೋತರೂ ಅರವಿಂದ್ ಕೇಜ್ರಿವಾಲ್ ಅವರಿಗೆ ರಿಸ್ಕ್ ತೆಗೆದುಕೊಳ್ಳಲು ಹಿಂಜರಿಯದ ಲೀಡರ್ ಎಂಬ ಇಮೇಜು ಬಂದಿತ್ತು. ಅದಾದ ನಂತರವೇ ಅವರ ಆಪ್ ಪಕ್ಷ ದಿಲ್ಲಿಯಲ್ಲಿ ನಡೆದ ಅಸೆಂಬ್ಲಿ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 67 ಸ್ಥಾನಗಳಲ್ಲಿ ಗೆದ್ದು ಸರ್ಕಾರ ರಚಿಸಿದ್ದು.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 22ರಿಂದ 29ರವರೆಗೆ ಕಾಲಾವಕಾಶವಿದ್ದು, ಮೇ 19ರಂದು ಅಂದರೆ ಕೊನೆಯ ಹಂತದಲ್ಲಿ ಚುನಾವಣೆ ನಡೆಯಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...