Homeಮುಖಪುಟ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

- Advertisement -
- Advertisement -

ಮಧ್ಯಪ್ರದೇಶ ಹೈಕೋರ್ಟಿನ ‘ರಾಖಿ-ಜಾಮೀನು’ ಆದೇಶವನ್ನು ಬದಿಗೆ ಸರಿಸಿದ ಸುಪ್ರೀಂ ಕೋರ್ಟ್, ಲೈಂಗಿಕ ಅಪರಾಧಗಳಲ್ಲಿ ನ್ಯಾಯಾಲಯಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿದೆ ಎಂದು ಲೈವ್‌ಲಾ ವರದಿ ಮಾಡಿದೆ.

‘ಜಾಮೀನು ನೀಡಲು ರಾಖಿ ಕಟ್ಟುವುದನ್ನು ಒಂದು ನಿರ್ಬಂಧವಾಗಿ ಮಾಡಿದರೆ, ಕಿರುಕುಳ ನೀಡಿದ ವ್ಯಕ್ತಿ ಸಹೋದರನಾಗಿ ಪರಿವರ್ತನೆ ಆಗುತ್ತಾನೆ. ಇದು ಸಂಪೂರ್ಣವಾಗಿ ಸಮ್ಮತವಲ್ಲ. ಇದು ಲೈಂಗಿಕಸ ದೌರ್ಜನ್ಯದ ಪ್ರಕರಣವನ್ನು ನಾಶ ಮಾಡುತ್ತದೆ ಅಥವಾ ದುರ್ಬಲಗೊಳಿಸುತ್ತದೆ. ಇದು ಸಂತ್ರಸ್ತರಿಗೆ ಅನ್ಯಾಯ ಮಾಡುತ್ತದೆ. ಕ್ಷಮೆ ಯಾಚಿಸುವಿಕೆ, ಸಮುದಾಯ ಸೇವೆಯ ಆಶ್ವಾಸನೆ, ರಾಖಿ ಕಟ್ಟುವುದು, ಸಂತ್ರಸ್ತೆಗೆ ಕಾಣಿಕೆ ನೀಡುವುದು ಅಥವಾ ಮದುವೆಯಾಗುವುದಾಗಿ ಒಪ್ಪಿಕೊಳ್ಳುವುದು-ಇವು ಯಾವುದರ ಮೂಲಕವೂ ಅಪರಾಧವನ್ನು ನಗಣ್ಯ ಮಾಡುವ ಹಾಗಿಲ್ಲ. ಈ ಕಾನೂನು ಸಂತ್ರಸ್ತ ಮಹಿಳೆಗೆ ನ್ಯಾಯ ಒದಗಿಸದು’ ಎಂದು ನ್ಯಾಯಾಧೀಶರಾದ ರವೀಂದ್ರಭಟ್ ಮತ್ತು ಖಾನ್ವಿಲ್ಕರ್ ಅವರ ಪೀಠ ತೀರ್ಪು ನೀಡಿದೆ.

“ಅಪರಾಧವನ್ನು ಕಡಿಮೆ ಮಾಡುವ ಮತ್ತು ಸಂತ್ರಸ್ತರನ್ನು ಕ್ಷುಲ್ಲಕಗೊಳಿಸುವ ಪ್ರವೃತ್ತಿಯ ತಾರ್ಕಿಕ / ಭಾಷೆಯ ಬಳಕೆಯನ್ನು ಎಲ್ಲಾ ಸಂದರ್ಭಗಳ ಅಡಿಯಲ್ಲಿ ತಪ್ಪಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

‘ಈ ಮೊದಲು ಸಂತ್ರಸ್ತ ಮಹಿಳೆ ಇತರರ ಜೊತೆ ಸಲುಗೆ ಹೊಂದಿದ್ದಳು ಎಂಬುದಾಗಲಿ, ಆರೋಪಿಗೆ ತನ್ನ ಉಡುಪು ಧರಿಸುವಿಕೆ ಮೂಲಕ ಪ್ರಚೋದಿಸಿದ್ದಳು ಎಂಬುದಾಗಲಿ ಇಲ್ಲಿ ಪರಿಗಣನೆ ಆಗಕೂಡದು ಎಂದು ತೀರ್ಪು ಹೇಳಿದೆ. ಆಕೆ ‘ಭಾರತೀಯ’ ಮಹಿಳೆಯಂತೆ ವರ್ತಿಸಲಿಲ್ಲ ಎಂಬುದೂ ಅಸಂಬದ್ಧ ಎಂದು ಪೀಠ ಹೇಳಿದೆ.

‘ಅಂತಹ ವರ್ತನೆಗಳು ನ್ಯಾಯಾಂಗೀಯ ವ್ಯಾಪ್ತಿಯಲ್ಲಿ ಪರಿಗಣನೆ ಆಗುವುದಿಲ್ಲ ಮತ್ತು ಆರೋಪಿಗೆ ಜಾಮೀನು ನೀಡಲು ಇವನ್ನು ಕಾರಣವಾಗಿ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ’ ಎಂದು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

‘ಮೇಲೆ ಉಲ್ಲೇಖಿಸಲಾದ ಸಂದರ್ಭಗಳ ಮೂಲಕ ಸಂತ್ರಸ್ತೆಯನ್ನು ಒಪ್ಪಿಕೊಳ್ಳುವಂತೆ ಮಾಡುವ ಪ್ರಕ್ರಿಯೆಯೂ ನ್ಯಾಯಬದ್ಧವಲ್ಲ’ ಎಂದು ತೀರ್ಪು ಹೇಳಿದೆ.

