Homeಮುಖಪುಟಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

- Advertisement -
- Advertisement -

’ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ..? ಎಂದು ಶುಕ್ರವಾರ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮ‌ರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾತನಾಡಿರುವ ಸುಪ್ರೀಂ ಕೋರ್ಟ್‌, ಒಂದು ವೇಳೆ, ಒಟ್ಟಾರೆ 50 % ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ  “ಫಲಿತಾಂಶಿಕ ಅಸಮಾನತೆ”ಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಎಲ್.ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಾಧೀಶರ ಸಂವಿಧಾನ ಪೀಠದ ಎದುರು ಮರಾಠಾ ಕೋಟ ಪ್ರಕರಣದ ವಿಚಾರಣೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಕೋಟಾಕ್ಕೆ ಮಿತಿ ಹಾಕುವ  ಮಂಡಲ್ ತೀರ್ಪನ್ನು ಬದಲಾದ ಸಂದರ್ಭಗಳಲ್ಲಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ

ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ಅದನ್ನು ರಾಜ್ಯಗಳಿಗೆ ಬಿಡಬೇಕು ಎಂದರು. 1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಯಿತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೊಹಟಗಿ,  ಇಂದ್ರಾ ಸಾಹ್ನಿ ಪ್ರಕರಣ ಎಂದೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು.  ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡಾ 10 ರಷ್ಟು ಕೋಟಾ ನೀಡುವ ಕೇಂದ್ರದ ನಿರ್ಧಾರವು ಶೇ. 50 ರಷ್ಟು ಮೀಸಲಾತಿ ಮಿತಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

“ನೀವು ಸೂಚಿಸುವಂತೆ  ಮೀಸಲಾತಿಗೆ ಶೇ. 50ರ ಮಿತಿ ಇಲ್ಲದಿದ್ದರೆ,  ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರ ಬಗ್ಗೆ ನಿಮ್ಮ ವಿಚಾರವೇನು? ಫಲಿತಾಂಶದ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?  ಎಷ್ಟು ತಲೆಮಾರಿನವರೆಗೆ ಅದನ್ನು ಮುಂದುವರೆಸುತ್ತೀರಿ? ಎಂದು ನ್ಯಾಯಪೀಠ ರೊಹಟಗಿ ಅವರನ್ನು ಪ್ರಶ್ನಿಸಿತು.

1931 ರ ಜನಗಣತಿಯ ಮೇರೆಗೆ ಮಂಡಲ್ ತೀರ್ಪನ್ನು ಈಗ ಮರುಪರಿಶೀಲಿಸಲು ಹಲವು ಕಾರಣಗಳಿವೆ . ಮೇಲಾಗಿ,  ಈಗ ಜನಸಂಖ್ಯೆಯು ಅನೇಕ ಪಟ್ಟು ಹೆಚ್ಚಾಗಿದ್ದು,  135 ಕೋಟಿಗೆ ತಲುಪಿದೆ ಎಂದು ರೊಹಟಗಿ ವಾದ ಮಂಡಿಸಿದರು.

ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಹಲವು ಪ್ರಯೋಜನಕಾರಿ ಯೋಜನೆಗಳನ್ನು ನಡೆಸುತ್ತಿವೆ. ಈಗ  “ಯಾವುದೇ ಅಭಿವೃದ್ಧಿ ನಡೆದಿಲ್ಲ, ಯಾವುದೇ ಹಿಂದುಳಿದ ಜಾತಿ ಮುಂದಯವರೆದಿಲ್ಲ ಎಂದು ನಾವು ಒಪ್ಪಿಕೊಳ್ಳಬಹುದೇ” ಎಂದು ನ್ಯಾಯಪೀಠ ಕೇಳಿತು.

ಮಂಡಲ್ ತೀರ್ಪನ್ನು ಪರಿಶೀಲಿಸುವ ಉದ್ದೇಶವೆಂದರೆ ಹಿಂದುಳಿದಿರುವಿಕೆಯಿಂದ ಹೊರಬಂದವರನ್ನು ಪಟ್ಟಿಯಿಂದ ಹೊರಗಿಡುವುದೇ ಆಗಿದೆ ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ…

“ಹೌದು, ನಾವು ಮುಂದೆ ಸಾಗಿದ್ದೇವೆ. ಅಂದರೆ ಹಿಂದುಳಿದ ವರ್ಗಗಳು ಶೇಕಡಾ 50 ರಿಂದ 20 ಕ್ಕೆ ಇಳಿದಿವೆ ಎಂದರ್ಥವಲ್ಲ. ಈ ದೇಶದಲ್ಲಿ ಇನ್ನೂ ಹಸಿವಿನಿಂದ ಸಾಯುವವರಿದ್ದಾರೆ. ಇಂದ್ರ ಸಾಹ್ನಿ ತೀರ್ಪು ಸಂಪೂರ್ಣವಾಗಿ ತಪ್ಪು, ಅದನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಲು ನಾನು ಪ್ರಯತ್ನಿಸುತ್ತಿಲ್ಲ. 30 ವರ್ಷಗಳು ಕಳೆದಿವೆ, ಕಾನೂನು ಬದಲಾಗಿದೆ, ಜನಸಂಖ್ಯೆ ಬೆಳೆದಿದೆ, ಹಿಂದುಳಿದ ವ್ಯಕ್ತಿಗಳೂ ಹೆಚ್ಚಿರಬಹುದು ಎಂದು ನಾನು ಸಮಸ್ಯೆಗಳನ್ನು ಎತ್ತುತ್ತಿದ್ದೇನೆ ಎಂದು ರೊಹಟಗಿ ಹೇಳಿದ್ದಾರೆ.

ಅವರು ಸಂವಿಧಾನದಲ್ಲಿ ಮಾಡಿದ ತಿದ್ದುಪಡಿಗಳನ್ನು ಉಲ್ಲೇಖಿಸಿದರು ಮತ್ತು ದೇಶವು ತನ್ನ ಹಿಂದುಳಿದ ವರ್ಗಗಳಿಗೆ ಅಗತ್ಯವಿರುವ “ವಿಮೋಚನೆಯ ಸಮೀಪ ಎಲ್ಲಿಯೂ” ತಲುಪಿಲ್ಲ ಎಂಬುದಕ್ಕೆ ಈ ತಿದ್ದುಪಡಿಗಳು ಸೂಚಕಗಳಾಗಿವೆ ಎಂದು ಹೇಳಿದರು.

ಹಲವಾರು ರಾಜ್ಯಗಳಲ್ಲಿ ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿರುವಾಗ ಮತ್ತು ಈ ಪರಿಸ್ಥಿತಿಯಲ್ಲಿ, ಇದು ಬರ್ನಿಂಗ್ ಇಶ್ಯೂ ಅಲ್ಲ ಮತ್ತು 30 ವರ್ಷಗಳ ನಂತರ ಒಂದು ಮರುಪರಿಶೀಲನೆ  ಅಗತ್ಯವಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಅವರು ಹೇಳಿದರು. ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಸೋಮವಾರ ಪುನರಾರಂಭಗೊಳ್ಳಲಿವೆ.

ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ  ಹಲವು ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಪ್ರವೇಶಾತಿಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವುದನ್ನು ಬಾಂಬೇ ಹೈಕೋರ್ಟ್ ಎತ್ತಿಹಿಡಿದಿದೆ.


ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...