Homeಮುಖಪುಟಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಟಿಆರ್‌ಪಿ ಪ್ರಕರಣ: 3 ಚಾನೆಲ್‌‌ಗಳ 32 ಕೋಟಿ ರೂ. ಆಸ್ತಿ ವಶಪಡಿಸಿಕೊಂಡ ಇ.ಡಿ

ಚಾನೆಲ್‌ಗಳ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣವನ್ನು ದಾಖಲಿಸಿತ್ತು.

- Advertisement -
- Advertisement -

ಟಿಆರ್‌ಪಿ ಹಗರಣದ ಬಗ್ಗೆ ಮನಿ ಲಾಂಡರಿಂಗ್ ತನಿಖೆಗೆ ಸಂಬಂಧಿಸಿದಂತೆ ಮೂರು ಮಹಾರಾಷ್ಟ್ರ ಮೂಲದ ಟಿವಿ ಚಾನೆಲ್‌ಗಳ ಸುಮಾರು 32 ಕೋಟಿ ರೂ. ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ವಶಪಡಿಸಿಕೊಂಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಯ ನಿಬಂಧನೆಗಳ ಪ್ರಕಾರ ವಶಪಡಿಸಲಾದ ಆಸ್ತಿಗಳು ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳಿಗೆ ಸೇರಿವೆ. ಮುಂಬೈ, ಇಂದೋರ್, ದೆಹಲಿ ಮತ್ತು ಗುರಗಾಂವ್‌ನಲ್ಲಿ ಈ ಆಸ್ತಿಗಳಿವೆ. ಚಾನೆಲ್‌ಗಳ ಕೆಲವು ಬ್ಯಾಂಕ್ ಠೇವಣಿಗಳನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಇ.ಡಿ ತಿಳಿಸಿದೆ.

ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ಟಿಆರ್‌ಪಿ ದಂಧೆ ಒಂದು ವಂಚನೆಯ ಆಟ. ಎಷ್ಟು ವೀಕ್ಷಕರು ಯಾವ ಚಾನೆಲ್ ಜಾಸ್ತಿ ನೋಡಿದರು, ಯಾವ ಪ್ರೊಗ್ರಾಮ್ ಹೆಚ್ಚು ನೋಡಿದರು ಎಂಬುದರ ಆಧಾರದಲ್ಲಿ ಆ ಚಾನೆಲ್‌ಗಳಿಗೆ ಜಾಹೀರಾತು ಹರಿದು ಬರುತ್ತದೆ. ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಚಾನೆಲ್ ಬಾರ್ಕ್ ಮುಖ್ಯಸ್ಥನ ಜೊತೆ ಸೇರಿ ಕೃತಕ ಟಿಆರ್‌ಪಿಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದೆ.

ಜೊತೆಗೆ ಮೇಲೆ ಉಲ್ಲೇಖಿಸಲಾದ ಮೂರು ಮಹಾರಾಷ್ಟ್ರ ಮೂಲದ ಚಾನೆಲ್‌ಗಳು ಕೂಡ ಈ ಕೃತಕ ಟಿಆರ್‌ಪಿ ಏರಿಕೆ ದಂಧೆಯಲ್ಲಿ ತೊಡಗಿಕೊಂಡಿದ್ದವು. ಆಯ್ದ ವೀಕ್ಷಕ ಕುಟುಂಬಗಳು ಪದೇ ಪದೇ ಅದೇ ಚಾನೆಲ್ ಅಥವಾ ಆ ಚಾನೆಲ್‌ನ ಒಂದು ಕಾರ್ಯರಕ್ರಮವನ್ನು ವೀಕ್ಷಿಸುವಂತೆ ಲಂಚ ನೀಡುವ ಮೂಲಕ ಇದನ್ನು ಮಾಡಲಾಗಿದೆ.

