Homeಮುಖಪುಟತೆಲಂಗಾಣ: ಬಿಜೆಪಿ ಅಭ್ಯರ್ಥಿ ವಿರುದ್ಧ ಜಯ ಸಾಧಿಸಿದ ಪಿ.ವಿ ನರಸಿಂಹ ರಾವ್ ಪುತ್ರಿ

ತೆಲಂಗಾಣ: ಬಿಜೆಪಿ ಅಭ್ಯರ್ಥಿ ವಿರುದ್ಧ ಜಯ ಸಾಧಿಸಿದ ಪಿ.ವಿ ನರಸಿಂಹ ರಾವ್ ಪುತ್ರಿ

- Advertisement -
- Advertisement -

ಮಹಾಬೂಬ್‌ನಗರ-ರಂಗರೆಡ್ಡಿ-ಹೈದರಾಬಾದ್ ಪದವೀಧರರ ಕ್ಷೇತ್ರದಿಂದ ತೆಲಂಗಾಣ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಟಿಆರ್‌ಎಸ್ ಅಭ್ಯರ್ಥಿ, ಮಾಜಿ ಪ್ರಧಾನಿ ಪಿ.ವಿ ನರಸಿಂಹ ರಾವ್ ಅವರ ಪುತ್ರಿ ಎಸ್.ವಾಣಿ ದೇವಿ ಶನಿವಾರ ಜಯಗಳಿಸಿದ್ದಾರೆ.

ವಾಣಿ ದೇವಿ ತನ್ನ ಹತ್ತಿರದ ಬಿಜೆಪಿ ಪ್ರತಿಸ್ಪರ್ಧಿ ಮತ್ತು ಹಾಲಿ ಎಂಎಲ್‌ಸಿ ಎನ್. ರಾಮಚಂದರ್ ರಾವ್ ಅವರನ್ನು ಸೋಲಿಸಿದ್ದಾರೆ. ಶನಿವಾರ ರಾತ್ರಿ ಚುನಾವಣಾ ಅಧಿಕಾರಿಯಿಂದ ವಿಜಯದ ಚುನಾವಣಾ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮಾರ್ಚ್ 14 ರಂದು ಮಹಾಬೂಬ್‌ನಗರ-ರಂಗರೆಡ್ಡಿ-ಹೈದರಾಬಾದ್ ಮತ್ತು ವಾರಂಗಲ್-ಖಮ್ಮಮ್-ನಲ್ಗೊಂಡ ಪದವೀಧರರ ಕ್ಷೇತ್ರಗಳಿಂದ ಪರಿಷತ್ತಿಗೆ ಚುನಾವಣೆ ನಡೆದಿತ್ತು. ಎರಡು ಕ್ಷೇತ್ರಗಳ ಒಟ್ಟು ಮತದಾರರ ಸಂಖ್ಯೆ 10 ಲಕ್ಷಕ್ಕೂ ಹೆಚ್ಚಿದೆ.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ವಾರಂಗಲ್-ಖಮ್ಮಮ್-ನಲ್ಗೊಂಡಾ ಕ್ಷೇತ್ರದಲ್ಲಿ ಮತ ಏಣಿಕೆ ನಡೆಯುತ್ತಿದ್ದು, ಟಿಆರ್‌ಎಸ್ ಅಭ್ಯರ್ಥಿ ಮತ್ತು ಹಾಲಿ ಎಂಎಲ್‌ಸಿ ಪಲ್ಲಾ ರಾಜೇಶ್ವರ ರೆಡ್ಡಿ ಮುನ್ನಡೆ ಸಾಧಿಸಿದ್ದಾರೆ.

ಮತಗಳ ಎಣಿಕೆ ಬುಧವಾರದಿಂದ ಪ್ರಾರಂಭವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿದ್ದ ಅಭ್ಯರ್ಥಿಗಳ ದೃಷ್ಟಿಯಿಂದ ಮತದಾನದಲ್ಲಿ ಜಂಬೋ ಗಾತ್ರದ ಮತಪತ್ರಗಳನ್ನು ಬಳಸಲಾಗಿದೆ.

ಮಹಾಬೂಬ್‌ನಗರ-ರಂಗರೆಡ್ಡಿ-ಹೈದರಾಬಾದ್ ಕ್ಷೇತ್ರದಿಂದ 93 ಅಭ್ಯರ್ಥಿಗಳು ಕಣದಲ್ಲಿದ್ದರೆ, 71 ನಾಮನಿರ್ದೇಶಿತರು ವಾರಂಗಲ್-ಖಮ್ಮಮ್-ನಲ್ಗೊಂಡಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಮಹಾಬುಬ್‌ನಗರ-ರಂಗರೆಡ್ಡಿ-ಹೈದರಾಬಾದ್ ಸ್ಥಾನವು ಶೇಕಡಾ 67.26 ರಷ್ಟು ಮತದಾನ ಕಂಡರೆ, ವಾರಂಗಲ್-ಖಮ್ಮಮ್-ನಲ್ಗೊಂಡ ಕ್ಷೇತ್ರದಲ್ಲಿ ಮತದಾನದ ಪ್ರಮಾಣ ಶೇ 76.41 ರಷ್ಟಿದೆ.

ಕಳೆದ ವರ್ಷದ ಕೊನೆಯಲ್ಲಿ ಡಬ್ಬಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮತ್ತು ಹೈದರಾಬಾದ್ ಸ್ಥಳೀಯ ಚುನಾವಣೆಗಳಲ್ಲಿ ಹಿನ್ನಡೆ ಅನುಭವಿಸಿದ ಟಿಆರ್‌ಎಸ್ ಈ ಎರಡು ಸ್ಥಾನಗಳನ್ನು ಗೆಲ್ಲಲು ದೃಢ ನಿರ್ಣಯ ಮಾಡಿತ್ತು.


ಇದನ್ನೂ ಓದಿ: ಕೇರಳದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ, ಮೂವರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...