Homeಮುಖಪುಟಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಕೆ? : ಸುಪ್ರೀಂ ಪ್ರಶ್ನೆ

- Advertisement -
- Advertisement -

’ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಷ್ಟು ತಲೆಮಾರುಗಳವರೆಗೆ ಮೀಸಲಾತಿ ಮುಂದುವರಿಯುತ್ತದೆ..? ಎಂದು ಶುಕ್ರವಾರ ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಮ‌ರಾಠಾ ಕೋಟಾ ಪ್ರಕರಣದ ವಿಚಾರಣೆಯ ಸಮಯದಲ್ಲಿ ಈ ಬಗ್ಗೆ ಮಾತನಾಡಿರುವ ಸುಪ್ರೀಂ ಕೋರ್ಟ್‌, ಒಂದು ವೇಳೆ, ಒಟ್ಟಾರೆ 50 % ಮಿತಿಯನ್ನು ತೆಗೆದುಹಾಕಿದರೆ ಉದ್ಭವಿಸುವ  “ಫಲಿತಾಂಶಿಕ ಅಸಮಾನತೆ”ಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಎಲ್.ನಾಗೇಶ್ವರ ರಾವ್, ಎಸ್ ಅಬ್ದುಲ್ ನಜೀರ್, ಹೇಮಂತ್ ಗುಪ್ತಾ ಮತ್ತು ಎಸ್ ರವೀಂದ್ರ ಭಟ್ ಅವರನ್ನು ಒಳಗೊಂಡ ನ್ಯಾಯಾಧೀಶರ ಸಂವಿಧಾನ ಪೀಠದ ಎದುರು ಮರಾಠಾ ಕೋಟ ಪ್ರಕರಣದ ವಿಚಾರಣೆ ನಡೆಯಿತು.  ಮಹಾರಾಷ್ಟ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ, ಕೋಟಾಕ್ಕೆ ಮಿತಿ ಹಾಕುವ  ಮಂಡಲ್ ತೀರ್ಪನ್ನು ಬದಲಾದ ಸಂದರ್ಭಗಳಲ್ಲಿ ಮರುಪರಿಶೀಲಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದ್ದಾರೆ

ಬದಲಾದ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಕೋಟಾಗಳನ್ನು ಸರಿಪಡಿಸಲು ನ್ಯಾಯಾಲಯಗಳು ಅದನ್ನು ರಾಜ್ಯಗಳಿಗೆ ಬಿಡಬೇಕು ಎಂದರು. 1931 ರ ಜನಗಣತಿಯ ಮೇಲೆ ಮಂಡಲ್ ತೀರ್ಪನ್ನು ರೂಪಿಸಲಾಯಿತು ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ, ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರನ್ನು ‘ದುರ್ಯೋಧನ, ದುಶ್ಯಾಶನ’ ಎಂದ ಮಮತಾ

ಮರಾಠರಿಗೆ ಕೋಟಾ ನೀಡುವ ಮಹಾರಾಷ್ಟ್ರ ಕಾನೂನಿನ ಪರವಾಗಿ ವಾದಿಸಿದ ರೊಹಟಗಿ,  ಇಂದ್ರಾ ಸಾಹ್ನಿ ಪ್ರಕರಣ ಎಂದೂ ಕರೆಯಲ್ಪಡುವ ಮಂಡಲ್ ತೀರ್ಪಿನ ವಿವಿಧ ಅಂಶಗಳನ್ನು ಉಲ್ಲೇಖಿಸಿದರು.  ಆರ್ಥಿಕವಾಗಿ ದುರ್ಬಲ ವರ್ಗದ ಜನರಿಗೆ ಶೇಕಡಾ 10 ರಷ್ಟು ಕೋಟಾ ನೀಡುವ ಕೇಂದ್ರದ ನಿರ್ಧಾರವು ಶೇ. 50 ರಷ್ಟು ಮೀಸಲಾತಿ ಮಿತಿಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

“ನೀವು ಸೂಚಿಸುವಂತೆ  ಮೀಸಲಾತಿಗೆ ಶೇ. 50ರ ಮಿತಿ ಇಲ್ಲದಿದ್ದರೆ,  ಆಗ ಸಮಾನತೆಯ ಪರಿಕಲ್ಪನೆ ಏನು? ನಾವು ಅಂತಿಮವಾಗಿ ಅದನ್ನು ಎದುರಿಸಬೇಕಾಗುತ್ತದೆ. ಅದರ ಬಗ್ಗೆ ನಿಮ್ಮ ವಿಚಾರವೇನು? ಫಲಿತಾಂಶದ ಅಸಮಾನತೆಯ ಬಗ್ಗೆ ನಿಮ್ಮ ಅಭಿಪ್ರಾಯ ಏನು?  ಎಷ್ಟು ತಲೆಮಾರಿನವರೆಗೆ ಅದನ್ನು ಮುಂದುವರೆಸುತ್ತೀರಿ? ಎಂದು ನ್ಯಾಯಪೀಠ ರೊಹಟಗಿ ಅವರನ್ನು ಪ್ರಶ್ನಿಸಿತು.

1931 ರ ಜನಗಣತಿಯ ಮೇರೆಗೆ ಮಂಡಲ್ ತೀರ್ಪನ್ನು ಈಗ ಮರುಪರಿಶೀಲಿಸಲು ಹಲವು ಕಾರಣಗಳಿವೆ . ಮೇಲಾಗಿ,  ಈಗ ಜನಸಂಖ್ಯೆಯು ಅನೇಕ ಪಟ್ಟು ಹೆಚ್ಚಾಗಿದ್ದು,  135 ಕೋಟಿಗೆ ತಲುಪಿದೆ ಎಂದು ರೊಹಟಗಿ ವಾದ ಮಂಡಿಸಿದರು.

ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿವೆ ಮತ್ತು ರಾಜ್ಯಗಳು ಹಲವು ಪ್ರಯೋಜನಕಾರಿ ಯೋಜನೆಗಳನ್ನು ನಡೆಸುತ್ತಿವೆ. ಈಗ  “ಯಾವುದೇ ಅಭಿವೃದ್ಧಿ ನಡೆದಿಲ್ಲ, ಯಾವುದೇ ಹಿಂದುಳಿದ ಜಾತಿ ಮುಂದಯವರೆದಿಲ್ಲ ಎಂದು ನಾವು ಒಪ್ಪಿಕೊಳ್ಳಬಹುದೇ” ಎಂದು ನ್ಯಾಯಪೀಠ ಕೇಳಿತು.

ಮಂಡಲ್ ತೀರ್ಪನ್ನು ಪರಿಶೀಲಿಸುವ ಉದ್ದೇಶವೆಂದರೆ ಹಿಂದುಳಿದಿರುವಿಕೆಯಿಂದ ಹೊರಬಂದವರನ್ನು ಪಟ್ಟಿಯಿಂದ ಹೊರಗಿಡುವುದೇ ಆಗಿದೆ ಎಂದು ಪೀಠ ತಿಳಿಸಿತು.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ…

“ಹೌದು, ನಾವು ಮುಂದೆ ಸಾಗಿದ್ದೇವೆ. ಅಂದರೆ ಹಿಂದುಳಿದ ವರ್ಗಗಳು ಶೇಕಡಾ 50 ರಿಂದ 20 ಕ್ಕೆ ಇಳಿದಿವೆ ಎಂದರ್ಥವಲ್ಲ. ಈ ದೇಶದಲ್ಲಿ ಇನ್ನೂ ಹಸಿವಿನಿಂದ ಸಾಯುವವರಿದ್ದಾರೆ. ಇಂದ್ರ ಸಾಹ್ನಿ ತೀರ್ಪು ಸಂಪೂರ್ಣವಾಗಿ ತಪ್ಪು, ಅದನ್ನು ಕಸದ ಬುಟ್ಟಿಗೆ ಹಾಕಿ ಎಂದು ಹೇಳಲು ನಾನು ಪ್ರಯತ್ನಿಸುತ್ತಿಲ್ಲ. 30 ವರ್ಷಗಳು ಕಳೆದಿವೆ, ಕಾನೂನು ಬದಲಾಗಿದೆ, ಜನಸಂಖ್ಯೆ ಬೆಳೆದಿದೆ, ಹಿಂದುಳಿದ ವ್ಯಕ್ತಿಗಳೂ ಹೆಚ್ಚಿರಬಹುದು ಎಂದು ನಾನು ಸಮಸ್ಯೆಗಳನ್ನು ಎತ್ತುತ್ತಿದ್ದೇನೆ ಎಂದು ರೊಹಟಗಿ ಹೇಳಿದ್ದಾರೆ.

ಅವರು ಸಂವಿಧಾನದಲ್ಲಿ ಮಾಡಿದ ತಿದ್ದುಪಡಿಗಳನ್ನು ಉಲ್ಲೇಖಿಸಿದರು ಮತ್ತು ದೇಶವು ತನ್ನ ಹಿಂದುಳಿದ ವರ್ಗಗಳಿಗೆ ಅಗತ್ಯವಿರುವ “ವಿಮೋಚನೆಯ ಸಮೀಪ ಎಲ್ಲಿಯೂ” ತಲುಪಿಲ್ಲ ಎಂಬುದಕ್ಕೆ ಈ ತಿದ್ದುಪಡಿಗಳು ಸೂಚಕಗಳಾಗಿವೆ ಎಂದು ಹೇಳಿದರು.

ಹಲವಾರು ರಾಜ್ಯಗಳಲ್ಲಿ ಮೀಸಲಾತಿ ಶೇಕಡಾ 50 ಕ್ಕಿಂತ ಹೆಚ್ಚಿರುವಾಗ ಮತ್ತು ಈ ಪರಿಸ್ಥಿತಿಯಲ್ಲಿ, ಇದು ಬರ್ನಿಂಗ್ ಇಶ್ಯೂ ಅಲ್ಲ ಮತ್ತು 30 ವರ್ಷಗಳ ನಂತರ ಒಂದು ಮರುಪರಿಶೀಲನೆ  ಅಗತ್ಯವಿಲ್ಲ ಎಂದು ಹೇಳಲಾಗುವುದಿಲ್ಲ ಎಂದು ಅವರು ಹೇಳಿದರು. ಪ್ರಕರಣದ ವಾದಗಳು ಅಪೂರ್ಣವಾಗಿದ್ದು, ಸೋಮವಾರ ಪುನರಾರಂಭಗೊಳ್ಳಲಿವೆ.

ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ  ಹಲವು ಪ್ರಕರಣಗಳ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸುತ್ತಿದೆ, ಮಹಾರಾಷ್ಟ್ರದಲ್ಲಿ ಪ್ರವೇಶಾತಿಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮರಾಠರಿಗೆ ಕೋಟಾ ನೀಡುವುದನ್ನು ಬಾಂಬೇ ಹೈಕೋರ್ಟ್ ಎತ್ತಿಹಿಡಿದಿದೆ.


ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...