’ಮೇಲೆ ಉಲ್ಲೇಖಗೊಂಡ ಮೊದಲ ಎರಡು ಚಾನೆಲ್‌ಗಳು 5 ಕುಟುಂಬಗಳ ಜೊತೆಗೆ ಒಪ್ಪಂದ ಮಾಡಿ ಸುಮಾರು 25% ಟಿಆರ್‌ಪಿಯನ್ನು ಪಡೆಯುತ್ತಿದ್ದವು. ಮೂರನೇ ಚಾನಲ್ ಕೂಡಾ 5 ಕುಟುಂಬಗಳೊಂದಿಗೆ ಒಪ್ಪಂದ ಮಾಡಿಕೊಂಡ ಪರಿಣಾಮ ಕೃತಕವಾಗಿ 12% ಟಿಆರ್‌‌‌ಪಿಯನ್ನು ಪಡೆಯುತ್ತಿದ್ದವು’ ಎಂದು ಇ.ಡಿ. ಹೇಳಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ಗಳನ್ನು (ಟಿಆರ್‌ಪಿ) ತಿರುಚಿರುವ ಆರೋಪದ ಮೇಲೆ ಮುಂಬೈ ಪೊಲೀಸ್ ಸಿದ್ಧಪಡಿಸಿದ ಎಫ್‌ಐಆರ್ ಅಧ್ಯಯನ ಮಾಡಿದ ನಂತರ ಇ.ಡಿ. ಚಾನೆಲ್‌ಗಳ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣ ದಾಖಲಿಸಿತ್ತು.

“ಟೆಲಿವಿಷನ್ ಚಾನೆಲ್‌ಗಳಾದ ಫಕ್ತ್ ಮರಾಠಿ, ಬಾಕ್ಸ್ ಸಿನೆಮಾ ಮತ್ತು ಮಹಾ ಮೂವಿ ಚಾನೆಲ್‌ಗಳು ಟಿಆರ್‌ಪಿಗಳನ್ನು ತಿರುಚುವ ಮೂಲಕ ಅಕ್ರಮ ಲಾಭ ಮಾಡಿಕೊಂಡಿವೆ’ ಎಂದು ಇ.ಡಿ ಮತ್ತು ಮಹಾರಾಷ್ಟ್ರ ಪೊಲೀಸರು ಅಪಾದಿಸಿದ್ದಾರೆ.

“ಟಿಆರ್‌ಪಿ ರೇಟಿಂಗ್‌ಗಳನ್ನು ಮೋಸದಿಂದ ಹೆಚ್ಚಿಸುವ ಮೂಲಕ, ಈ ಚಾನಲ್‌ಗಳು ವಿಪರೀತ ಜಾಹೀರಾತು ಆದಾಯವನ್ನು ಗಳಿಸಿವೆ” ಎಂದು ಇಡಿ ಹೇಳಿದೆ.

ಟಿಆರ್‌ಪಿ ಎಂಬುದು ಟಿವಿ ಚಾನೆಲ್ ಅಥವಾ ಪ್ರೋಗ್ರಾಂನ ಜನಪ್ರಿಯತೆಯನ್ನು ಸೂಚಿಸುತ್ತದೆ ಮತ್ತು ವೀಕ್ಷಕರು ಯಾವುದನ್ನು ಹೆಚ್ಚು ನೋಡುತ್ತಾರೆ ಎಂಬುದನ್ನು ಅರ್ಥಮಾಡಿಕೊಳ್ಳಲು ಜಾಹೀರಾತುದಾರರಿಗೆ ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಹುತಾತ್ಮ ರೈತರಿಗೆ ಗೌರವ ಸಲ್ಲಿಸದ ಕೇಂದ್ರದ ವಿರುದ್ದ ರಾಹುಲ್ ಗಾಂಧಿ ಹೇಳಿದ್ದೇನು?

