Homeಕರೋನಾ ತಲ್ಲಣಮುಂಬೈ: ಲಸಿಕೆ ಪಡೆದಿರುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲ

ಮುಂಬೈ: ಲಸಿಕೆ ಪಡೆದಿರುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಕ್ವಾರಂಟೈನ್ ಇಲ್ಲ

- Advertisement -
- Advertisement -

ಯುಕೆ, ಯುರೋಪ್, ಮಧ್ಯಪ್ರಾಚ್ಯ, ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್‌ನ ಅಂತರರಾಷ್ಟ್ರೀಯ ಪ್ರಯಾಣಿಕರು ಮುಂಬೈಗೆ ಬಂದು ಒಂದು ವಾರ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕಾಗಿತ್ತು. ಆದರೆ ಕೊರೊನಾ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿರುವವರು ಇನ್ನು ಮುಂದೆ ಕ್ವಾರಂಟೈನ್‌ನಲ್ಲಿ ಇರಬೇಕಾಗಿಲ್ಲ ಎಂದು ಬಿಎಂಸಿ ತಿಳಿಸಿದೆ.

ಮುಂಬೈನ ನಾಗರಿಕ ಸಂಸ್ಥೆ ಬಿಎಂಸಿ ತನ್ನ ಹೊಸ ಸಲಹಾ ಸಮಿತಿಯ ಮಾರ್ಗ ಸೂಚಿಯಲ್ಲಿ, 65 ವರ್ಷಕ್ಕಿಂತ ಮೇಲ್ಪಟ್ಟ ಪ್ರಯಾಣಿಕರಿಗೆ, ಗರ್ಭಣಿಯರಿಗೆ, ಐದು ವರ್ಷದೊಳಗಿನ ಮಕ್ಕಳೊಂದಿಗೆ ಇರುವ ಪೋಷಕರಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿದೆ.

ಇದಕ್ಕೂ ಮೊದಲು, ಈ ದೇಶಗಳಿಂದ ಅಂತರರಾಷ್ಟ್ರೀಯ ವಿಮಾನಗಳ ಮೂಲಕ ಮುಂಬೈಗೆ ಬರುವ ಅಥವಾ ಹೋಗುವ ಪ್ರಯಾಣಿಕರು ವಿಮಾನ ಹತ್ತುವ ಮೊದಲು ಕೊರೊನಾ ನೆಗೆಟಿವ್ ವರದಿಯನ್ನು ತೆಗೆದುಕೊಳ್ಳಬೇಕಿತ್ತು. ಸರ್ಕಾರ ನಿಗದಿ ಪಡಿಸಿದ ಕೊರೊನಾ ಆರೈಕೆ ಕೇಂದ್ರದಲ್ಲಿ 7 ದಿನಗಳ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕಾಗಿತ್ತು.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ಕ್ಯಾನ್ಸರ್, ತೀವ್ರ ದೈಹಿಕ ಅಂಗವೈಕಲ್ಯ, ಮಾನಸಿಕ ಅಸ್ವಸ್ಥತೆ ಮತ್ತು ಸೆರೆಬ್ರಲ್ ಪಾಲ್ಸಿ ಮುಂತಾದ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುವ ಗಂಭೀರ ಕಾಯಿಲೆಗಳನ್ನು ಹೊಂದಿರುವ ಪ್ರಯಾಣಿಕರು ವೈದ್ಯಕೀಯ ದಾಖಲೆಗಳನ್ನು ನೀಡಿದರೇ ಅವರಿಗೂ ಕ್ವಾರಂಟೈನ್ ರದ್ದು ಪಡಿಸಲಾಗುತ್ತದೆ.

ಶಸ್ತ್ರಚಿಕಿತ್ಸೆ ನಡೆಸಲು ಪ್ರಯಾಣಿಸುವವರು ಅಥವಾ ತುರ್ತು ಚಿಕಿತ್ಸೆ ನೀಡುವ ಉದ್ದೇಶದಿಂದ ಹೊರಡುವ ವೈದ್ಯಕೀಯ ವೃತ್ತಿಪರರು ಸೂಕ್ತ ದಾಖಲೆ ನೀಡಿದರೇ, ಅವರಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ಇದೆ.

ಇವರುಗಳನ್ನು ಬಿಟ್ಟು ಉಳಿದ ಪ್ರಯಾಣಿಕರು ಏಳು ದಿನಗಳವರೆಗೆ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಏಳು ದಿನಗಳ ನಂತರ ಹೋಂ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ. ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆಯೂ ಹೊಸ ಮಾರ್ಗಸೂಚಿಗಳನ್ನು ಸರ್ಕಾರ ಜಾರಿ ಮಾಡಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳಿಂದಾಗಿ ನಾಗ್ಪುರವನ್ನು ಮಾರ್ಚ್ 15 ರಿಂದ ಇಂದಿನವರೆಗೆ (ಮಾರ್ಚ್ 21) ರವರೆಗೆ ಒಂದು ವಾರ ಲಾಕ್ ಡೌನ್ ಮಾಡಿ ಸರ್ಕಾರ ಆದೇಶಿಸಿತ್ತು. ಅಗತ್ಯ ಸೇವೆಗಳಾದ ತರಕಾರಿ, ಹಣ್ಣಿನ ಅಂಗಡಿಗಳು ಮತ್ತು ಹಾಲಿನ ಡೈರಿಗಳು ಕಾರ್ಯನಿರ್ವಹಿಸಿದ್ದವು.


ಇದನ್ನೂ ಓದಿ: ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ online ಪತ್ರಿಕೆ ತುಂಬಾ ಮಾಹಿತಿ ಮತ್ತು ಪ್ರಚಲಿತಾ ವಿದ್ಯಾಮನಗಳೊಂದಿಗೆ ನಮ್ಮನ್ನು ಜಾಗೃತಿ ಗೊಳಿಸಿದ್ದಾಕ್ಕಾಗಿ ಧನ್ಯವಾದಗಳು

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...