Homeಅಂತರಾಷ್ಟ್ರೀಯವಿಶ್ವ ಸಂತೋಷ ವರದಿ- 149 ದೇಶಗಳಲ್ಲಿ ಭಾರತಕ್ಕೆ 139 ಸ್ಥಾನ!

ವಿಶ್ವ ಸಂತೋಷ ವರದಿ- 149 ದೇಶಗಳಲ್ಲಿ ಭಾರತಕ್ಕೆ 139 ಸ್ಥಾನ!

ಪಾಕಿಸ್ತಾನ 105 ನೇ ಸ್ಥಾನದಲ್ಲಿದ್ದರೆ, ಬಾಂಗ್ಲಾದೇಶ 101 ನೇ ಸ್ಥಾನದಲ್ಲಿದೆ ಮತ್ತು ಚೀನಾ 84 ನೇ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಶುಕ್ರವಾರ ಬಿಡುಗಡೆಯಾದ ವಿಶ್ವಸಂಸ್ಥೆಯ ‘ವಿಶ್ವ ಹ್ಯಾಪಿನೆಸ್‌ ರಿಪೋರ್ಟ್-2021’ ರ ಪಟ್ಟಿಯಲ್ಲಿ ಭಾರತವು 149 ದೇಶಗಳಲ್ಲಿ 139 ನೇ ಸ್ಥಾನದಲ್ಲಿದೆ. ಈ ಪಟ್ಟಿಯಲ್ಲಿ ಫಿನ್ಲೆಂಡ್ ಅಗ್ರಸ್ಥಾನದಲ್ಲಿದೆ.

ವಿಶ್ವಸಂಸ್ಥೆಯ ಸಸ್ಟೈನಬಲ್ ಡೆವಲಪ್ಮೆಂಟ್ ಸೊಲ್ಯೂಷನ್ಸ್ ನೆಟ್ವರ್ಕ್ ಹೊರಡಿಸಿದ ‘ವರ್ಲ್ಡ್ ಹ್ಯಾಪಿನೆಸ್ ರಿಪೋರ್ಟ್-2021’ ವರದಿಯು, ಕೊರೊನಾ ಸಂಕ್ರಾಮಿಕವು ಪ್ರಪಂಚದಾದ್ಯಂತದ ಜನರ ಹೇಗೆ ಪರಿಣಾಮ ಬೀರಿದೆ ಎಂಬುದರ ಮೇಲೆ ಕೇಂದ್ರೀಕರಿಸಿದೆ.

ವಿಶ್ವದ 149 ದೇಶಗಳ ನಾಗರಿಕರು ತಾವು ಎಷ್ಟು ಸಂತೋಷದಿಂದ ಇದ್ದೇವೆ ಎಂದು ಹೇಳಿರುವುದರ ಮೇಲೆ ದೇಶಗಳು ವರದಿಯಲ್ಲಿ ತಮ್ಮ ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ: ‘ಕೋರ್ಟುಗಳು ಮಹಿಳೆಯರ ಕುರಿತ ರೂಢಿಗತ ಅಪವಾದ ಪರಿಗಣಿಸಬಾರದು’: ಸುಪ್ರೀಂ ಕೋರ್ಟ್

“ನಮ್ಮ ಗುರಿಯು ಎರಡು ಉದ್ದೇಶಗಳನ್ನು ಹೊಂದಿದ್ದು, ಮೊದಲನೆಯದಾಗಿ ಜನರ ಜೀವನದ ಸಂರಚನೆ ಮತ್ತು ಗುಣಮಟ್ಟದ ಮೇಲೆ ಸಾಂಕ್ರಾಮಿಕದ ಪರಿಣಾಮಗಳನ್ನು ಕೇಂದ್ರೀಕರಿಸುವುದು. ಎರಡನೆಯದಾಗಿ ಸಾಂಕ್ರಾಮಿಕವನ್ನು ಪ್ರಪಂಚದಾದ್ಯಂತದ ಸರ್ಕಾರಗಳು ಹೇಗೆ ಎದುರಿಸಿದೆ ಎಂಬುದನ್ನು ವಿವರಿಸಲು ಮತ್ತು ಮೌಲ್ಯಮಾಪನ ಮಾಡುವುದಾಗಿದೆ. ನಿರ್ದಿಷ್ಟವಾಗಿ, ಕೆಲವು ದೇಶಗಳು ಇತರ ದೇಶಗಳಿಗಿಂತ ಯಾಕೆ ಉತ್ತಮವಾಗಿ ಕಾರ್ಯನಿರ್ವಹಿಸಿವೆ ಎಂಬುದನ್ನು ವಿವರಿಸುವುದು ನಮ್ಮ ಉದ್ದೇಶವಾಗಿದೆ” ಎಂದು ವರದಿಯು ಹೇಳಿಕೆಯಲ್ಲಿ ತಿಳಿಸಿದೆ.

