Homeಅಂತರಾಷ್ಟ್ರೀಯ’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

’ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚಿಸಿದ್ದೇನೆ’: ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟಿನ್

- Advertisement -
- Advertisement -

ಭಾರತದ ಅಲ್ಪಸಂಖ್ಯಾತರ ಮಾನವ ಹಕ್ಕುಗಳ ಬಗ್ಗೆ ಭಾರತೀಯ ಸಚಿವರೊಂದಿಗೆ ಸಂವಾದ ನಡೆಸಿದ್ದೇನೆ. ಪಾಲುದಾರರು “ಆ ರೀತಿಯ ಚರ್ಚೆಗಳನ್ನು” ನಡೆಸುವುದು ಅಗತ್ಯ ಎಂದು ಅಮೆರಿಕ ರಕ್ಷಣಾ ಕಾರ್ಯದರ್ಶಿ ಜನರಲ್ ಲಾಯ್ಡ್ ಆಸ್ಟಿನ್ ಶನಿವಾರ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ವಿಶೇಷವಾಗಿ ಉತ್ತರ ಈಶಾನ್ಯದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ” ಕುರಿತು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಮಾತನಾಡಿದ್ದೀರಾ ಎಂದು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಳಿದಾಗ,  ಜನರಲ್ ಆಸ್ಟಿನ್, “ಅವರೊಂದಿಗೆ ಮಾತನಾಡಲು ನನಗೆ ಅವಕಾಶವಾಗಲಿಲ್ಲ. ಈ ವಿಷಯದ ಬಗ್ಗೆ ಕ್ಯಾಬಿನೆಟ್‌ನ ಇತರ ಸದಸ್ಯರೊಂದಿಗೆ ಸಂವಾದ ನಡೆಸಿದ್ದೇನೆ’ ಎಂದಿದ್ದಾರೆ.

“ಭಾರತವು ನಮ್ಮ ಪಾಲುದಾರ ಎಂದು ನಾವು ನೆನಪಿಟ್ಟುಕೊಳ್ಳಬೇಕು, ಭಾರತದ ಪಾಲುದಾರಿಕೆಯನ್ನು ನಾವು ಗೌರವಿಸುತ್ತೇವೆ. ಪಾಲುದಾರರು ಈ ರೀತಿಯ ಚರ್ಚೆಗಳನ್ನು ನಡೆಸಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಖಂಡಿತವಾಗಿಯೂ, ನಾವು ಅದನ್ನು ಮಾಡಲು ಇಷ್ಟಪಡುತ್ತೇನೆ. ಆ ಚರ್ಚೆಗಳನ್ನು ಒಂದು ಬಹಳ ಅರ್ಥಪೂರ್ಣ ಮಾರ್ಗ ಮತ್ತು ಪ್ರಗತಿಗೆ ಪೂರಕ “ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಾ. 26ಕ್ಕೆ ಭಾರತ್ ಬಂದ್: ಹೋಳಿ ದಿನದಂದು ಕೃಷಿ ಕಾನೂನುಗಳ ಪ್ರತಿ ದಹನ

“ಭಾರತದಲ್ಲಿ ಪ್ರಜಾಪ್ರಭುತ್ವದ ಹದಗೆಡುತ್ತಿರುವ ಪರಿಸ್ಥಿತಿ” ಕುರಿತು ಸೆನೆಟ್ ವಿದೇಶಾಂಗ ಸಮಿತಿಯ ಅಧ್ಯಕ್ಷ ಸೆನೆಟರ್ ರಾಬರ್ಟ್ ಮೆನೆಂಡೆಜ್ ಅವರು ಎತ್ತಿದ ಕಳವಳವನ್ನು  ಭಾರತದ ಪ್ರಮುಖರೊಂದಿಗೆ  ಹಂಚಿಕೊಂಡಿದ್ದೀರಾ ಎಂಬ ಎನ್‌ಡಿಟಿವಿಯ ಪ್ರಶ್ನೆಗೆ ಉತ್ತರಿಸಿದ ಜನರಲ್ ಆಸ್ಟಿನ್,  ಅಮೆರಿಕಕ್ಕೆ ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮ ಮುಖ್ಯವಾಗಿದೆ ಎಂದರು.

“ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾಕ್ಕೆ ಮಾನವ ಹಕ್ಕುಗಳು ಮತ್ತು ಕಾನೂನಿನ ನಿಯಮಗಳು ಮುಖ್ಯವೆಂದು ಅಧ್ಯಕ್ಷ ಜೋ ಬಿಡೆನ್ ಹೇಳಿದ್ದನ್ನು ನೀವು ಕೇಳಿದ್ದೀರಿ. ನಾವು ಯಾವಾಗಲೂ ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳೊಂದಿಗೆ  ದೇಶವನ್ನು ಮುನ್ನಡೆಸುತ್ತೇವೆ. ನಮಗೆ ಪ್ರಜಾಪ್ರಭುತ್ವ ಬಹಳ ಮುಖ್ಯವಾಗಿದೆ. ಭಾರತವು ಪ್ರಜಾಪ್ರಭುತ್ವ ರಾಷ್ಟ್ರ ಮತ್ತು ನೀವು ನಿಮ್ಮ ಮೌಲ್ಯಗಳನ್ನೂ ಸಹ ಅಮೂಲ್ಯವಾಗಿರಿಸಿಕೊಳ್ಳಿ. ನಾವು ಮಾಡಬಹುದಾದ ಮತ್ತು ಒಟ್ಟಾಗಿ ಕೆಲಸ ಮಾಡುವ ಹಲವಾರು ವಿಷಯಗಳಿವೆ “ಎಂದು ಹೇಳಿದ್ದರು.

ಜನರಲ್ ಆಸ್ಟಿನ್ ಅವರು ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಆಡಳಿತದ ಚುಕಾಣಿ ಹಿಡಿದ ನಂತರ ಭಾರತಕ್ಕೆ ಭೇಟಿ ನೀಡುತ್ತಿರುವ ಮೊದಲ ಉನ್ನತ ಸದಸ್ಯರಾಗಿದ್ದಾರೆ. ಈ ಪ್ರದೇಶದಲ್ಲಿ ಚೀನಾದ ಪ್ರತಿಪಾದನೆಗೆ ಆಕ್ಷೇಪಿಸುತ್ತಿರುವ ದೇಶಗಳ ಮೈತ್ರಿಯನ್ನು ರೂಪಿಸುವ ಪ್ರಯತ್ನಗಳ ಭಾಗವಾಗಿ ಭೇಟಿ ನೀಡಿದ್ದಾರೆ. ಅವರು ಇಲ್ಲಿಗೆ ಬರುವ ಮೊದಲು ಜಪಾನ್ ಮತ್ತು ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿದ್ದರು.

ಶುಕ್ರವಾರ ನವದೆಹಲಿಗೆ ಆಗಮಿಸಿರುವ ಅವರು, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಿದರು. ಶನಿವಾರ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾದರು.

