Homeಮುಖಪುಟಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

ಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

- Advertisement -
- Advertisement -

ಕಳೆದ ವಾರ ಉನ್ನತ ಶಿಕ್ಷಣ ತಜ್ಞರಾದ  ಪ್ರೊ. ಪ್ರತಾಪ್ ಭಾನು ಮೆಹ್ತಾ ಮತ್ತು ಅರವಿಂದ್ ಸುಬ್ರಮಣಿಯನ್ ಅಶೋಕ ವಿವಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ, ವಿವಿಯ ಸಾಂಸ್ಥಿಕ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿದೆ ಎಂದು ಸೋನಿಪತ್‌ನ ಅಶೋಕ ವಿಶ್ವವಿದ್ಯಾಲಯವು ಒಪ್ಪಿಕೊಂಡಿದೆ.

ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಸುಬ್ರಮಣಿಯನ್ ಮತ್ತು ಖ್ಯಾತ ರಾಜಕೀಯ ಶಾಸ್ತ್ರಜ್ಞ ಹಾಗೂ ವಿಶ್ಲೇಷಕ  ಪ್ರತಾಪ್ ಭಾನು ಮೆಹ್ತಾ ಇಬ್ಬರು ಶೈಕ್ಷಣಿಕ ಅಭಿವ್ಯಕ್ತಿ ಮತ್ತು ಸ್ವಾತಂತ್ರ್ಯಕ್ಕೆ ಅಲ್ಲಿ ಈಗ ಅವಕಾಶ ದೊರಕುತ್ತಿಲ್ಲ ಎಂದು ಉಲ್ಲೇಖಿಸಿ ಅಶೋಕ ವಿವಿಗೆ ರಾಜೀನಾಮೆ ನೀಡಿದ್ದರು.

ತಜ್ಞರ ರಾಜೀನಾಮೆಗೆ ಕಾರಣವಾದ ಅಶೋಕ ವಿವಿಯ ನಡವಳಿಕೆಯನ್ನು, ಆರ್‌ಬಿಐ ಮಾಜಿ ಗವರ್ನರ್ ರಾಜನ್ ಸೇರಿದಂತೆ ಹಲವಾರು ಶಿಕ್ಷಣ ತಜ್ಞರು ಟೀಕಿಸಿದ್ದರು.

ಖಾಸಗಿ ಅನುದಾನಿತ ಸಂಸ್ಥೆಯಾದ ಅಶೋಕ ವಿಶ್ವ ವಿದ್ಯಾಲಯವು “ಈ ಲೋಪಗಳನ್ನು” ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಸರಿಪಡಿಸಲು ಕೆಲಸ ಮಾಡುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಸ್ವತಂತ್ರ ಮಾಧ್ಯಮಗಳನ್ನು ನಿಯಂತ್ರಿಸುವುದು ಹೇಗೆ?: ಪತ್ರಕರ್ತರೊಂದಿಗಿನ ಕೇಂದ್ರ ಸರ್ಕಾರದ ಗುಪ್ತ ಸಭೆಗಳ ವರದಿ ಸೋರಿಕೆ!

“ಸಾಂಸ್ಥಿಕ ಪ್ರಕ್ರಿಯೆಗಳಲ್ಲಿ ಕೆಲವು ನ್ಯೂನತೆಗಳು ಕಂಡುಬಂದಿವೆ ಎಂದು ನಾವು ಒಪ್ಪಿಕೊಳ್ಳುತ್ತೇವೆ, ಅದು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಸರಿಪಡಿಸಲು ನಾವು ಕೆಲಸ ಮಾಡುತ್ತೇವೆ. ಇದು ಅಶೋಕ ವಿಶ್ವವಿದ್ಯಾಲಯದ ಆದರ್ಶಗಳ ಕೇಂದ್ರಬಿಂದುವಾಗಿರುವ ಶೈಕ್ಷಣಿಕ ಸ್ವಾಯತ್ತತೆ ಮತ್ತು ಸ್ವಾತಂತ್ರ್ಯದ ಬಗೆಗಿನ ನಮ್ಮ ಬದ್ಧತೆಯನ್ನು ದೃಢ ಪಡಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿವಿಯ ಜಂಟಿ ಹೇಳಿಕೆಗೆ ಕುಲಪತಿ ರುದ್ರಂಗ್‌ಶು ಮುಖರ್ಜಿ, ಉಪಕುಲಪತಿ ಮಲಬಿಕಾ ಸರ್ಕಾರ್, ಮೆಹ್ತಾ, ಸುಬ್ರಮಣಿಯನ್ ಮತ್ತು ವಿಶ್ವವಿದ್ಯಾಲಯದ ಟ್ರಸ್ಟಿಗಳ ಮಂಡಳಿಯ ಅಧ್ಯಕ್ಷ ಆಶಿಶ್ ಧವನ್ ಸಹಿ ಹಾಕಿದ್ದಾರೆ.

ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಸರ್ಕಾರದ ವಿಮರ್ಶಕ ಮೆಹ್ತಾ ಅವರು ಜುಲೈ 2019 ರಲ್ಲಿ ಅಶೋಕ ವಿಶ್ವವಿದ್ಯಾಲಯದ ಉಪಕುಲಪತಿ ಸ್ಥಾನದಿಂದ ಹೊರಬಂದರೂ ಪ್ರಾಧ್ಯಾಪಕರಾಗಿ ಉಳಿದಿದ್ದರು. ಆದರೆ, ಮಂಗಳವಾರ, ಅವರು ಹಠಾತ್ತನೆ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

“ವಿಶ್ವವಿದ್ಯಾಲಯದೊಂದಿಗಿನ ಒಡನಾಟವನ್ನು ರಾಜಕೀಯ ಹೊಣೆಗಾರಿಕೆ ಎಂದು ಪರಿಗಣಿಸಬಹುದು” ಎಂದು ಹೇಳಿದ್ದರು. ಎರಡು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ಮಾಜಿ ಮುಖ್ಯ ಆರ್ಥಿಕ ಸಲಹೆಗಾರರಾದ ಅರವಿಂದ್ ಸುಬ್ರಮಣಿಯನ್ ಅವರು ಮೆಹ್ತಾ ಅವರ ನಿರ್ಗಮನದ ಬಗ್ಗೆ ಬೇಸರ ವ್ಯಕ್ತಪಡಿಸಿ ಅಧ್ಯಾಪಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಾನವಿಕ ಶಾಸ್ತ್ರಗಳಿಗೆ ಮೀಸಲಾಗಿರುವ ಭಾರತದ ಮೊದಲ ಖಾಸಗಿ-ಧನಸಹಾಯ ಆಶ್ರಯಿತ ಉನ್ನತ ಶಿಕ್ಷಣ ಸಂಸ್ಥೆಯೆಂದು ಹೇಳಲಾದ ಅಶೋಕ ವಿವಿಗೆ ಇಬ್ಬರು ರಾಜೀನಾಮೆ ನೀಡಿದ್ದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ  ಪ್ರತಿಭಟನೆ ಹುಟ್ಟುಹಾಕಿತ್ತು.

ಮೆಹ್ತಾ ಮತ್ತು ಸುಬ್ರಮಣಿಯನ್ ರಾಜೀನಾಮೆಗೆ ಕಾರಣವಾದ ವಿವಿ ವಿರುದ್ಧ ದನಿ ಎತ್ತಿದವರಲ್ಲಿ, ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಮತ್ತು ಹಾರ್ವರ್ಡ್, ಆಕ್ಸ್‌ಫರ್ಡ್ ಮತ್ತು ಬ್ರೌನ್ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರು ಮತ್ತು ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಧ್ಯಾಪಕರು ಸೇರಿದ್ದಾರೆ.


ಇದನ್ನೂ ಓದಿ: ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೇ ಮುಂದುವರೆದಿದೆ, ಭಾರತದಲ್ಲಿ ಸತ್ಯ ಹೇಳುವವರಿಗೆ ಜಾಗವೇ ಇಲ್ಲದಂತೆ ಆಗುತ್ತದೆ.

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...