Homeಅಂಕಣಗಳುನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

ನೂರರ ನೋಟ: ಎಗ್ಗಿಲ್ಲದೆ ಮುಂದುವರೆದಿರುವ ದೇಶದ್ರೋಹ ಆಪಾದನೆಯ ದುರ್ಬಳಕೆ

- Advertisement -
- Advertisement -

ಮೋದಿ ಸರ್ಕಾರ ತನ್ನ ಪ್ರಜೆಗಳ ಮೇಲೆ ಸಮರ ಸಾರಿದೆ. ಸರ್ಕಾರದ ಧೋರಣೆಯನ್ನು ಒಪ್ಪದ ನಾಗರಿಕರು ಸರ್ಕಾರವನ್ನು ಟೀಕೆ ಮಾಡಿದರೆ ಅವರ ಮೇಲೆ ದೇಶದ್ರೋಹದ ಆಪಾದನೆ ಹೊರಿಸಿ ಬಂಧನದಲ್ಲಿಡಲಾಗುತ್ತಿದೆ. ತನ್ನ ಧೋರಣೆಯನ್ನು ಒಪ್ಪದವರ ಮೇಲೆ, ರಾಜಕೀಯ ವಿರೋಧಿಗಳ ಮೇಲೆ, ಸ್ವತಂತ್ರ ಧೋರಣೆಯ ಪತ್ರಕರ್ತರು, ಬರಹಗಾರರು, ಕಾಲೇಜು ಅಧ್ಯಾಪಕರುಗಳ ಮೇಲೆ ಹಲವು ಪ್ರಕರಣಗಳನ್ನು ದಾಖಲಿಸುವುದರಿಂದ ಹಿಡಿದು, ದಸ್ತಗಿರಿ ಮಾಡುವುದು ಅವರ ವಿರುದ್ಧ ಖಟ್ಳೆ ಹೂಡುವುದು ಇವನ್ನೆಲ್ಲಾ ಸರ್ಕಾರ ಮಾಡುತ್ತಿದ್ದು ತನ್ನ ಧೋರಣೆಯನ್ನು ಎತ್ತಿ ಹಿಡಿಯುವ, ಹಾಡಿಹೊಗಳುವವರನ್ನು ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದೆ. ರಾಜದ್ರೋಹದ ಕಾನೂನು ಬ್ರಿಟಿಷರು ಸ್ವಾತಂತ್ರ್ಯ ಬಯಸುವವರನ್ನು ಬಗ್ಗುಬಡಿಯಲು ಬಳಸುತ್ತಿದ್ದ ದುರ್ಬಳಕೆಯ ಆಯುಧ. ಈ ಕಾನೂನನ್ನು ಮೋದಿಯವರು ಅಧಿಕಾರಕ್ಕೆ ಬಂದಮೇಲೆ ಮನಸೋಇಚ್ಛೆ ಬಳಸುತ್ತಿದ್ದಾರೆ. ಇಂಗ್ಲೆಂಡಿನಲ್ಲಿ ಈ ಉಗ್ರ ಕಾಯಿದೆಯನ್ನು ತೆಗೆದುಹಾಕಿದ್ದರೂ ಭಾರತದಲ್ಲಿ ಈ ಅನ್ಯಾಯದ ಕಾಯ್ದೆಯನ್ನು ಜೀವಂತ ಇಟ್ಟು, ಮೋದಿ ಸರ್ಕಾರದಂತಹ ಸರ್ಕಾರಗಳು ಅದನ್ನು ದುರ್ಬಳಕೆ ಮಾಡುತ್ತಿವೆ.

ಗಾಂಧೀಜಿಯವರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ನ್ಯಾಯಾಲಯದ ಮುಂದೆ ನಿಲ್ಲಿಸಲಾಗಿತ್ತು. “ನೀವು ರಾಜದ್ರೋಹ ಮಾಡಿದ್ದೀರಿ ಎಂದು ಸರ್ಕಾರ ಖಟ್ಳೆ ಹಾಕಿದೆ, ಇದನ್ನು ನೀವು ಅಲ್ಲೆಗಳೆಯುತ್ತೀರಾ” ಎಂದು ಕೇಳಿದಾಗ, ಗಾಂಧೀಜಿ ಹೌದು ನಾನು ರಾಜದ್ರೋಹ ಕೆಲಸ ಮಾಡಿದ್ದೇನೆ, ಬ್ರಿಟಿಷರು ಭಾರತ ಬಿಟ್ಟು ತೊಲಗುವವರೆಗೆ ರಾಜದ್ರೋಹ ಭಾಷಣ ಮಾಡುತ್ತಲೇ ಇರುತ್ತೇನೆ ಎಂದು ಉತ್ತರಿಸಿದರು. ನ್ಯಾಯಾಧೀಶರು ಇದು ನಿಮ್ಮ ನಿಲುವಾಗಿದ್ದರೆ, ಪ್ರಚಲಿತ ರಾಜದ್ರೋಹ ಕಾನೂನಿಗನುಸಾರ ನಿಮಗೆ 6 ವರ್ಷ ಕಠಿಣ ಶಿಕ್ಷೆ ವಿಧಿಸಿದ್ದೇನೆ ಎಂದರು. ಈ ಮೊದಲೇ ರಾಜದ್ರೋಹ ಆರೋಪದ ಮೇಲೆ 6 ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿರುವ ಗೌರವಾನ್ವಿತ ಬಾಲಗಂಗಾಧರ ತಿಲಕ್‌ರವರಿಗೆ ಕೊಟ್ಟಿರುವಷ್ಟು ಶಿಕ್ಷೆಯನ್ನು ನನಗೂ ವಿಧಿಸಿ ನನ್ನನ್ನು ಅವರ ಮಟ್ಟಕ್ಕೆ ಏರಿಸಿದ್ದೀರಿ ಅದಕ್ಕಾಗಿ ನಿಮಗೆ ವಂದನೆಗಳು ಎಂದರು ಗಾಂಧೀಜಿ.

ದೇಶದ್ರೋಹ

ಅಂದಿನ ಬ್ರಿಟಿಷ್ ಸರ್ಕಾರ ತನ್ನ ಮೇಲೆ ಯಾವುದೇ ಭಿನ್ನಾಭಿಪ್ರಾಯ ಸೂಚಿಸಿದರೂ ಅದನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಪ್ರತಿರೋಧ ತೋರಿಸುವ ಯಾವುದೇ ಕಾರ್ಯಕ್ರಮವನ್ನು ರಾಜದ್ರೋಹ ಎಂದು ಭಾವಿಸುತ್ತಿತ್ತು. ಸರ್ಕಾರದ ನೀತಿಯನ್ನು ಖಂಡಿಸಿ ಸಭೆ ನಡೆಸುವುದು ಅಥವಾ ಮೆರವಣಿಗೆ ತೆರಳುವುದು ರಾಜದ್ರೋಹದ ಕೆಲಸ ಎಂದು ಬ್ರಿಟಿಷ್ ಸರ್ಕಾರ ಭಾವಿಸುತ್ತಿತ್ತು. ಸರ್ಕಾರದ ಬಗೆಗೆ ಕೋಪ-ದ್ವೇಷ ಮೂಡಿಸುವುದೂ ರಾಜದ್ರೋಹವೆನಿಸಿತ್ತು. ಈ ಕಾನೂನನ್ನೇ ಬ್ರಿಟಿಷರು ಬಾಲಗಂಗಾಧರ ತಿಲಕ್, ಅನಿಬೆಸೆಂಟ್, ಮೌಲಾನ ಅಬ್ದುಲ್ ಕಲಾಂ ಅಜಾದ್, ಅಲಿ ಸಹೋದರರು ಈ ಎಲ್ಲರ ಮೇಲೆ ಹೇರಿತ್ತು. ಮುಕ್ತ ವಾಕ್ ಸ್ವಾತಂತ್ರ್ಯದ ಹಕ್ಕನ್ನು ಕಸಿಯಲು ಸರ್ಕಾರ ತೊಡಗುವುದು ಪ್ರಜೆಯ ಮೂಲಭೂತ ಹಕ್ಕನ್ನು ಕಸಿದಂತೆ. ಈ ಬರ್ಬರ ರಾಜದ್ರೋಹ ಕಾನೂನು ನಮ್ಮ ರಾಜ್ಯಾಂಗದ ಆಶಯಗಳಿಗೆ ಕಂಟಕಪ್ರಾಯ.

ರಾಜ್ಯಾಂಗ ಸಭೆಯಲ್ಲಿ ಕೆ.ಎಂ ಮುನ್ಷಿಯವರು, ರಾಜ್ಯಾಂಗದಲ್ಲಿ ನುಸುಳಿದ ರಾಜದ್ರ್ರೋಹದ ಕಲಂ ಅನ್ನು ಕೈಬಿಡಬೇಕೆಂದು ತಿದ್ದುಪಡಿ ಸೂಚಿಸಿದರು. ಈ ತಿದ್ದುಪಡಿಗೆ ಅನುಮೋದನೆ ದೊರೆಯಿತಾದರೂ, ದೇಶದ ಭದ್ರತೆ ಮತ್ತು ಅಖಂಡತೆಯನ್ನು ಕಾಪಾಡುವ ದೃಷ್ಟಿಯಿಂದ ಕೆಲವು ಕ್ಲಾಸ್‌ಗಳನ್ನು ಉಳಿಸಿಕೊಳ್ಳಲಾಯಿತು. ಹೀಗಾಗಿ ರಾಜದ್ರೋಹದ ಕಾನೂನು ಕೆಲವು ಬದಲಾವಣೆಗಳೊಂದಿಗೆ ಹಾಗೇ ಉಳಿದುಹೋಯಿತು.