ನ್ಯಾಯಾಲಯವು ಈ ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿದೆ:

(ಎ) ಜಾಮೀನು ಷರತ್ತುಗಳು ಆರೋಪಿ ಮತ್ತು ಸಂತ್ರಸ್ತರ ನಡುವೆ ಸಂಪರ್ಕವಿತ್ತು ಎಂಬುದನ್ನು ಕಡ್ಡಾಯಗೊಳಿಸಬಾರದು. ಅದು ಅಗತ್ಯವಿಲ್ಲ ಅಥವಾ ಅನುಮತಿಸಬಾರದು. ಅಂತಹ ಷರತ್ತುಗಳು ದೂರುದಾರರನ್ನು ಯಾವುದೇ ಕಿರುಕುಳದಿಂದ ರಕ್ಷಿಸಲು ಪ್ರಯತ್ನಿಸಬೇಕು.

ಬಿ) ಸಂತ್ರಸ್ತೆಗೆ ಕಿರುಕುಳದ ಸಂಭವನೀಯ ಬೆದರಿಕೆ ಇರಬಹುದು ಎಂದು ನ್ಯಾಯಾಲಯವು ನಂಬುವ ಸಂದರ್ಭಗಳು ಅಸ್ತಿತ್ವದಲ್ಲಿವೆ, ಅಥವಾ ಆತಂಕ ವ್ಯಕ್ತಪಡಿಸಿದ ನಂತರ, ಪೊಲೀಸರಿಂದ ವರದಿಗಳನ್ನು ಪಡೆದ ನಂತರ, ರಕ್ಷಣೆಯ ಸ್ವರೂಪವನ್ನು ಪ್ರತ್ಯೇಕವಾಗಿ ಪರಿಗಣಿಸಲಾಗುತ್ತದೆ. ಇದರ ಆಧಾರದ ಮೇಲೆ ಸೂಕ್ತ ಆದೇಶವನ್ನು ಮಾಡಬೇಕು. ಸಂತ್ರಸ್ತೆಯೊಂದಿಗೆ ಯಾವುದೇ ಸಂಪರ್ಕವನ್ನು ಮಾಡದಂತೆ ಆರೋಪಿಗೆ ನಿರ್ದೇಶನ ನೀಡಬೇಕು.

ಸಿ) ಜಾಮೀನು ಮಂಜೂರು ಮಾಡಿದ ಎಲ್ಲಾ ಪ್ರಕರಣಗಳಲ್ಲಿ, ಎರಡು ದಿನಗಳೊಳಗೆ ಆರೋಪಿಗೆ ಜಾಮೀನು ನೀಡಲಾಗಿದೆ ಎಂದು ದೂರುದಾರರಿಗೆ ತಕ್ಷಣ ತಿಳಿಸಬೇಕು.

ಡಿ) ಜಾಮೀನು ಪರಿಸ್ಥಿತಿಗಳು ಮತ್ತು ಆದೇಶಗಳು ಮಹಿಳೆಯರ ಬಗ್ಗೆ ಮತ್ತು ಸಮಾಜದಲ್ಲಿ ಅವರ ಸ್ಥಾನದ ಬಗ್ಗೆ ರೂಢಿಗತ ಅಥವಾ ಪಿತೃಪ್ರಭುತ್ವದ ಕಲ್ಪನೆಗಳನ್ನು ಪ್ರತಿಬಿಂಬಿಸುವುದನ್ನು ತಪ್ಪಿಸಬೇಕು. ಇದೆಲ್ಲ ಸಿಆರ್‌ಪಿಸಿ ಸೆಕ್ಷನ್ ಅವಶ್ಯಕತೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಾಗಿರಬೇಕು. ಬೇರೆ ರೀತಿಯಲ್ಲಿ ಹೇಳುವುದಾದರೆ, ಸಂತ್ರಸ್ತರ ಉಡುಗೆ, ನಡವಳಿಕೆ ಅಥವಾ ಹಿಂದಿನ “ನಡವಳಿಕೆ” ಅಥವಾ “ನೈತಿಕತೆಗಳ” ಬಗೆಗಿನ ಚರ್ಚೆ, ಇವೆಲ್ಲ ಜಾಮೀನು ನೀಡುವ ತೀರ್ಪಿನಲ್ಲಿ ನಮೂದಿತವಾಗಬಾರದು.

(ಕೃಪೆ: ಲೈವ್ ಲಾ)


ಇದನ್ನೂ ಓದಿ; ಚುನಾವಣೆಯಿಂದ ಹಿಂದೆ ಸರಿಯದ ಅಭ್ಯರ್ಥಿಯ ಮಗಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...