Homeಮುಖಪುಟ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

- Advertisement -
- Advertisement -

ಮಧ್ಯಪ್ರದೇಶ ಹೈಕೋರ್ಟಿನ ‘ರಾಖಿ-ಜಾಮೀನು’ ಆದೇಶವನ್ನು ಬದಿಗೆ ಸರಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಲ್ಲಿ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

‘ಜಾಮೀನು ನೀಡಲು ರಾಖಿ ಕಟ್ಟುವುದನ್ನು ಒಂದು ನಿರ್ಬಂಧವಾಗಿ ಮಾಡಿದರೆ, ಕಿರುಕುಳ ನೀಡಿದ ವ್ಯಕ್ತಿ ಸಹೋದರನಾಗಿ ಪರಿವರ್ತನೆ ಆಗುತ್ತಾನೆ. ಇದು ಸಂಪೂರ್ಣವಾಗಿ ಸಮ್ಮತವಲ್ಲ. ಇದು ಲೈಂಗಿಕಸ ದೌರ್ಜನ್ಯದ ಪ್ರಕರಣವನ್ನು ನಾಶ ಮಾಡುತ್ತದೆ ಅಥವಾ ದುರ್ಬಲಗೊಳಿಸುತ್ತದೆ. ಇದು ಸಂತ್ರಸ್ತರಿಗೆ ಅನ್ಯಾಯ ಮಾಡುತ್ತದೆ. ಕ್ಷಮೆ ಯಾಚಿಸುವಿಕೆ, ಸಮುದಾಯ ಸೇವೆಯ ಆಶ್ವಾಸನೆ, ರಾಖಿ ಕಟ್ಟುವುದು, ಸಂತ್ರಸ್ತೆಗೆ ಕಾಣಿಕೆ ನೀಡುವುದು ಅಥವಾ ಮದುವೆಯಾಗುವುದಾಗಿ ಒಪ್ಪಿಕೊಳ್ಳುವುದು-ಇವು ಯಾವುದರ ಮೂಲಕವೂ ಅಪರಾಧವನ್ನು ನಗಣ್ಯ ಮಾಡುವ ಹಾಗಿಲ್ಲ. ಈ ಕಾನೂನು ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದು’ ಎಂದು ನ್ಯಾಯಾಧೀಶರಾದ ರವೀಂದ್ರಭಟ್ ಮತ್ತು ಖಾನ್ವಿಲ್ಕರ್ ಅವರ ಪೀಠ ತೀರ್ಪು ನೀಡಿದೆ.

“ಅಪರಾಧವನ್ನು ಕಡಿಮೆ ಮಾಡುವ ಮತ್ತು ಸಂತ್ರಸ್ತರನ್ನು ಕ್ಷುಲ್ಲಕಗೊಳಿಸುವ ಪ್ರವೃತ್ತಿಯ ತಾರ್ಕಿಕ / ಭಾಷೆಯ ಬಳಕೆಯನ್ನು ಎಲ್ಲಾ ಸಂದರ್ಭಗಳ ಅಡಿಯಲ್ಲಿ ತಪ್ಪಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಈ ಮೊದಲು ಸಂತ್ರಸ್ತ ಮಹಿಳೆ ಇತರರ ಜೊತೆ ಸಲುಗೆ ಹೊಂದಿದ್ದಳು ಎಂಬುದಾಗಲಿ, ಆರೋಪಿಗೆ ತನ್ನ ಉಡುಪು ಧರಿಸುವಿಕೆ ಮೂಲಕ ಪ್ರಚೋದಿಸಿದ್ದಳು ಎಂಬುದಾಗಲಿ ಇಲ್ಲಿ ಪರಿಗಣನೆ ಆಗಕೂಡದು ಎಂದು ತೀರ್ಪು ಹೇಳಿದೆ. ಆಕೆ ‘ಭಾರತೀಯ’ ಮಹಿಳೆಯಂತೆ ವರ್ತಿಸಲಿಲ್ಲ ಎಂಬುದೂ ಅಸಂಬದ್ಧ ಎಂದು ಪೀಠ ಹೇಳಿದೆ.