ಇದನ್ನೂ ಓದಿ: ಶಿವಮೊಗ್ಗ- ದಕ್ಷಿಣ ಭಾರತದ ಮೊದಲ ಐತಿಹಾಸಿಕ ರೈತ ಮಹಾಪಂಚಾಯತ್ ಲೈವ್ ನೋಡಿ‌‌

ಸೆನೆಟರ್ ರಾಬರ್ಟ್ ಮೆನೆಂಡೆಜ್ ಆಸ್ಟಿನ್‌ಗೆ ಬರೆದ ಪತ್ರದಲ್ಲಿ, ಯುಎಸ್ ಮತ್ತು ಭಾರತದ ಸಹಭಾಗಿತ್ವವು “21 ನೇ ಶತಮಾನದ ಸವಾಲುಗಳನ್ನು ಎದುರಿಸಲು ನಿರ್ಣಾಯಕವಾಗಿದೆ”, ಆದರೆ ಪಾಲುದಾರಿಕೆ “ಪ್ರಜಾಪ್ರಭುತ್ವ ಮೌಲ್ಯಗಳಿಗೆ ಅಂಟಿಕೊಳ್ಳುವುದರ ಮೇಲೆ ನಿಂತಿರಬೇಕು” ಎಂದು ಗಮನಸೆಳೆದಿದ್ದರು. ಭಾರತ ಸರ್ಕಾರವು “ಆ ಮೌಲ್ಯಗಳಿಂದ ದೂರವಾಗುತ್ತಿದೆ” ಎಂದು ಅವರು ಹೇಳಿದ್ದರು.

“ಹೊಸ ಕೃಷಿ ಕಾನೂನುಗಳನ್ನು ಶಾಂತಿಯುತವಾಗಿ ಪ್ರತಿಭಟಿಸುವ  ರೈತರು,  ಪತ್ರಕರ್ತರು ಮತ್ತು ಸರ್ಕಾರದ ವಿಮರ್ಶಕರ  ಮೇಲೆ ಭಾರತ ಸರ್ಕಾರ ನಿರಂತರವಾಗಿ ನಡೆಸುತ್ತಿರುವ ದೌರ್ಜನ್ಯವು ಭಾರತದ ಪ್ರಜಾಪ್ರಭುತ್ವದ ಹದಗೆಡುತ್ತಿರುವ ಪರಿಸ್ಥಿತಿಯನ್ನು ಒತ್ತಿಹೇಳುತ್ತದೆ” ಎಂದು ಸೆನೆಟರ್ ರಾಬರ್ಟ್ ಮೆನೆಂಡೆಜ್ ಬರೆದಿದ್ದರು.

“ಇದಲ್ಲದೆ, ಇತ್ತೀಚಿನ ವರ್ಷಗಳಲ್ಲಿ, ಹೆಚ್ಚುತ್ತಿರುವ ಮುಸ್ಲಿಂ ವಿರೋಧಿ ಭಾವನೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ, ರಾಜಕೀಯ ಸಂವಾದವನ್ನು ನಿಗ್ರಹಿಸುವುದು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ರಾಜಕೀಯ ವಿರೋಧಿಗಳನ್ನು ಬಂಧಿಸುವುದು ಮತ್ತು ರಾಜಕೀಯ ಕಿರುಕುಳ ನೀಡಲು ದೇಶದ್ರೋಹಿ ಕಾನೂನುಗಳನ್ನು ಬಳಸುವುದು. ಈ ಕಾರಣಗಳಿಗಾಗಿ  ಯುಎಸ್ ಮಾನವ ಹಕ್ಕುಗಳ ಗುಂಪು ಫ್ರೀಡಂ ಹೌಸ್ ತನ್ನ ವಾರ್ಷಿಕ ಜಾಗತಿಕ ಸಮೀಕ್ಷೆಯಲ್ಲಿ ಭಾರತವನ್ನು ತನ್ನ ’ಉಚಿತ’ ಸ್ಥಾನಮಾನದಿಂದ ಕೆಳಮಟ್ಟದಲ್ಲಿ ಬಿಂಬಿಸಿತ್ತು “ಎಂದು ಯುಎಸ್ ಸೆನೆಟರ್ ರಾಬರ್ಟ್ ಹೇಳಿದ್ದರು.

ಆಸ್ಟಿನ್ ಮಾನವ ಹಕ್ಕುಗಳ ಕುರಿತು ಭಾರತದ ಸಚಿವರೊಂದಿಗೆ ಚರ್ಚೆ ಮಾಡಿರುವುದಾಗಿ ಹೇಳಿದರೂ ವಿವರ ನೀಡಿಲ್ಲ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಕಾಯ್ದೆ ವಾಪಸಾತಿ ಮಾತನಾಡುತ್ತಿರುವ ಯುವಜನರು ಸರ್ಕಾರ ವಾಪಸಾತಿ ಮಾಡುತ್ತಾರೆ ಎಚ್ಚರ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...