ರಾಜದ್ರೋಹ ಕಾನೂನಿನ ದುರ್ಬಳಕೆಯಿಂದ ಅನೇಕರ ಜೀವನ ಹಾಳಾಯಿತು. ರಾಜದ್ರೋಹ ಆಪಾದನೆಯಲ್ಲಿ ವಿಚಾರಣೆಯಾಗುತ್ತಿದ್ದು, 2019ನೆ ಇಸವಿಯಲ್ಲಿ ಬಾಕಿ ಇದ್ದ ಕೇಸುಗಳ ಶೇ 9ರಷ್ಟರಲ್ಲಿ ಖಟ್ಳೆಗಳನ್ನು ಕೈಬಿಡಲಾಯಿತು. ಕಾರಣ: ಸಾಕ್ಷ್ಯಾಧಾರಗಳ ಕೊರತೆ ಅಥವಾ ತಪ್ಪಿತಸ್ಥರ ಪರಾರಿಯಾಗಿದ್ದರಿಂದ! 2014ರ ನಂತರ ಸರ್ಕಾರ ನಡೆಸುವವರನ್ನು ಟೀಕೆ ಮಾಡಿದ್ದಕ್ಕಾಗಿ, ಮೋದಿ ಮುಂತಾದ ನಾಯಕರನ್ನು ಟೀಕೆ ಮಾಡಿದ್ದಕ್ಕಾಗಿ ನೂರಾರು ಜನರ ಮೇಲೆ ಕೇಸು ದಾಖಲಾಗಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ರಾಜದ್ರೋಹ ಆಪಾದನೆ ಹೊರೆಸುವುದರಲ್ಲಿ ಬಹಳ ಮುಂದಿದ್ದಾರೆ. ಕಳೆದ 4 ವರ್ಷಗಳಲ್ಲಿ ನಾಗರಿಕ (ತಿದ್ದುಪಡಿಯಾದ 2019) ಮಸೂದೆ ವಿರುದ್ಧ ಸೊಲ್ಲೆತ್ತಿದ 90 ಜನರ ಮೇಲೆ ರಾಜದ್ರೋಹ ಆಪಾದನೆ ಖಟ್ಳೆ ಹಾಕಿದ್ದಾರೆ. ಕಾರಣವಿಲ್ಲದೆ ಅವರ ಬಾಯಿ ಮುಚ್ಚಿಸಲು ರಾಜದ್ರೋಹ ಆಪಾದನೆಯನ್ನು ಅವರ ಮೇಲೆ ಹೊರಿಸಲಾಗಿದೆ.

ಸರ್ಕಾರಗಳು ಅನೇಕರ ಮೇಲೆ ರಾಜದ್ರೋಹ ಆಪಾದನೆ ಹೊರಿಸಿ ಸೆರೆಮನೆಗೆ ಕಳುಹಿಸುತ್ತಿರುವುದನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ. ದೇಶದ ಇತರ ಭಾಗಗಳಲ್ಲಿರುವ ಅಧೀನ ನ್ಯಾಯಾಲಯಗಳು ರಾಜದ್ರೋಹ ಹೇರುತ್ತಿರುವ ಸರ್ಕಾರದ ಆತುರದ ಕ್ರಮಗಳನ್ನು ಪ್ರಶ್ನಿಸಲು ತೊಡಗಿವೆ. ಅಪಾಯಕಾರಿ ಐಡಿಯಾಲಜಿಗಳು ಭಾರತದ ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಅಲ್ಲಗಳೆಯುತ್ತಿವೆ ಎಂದು ಮೋದಿ ಹರಿಹಾಯ್ದಿದ್ದಾರೆ. ಈ ಬಗೆಯ ಹೇಳಿಕೆ ಕೊಡುವ ಬದಲು ಮೋದಿಯವರು ತಮ್ಮ ಗೆಯ್ಮೆ ಸರಿಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಬೇಕು.


ಇದನ್ನೂ ಓದಿ: ಸರ್ಕಾರದಿಂದ ದೇಶದ್ರೋಹ ಕಾನೂನು ದುರುಪಯೋಗ, ಅದನ್ನು ರದ್ದುಗೊಳಿಸಬೇಕು : ನಿವೃತ್ತ ಸುಪ್ರೀಂ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...