Homeಮುಖಪುಟ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

- Advertisement -
- Advertisement -

ಮಧ್ಯಪ್ರದೇಶ ಹೈಕೋರ್ಟಿನ ‘ರಾಖಿ-ಜಾಮೀನು’ ಆದೇಶವನ್ನು ಬದಿಗೆ ಸರಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಲ್ಲಿ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

‘ಜಾಮೀನು ನೀಡಲು ರಾಖಿ ಕಟ್ಟುವುದನ್ನು ಒಂದು ನಿರ್ಬಂಧವಾಗಿ ಮಾಡಿದರೆ, ಕಿರುಕುಳ ನೀಡಿದ ವ್ಯಕ್ತಿ ಸಹೋದರನಾಗಿ ಪರಿವರ್ತನೆ ಆಗುತ್ತಾನೆ. ಇದು ಸಂಪೂರ್ಣವಾಗಿ ಸಮ್ಮತವಲ್ಲ. ಇದು ಲೈಂಗಿಕಸ ದೌರ್ಜನ್ಯದ ಪ್ರಕರಣವನ್ನು ನಾಶ ಮಾಡುತ್ತದೆ ಅಥವಾ ದುರ್ಬಲಗೊಳಿಸುತ್ತದೆ. ಇದು ಸಂತ್ರಸ್ತರಿಗೆ ಅನ್ಯಾಯ ಮಾಡುತ್ತದೆ. ಕ್ಷಮೆ ಯಾಚಿಸುವಿಕೆ, ಸಮುದಾಯ ಸೇವೆಯ ಆಶ್ವಾಸನೆ, ರಾಖಿ ಕಟ್ಟುವುದು, ಸಂತ್ರಸ್ತೆಗೆ ಕಾಣಿಕೆ ನೀಡುವುದು ಅಥವಾ ಮದುವೆಯಾಗುವುದಾಗಿ ಒಪ್ಪಿಕೊಳ್ಳುವುದು-ಇವು ಯಾವುದರ ಮೂಲಕವೂ ಅಪರಾಧವನ್ನು ನಗಣ್ಯ ಮಾಡುವ ಹಾಗಿಲ್ಲ. ಈ ಕಾನೂನು ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದು’ ಎಂದು ನ್ಯಾಯಾಧೀಶರಾದ ರವೀಂದ್ರಭಟ್ ಮತ್ತು ಖಾನ್ವಿಲ್ಕರ್ ಅವರ ಪೀಠ ತೀರ್ಪು ನೀಡಿದೆ.

“ಅಪರಾಧವನ್ನು ಕಡಿಮೆ ಮಾಡುವ ಮತ್ತು ಸಂತ್ರಸ್ತರನ್ನು ಕ್ಷುಲ್ಲಕಗೊಳಿಸುವ ಪ್ರವೃತ್ತಿಯ ತಾರ್ಕಿಕ / ಭಾಷೆಯ ಬಳಕೆಯನ್ನು ಎಲ್ಲಾ ಸಂದರ್ಭಗಳ ಅಡಿಯಲ್ಲಿ ತಪ್ಪಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಈ ಮೊದಲು ಸಂತ್ರಸ್ತ ಮಹಿಳೆ ಇತರರ ಜೊತೆ ಸಲುಗೆ ಹೊಂದಿದ್ದಳು ಎಂಬುದಾಗಲಿ, ಆರೋಪಿಗೆ ತನ್ನ ಉಡುಪು ಧರಿಸುವಿಕೆ ಮೂಲಕ ಪ್ರಚೋದಿಸಿದ್ದಳು ಎಂಬುದಾಗಲಿ ಇಲ್ಲಿ ಪರಿಗಣನೆ ಆಗಕೂಡದು ಎಂದು ತೀರ್ಪು ಹೇಳಿದೆ. ಆಕೆ ‘ಭಾರತೀಯ’ ಮಹಿಳೆಯಂತೆ ವರ್ತಿಸಲಿಲ್ಲ ಎಂಬುದೂ ಅಸಂಬದ್ಧ ಎಂದು ಪೀಠ ಹೇಳಿದೆ.

