Homeಮುಖಪುಟಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

ಶಿವಮೊಗ್ಗದ ರೈತ ಮಹಾಪಂಚಾಯತ್‌ಗೆ ಹರಿದು ಬಂದ ರೈತಸಾಗರ: ಮೋದಿ ಸರ್ಕಾರದ ವಿರುದ್ದ ಜನಾಕ್ರೋಶ

- Advertisement -
- Advertisement -

ದಕ್ಷಿಣ ಭಾರತದ ಮತ್ತು ಕರ್ನಾಟಕದ ಮೊದಲ ರೈತ ಮಹಾಪಂಚಾಯತ್‌ಗೆ ಇಂದು ಶಿವಮೊಗ್ಗ ಸಾಕ್ಷಿಯಾಯಿತು. ಐತಿಹಾಸಿಕ ಮಹಾಪಂಚಾಯತ್‌ನಲ್ಲಿ ಹತ್ತಾರು ಸಾವಿರ ರೈತರು ನೆರೆದು ಕೇಂದ್ರ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಬಿಜೆಪಿ ಮತ್ತು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದ ಸೈನ್ಸ್ ಕಾಲೇಜು ಮೈದಾನದಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ದೆಹಲಿಯ ರೈತ ಹೋರಾಟವನ್ನು ಮುನ್ನಡೆಸುತ್ತಿರುವ ಡಾ.ದರ್ಶನ್ ಪಾಲ್, ರಾಕೇಶ್ ಟಿಕಾಯತ್ ಮತ್ತು ಯುದುವೀರ್‌ ಸಿಂಗ್‌ರವರು ಭಾಗವಹಿಸಿ ಹೋರಾಟಕ್ಕೆ ಚಾಲನೆ ನೀಡಿದರು.

ಡಾ.ದರ್ಶನ್ ಪಾಲ್ ಮಾತನಾಡಿ, “ಈ ಮಣ್ಣಿಗೆ ನಾನು ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ಬಸವಣ್ಣ ಮತ್ತು ಟಿಪ್ಪುಗೆ ಜನ್ಮಕೊಟ್ಟ ಭೂಮಿ ಇದು, ಇಲ್ಲಿನ ಜನರಿಗೆ ನಮನ ಸಲ್ಲಿಸಲು ಬಯಸುತ್ತೇನೆ. ಏಕೆಂದರೆ ತುಂಗಾ ಮೂಲ ಉಳಿಸಿ ಹೋರಾಟದ ಮೂಲಕ ದಿಟ್ಟ ಹೋರಾಟ ಮಾಡಿದವರು, ನಿಮಗೆ ನಮನ” ಎಂದರು.

ದೆಹಲಿಯ ಗಡಿಗಳಲ್ಲಿ ಕೂತಿರುವ ರೈತರು ದೇಶದ ಎಲ್ಲಾ ಭಾಗದಲ್ಲಿರುವ ರೈತರು ಈ ಆಂದೋಲನದ ಬಗ್ಗೆ ಏನು ಭಾವಿಸುತ್ತಾರೆ ಎಂದು ಯೋಚಿಸುತ್ತಿದ್ದಾರೆ. ನೀವು ಇಲ್ಲಿ ಸಹಸ್ರಾರು ಜನ ಒಟ್ಟು ಸೇರಿ ಆ ರೈತ ಬಂಧುಗಳಿಗೆ ಗಟ್ಟಿ ಸಂದೇಶ ನೀಡಿದ್ದೀರಿ.. ನಾವು ಜೊತೆಗಿದ್ದೇವೆ ಎಂದು ನೀವು ಹೇಳಿದ್ಧೀರಿ ನಿಮಗೆ ಧನ್ಯವಾದ ಎಂದರು.

32 ವರ್ಷಗಳಿಂದ ಎಂಎಸ್‌ಪಿಗಾಗಿ ಹೋರಾಡುತ್ತಿದ್ದೇವೆ. ರೈತರ ಆತ್ಮಹತ್ಯೆಗಳ ವಿರುದ್ಧ ನಾವು ಹೋರಾಡುತ್ತಿರುವಾಗ ಕೋವಿಡ್ ಕಾಲದಲ್ಲಿ ಕೇಂದ್ರ ಸರ್ಕಾರ ಈ ಕರಾಳ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ. ಇದರ ವಿರುದ್ಧ ಕಳೆದ 8 ತಿಂಗಳುಗಳಿಂದ ಹೋರಾಟ ನಡೆಸುತ್ತಿದ್ದೇವೆ. ನಾವು ಇಡೀ ಪಂಜಾಬ್‌ ಬಂದ್ ಮಾಡಿದ್ದೇವೆ. ರೈಲು ಸೇವೆ ಸ್ಥಗಿತಗೊಳಿಸಿದ್ದೇವೆ. ರಿಲಾಯನ್ಸ್ ಮತ್ತು ಎಸ್ಸಾರ್ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಿ ಹೋರಾಟ ಮಾಡಿದ್ದೇವೆ ಎಂದು ದರ್ಶನ್ ಪಾಲ್ ಪಂಜಾಬ್‌ ಹೋರಾಟದ ಕುರಿತು ಮಾಹಿತಿ ನೀಡಿದರು.