‘ಅಂತಹ ವರ್ತನೆಗಳು ನ್ಯಾಯಾಂಗೀಯ ವ್ಯಾಪ್ತಿಯಲ್ಲಿ ಪರಿಗಣನೆ ಆಗುವುದಿಲ್ಲ ಮತ್ತು ಆರೋಪಿಗೆ ಜಾಮೀನು ನೀಡಲು ಇವನ್ನು ಕಾರಣವಾಗಿ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಮೇಲೆ ಉಲ್ಲೇಖಿಸಲಾದ ಸಂದರ್ಭಗಳ ಮೂಲಕ ಸಂತ್ರಸ್ತೆಯನ್ನು ಒಪ್ಪಿಕೊಳ್ಳುವಂತೆ ಮಾಡುವ ಪ್ರಕ್ರಿಯೆಯೂ ನ್ಯಾಯಬದ್ಧವಲ್ಲ’ ಎಂದು ತೀರ್ಪು ಹೇಳಿದೆ.

ನ್ಯಾಯಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

(ಎ) ಜಾಮೀನು ಷರತ್ತುಗಳು ಆರೋಪಿ ಮತ್ತು ಸಂತ್ರಸ್ತರ ನಡುವೆ ಸಂಪರ್ಕವಿತ್ತು ಎಂಬುದನ್ನು ಕಡ್ಡಾಯಗೊಳಿಸಬಾರದು. ಅದು ಅಗತ್ಯವಿಲ್ಲ ಅಥವಾ ಅನುಮತಿಸಬಾರದು. ಅಂತಹ ಷರತ್ತುಗಳು ದೂರುದಾರರನ್ನು ಯಾವುದೇ ಕಿರುಕುಳದಿಂದ ರಕ್ಷಿಸಲು ಪ್ರಯತ್ನಿಸಬೇಕು.

ಬಿ) ಸಂತ್ರಸ್ತೆಗೆ ಕಿರುಕುಳದ ಸಂಭವನೀಯ ಬೆದರಿಕೆ ಇರಬಹುದು ಎಂದು ನ್ಯಾಯಾಲಯವು ನಂಬುವ ಸಂದರ್ಭಗಳು ಅಸ್ತಿತ್ವದಲ್ಲಿವೆ, ಅಥವಾ ಆತಂಕ ವ್ಯಕ್ತಪಡಿಸಿದ ನಂತರ, ಪೊಲೀಸರಿಂದ ವರದಿಗಳನ್ನು ಪಡೆದ ನಂತರ, ರಕ್ಷಣೆಯ ಸ್ವರೂಪವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಇದರ ಆಧಾರದ ಮೇಲೆ ಸೂಕ್ತ ಆದೇಶವನ್ನು ಮಾಡಬೇಕು. ಸಂತ್ರಸ್ತೆಯೊಂದಿಗೆ ಯಾವುದೇ ಸಂಪರ್ಕವನ್ನು ಮಾಡದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

ಸಿ) ಜಾಮೀನು ಮಂಜೂರು ಮಾಡಿದ ಎಲ್ಲಾ ಪ್ರಕರಣಗಳಲ್ಲಿ, ಎರಡು ದಿನಗಳೊಳಗೆ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ದೂರುದಾರರಿಗೆ ತಕ್ಷಣ ತಿಳಿಸಬೇಕು.

ಡಿ) ಜಾಮೀನು ಪರಿಸ್ಥಿತಿಗಳು ಮತ್ತು ಆದೇಶಗಳು ಮಹಿಳೆಯರ ಬಗ್ಗೆ ಮತ್ತು ಸಮಾಜದಲ್ಲಿ ಅವರ ಸ್ಥಾನದ ಬಗ್ಗೆ ರೂಢಿಗತ ಅಥವಾ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರತಿಬಿಂಬಿಸುವುದನ್ನು ತಪ್ಪಿಸಬೇಕು. ಇದೆಲ್ಲ ಸಿಆರ್‌ಪಿಸಿ ಸೆಕ್ಷನ್ ಅವಶ್ಯಕತೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿರಬೇಕು. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಂತ್ರಸ್ತರ ಉಡುಗೆ, ನಡವಳಿಕೆ ಅಥವಾ ಹಿಂದಿನ “ನಡವಳಿಕೆ” ಅಥವಾ “ನೈತಿಕತೆಗಳ” ಬಗೆಗಿನ ಚರ್ಚೆ, ಇವೆಲ್ಲ ಜಾಮೀನು ನೀಡುವ ತೀರ್ಪಿನಲ್ಲಿ ನಮೂದಿತವಾಗಬಾರದು.

(ಕೃಪೆ: ಲೈವ್ ಲಾ)


ಇದನ್ನೂ ಓದಿ; ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...