ವೀಕ್ಷಕರ ಮನೆಗಳಲ್ಲಿ ಬಾರೋಮೀಟರ್‌ಗಳನ್ನು ಅಳವಡಿಸಿ, ಟಿಆರ್‌‌ಪಿ ಅಳೆಯಲಾಗುತ್ತದೆ. ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಇದನ್ನು ನಿರ್ವಹಿಸುತ್ತದೆ. ಆದರೆ ಅದು ಅಳವಡಿಸುವಿಕೆ ಮತ್ತು ಸೇವೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುತ್ತದೆ. ಈ ಪ್ರಕರಣದಲ್ಲಿ ಅದು ಹನ್ಸಾ ಏಜೆನ್ಸಿಯನ್ನು ನೇಮಿಸಿಕೊಂಡಿತ್ತು. (ಬಾರೋಮೀಟರ್‌ಗಳನ್ನು ಯಾವ ಮನೆಗಳಲ್ಲಿ ಅಳವಡಿಸಬೇಕು ಎಂಬುದನ್ನು ಬಾರ್ಕ್ ನಿರ್ಧರಿಸುತ್ತದೆ).

ಟಿಆರ್‌ಪಿ ಯಾವುದೇ ಚಾನಲ್‌ಗೆ ಜಾಹೀರಾತನ್ನು ಪಡೆಯುವ ಪ್ರಮುಖ ಆಧಾರ ಮೂಲ. ಅದು ಟಿವಿ ಚಾನೆಲ್‌ನ ಆದಾಯವನ್ನು ನಿರ್ಧರಿಸುತ್ತದೆ. ಹೀಗಾಗಿ, ಟಿಆರ್‌ಪಿಯನ್ನು ವಾಮಮಾರ್ಗಗಳಲ್ಲಿ ಹೆಚ್ಚಿಸಿ ಹೆಚ್ಚಿನ ಜಾಹೀರಾತು ಆದಾಯವನ್ನು ಗಳಿಸುವ ಸಾಧನವಾಗಿ ಬಳಸಿಕೊಳ್ಳಲಾಗಿದೆ.

“ಬಾರೋಮೀಟರ್ ಸ್ಥಾಪಿಸಲಾದ ಮನೆಗಳ ಗೌಪ್ಯ ಮಾಹಿತಿಯನ್ನು ಏಜೆನ್ಸಿ ವ್ಯವಸ್ಥಾಪಕರು ಹಣದ ಲಾಭಕ್ಕಾಗಿ ಬಹಿರಂಗಪಡಿಸಿದ್ದು, ನಂತರ ಮನೆಯವರಿಗೆ ಲಂಚ ನೀಡಲಾಯಿತು. ಈ ಮೂಲಕ ನಿರ್ದಿಷ್ಟ ಚಾನೆಲ್‌ಗಳನ್ನು ವೀಕ್ಷಿಸುವಂತೆ ಪ್ರೇರೇಪಿಸಲಾಯಿತು. ಟಿಆರ್‌ಪಿಯನ್ನು ಕೃತಕವಾಗಿ ಏರಿಸಿ ಜಾಹೀರಾತುದಾರರನ್ನು ಮೋಸಗೊಳಿಸಲಾಯಿತು” ಎಂದು ಇ.ಡಿ ವಿವರಿಸಿದೆ.

ಆರೋಪಿತ ಚಾನೆಲ್‌ಗಳು ಒಟ್ಟು 46.77 ಕೋಟಿ ರೂ.ಗಳನ್ನು ಅಕ್ರಮ ಟಿಆರ್‌ಪಿ ಆಧಾರದಲ್ಲಿ ಗಳಿಸಿವೆ ಎಂದು ಇ.ಡಿ ಹೇಳಿದೆ.

ಇದನ್ನೂ ಓದಿ: ‘ಎರಡು ವರ್ಷಗಳಲ್ಲಿ 157 ಲಾಕಪ್ ಡೆತ್’- ಆಘಾತಕಾರಿ ಮಾಹಿತಿ ನೀಡಿದ ಗುಜರಾತ್ ಸರ್ಕಾರ‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...