‘ಅಂತಹ ವರ್ತನೆಗಳು ನ್ಯಾಯಾಂಗೀಯ ವ್ಯಾಪ್ತಿಯಲ್ಲಿ ಪರಿಗಣನೆ ಆಗುವುದಿಲ್ಲ ಮತ್ತು ಆರೋಪಿಗೆ ಜಾಮೀನು ನೀಡಲು ಇವನ್ನು ಕಾರಣವಾಗಿ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಮೇಲೆ ಉಲ್ಲೇಖಿಸಲಾದ ಸಂದರ್ಭಗಳ ಮೂಲಕ ಸಂತ್ರಸ್ತೆಯನ್ನು ಒಪ್ಪಿಕೊಳ್ಳುವಂತೆ ಮಾಡುವ ಪ್ರಕ್ರಿಯೆಯೂ ನ್ಯಾಯಬದ್ಧವಲ್ಲ’ ಎಂದು ತೀರ್ಪು ಹೇಳಿದೆ.

ನ್ಯಾಯಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

(ಎ) ಜಾಮೀನು ಷರತ್ತುಗಳು ಆರೋಪಿ ಮತ್ತು ಸಂತ್ರಸ್ತರ ನಡುವೆ ಸಂಪರ್ಕವಿತ್ತು ಎಂಬುದನ್ನು ಕಡ್ಡಾಯಗೊಳಿಸಬಾರದು. ಅದು ಅಗತ್ಯವಿಲ್ಲ ಅಥವಾ ಅನುಮತಿಸಬಾರದು. ಅಂತಹ ಷರತ್ತುಗಳು ದೂರುದಾರರನ್ನು ಯಾವುದೇ ಕಿರುಕುಳದಿಂದ ರಕ್ಷಿಸಲು ಪ್ರಯತ್ನಿಸಬೇಕು.

ಬಿ) ಸಂತ್ರಸ್ತೆಗೆ ಕಿರುಕುಳದ ಸಂಭವನೀಯ ಬೆದರಿಕೆ ಇರಬಹುದು ಎಂದು ನ್ಯಾಯಾಲಯವು ನಂಬುವ ಸಂದರ್ಭಗಳು ಅಸ್ತಿತ್ವದಲ್ಲಿವೆ, ಅಥವಾ ಆತಂಕ ವ್ಯಕ್ತಪಡಿಸಿದ ನಂತರ, ಪೊಲೀಸರಿಂದ ವರದಿಗಳನ್ನು ಪಡೆದ ನಂತರ, ರಕ್ಷಣೆಯ ಸ್ವರೂಪವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಇದರ ಆಧಾರದ ಮೇಲೆ ಸೂಕ್ತ ಆದೇಶವನ್ನು ಮಾಡಬೇಕು. ಸಂತ್ರಸ್ತೆಯೊಂದಿಗೆ ಯಾವುದೇ ಸಂಪರ್ಕವನ್ನು ಮಾಡದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

ಸಿ) ಜಾಮೀನು ಮಂಜೂರು ಮಾಡಿದ ಎಲ್ಲಾ ಪ್ರಕರಣಗಳಲ್ಲಿ, ಎರಡು ದಿನಗಳೊಳಗೆ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ದೂರುದಾರರಿಗೆ ತಕ್ಷಣ ತಿಳಿಸಬೇಕು.

ಡಿ) ಜಾಮೀನು ಪರಿಸ್ಥಿತಿಗಳು ಮತ್ತು ಆದೇಶಗಳು ಮಹಿಳೆಯರ ಬಗ್ಗೆ ಮತ್ತು ಸಮಾಜದಲ್ಲಿ ಅವರ ಸ್ಥಾನದ ಬಗ್ಗೆ ರೂಢಿಗತ ಅಥವಾ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರತಿಬಿಂಬಿಸುವುದನ್ನು ತಪ್ಪಿಸಬೇಕು. ಇದೆಲ್ಲ ಸಿಆರ್‌ಪಿಸಿ ಸೆಕ್ಷನ್ ಅವಶ್ಯಕತೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿರಬೇಕು. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಂತ್ರಸ್ತರ ಉಡುಗೆ, ನಡವಳಿಕೆ ಅಥವಾ ಹಿಂದಿನ “ನಡವಳಿಕೆ” ಅಥವಾ “ನೈತಿಕತೆಗಳ” ಬಗೆಗಿನ ಚರ್ಚೆ, ಇವೆಲ್ಲ ಜಾಮೀನು ನೀಡುವ ತೀರ್ಪಿನಲ್ಲಿ ನಮೂದಿತವಾಗಬಾರದು.

(ಕೃಪೆ: ಲೈವ್ ಲಾ)


ಇದನ್ನೂ ಓದಿ; ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...