Homeಮುಖಪುಟಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ, ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ, ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ, ಇತ್ತ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗಳ ಚುನಾವಣಾ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ.

ಕೇರಳದಲ್ಲಿ ಏಪ್ರಿಲ್ 06 ರಂದು ಚುನಾವಣೆ ನಡೆಯಲಿದ್ದು, ತಲಶೇರಿ, ಗುರುವಾಯೂರು ಮತ್ತು ದೇವಿಕುಳಂ ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರಗಳು ಅಂತಿಮ ಪರಿಶೀಲನೆಯಲ್ಲಿ ತಿರಸ್ಕೃತವಾಗಿವೆ.

ತಲಶೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಕ್ಷದ ಜಿಲ್ಲಾಧ್ಯಕ್ಷ ಎನ್ ಹರಿದಾಸ್ ಅವರ ನಾಮಪತ್ರವನ್ನು ಅಂತಿಮ ಪರಿಶೀಲನೆಯಲ್ಲಿ ತಿರಸ್ಕರಿಸಲಾಗಿದೆ. ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಫಾರ್ಮ್ ಎ (ಅಭ್ಯರ್ಥಿ ಸ್ಫರ್ಧಿಸುವ ರಾಜಕೀಯ ಪಕ್ಷ), ಪಕ್ಷದ ರಾಜ್ಯ ಅಧ್ಯಕ್ಷರ ಕಡ್ಡಾಯ ಸಹಿ ಹೊಂದಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಗುರುವಾಯೂರು ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ನಿವೇದಿತಾ ಸುಬ್ರಮಣ್ಯಂ ಅವರ ನಾಮಪತ್ರವನ್ನು ಕೂಡ ಅಗತ್ಯ ದಾಖಲೆಪತ್ರಗಳನ್ನು ಸಲ್ಲಿಸದ ಕಾರಣ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ನಿವೇದಿತಾ ಮಹಿಳಾ ಮೋರ್ಚಾದ ರಾಜ್ಯ ಅಧ್ಯಕ್ಷರಾಗಿದ್ದಾರೆ.

ದೇವಿಕುಲಂ ಕ್ಷೇತ್ರದಲ್ಲಿ ಬಿಜೆಪಿ ಮಿತ್ರಪಕ್ಷ ಎಐಎಡಿಎಂಕೆ ಅಭ್ಯರ್ಥಿ ಆರ್ ಧನಲಕ್ಷ್ಮಿ ಅವರ ನಾಮಪತ್ರ ಅಪೂರ್ಣ ನಾಮಪತ್ರ ಎಂದು ತಿರಸ್ಕರಿಸಲ್ಪಟ್ಟಿದೆ.

ಗುರುವಾಯೂರ್ ಮತ್ತು ದೇವಿಕುಲಂ ಕ್ಷೇತ್ರಗಳಲ್ಲಿ ಸದ್ಯ ಎನ್‌ಡಿಎಗೆ ಬೇರೆ ಅಭ್ಯರ್ಥಿಗಳು ಇಲ್ಲ. ಆದರೆ, ದೇವಿಕುಲಂನಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಗಣೇಶ್ ಅವರನ್ನು ಬೆಂಬಲಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

ಸಿಪಿಐ (ಎಂ) ಒತ್ತಡದಿಂದಾಗಿ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ. “ನಾವು ಇದರ ವಿರುದ್ಧ ಕಾನೂನುಬದ್ಧವಾಗಿ ಹೋರಾಡುತ್ತೇವೆ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಈ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಹಾಕುತ್ತದೆ ”ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

ನಾಮಪತ್ರಗಳ ತಿರಸ್ಕಾರವು ಸಿಪಿಐ (ಎಂ) ಮತ್ತು ಕಾಂಗ್ರೆಸ್  ಪಕ್ಷಗಳ ನಡುವೆಯೂ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಈ ನಾಮಪತ್ರಗಳ ತಿರಸ್ಕರಿಸುವುದರಿಂದ ಸಿಪಿಐ (ಎಂ) ಬಿಜೆಪಿಯೊಂದಿಗೆ ಹೊಂದಿರುವ ರಹಸ್ಯ ಮೈತ್ರಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಹೇಳಿದ್ದಾರೆ. “ಅಧಿಕಾರವನ್ನು ಉಳಿಸಿಕೊಳ್ಳಲು, ಸಿಪಿಐ (ಎಂ) ಕೋಮು ಶಕ್ತಿಗಳೊಂದಿಗೆ ಕೈಜೋಡಿಸಲು ಹಿಂದೆ ಸರಿಯುವುದಿಲ್ಲ. ಪ್ರಮುಖ ಸಿಪಿಐ (ಎಂ) ನಾಯಕರು ಕಣದಲ್ಲಿರುವ ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ” ಎಂದು ಆರೋಪಿಸಿದ್ದಾರೆ.

ಸಿಪಿಐ (ಎಂ) ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಎಂ.ವಿ ಜಯರಾಜನ್, ಈ ಒಪ್ಪಂದವು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇದೆ ಎಂದು ಆರೋಪಿಸಿದ್ದಾರೆ. “ದೋಷಯುಕ್ತ ನಾಮನಿರ್ದೇಶನಗಳು ಮತ್ತು ನಂತರದ ನಾಮಪತ್ರ ತಿರಸ್ಕಾರವು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಒಪ್ಪಂದವನ್ನು ಬಹಿರಂಗಪಡಿಸಿದೆ. ತಲಶೇರಿಯಲ್ಲಿ ಬಿಜೆಪಿ ಅಭ್ಯರ್ಥಿಯ ರೂಪದಲ್ಲಿ ಪಕ್ಷದ ರಾಜ್ಯ ಅಧ್ಯಕ್ಷರ ಸಹಿ ಏಕೆ ಇರಲಿಲ್ಲ? ಇದು ಇನ್ನೂ ನಿಗೂಢವಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...