ಶಿವಮೊಗ್ಗದ ರೈತ ಮಹಾಪಂಚಾಯತ್ ಲೈವ್ ನೋಡಲು ಇಲ್ಲಿ ಕ್ಲಿಕ್ ಮಾಡಿ

ಇಂದಿಗೆ ದೆಹಲಿಯ ರೈತ ಹೋರಾಟಕ್ಕೆ 115 ದಿನಗಳಾಗಿವೆ. ಸರ್ಕಾರ ಈ ಆಂದೋಲನ ಮುರಿಯಲು ಪ್ರಯತ್ನಿಸಿತು. ಆದರೆ ಮೀನಾ ಮುತ್ತು ಗುಜ್ಜರ್‌ ರೈತರು ಒಂದೂಗೂಡಿ ರಾಜಸ್ಥಾನದಲ್ಲಿ ಹೋರಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಹಿಂದೂ ಮುಸ್ಲಿಮರು ಒಂದುಗೂಡಿ ಹೋರಾಡುತ್ತಿದ್ದಾರೆ. ಅಂದರೆ ಈ ರೈತ ಹೋರಾಟ ದಿನೇ ದಿನೇ ಗಟ್ಟಿಗೊಳ್ಳುತ್ತಿದೆ ಮತ್ತು ದೇಶಕ್ಕೆ ವಿಸ್ತರಿಸುತ್ತಿದೆ ಎಂದರು.

ಕರ್ನಾಟಕದಲ್ಲಿ ನೀವು ಐಕ್ಯ ಹೋರಾಟ ಮಾಡುತ್ತಿದ್ದೀರಿ. ಸಂಯುಕ್ತ ಹೋರಾಟ ನಡೆಸುತ್ತಿದ್ದಾರೆ. ನಾವು ಪಂಜಾಬ್‌ನಲ್ಲಿ 31 ಸಂಘಟನೆಗಳು ಒಂದುಗೂಡಿದ್ದಕ್ಕೆ ದೆಹಲಿಯ ಗಡಿಗಳಲ್ಲಿ ಗಟ್ಟಿ ಹೋರಾಟ ನಡೆಸಲು ಸಾಧ್ಯವಾಯಿತು. ಅದೇ ರೀತಿ ನೀವು ಸಹ ಒಂದುಗೂಡಿ ಹೋರಾಡುತ್ತೀರಿ ಎಂದು ನಂಬಿದ್ದೇವೆ. ಈ ಕಾರ್ಪೋರೇಟ್‌ಗಳ ವಿರುದ್ದದ ಹೋರಾಟದಲ್ಲಿ ನೀವು ಕೈ ಜೋಡಿಸುತ್ತೀರಿ ಅಲ್ಲವೇ ಎಂದು ಪಾಲ್ ಪ್ರಶ್ನಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಕೆ.ಟಿ ಗಂಗಾಧರ್‌ರವರು ಮಾತನಾಡಿ “ಶಿವಮೊಗ್ಗ ಸಮಾಜವಾದಿ ಚಳವಳಿಯ ತವರೂರು. ರೈತ ಚಳವಳಿಯ ನೆಲೆ. ಕೇಂದ್ರದ ಈ ಕರಾಳ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಮೊದಲ ರೈತ ಮಹಾಪಂಚಾಯತ್‌ಗು ಇದು ಸಾಕ್ಷಿಯಾಗಿದೆ. ಮೋದಿ ಸರ್ಕಾರ ಹಿಂದೆ ಸರಿಯುವವರೆಗೂ, ಎಂಎಸ್‌ಪಿಗಾಗಿ ಕಾನೂನು ಜಾರಿಗೊಳಿಸುವವರೆಗೂ ನಾವು ವಿರಮಿಸುವುದಿಲ್ಲ ಎಂದರು.

ಎಂಎಸ್‌ಪಿ ಇದೆ ಎಂದು ಪಿಎಂ ನರೇಂದ್ರ ಮೋದಿ ಮತ್ತು ಸಿಎಂ ಯಡಿಯೂರಪ್ಪನವರು ರೈತರಿಗೆ ಸುಳ್ಳು ಹೇಳುತ್ತಿದ್ದಾರೆ. ರೈತರ ಭೂಮಿ ಕಿತ್ತುಕೊಳ್ಳುವ ಕಾನೂನು ಮಾಡುತ್ತಿದ್ದಾರೆ. ಹಾಗಾಗಿ ಈ ಮಹಾಪಂಚಾಯತ್‌ ಮೂಲಕ ರೈತರ ಶಕ್ತಿ ಪ್ರದರ್ಶನ ಮಾಡುತ್ತಿದ್ದು, ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುತ್ತೇವೆ ಎಂದು ಸವಾಲು ಹಾಕಿದರು.


ಇದನ್ನೂ ಓದಿ: ಶಿವಮೊಗ್ಗ- ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್ ಲೈವ್ ನೋಡಿ‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...