Homeಮುಖಪುಟಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ, ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ, ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

- Advertisement -
- Advertisement -

ಕೇರಳ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ, ಇತ್ತ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿನ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಗಳ ಚುನಾವಣಾ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ.

ಕೇರಳದಲ್ಲಿ ಏಪ್ರಿಲ್ 06 ರಂದು ಚುನಾವಣೆ ನಡೆಯಲಿದ್ದು, ತಲಶೇರಿ, ಗುರುವಾಯೂರು ಮತ್ತು ದೇವಿಕುಳಂ ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರಗಳು ಅಂತಿಮ ಪರಿಶೀಲನೆಯಲ್ಲಿ ತಿರಸ್ಕೃತವಾಗಿವೆ.

ತಲಶೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಪಕ್ಷದ ಜಿಲ್ಲಾಧ್ಯಕ್ಷ ಎನ್ ಹರಿದಾಸ್ ಅವರ ನಾಮಪತ್ರವನ್ನು ಅಂತಿಮ ಪರಿಶೀಲನೆಯಲ್ಲಿ ತಿರಸ್ಕರಿಸಲಾಗಿದೆ. ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಫಾರ್ಮ್ ಎ (ಅಭ್ಯರ್ಥಿ ಸ್ಫರ್ಧಿಸುವ ರಾಜಕೀಯ ಪಕ್ಷ), ಪಕ್ಷದ ರಾಜ್ಯ ಅಧ್ಯಕ್ಷರ ಕಡ್ಡಾಯ ಸಹಿ ಹೊಂದಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ ಹೇಳಿಕೆ

ಗುರುವಾಯೂರು ಕ್ಷೇತ್ರದಲ್ಲಿ, ಬಿಜೆಪಿ ಅಭ್ಯರ್ಥಿ ನಿವೇದಿತಾ ಸುಬ್ರಮಣ್ಯಂ ಅವರ ನಾಮಪತ್ರವನ್ನು ಕೂಡ ಅಗತ್ಯ ದಾಖಲೆಪತ್ರಗಳನ್ನು ಸಲ್ಲಿಸದ ಕಾರಣ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ನಿವೇದಿತಾ ಮಹಿಳಾ ಮೋರ್ಚಾದ ರಾಜ್ಯ ಅಧ್ಯಕ್ಷರಾಗಿದ್ದಾರೆ.

ದೇವಿಕುಲಂ ಕ್ಷೇತ್ರದಲ್ಲಿ ಬಿಜೆಪಿ ಮಿತ್ರಪಕ್ಷ ಎಐಎಡಿಎಂಕೆ ಅಭ್ಯರ್ಥಿ ಆರ್ ಧನಲಕ್ಷ್ಮಿ ಅವರ ನಾಮಪತ್ರ ಅಪೂರ್ಣ ನಾಮಪತ್ರ ಎಂದು ತಿರಸ್ಕರಿಸಲ್ಪಟ್ಟಿದೆ.

ಗುರುವಾಯೂರ್ ಮತ್ತು ದೇವಿಕುಲಂ ಕ್ಷೇತ್ರಗಳಲ್ಲಿ ಸದ್ಯ ಎನ್‌ಡಿಎಗೆ ಬೇರೆ ಅಭ್ಯರ್ಥಿಗಳು ಇಲ್ಲ. ಆದರೆ, ದೇವಿಕುಲಂನಲ್ಲಿ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಎಸ್.ಗಣೇಶ್ ಅವರನ್ನು ಬೆಂಬಲಿಸಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.

ಸಿಪಿಐ (ಎಂ) ಒತ್ತಡದಿಂದಾಗಿ ನಾಮಪತ್ರಗಳನ್ನು ತಿರಸ್ಕರಿಸಲಾಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಕೆ.ಸುರೇಂದ್ರನ್ ಹೇಳಿದ್ದಾರೆ. “ನಾವು ಇದರ ವಿರುದ್ಧ ಕಾನೂನುಬದ್ಧವಾಗಿ ಹೋರಾಡುತ್ತೇವೆ ಮತ್ತು ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ಈ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಹಾಕುತ್ತದೆ ”ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಖಂಡಿತವಾಗಿಯೂ LDF’- ಕೇರಳ ಚುನಾವಣೆಗೆ ಎಡಪಕ್ಷಗಳ ಘೋಷವಾಕ್ಯ

ನಾಮಪತ್ರಗಳ ತಿರಸ್ಕಾರವು ಸಿಪಿಐ (ಎಂ) ಮತ್ತು ಕಾಂಗ್ರೆಸ್  ಪಕ್ಷಗಳ ನಡುವೆಯೂ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಈ ನಾಮಪತ್ರಗಳ ತಿರಸ್ಕರಿಸುವುದರಿಂದ ಸಿಪಿಐ (ಎಂ) ಬಿಜೆಪಿಯೊಂದಿಗೆ ಹೊಂದಿರುವ ರಹಸ್ಯ ಮೈತ್ರಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಮುಲ್ಲಪ್ಪಲ್ಲಿ ರಾಮಚಂದ್ರನ್ ಹೇಳಿದ್ದಾರೆ. “ಅಧಿಕಾರವನ್ನು ಉಳಿಸಿಕೊಳ್ಳಲು, ಸಿಪಿಐ (ಎಂ) ಕೋಮು ಶಕ್ತಿಗಳೊಂದಿಗೆ ಕೈಜೋಡಿಸಲು ಹಿಂದೆ ಸರಿಯುವುದಿಲ್ಲ. ಪ್ರಮುಖ ಸಿಪಿಐ (ಎಂ) ನಾಯಕರು ಕಣದಲ್ಲಿರುವ ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ” ಎಂದು ಆರೋಪಿಸಿದ್ದಾರೆ.

ಸಿಪಿಐ (ಎಂ) ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಎಂ.ವಿ ಜಯರಾಜನ್, ಈ ಒಪ್ಪಂದವು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇದೆ ಎಂದು ಆರೋಪಿಸಿದ್ದಾರೆ. “ದೋಷಯುಕ್ತ ನಾಮನಿರ್ದೇಶನಗಳು ಮತ್ತು ನಂತರದ ನಾಮಪತ್ರ ತಿರಸ್ಕಾರವು ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಒಪ್ಪಂದವನ್ನು ಬಹಿರಂಗಪಡಿಸಿದೆ. ತಲಶೇರಿಯಲ್ಲಿ ಬಿಜೆಪಿ ಅಭ್ಯರ್ಥಿಯ ರೂಪದಲ್ಲಿ ಪಕ್ಷದ ರಾಜ್ಯ ಅಧ್ಯಕ್ಷರ ಸಹಿ ಏಕೆ ಇರಲಿಲ್ಲ? ಇದು ಇನ್ನೂ ನಿಗೂಢವಾಗಿದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೇರಳ: ಬಿಜೆಪಿ ಮೈತ್ರಿಕೂಟ ತೊರೆದ ‘ಕೇರಳ ಕಾಂಗ್ರೆಸ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...