ಈ ಪಟ್ಟಿಯಲ್ಲಿ ಭಾರತವು 139 ನೇ ಸ್ಥಾನದಲ್ಲಿದೆ ಎಂದು ವರದಿ ಹೇಳಿದೆ. ವಿಶ್ವಸಂಸ್ಥೆಯು 2019 ರಲ್ಲಿ ಬಿಡುಗಡೆ ಮಾಡಿದ ವರದಿಯಲ್ಲಿ ಭಾರತವು 140 ನೇ ಸ್ಥಾನದಲ್ಲಿತ್ತು.

ವರದಿಯಲ್ಲಿ ಫಿನ್‌ಲ್ಯಾಂಡ್ ದೇಶವು ವಿಶ್ವದ ಅತ್ಯಂತ ಸಂತೋಷದಾಯಕ ದೇಶವೆಂದು ಸ್ಥಾನ ಪಡೆದಿದೆ. ನಾರ್ಡಿಕ್ ದೇಶಗಳಾದ ಐಸ್‌ಲ್ಯಾಂಡ್, ಡೆನ್ಮಾರ್ಕ್, ಸ್ವಿಟ್‌ಜಲ್ಯಾಂಡ್, ನೆದರ್ಲ್ಯಾಂಡ್ಸ್, ಸ್ವೀಡನ್, ಜರ್ಮನಿ ಮತ್ತು ನಾರ್ವೆಯು ನಂತರದ ಸ್ಥಾನದಲ್ಲಿದೆ.

ಇದನ್ನೂ ಓದಿ: ರಣಥಂಬೂರ್‌‌ ಟೈಗರ್‌ ರಿಸರ್ವ್‌ನಲ್ಲಿ ನಾಲ್ಕು ಹುಲಿಗಳು ಒಂದು ವರ್ಷದಿಂದ ನಾಪತ್ತೆ

ಪಾಕಿಸ್ತಾನ 105 ನೇ ಸ್ಥಾನದಲ್ಲಿ, ಬಾಂಗ್ಲಾದೇಶ 101 ನೇ ಸ್ಥಾನದಲ್ಲಿದೆ ಮತ್ತು ಚೀನಾ 84 ನೇ ಸ್ಥಾನದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುದ್ಧ ಪೀಡಿತ ಅಫ್ಘಾನಿಸ್ತಾನದ ಜನರು ತಮ್ಮ ಜೀವನದ ಬಗ್ಗೆ ಹೆಚ್ಚು ಅತೃಪ್ತರಾಗಿದ್ದಾರೆ, ನಂತರದ ಸ್ಥಾನಗಳಲ್ಲಿ ಜಿಂಬಾಬ್ವೆ (148), ರುವಾಂಡಾ (147), ಬೋಟ್ಸ್ವಾನ (146) ಮತ್ತು ಲೆಸೊಥೊ (145) ದೇಶಗಳಿವೆ.

ಈ ವರದಿಯ ಫಲಿತಾಂಶಗಳು ಜಿಡಿಪಿ ಮತ್ತು ಸಾಮಾಜಿಕ ಭದ್ರತೆ ಸೇರಿದಂತೆ ಇತರ ಅಂಶಗಳೊಂದಿಗೆ ಪರಸ್ಪರ ಸಂಬಂಧ ಹೊಂದಿವೆ ಎಂದು ರಿಪೋರ್ಟ್ ತಿಳಿಸಿದೆ.

ವಿಶ್ವದ ಅತ್ಯಂತ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾಗಿದ್ದರೂ ಅಮೆರಿಕವು ಈ ಪಟ್ಟಿಯಲ್ಲಿ 19 ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...